Homeಮುಖಪುಟತಮಿಳುನಾಡು: ಡ್ಯಾನ್ಸ್ ಮಾಡಿದ್ದಕ್ಕೆ ಸಮಾರಂಭದಲ್ಲೇ ಹೊಡೆದ ವರ, ಮದುವೆ ಮುರಿದುಕೊಂಡ ವಧು

ತಮಿಳುನಾಡು: ಡ್ಯಾನ್ಸ್ ಮಾಡಿದ್ದಕ್ಕೆ ಸಮಾರಂಭದಲ್ಲೇ ಹೊಡೆದ ವರ, ಮದುವೆ ಮುರಿದುಕೊಂಡ ವಧು

- Advertisement -
- Advertisement -

ಸೋದರ ಸಂಬಂಧಿಯೊಂದಿಗೆ ಮದುವೆ ಸಮಾರಂಭದಲ್ಲಿ ಡ್ಯಾನ್ಸ್ ಮಾಡಿದ್ದಕ್ಕಾಗಿ ವರನೊಬ್ಬ ವಧುವಿಗೆ ಕಪಾಳಮೋಕ್ಷ ಮಾಡಿದ್ದು, ಸ್ಥಳದಲ್ಲೇ ವಧು ಮದುವೆ ಮುರಿದುಕೊಂಡ ಘಟನೆ ತಮಿಳುನಾಡಿನಲ್ಲಿ ವರದಿಯಾಗಿದೆ. ಮದುವೆ ಮುರಿದುಕೊಂಡ ಕೆಲವು ಗಂಟೆಗಳ ಅಂತರದಲ್ಲೇ ನಿಗದಿತ ದಿನಾಂಕ ಮತ್ತು ಸಮಯಕ್ಕೆ ಮತ್ತೊಬ್ಬರನ್ನು ಯುವತಿ ಮದುವೆಯಾಗಿದ್ದಾರೆ.

ತಮಿಳುನಾಡಿನ ಪನ್ರುಟಿಯದ ವಧು ಸ್ನಾತಕೋತ್ತರ ಪದವೀಧರೆ ಮತ್ತು ಚೆನ್ನೈ ಸಂಸ್ಥೆಯೊಂದರಲ್ಲಿ ಹಿರಿಯ ಇಂಜಿನಿಯರ್ ಆಗಿರುವ ಯುವಕರ ಮದುವೆ ನಿಶ್ಚಯವಾಗಿತ್ತು. ನವೆಂಬರ್ 6 ರಂದು ಅವರ ಪೋಷಕರು ಮತ್ತು ಎರಡೂ ಕುಟುಂಬದ ಹಿರಿಯರ ಆಶೀರ್ವಾದದೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಜನವರಿ 20 ರಂದು ಮದುವೆ ದಿನಾಂಕ ನಿಗದಿಯಾಗಿತ್ತು. ಆದರೆ, ಮದುವೆಯ ಮುನ್ನ ದಿನದ ಆರತಕ್ಷತೆಯಲ್ಲಿ ಸಮಸ್ಯೆ ಉದ್ಭವಿಸಿದೆ ಎನ್ನಲಾಗಿದೆ.

ಆರತಕ್ಷತೆಯಲ್ಲಿ ವರ ಮತ್ತು ವಧು ಒಟ್ಟಿಗೆ ಡ್ಯಾನ್ಸ್ ಮಾಡುತ್ತಿದ್ದಾಗ, ವಧುವಿನ ಸೋದರಸಂಬಂಧಿ ಕೂಡ ಸೇರಿಕೊಂಡಿದ್ದಾರೆ. ಸೋದರಸಂಬಂಧಿ ವಧು ಮತ್ತು ವರನ ಭುಜದ ಮೇಲೆ ಕೈಯಿಟ್ಟು ಅವರೊಂದಿಗೆ ನೃತ್ಯ ಮಾಡಲು ಪ್ರಾರಂಭಿಸಿದ್ದಾರೆ. ಇದು ವರನಿಗೆ ಕಿರಿಕಿರಿ ಉಂಟುಮಾಡಿದೆ ಎಂದು ವರದಿಯಾಗಿದೆ. ವರನು ವಧು ಮತ್ತು ಅವಳ ಸೋದರಸಂಬಂಧಿಯನ್ನು ದೂರ ತಳ್ಳಿ, ವಧುವಿನ ಕೆನ್ನೆಗೆ ಎಲ್ಲರ ಮುಂದೆ ಹೊಡೆದಿದ್ದಾರೆ ಎಂದು ವಧುವಿನ ಕುಟುಂಬ ತಿಳಿಸಿದೆ.

