Homeಕರ್ನಾಟಕಸಂಪುಟ ಪುನರ್‌‌‌‌ ರಚನೆಗೆ ಹೆಚ್ಚುತ್ತಿರುವ ಒತ್ತಡ: ಹೈಕಮಾಂಡ್‌‌‌‌‌ ಒಪ್ಪಿಗೆಗೆ ಕಾಯುತ್ತಿದ್ದೇನೆ ಎಂದ ಬೊಮ್ಮಾಯಿ!

ಸಂಪುಟ ಪುನರ್‌‌‌‌ ರಚನೆಗೆ ಹೆಚ್ಚುತ್ತಿರುವ ಒತ್ತಡ: ಹೈಕಮಾಂಡ್‌‌‌‌‌ ಒಪ್ಪಿಗೆಗೆ ಕಾಯುತ್ತಿದ್ದೇನೆ ಎಂದ ಬೊಮ್ಮಾಯಿ!

- Advertisement -
- Advertisement -

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಮೇಲೆ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್‌‌ ರಚನೆ ಮಾಡುವಂತೆ ಒತ್ತಡ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಇದಕ್ಕಾಗಿ ಬಿಜೆಪಿ ನಾಯಕತ್ವದ ಒಪ್ಪಿಗೆಗಾಗಿ ಕಾಯುತ್ತಿರುವುದಾಗಿ ಸೋಮವಾರ ಸೂಚಿಸಿದ್ದಾರೆ. ಜನವರಿ 28ಕ್ಕೆ ತಮ್ಮ ಸರ್ಕಾರ ಆರು ತಿಂಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ತಮ್ಮ ಆಡಳಿತದ ಸಾಧನೆಗಳ ಪಟ್ಟಿಯನ್ನು ಹೊರತರುವುದಾಗಿ ತಿಳಿಸಿದ್ದಾರೆ.

“ನಾಲ್ಕು ಸಚಿವ ಸ್ಥಾನಗಳು ಖಾಲಿ ಇವೆ, ಆದ್ದರಿಂದ ಸಹಜವಾಗಿ ಆಕಾಂಕ್ಷೆಗಳಿವೆ. ಅದರಲ್ಲಿ ಯಾವುದೇ ತಪ್ಪಿಲ್ಲ, ಅದನ್ನು ಯಾವಾಗ ಮತ್ತು ಹೇಗೆ ಮಾಡಬೇಕೆಂದು ಪಕ್ಷದ ನಾಯಕತ್ವಕ್ಕೆ ತಿಳಿದಿದೆ. ನಾನು ಅದನ್ನು ನಾಯಕತ್ವದ ಗಮನಕ್ಕೆ ತರುತ್ತಿದ್ದೇನೆ. ನಾಯಕತ್ವವು ಈ ಬಗ್ಗೆ ನನ್ನನ್ನು ಚರ್ಚೆಗಾಗಿ ಕರೆದಾಗ ಅವರಿಗೆ ನಾನು ಎಲ್ಲಾ ವಿವರಗಳನ್ನು ನೀಡುತ್ತೇನೆ” ಎಂದು ಬೊಮ್ಮಾಯಿ ಅವರು ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ್ದಾರೆ.

ಇದನ್ನೂ ಓದಿ: ಯುಪಿ ಚುನಾವಣೆ: ಪ್ರಚೋದನಾಕಾರಿ ಭಾಷಣ ಮಾಡಿದ ಬಿಜೆಪಿ ಅಭ್ಯರ್ಥಿ ವಿರುದ್ಧ ಪ್ರಕರಣ

ಮಂಡಳಿ ಮತ್ತು ನಿಗಮಗಳ ನೇಮಕಾತಿ ಕುರಿತ ಪ್ರಶ್ನೆಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಪಕ್ಷದಲ್ಲಿ ಚರ್ಚಿಸಬೇಕು ಮತ್ತು ಇದನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

“ಇದು ಪಕ್ಷದ ಮೇಲೆ ಅವಲಂಬಿತವಾಗಿದೆ, ಯಾವ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಬೇಕು ಎಂಬುದನ್ನು ಪಕ್ಷವು ನಿರ್ಧರಿಸುತ್ತದೆ. ಸದ್ಯಕ್ಕೆ ಮುಖ್ಯಮಂತ್ರಿಯಾಗಿರುವ ನನ್ನ ಮುಂದೆ ಮಂಡಳಿ ಮತ್ತು ನಿಗಮಗಳ ನೇಮಕಾತಿಗೆ ಸಂಬಂಧಿಸಿದಂತೆ ಅಂತಹ ಯಾವುದೇ ಪ್ರಸ್ತಾಪವಿಲ್ಲ, ಪಕ್ಷವು ಅದನ್ನು ನೋಡುತ್ತಿದೆ. ಚರ್ಚೆಯ ನಂತರ ಅವರು ವರದಿಯನ್ನು ನೀಡುತ್ತಾರೆ, ಅದರ ಆಧಾರದ ಮೇಲೆ ನಾವು ಈ ಬಗ್ಗೆ ನೋಡುತ್ತೇವೆ”ಎಂದು ಅವರು ಹೇಳಿದ್ದಾರೆ.

