Homeಕರ್ನಾಟಕಸಂಪುಟ ಪುನರ್‌‌‌‌ ರಚನೆಗೆ ಹೆಚ್ಚುತ್ತಿರುವ ಒತ್ತಡ: ಹೈಕಮಾಂಡ್‌‌‌‌‌ ಒಪ್ಪಿಗೆಗೆ ಕಾಯುತ್ತಿದ್ದೇನೆ ಎಂದ ಬೊಮ್ಮಾಯಿ!

ಸಂಪುಟ ಪುನರ್‌‌‌‌ ರಚನೆಗೆ ಹೆಚ್ಚುತ್ತಿರುವ ಒತ್ತಡ: ಹೈಕಮಾಂಡ್‌‌‌‌‌ ಒಪ್ಪಿಗೆಗೆ ಕಾಯುತ್ತಿದ್ದೇನೆ ಎಂದ ಬೊಮ್ಮಾಯಿ!

- Advertisement -
- Advertisement -

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಮೇಲೆ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್‌‌ ರಚನೆ ಮಾಡುವಂತೆ ಒತ್ತಡ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಇದಕ್ಕಾಗಿ ಬಿಜೆಪಿ ನಾಯಕತ್ವದ ಒಪ್ಪಿಗೆಗಾಗಿ ಕಾಯುತ್ತಿರುವುದಾಗಿ ಸೋಮವಾರ ಸೂಚಿಸಿದ್ದಾರೆ. ಜನವರಿ 28ಕ್ಕೆ ತಮ್ಮ ಸರ್ಕಾರ ಆರು ತಿಂಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ತಮ್ಮ ಆಡಳಿತದ ಸಾಧನೆಗಳ ಪಟ್ಟಿಯನ್ನು ಹೊರತರುವುದಾಗಿ ತಿಳಿಸಿದ್ದಾರೆ.

“ನಾಲ್ಕು ಸಚಿವ ಸ್ಥಾನಗಳು ಖಾಲಿ ಇವೆ, ಆದ್ದರಿಂದ ಸಹಜವಾಗಿ ಆಕಾಂಕ್ಷೆಗಳಿವೆ. ಅದರಲ್ಲಿ ಯಾವುದೇ ತಪ್ಪಿಲ್ಲ, ಅದನ್ನು ಯಾವಾಗ ಮತ್ತು ಹೇಗೆ ಮಾಡಬೇಕೆಂದು ಪಕ್ಷದ ನಾಯಕತ್ವಕ್ಕೆ ತಿಳಿದಿದೆ. ನಾನು ಅದನ್ನು ನಾಯಕತ್ವದ ಗಮನಕ್ಕೆ ತರುತ್ತಿದ್ದೇನೆ. ನಾಯಕತ್ವವು ಈ ಬಗ್ಗೆ ನನ್ನನ್ನು ಚರ್ಚೆಗಾಗಿ ಕರೆದಾಗ ಅವರಿಗೆ ನಾನು ಎಲ್ಲಾ ವಿವರಗಳನ್ನು ನೀಡುತ್ತೇನೆ” ಎಂದು ಬೊಮ್ಮಾಯಿ ಅವರು ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ್ದಾರೆ.

ಇದನ್ನೂ ಓದಿ: ಯುಪಿ ಚುನಾವಣೆ: ಪ್ರಚೋದನಾಕಾರಿ ಭಾಷಣ ಮಾಡಿದ ಬಿಜೆಪಿ ಅಭ್ಯರ್ಥಿ ವಿರುದ್ಧ ಪ್ರಕರಣ

ಮಂಡಳಿ ಮತ್ತು ನಿಗಮಗಳ ನೇಮಕಾತಿ ಕುರಿತ ಪ್ರಶ್ನೆಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಪಕ್ಷದಲ್ಲಿ ಚರ್ಚಿಸಬೇಕು ಮತ್ತು ಇದನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

“ಇದು ಪಕ್ಷದ ಮೇಲೆ ಅವಲಂಬಿತವಾಗಿದೆ, ಯಾವ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಬೇಕು ಎಂಬುದನ್ನು ಪಕ್ಷವು ನಿರ್ಧರಿಸುತ್ತದೆ. ಸದ್ಯಕ್ಕೆ ಮುಖ್ಯಮಂತ್ರಿಯಾಗಿರುವ ನನ್ನ ಮುಂದೆ ಮಂಡಳಿ ಮತ್ತು ನಿಗಮಗಳ ನೇಮಕಾತಿಗೆ ಸಂಬಂಧಿಸಿದಂತೆ ಅಂತಹ ಯಾವುದೇ ಪ್ರಸ್ತಾಪವಿಲ್ಲ, ಪಕ್ಷವು ಅದನ್ನು ನೋಡುತ್ತಿದೆ. ಚರ್ಚೆಯ ನಂತರ ಅವರು ವರದಿಯನ್ನು ನೀಡುತ್ತಾರೆ, ಅದರ ಆಧಾರದ ಮೇಲೆ ನಾವು ಈ ಬಗ್ಗೆ ನೋಡುತ್ತೇವೆ”ಎಂದು ಅವರು ಹೇಳಿದ್ದಾರೆ.