ಇದನ್ನೂ ಓದಿ: ಆಂಧ್ರ ಪ್ರದೇಶ: ಠಾಣೆಯಲ್ಲಿ ದಲಿತ ಮಹಿಳೆಯನ್ನು ತೀವ್ರವಾಗಿ ಥಳಿಸಿದ ಪೊಲೀಸರು-ಆರೋಪ

ವರನು ತನ್ನ ಮಗಳಿಗೆ ಕಪಾಳಮೋಕ್ಷ ಮಾಡಿದ್ದಾನೆ ಎಂದು ವಧುವಿನ ತಂದೆ ಕೋಪಗೊಂಡು, ವರ ಮತ್ತು ಆತನ ಕುಟುಂಬವನ್ನು ಸಭಾಂಗಣದಿಂದ ಹೊರಹೋಗುವಂತೆ ಹೇಳಿದ್ದಾರೆ. ಮದುವೆಯನ್ನು ರದ್ದುಗೊಳಿಸುವ ವಧುವಿನ ನಿರ್ಧಾರಕ್ಕೆ ಮನೆಯವರು ಸಹ ಬೆಂಬಲಿಸಿದ್ದಾರೆ. ನಂತರ, ಯುವತಿಯ ಕುಟುಂಬವು ಸಂಬಂಧಿಕರಿಗೆ ಹೇಳಿ ಆಕೆಗೆ ಸೂಕ್ತವಾದ ವರನನ್ನು ಹುಡುಕಿ, ನಿಗದಿತ ದಿನಾಂಕ (ಜನವರಿ 20) ಮತ್ತು ಸಮಯದಲ್ಲಿ  ಬೇರೆ ಸ್ಥಳದಲ್ಲಿ ಮದುವೆ ಮಾಡಿದ್ದಾರೆ.

ಇತ್ತ, ವರನು ಪನ್ರುಟಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ವಧುವಿನ ಕುಟುಂಬದ ದೂರು ದಾಖಲಿಸಿ, ಅವರ ಕುಟುಂಬವು ಮದುವೆಯ ಸಿದ್ಧತೆ ಮತ್ತು ಸಮಾರಂಭಗಳಿಗೆ ಖರ್ಚು ಮಾಡಿದ 7 ಲಕ್ಷ ರೂಪಾಯಿ ಹಣವನ್ನು ಪರಿಹಾರವಾಗಿ ಕೇಳಿದ್ದಾರೆ.

“ಸೋದರಸಂಬಂಧಿಯೊಂದಿಗೆ ನೃತ್ಯ ಮಾಡಿದ್ದಕ್ಕಾಗಿ ವರ ವಧುವಿಗೆ ಕಪಾಳಮೋಕ್ಷ ಮಾಡಿದ್ದಾನೆಂದು ಆರೋಪಿಸಲಾಗಿದೆ. ನಂತರ ವಧು ವರನನ್ನು ತಿರಸ್ಕರಿಸಿದ್ದಾರೆ. ಆಕೆಯ ಪೋಷಕರು ಅಕೆಯನ್ನು ಬೇರೆ ಯುವಕನೊಂದಿಗೆ ಮದುವೆ ಮಾಡಿದ್ದಾರೆ. ನಾವು ಎರಡೂ ಕಡೆಯಿಂದ ದೂರುಗಳನ್ನು ಸ್ವೀಕರಿಸಿದ್ದೇವೆ” ಎಂದು ಮಹಿಳಾ ಪೊಲೀಸ್ ಇನ್ಸ್‌ಪೆಕ್ಟರ್ ಎಸ್. ವಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ಹಿಜಾಬ್‌ v/s ಕೇಸರಿ ಶಾಲು: ಮತೀಯ ದ್ವೇಷದ ಹಿಂದೆ ಎಬಿವಿಪಿ ಕೈವಾಡ- ಎಸ್‌ಎಫ್‌ಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...