Homeಅಂತರಾಷ್ಟ್ರೀಯಭಾರತದ ಸೈನಿಕನಿಗೆ ಅವಮಾನ: ಕ್ರೀಡಾ ಸ್ಫೂರ್ತಿ ಮರೆತ ಪಾಕಿಸ್ತಾನ

ಭಾರತದ ಸೈನಿಕನಿಗೆ ಅವಮಾನ: ಕ್ರೀಡಾ ಸ್ಫೂರ್ತಿ ಮರೆತ ಪಾಕಿಸ್ತಾನ

ಅಭಿನಂದನ್ ಪಾತ್ರದಲ್ಲಿರುವ ರೂಪದರ್ಶಿಯೊಬ್ಬ I am not supposed to tell you that sir ಎಂದು ಭಯದಿಂದ ಹೇಳುತ್ತಾನೆ, ಭಾರತವನ್ನು ಆಡಿಕೊಳ್ಳುವಂತೆ ತೋರಿಸಿದ್ದಾರೆ.

- Advertisement -
- Advertisement -

| ಸರೋವರ್ ಬೆಂಕೀಕೆರೆ |

2019ರ ಕ್ರಿಕೆಟ್ ವಿಶ್ವಕಪ್ ಪಂದ್ಯಗಳು ಶುರುವಾಗಿದ್ದು ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣವನ್ನು ಉಣಬಡಿಸುತ್ತಿದೆ. ಪಂದ್ಯಗಳ ಮುನ್ನಾ ಪ್ರತಿ ದೇಶಗಳು ತಮ್ಮ ತಮ್ಮ ತಂಡವನ್ನು ಬೆಂಬಲಿಸುವ ಜಾಹಿರಾತುಗಳನ್ನು ಮಾಡಿದ್ದಾರೆ. ಹೀಗೆ ಬರುವ ಬಹಳಷ್ಟು ಜಾಹಿರಾತುಗಳು ಜನರ ಮೆಚ್ಚುಗೆ ಪಡೆದಿದ್ದು ಹಾಸ್ಯಭರಿತವಾಗಿಯೂ ಇದೆ. ಜಾಹಿರಾತುಗಳಲ್ಲಿ ಎದುರಾಳಿ ತಂಡಗಳಿಗೆ ಸವಾಲು ಹಾಕುವ ಅಂಶಳಿದ್ದರೂ ಸಹ ಎಲ್ಲಯೂ ಕೀಳು ಮಟ್ಟದ ಬೇರೆಯವರಿಗೆ ನೋವು ಉಂಟು ಮಾಡುವ ಸ್ಕ್ರಿಪ್ಟ್ ಅನ್ನು ಯಾವ ದೇಶವೂ ಮಾಡಿದಂತಿಲ್ಲ.

ವಾಘಾ ಬಾರ್ಡರ್ ನಲ್ಲಿ ಉದ್ರೇಕವನ್ನು ತುಂಬಿಕೊಂಡಿರುವ ಸನ್ನಿವೇಶವನ್ನು ನೀವೆಲ್ಲಾ ನೋಡಿರುತ್ತೀರ. ಇದೇ ಸನ್ನಿವೇಶವನ್ನು ಬಳಸಿಕೊಂಡು ಕ್ರಿಕೆಟ್ ಪಂದ್ಯದ ವೇಳೆ ಈ ಹಿಂದೆ ಭಾರತದ ಫಿವಿಕಾಲ್ ಕಂಪನಿಯು ಭಾರತ ಮತ್ತು ಪಾಕ್ ನ ಭಾಂಧವ್ಯವನ್ನು ಬೆಸೆಯುವ ಸೈನಿಕರ ಜಾಹಿರಾತನ್ನು ಮಾಡಿತ್ತು. ಸೈನಿಕರು ಕಸರತ್ತು ನಡೆಸುವ ಸಂದರ್ಭದಲ್ಲಿ ಕಿತ್ತು ಹೋದ ಬೂಟನ್ನು ಫಿವಿಕಾಲ್ ಬಳಸಿ ಭಾರತ ಮತ್ತು ಪಾಕ್ ನ ಸೈನಿಕರು ಒಬ್ಬರಿಗೊಬ್ಬರು ಬೂಟನ್ನು ಅಂಟಿಸಿಕೊಳ್ಳುವ ಜಾಹಿರಾತು ಮಾಡಿತ್ತು. ಸೌಹಾರ್ದ ಪ್ರೇಮಿಗಳಿಗಳು ಇದನ್ನು ಮೆಚ್ಚಿಕೊಂಡಿದ್ದರೂ ಸಹ.

