Homeಮುಖಪುಟಉತ್ತರ ಪ್ರದೇಶ: 17 ವರ್ಷದ ಬಾಲಕನ ಮೇಲೆ ಪೊಲೀಸ್ ದೌರ್ಜನ್ಯ ಆರೋಪ, ಬಾಲಕ ಸಾವು

ಉತ್ತರ ಪ್ರದೇಶ: 17 ವರ್ಷದ ಬಾಲಕನ ಮೇಲೆ ಪೊಲೀಸ್ ದೌರ್ಜನ್ಯ ಆರೋಪ, ಬಾಲಕ ಸಾವು

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್‌ ಖೇರಿಯಲ್ಲಿ ಮೊಬೈಲ್ ಕಳ್ಳತನದ ಶಂಕೆಯಲ್ಲಿ 17 ವರ್ಷದ ಬಾಲಕನನ್ನು ಆತನ ಚಿಕ್ಕಪ್ಪ ಮತ್ತು ಮೂವರು ಪೊಲೀಸರು ಪೊಲೀಸ್ ಚೌಕಿಯೊಳಗೆ ನಿರ್ದಯವಾಗಿ ಥಳಿಸಿದ್ದು, ಹಲ್ಲೆಗೊಳಗಾದ ನಾಲ್ಕು ದಿನಗಳ ನಂತರ ಬಾಲಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಪೊಲೀಸರು ಹಲ್ಲೆಯಲ್ಲಿ ನೇರವಾಗಿ ಭಾಗಿಯಾಗಿದ್ದಾರೆ ಎಂದು ಬಾಲಕನ ಕುಟುಂಬ ಆರೋಪಿಸಿದೆ. ಸದ್ಯ ಪೊಲೀಸ್ ಚೌಕಿಯ ಉಸ್ತುವಾರಿ  ಸೇರಿದಂತೆ ಮೂವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಒಬ್ಬರು ಸಬ್ ಇನ್ಸ್‌ಪೆಕ್ಟರ್ ಮತ್ತು ಇಬ್ಬರು ಕಾನ್‌ಸ್ಟೆಬಲ್‌ಗಳು ಅಮಾನತಾಗಿದ್ದಾರೆ.

ಲಖಿಂಪುರ್‌ ಖೇರಿ ಎಸ್‌ಎಸ್‌ಪಿ ಸಂಜೀವ್ ಸುಮನ್, “ನಾವು ಪೊಲೀಸರ ವಿರುದ್ಧ ನೀಡಲಾಗಿರುವ ದೂರಿನ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ತಪ್ಪಿತಸ್ಥರೆಂದು ಕಂಡುಬಂದರೆ ಯಾರನ್ನೂ ಬಿಡುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೈಲಿನಲ್ಲಿ ಪ್ರಯಾಣಿಕನನ್ನು ಥಳಿಸಿದ ಪೊಲೀಸ್‌!

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಬಾಲಕನ ಕುಟುಂಬದವರು ಹಿರಿಯ ಪೊಲೀಸರಿಗೆ ಮೃತನ ದೇಹದ ಮೇಲಿನ ಬಾಹ್ಯ ಗಾಯಗಳನ್ನು ತೋರಿಸಿದ್ದಾರೆ.

ಇತ್ತ, ಕುಟುಂಬ ಸದಸ್ಯರ ಸಮ್ಮುಖದಲ್ಲಿ ಬಾಲಕನ ವಿಚಾರಣೆ ನಡೆಯಿತು. ನಂತರ ಆತನನ್ನು ಬಿಡಲಾಯಿತು. ಬಾಲಕನ ಕುಟುಂಬವು ಮೊದಲು ಹಲ್ಲೆಗೆ ಆತನ ಚಿಕ್ಕಪ್ಪನನ್ನು ದೂಷಿಸಿದೆ. ಆದರೆ ನಂತರ ತಮ್ಮ ಹೇಳಿಕೆಯನ್ನು ಬದಲಾಯಿಸಿದೆ ಎಂದು ಲಖಿಂಪುರ್‌ ಪೊಲೀಸ್ ಮುಖ್ಯಸ್ಥರು ಹೇಳಿದ್ದಾರೆ.