2023 ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ, ಹೊಸ ಮುಖಗಳಿಗೆ ಅವಕಾಶ ಕಲ್ಪಿಸಲು ಶೀಘ್ರದಲ್ಲೇ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಲು ಅಥವಾ ಪುನರ್ರಚನೆ ಮಾಡಲು ಮತ್ತು ಪಕ್ಷದ ಶಾಸಕರನ್ನು ವಿವಿಧ ಮಂಡಳಿಗಳು ಮತ್ತು ನಿಗಮಗಳ ಖಾಲಿ ಇರುವ ಮುಖ್ಯಸ್ಥರ ಹುದ್ದೆಗಳನ್ನು ಭರ್ತಿ ಮಾಡಲು ಮುಖ್ಯಮಂತ್ರಿಯ ಮೇಲೆ ಒತ್ತಡ ಹೆಚ್ಚುತ್ತಿದೆ.

ರಾಜ್ಯದಲ್ಲಿರುವ 34 ಸಚಿವರ ಸ್ಥಾನದಲ್ಲಿ ಮುಖ್ಯಮಂತ್ರಿ ಸೇರಿದಂತೆ ಸಚಿವ ಸಂಪುಟದಲ್ಲಿ 30 ಸಚಿವರು ಈಗಾಗಲೆ ಉಸ್ತುವಾರಿ ವಹಿಸಿಕೊಂಡಿದ್ದಾರೆ.

ಇದನ್ನೂ ಓದಿ: ಎಚ್ಚರಗೊಂಡವರ ಕನಸು; ವೋಕ್ ಸಂಸ್ಕೃತಿ-ಕಥನ ಮತ್ತು ತಾತ್ವಿಕ-ಮಂಥನ

ಈ ಮಧ್ಯೆ, ಐದು ರಾಜ್ಯಗಳ ವಿಧಾನಸಭೆ ಚುನಾವಣೆ ನಂತರವೇ ಸಂಪುಟ ವಿಸ್ತರಣೆ ಅಥವಾ ಪುನರ್‌ ರಚನೆ ಸಾಧ್ಯತೆ ಇದೆ ಎಂಬ ಮಾತುಗಳು ಕೂಡಾ ಪಕ್ಷದ ವಲಯದಲ್ಲಿ ಕೇಳಿಬರುತ್ತಿವೆ.

ಹೊಸ ಮುಖಗಳಿಗೆ ಅವಕಾಶ ನೀಡುವ ಗುಜರಾತ್ ಮಾದರಿಯನ್ನು ಶೀಘ್ರದಲ್ಲೇ ರಾಜ್ಯದಲ್ಲೂ ಬಿಜೆಪಿ ಪ್ರಯೋಗಿಸುತ್ತದೆ ಎಂದು ಇತ್ತೀಚೆಗೆ ವರದಿ ಹರಡಿತ್ತು. ಇದನ್ನು ಮಾರ್ಚ್‌ ತಿಂಗಳಲ್ಲಿ ಮಾಡಿದರೆ ತುಂಬಾ ತಡವಾಗಲಿದ್ದು, ಮಂತ್ರಿಗಳು ತಮ್ಮ ಸಂಪುಟದಲ್ಲಿ ಮಾತ್ರವಲ್ಲದೆ, ಸ್ವಂತ ಕ್ಷೇತ್ರದಲ್ಲೂ ಛಾಫು ಮೂಡಿಸಲು ಸಾಧ್ಯವಿರುವುದಿಲ್ಲ ಎಂದು ಪಕ್ಷವು ಗಮನಿಸಿದೆ ಎನ್ನಲಾಗಿದೆ.

ಕಳೆದ ಸೆಪ್ಟೆಂಬರ್‌ನಲ್ಲಿ, ಬಿಜೆಪಿಯು ಭೂಪೇಂದ್ರ ಪಟೇಲ್ ಸರ್ಕಾರಕ್ಕೆ ಹೊಸ ಮುಖಗಳನ್ನು ಆಯ್ಕೆ ಮಾಡುವ ಮೂಲಕ ಗುಜರಾತ್‌ನ ಮಂತ್ರಿ ಮಂಡಳಿಯನ್ನು ಸಂಪೂರ್ಣವಾಗಿ ಬದಲಾಯಿಸಿತ್ತು. ಈ ಹಿಂದಿನ ವಿಜಯ್ ರೂಪಾನಿ ನೇತೃತ್ವದ ಸಚಿವಾಲಯದಿಂದ ಯಾವುದೇ ಸಚಿವರನ್ನು ಸೇರ್ಪಡೆಗೊಳಿಸಿರಲಿಲ್ಲ.