2023 ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ, ಹೊಸ ಮುಖಗಳಿಗೆ ಅವಕಾಶ ಕಲ್ಪಿಸಲು ಶೀಘ್ರದಲ್ಲೇ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಲು ಅಥವಾ ಪುನರ್ರಚನೆ ಮಾಡಲು ಮತ್ತು ಪಕ್ಷದ ಶಾಸಕರನ್ನು ವಿವಿಧ ಮಂಡಳಿಗಳು ಮತ್ತು ನಿಗಮಗಳ ಖಾಲಿ ಇರುವ ಮುಖ್ಯಸ್ಥರ ಹುದ್ದೆಗಳನ್ನು ಭರ್ತಿ ಮಾಡಲು ಮುಖ್ಯಮಂತ್ರಿಯ ಮೇಲೆ ಒತ್ತಡ ಹೆಚ್ಚುತ್ತಿದೆ.

ರಾಜ್ಯದಲ್ಲಿರುವ 34 ಸಚಿವರ ಸ್ಥಾನದಲ್ಲಿ ಮುಖ್ಯಮಂತ್ರಿ ಸೇರಿದಂತೆ ಸಚಿವ ಸಂಪುಟದಲ್ಲಿ 30 ಸಚಿವರು ಈಗಾಗಲೆ ಉಸ್ತುವಾರಿ ವಹಿಸಿಕೊಂಡಿದ್ದಾರೆ.

ಇದನ್ನೂ ಓದಿ: ಎಚ್ಚರಗೊಂಡವರ ಕನಸು; ವೋಕ್ ಸಂಸ್ಕೃತಿ-ಕಥನ ಮತ್ತು ತಾತ್ವಿಕ-ಮಂಥನ

ಈ ಮಧ್ಯೆ, ಐದು ರಾಜ್ಯಗಳ ವಿಧಾನಸಭೆ ಚುನಾವಣೆ ನಂತರವೇ ಸಂಪುಟ ವಿಸ್ತರಣೆ ಅಥವಾ ಪುನರ್‌ ರಚನೆ ಸಾಧ್ಯತೆ ಇದೆ ಎಂಬ ಮಾತುಗಳು ಕೂಡಾ ಪಕ್ಷದ ವಲಯದಲ್ಲಿ ಕೇಳಿಬರುತ್ತಿವೆ.

ಹೊಸ ಮುಖಗಳಿಗೆ ಅವಕಾಶ ನೀಡುವ ಗುಜರಾತ್ ಮಾದರಿಯನ್ನು ಶೀಘ್ರದಲ್ಲೇ ರಾಜ್ಯದಲ್ಲೂ ಬಿಜೆಪಿ ಪ್ರಯೋಗಿಸುತ್ತದೆ ಎಂದು ಇತ್ತೀಚೆಗೆ ವರದಿ ಹರಡಿತ್ತು. ಇದನ್ನು ಮಾರ್ಚ್‌ ತಿಂಗಳಲ್ಲಿ ಮಾಡಿದರೆ ತುಂಬಾ ತಡವಾಗಲಿದ್ದು, ಮಂತ್ರಿಗಳು ತಮ್ಮ ಸಂಪುಟದಲ್ಲಿ ಮಾತ್ರವಲ್ಲದೆ, ಸ್ವಂತ ಕ್ಷೇತ್ರದಲ್ಲೂ ಛಾಫು ಮೂಡಿಸಲು ಸಾಧ್ಯವಿರುವುದಿಲ್ಲ ಎಂದು ಪಕ್ಷವು ಗಮನಿಸಿದೆ ಎನ್ನಲಾಗಿದೆ.

ಕಳೆದ ಸೆಪ್ಟೆಂಬರ್‌ನಲ್ಲಿ, ಬಿಜೆಪಿಯು ಭೂಪೇಂದ್ರ ಪಟೇಲ್ ಸರ್ಕಾರಕ್ಕೆ ಹೊಸ ಮುಖಗಳನ್ನು ಆಯ್ಕೆ ಮಾಡುವ ಮೂಲಕ ಗುಜರಾತ್‌ನ ಮಂತ್ರಿ ಮಂಡಳಿಯನ್ನು ಸಂಪೂರ್ಣವಾಗಿ ಬದಲಾಯಿಸಿತ್ತು. ಈ ಹಿಂದಿನ ವಿಜಯ್ ರೂಪಾನಿ ನೇತೃತ್ವದ ಸಚಿವಾಲಯದಿಂದ ಯಾವುದೇ ಸಚಿವರನ್ನು ಸೇರ್ಪಡೆಗೊಳಿಸಿರಲಿಲ್ಲ.