‘‘ಈ ತಿಂಗಳ 17ರಂದು ಬಾಲಕನ ಚಿಕ್ಕಪ್ಪ ಬಾಲಕನ ಮೇಲೆ ಫೋನ್ ಕದ್ದಿದ್ದಾನೆ ಎಂದು ಆರೋಪಿಸಿದ್ದರು. ದೂರಿನ ಮೇರೆಗೆ 19 ರಂದು ಎರಡೂ ಕಡೆಯಿಂದ ಬಾಲಕನ ಕುಟುಂಬದವರು ಹಾಗೂ ಗ್ರಾಮದ ಮುಖಂಡರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಲಾಯಿತು. ನಂತರ ಅವರು ರಾಜಿ ಮಾಡಿಕೊಂಡರು. ಬಳಿಕ ಪೊಲೀಸ್ ಠಾಣೆಯಿಂದ ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಹಿಂತಿರುಗಿದರು. ಜನವರಿ 23 ರ ಬೆಳಗ್ಗೆ ಹುಡುಗನ ತಾಯಿ 5 ರಿಂದ 6 ಜನರೊಂದಿಗೆ ಪೊಲೀಸ್ ಠಾಣೆಗೆ ಬಂದು, ಜ.20 ರಂದು ರಾತ್ರಿ ಬಾಲಕನ ಚಿಕ್ಕಪ್ಪ ಮತ್ತು ಇತರ ಕೆಲವರು ಆತನನನ್ನು ಥಳಿಸಿದ್ದಾರೆ ಎಂದು ಹೇಳಿದ್ದರು. ಅದೇ ರಾತ್ರಿ ಬಾಲಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ಪೊಲೀಸರು ಥಳಿಸಿ ಸಾವನ್ನಪ್ಪಿದ್ದಾರೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ಈ ಆರೋಪದ ಬಗ್ಗೆ ತನಿಖೆ ನಡೆಸುತ್ತೇವೆ. ಪೊಲೀಸರೇ ಹೊಣೆಗಾರರಾಗಿದ್ದರೆ ಕ್ರಮ ಎದುರಿಸಬೇಕಾಗುತ್ತದೆ” ಎಂದು ಪೊಲೀಸ್ ಮುಖ್ಯಸ್ಥ ಸಂಜೀವ್ ಸುಮನ್ ಹೇಳಿದ್ದಾರೆ.

“ಬಾಲಕನ ಕುಟುಂಬವು ಎರಡು ದೂರುಗಳನ್ನು ದಾಖಲಿಸಿದೆ. ಆತನ ಚಿಕ್ಕಪ್ಪ ರಾಮ್ ಬಹದ್ದೂರ್ ಮತ್ತು ನೆರೆಹೊರೆಯವರಾದ ರಾಜವೀರ್ ಸಿಂಗ್ ವಿರುದ್ಧ ಐಪಿಸಿಯ ಸೆಕ್ಷನ್ 304 ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದೇವೆ. ಎರಡನೇ ದೂರು ಸಬ್ ಇನ್ಸ್‌ಪೆಕ್ಟರ್‌ ಮತ್ತು ಇಬ್ಬರು ಕಾನ್‌ಸ್ಟೆಬಲ್‌ಗಳ ವಿರುದ್ಧವಾಗಿದೆ. ನಾವು ಪ್ರಕರಣವನ್ನು ವಿವರವಾಗಿ ತನಿಖೆ ಮಾಡುತ್ತಿದ್ದೇವೆ ಮತ್ತು ಅದರಂತೆ ಸಂಬಂಧಪಟ್ಟ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ” ಎಂದಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿರುವ ಬಾಲಕನ ಅಕ್ಕ “ಪೊಲೀಸರು ನನ್ನ ತಮ್ಮನನ್ನು ವಿಚಾರಣೆ ನಡೆಸುವಾಗ ನನ್ನ ತಾಯಿಯನ್ನು ವಾಪಸ್ ಕಳುಹಿಸಿದ್ದರು. ಬಳಿಕ ಆತನನ್ನು ಬೆಲ್ಟ್‌ಗಳಿಂದ ನಿರ್ದಯವಾಗಿ ಥಳಿಸಿದ್ದಾರೆ. ಕೆಲವು ಗಂಟೆಗಳ ನಂತರ, ನನ್ನ ಸಹೋದರನನ್ನು ಕರೆದೊಯ್ಯಲು ನಮಗೆ ಕರೆ ಬಂದಿತು. ಆದರೆ ನನ್ನ ಪೋಷಕರು ಅಲ್ಲಿಗೆ ತಲುಪಿದಾಗ, ಪೊಲೀಸರು ಮತ್ತು ನನ್ನ ಚಿಕ್ಕಪ್ಪ ತೀವ್ರವಾಗಿ ಥಳಿಸಿದ್ದಾರೆ ಎಂದು ನನ್ನ ತಮ್ಮ ತಿಳಿಸಿದ್ದಾನೆ. ಆತನನ್ನು ಮನೆಗ ಎಕರೆತಂದಿದ್ದೇವು ಆದರೆ, ಅವನ ಸ್ಥಿತಿ ತೀರಾ ಹದಗೆಟ್ಟಾಗ ಪಾಲಿಯಾ ಪಟ್ಟಣದ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ” ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಆಂಧ್ರ ಪ್ರದೇಶ: ಠಾಣೆಯಲ್ಲಿ ದಲಿತ ಮಹಿಳೆಯನ್ನು ತೀವ್ರವಾಗಿ ಥಳಿಸಿದ ಪೊಲೀಸರು-ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...