ಬಿಜೆಪಿಯ ಹಿರಿಯ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಎಂಪಿ ರೇಣುಕಾಚಾರ್ಯ ಅವರು ಗುರುವಾರದಂದು ರಹಸ್ಯ ಸಭೆ ನಡೆಸಿದ್ದಾರೆ ಎಂದು TNIE ವರದಿ ಮಾಡಿದೆ. ಬೆಳಗಾವಿಯಲ್ಲಿ  ಕೂಡಾ ಇದೇ ರೀತಿಯ ಸಭೆ ಸಚಿವ ಉಮೇಶ ಕತ್ತಿ, ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮತ್ತು ಈ ಭಾಗದ ಇತರ ಶಾಸಕರು ನಡೆಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಹಿಂದೂ ವಿರೋಧಿ ಭಾಷಣ ಆರೋಪಿಸಿ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್‌‌ಗೆ ಹಿಂದುತ್ವ ಸಂಘಟನೆಗಳ ಅರ್ಜಿ

ಕೆಲವು ಬಿಜೆಪಿ ಶಾಸಕರ ನಡುವೆ “ರಹಸ್ಯ ಸಭೆ” ನಡೆದಿರುವ ಕುರಿತು ಕೇಳಿದ ಪ್ರಶ್ನೆಯನ್ನು ತಳ್ಳಿ ಹಾಕಿ ಮುಖ್ಯಮಂತ್ರಿ, ಇದು ಪಕ್ಷದ ನಾಯಕರ ನಡುವಿನ ಸಾಂದರ್ಭಿಕ ಸಭೆ ಎಂದು ಬಣ್ಣಿಸಿದ್ದಾರೆ.

“ಈ ಬಗ್ಗೆ ನನಗೆ ಗೊತ್ತಿಲ್ಲ, ಮಾಧ್ಯಮಗಳು ಇದನ್ನು ರಹಸ್ಯ ಸಭೆ ಎಂದು ಕರೆಯುತ್ತಿದ್ದೀರಿ. ಇದರಲ್ಲಿ ಯಾವುದೇ ಗೊಂದಲವಿಲ್ಲ, ನಾಯಕರು ಹಲವಾರು ಸಂದರ್ಭಗಳಲ್ಲಿ ಆಕಸ್ಮಿಕವಾಗಿ ಭೇಟಿಯಾಗುತ್ತಾರೆ. ನೀವು ಅದನ್ನು ಬೇರೇನೋ ಎಂದು ಬಿಂಬಿಸುತ್ತಿರುವುದು ಸರಿಯಲ್ಲ. ಕಾಂಗ್ರೆಸ್ ನಾಯಕರು ವಿವಿಧ ಸ್ಥಳಗಳಲ್ಲಿ ಆಕಸ್ಮಿಕವಾಗಿ ಭೇಟಿಯಾಗುತ್ತಾರೆ. ಅದೇ ರೀತಿ ಬಿಜೆಪಿ ನಾಯಕರು ಕೂಡ ಭೇಟಿಯಾಗುತ್ತಾರೆ, ಅದರಲ್ಲಿ ಏನೂ ಇಲ್ಲ” ಎಂದು ಅವರು ಹೇಳಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ನಾಳೆ ಬಿಜೆಪಿ ಕಚೇರಿಯಲ್ಲಿ ಸಭೆ ನಿಗದಿಯಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಬಜೆಟ್ ಸಿದ್ಧತೆ ಕುರಿತ ಪ್ರಶ್ನೆಗೆ ಉತ್ತರಿಸಿದ ಬೊಮ್ಮಾಯಿ, ಡಿಸೆಂಬರ್‌ನಿಂದ ಹಣಕಾಸು ಇಲಾಖೆಯೊಂದಿಗೆ ಆಂತರಿಕ ಸಭೆಗಳನ್ನು ನಡೆಸುತ್ತಿದ್ದು, ಆದಾಯ ಉತ್ಪಾದಿಸುವ ಇಲಾಖೆಗಳೊಂದಿಗೆ ಮತ್ತು ಗುರಿಗಳನ್ನು ತಲುಪಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ನಿರ್ದೇಶನಗಳನ್ನು ನೀಡಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ: ರುವಾಂಡ ರೀತಿಯ ನರಮೇಧ ಭಾರತದಲ್ಲೂ ನಡೆಯಲಿದೆಯೇ?; ತಜ್ಞರ ಎಚ್ಚರಿಕೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...