ಬಿಜೆಪಿಯ ಹಿರಿಯ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಎಂಪಿ ರೇಣುಕಾಚಾರ್ಯ ಅವರು ಗುರುವಾರದಂದು ರಹಸ್ಯ ಸಭೆ ನಡೆಸಿದ್ದಾರೆ ಎಂದು TNIE ವರದಿ ಮಾಡಿದೆ. ಬೆಳಗಾವಿಯಲ್ಲಿ  ಕೂಡಾ ಇದೇ ರೀತಿಯ ಸಭೆ ಸಚಿವ ಉಮೇಶ ಕತ್ತಿ, ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮತ್ತು ಈ ಭಾಗದ ಇತರ ಶಾಸಕರು ನಡೆಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಹಿಂದೂ ವಿರೋಧಿ ಭಾಷಣ ಆರೋಪಿಸಿ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್‌‌ಗೆ ಹಿಂದುತ್ವ ಸಂಘಟನೆಗಳ ಅರ್ಜಿ

ಕೆಲವು ಬಿಜೆಪಿ ಶಾಸಕರ ನಡುವೆ “ರಹಸ್ಯ ಸಭೆ” ನಡೆದಿರುವ ಕುರಿತು ಕೇಳಿದ ಪ್ರಶ್ನೆಯನ್ನು ತಳ್ಳಿ ಹಾಕಿ ಮುಖ್ಯಮಂತ್ರಿ, ಇದು ಪಕ್ಷದ ನಾಯಕರ ನಡುವಿನ ಸಾಂದರ್ಭಿಕ ಸಭೆ ಎಂದು ಬಣ್ಣಿಸಿದ್ದಾರೆ.

“ಈ ಬಗ್ಗೆ ನನಗೆ ಗೊತ್ತಿಲ್ಲ, ಮಾಧ್ಯಮಗಳು ಇದನ್ನು ರಹಸ್ಯ ಸಭೆ ಎಂದು ಕರೆಯುತ್ತಿದ್ದೀರಿ. ಇದರಲ್ಲಿ ಯಾವುದೇ ಗೊಂದಲವಿಲ್ಲ, ನಾಯಕರು ಹಲವಾರು ಸಂದರ್ಭಗಳಲ್ಲಿ ಆಕಸ್ಮಿಕವಾಗಿ ಭೇಟಿಯಾಗುತ್ತಾರೆ. ನೀವು ಅದನ್ನು ಬೇರೇನೋ ಎಂದು ಬಿಂಬಿಸುತ್ತಿರುವುದು ಸರಿಯಲ್ಲ. ಕಾಂಗ್ರೆಸ್ ನಾಯಕರು ವಿವಿಧ ಸ್ಥಳಗಳಲ್ಲಿ ಆಕಸ್ಮಿಕವಾಗಿ ಭೇಟಿಯಾಗುತ್ತಾರೆ. ಅದೇ ರೀತಿ ಬಿಜೆಪಿ ನಾಯಕರು ಕೂಡ ಭೇಟಿಯಾಗುತ್ತಾರೆ, ಅದರಲ್ಲಿ ಏನೂ ಇಲ್ಲ” ಎಂದು ಅವರು ಹೇಳಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ನಾಳೆ ಬಿಜೆಪಿ ಕಚೇರಿಯಲ್ಲಿ ಸಭೆ ನಿಗದಿಯಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಬಜೆಟ್ ಸಿದ್ಧತೆ ಕುರಿತ ಪ್ರಶ್ನೆಗೆ ಉತ್ತರಿಸಿದ ಬೊಮ್ಮಾಯಿ, ಡಿಸೆಂಬರ್‌ನಿಂದ ಹಣಕಾಸು ಇಲಾಖೆಯೊಂದಿಗೆ ಆಂತರಿಕ ಸಭೆಗಳನ್ನು ನಡೆಸುತ್ತಿದ್ದು, ಆದಾಯ ಉತ್ಪಾದಿಸುವ ಇಲಾಖೆಗಳೊಂದಿಗೆ ಮತ್ತು ಗುರಿಗಳನ್ನು ತಲುಪಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ನಿರ್ದೇಶನಗಳನ್ನು ನೀಡಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ: ರುವಾಂಡ ರೀತಿಯ ನರಮೇಧ ಭಾರತದಲ್ಲೂ ನಡೆಯಲಿದೆಯೇ?; ತಜ್ಞರ ಎಚ್ಚರಿಕೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...