ಆದರೆ ಈಗ ಅದೇ ಸೈನಿಕರ ಎಳೆಯನ್ನು ಇಟ್ಟುಕೊಂಡು ಜೂನ್ 16 ರಂದು ಭಾರತ ಮತ್ತು ಪಾಕ್ ಮಧ್ಯೆ ನಡೆಯಲಿರುವ ಪಂದ್ಯದ ಕುರಿತು ಪಾಕಿಸ್ತಾನ ಮಾಡಿರುವ ಜಾಹಿರಾತು ಎಲ್ಲೆಡೆ ವೈರಲ್ ಆಗಿದೆ. ಜಾಹಿರಾತಿನಲ್ಲಿ ಪಾಕಿಸ್ತಾನ ನಮ್ಮ ಹೆಮ್ಮೆಯ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಬಳಸಿಕೊಂಡಿದ್ದಾರೆ. ಬಾಲಕೋಟ್ ದಾಳಿಯ ಸಂದರ್ಭದಲ್ಲಿ ಪಾಕ್ ಸೇನೆಯ ಕೈಗೆ ಸಿಕ್ಕಿದ್ದ ಅಭಿನಂದನ್ I am not supposed to tell you that ಎಂದು ಧೈರ್ಯವಾಗಿ ಎದೆ ಉಬ್ಬಿಸಿ ಹೇಳಿದ್ದ ಮಾತು ಎಲ್ಲೆಡೆ ವೈರಲ್ ಆಗಿತ್ತು ಅದನ್ನೇ ಬಳಸಿಕೊಂಡು ಟಾಸ್ ಗೆದ್ದರೆ ಏನು ಆಯ್ಕೆ ಮಾಡಿಕೊಳ್ಳುತ್ತೀರ? ನಿಮ್ಮ ತಂಡದಲ್ಲಿ ಯಾರೆಲ್ಲ ಇದ್ದಾರೆ ಎನ್ನುವ  ಪ್ರಶ್ನೆಗಳನ್ನು ಕೇಳುತ್ತಾ ಅದಕ್ಕೆ ಉತ್ತರ ನೀಡುವುದನ್ನು ಅಭಿನಂದನ್ ಪಾತ್ರದಲ್ಲಿರುವ ರೂಪದರ್ಶಿಯೊಬ್ಬ I am not supposed to tell you that sir ಎಂದು ಭಯದಿಂದ ಹೇಳುತ್ತಾನೆ, ಭಾರತವನ್ನು ಆಡಿಕೊಳ್ಳುವಂತೆ ತೋರಿಸಿದ್ದಾರೆ. ಅಲ್ಲದೆ ಈ ಜಾಹಿರಾತಿನಲ್ಲಿ ರೇಸಿಸ್ಟ್ ಮನಸ್ಥಿತಿಯನ್ನೂ ನೋಡಬಹುದಾಗಿದೆ.

ಒಟ್ಟಾರೆಯಲ್ಲಿ ಪಾಕಿಸ್ತಾನದ ಈ ಜಾಹಿರಾತು ಕೆಟ್ಟ ಮತ್ತು ಕೀಳು ಮಟ್ಟದದಿಂದ ಕೂಡಿದೆ. ಈ ಜಾಹಿರಾತು ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಪಾಕಿಸ್ತಾನಕ್ಕೆ ಛೀಮಾರಿಯನ್ನು ಹಾಕಿದ್ದಾರೆ. ಅಲ್ಲದೆ ವಿಶ್ವಕಪ್ ಟೂರ್ನಿಯಲ್ಲಿ ಬಲಿಷ್ಠ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳನ್ನು ಮಣಿಸಿ ಸೋಲು ಕಾಣದ ಭಾರತ ತಂಡ 4 ಅಂಕ ಪಡೆದು ಪಟ್ಟಿಯಲ್ಲಿ 3ನೇ ಸ್ಥಾನ ಪಡೆದಿದೆ ಆದರೆ 8ನೇ ಸ್ಥಾನದಲ್ಲಿರುವ ಪಾಕಿಸ್ತಾನ ಈ ರೀತಿಯ ಜಾಹಿರಾತು ಮಾಡಿದ್ದು ನಗಪಾಟಲಿಗೀಡಾಗಿದೆ.

ದ್ವೇಷಗಳನ್ನು ಅಳಿಸಿ ಸ್ನೇಹವನ್ನು ಗಟ್ಟಿಗೊಳಿಸುವ ತಾಕತ್ತು ಕ್ರೀಡೆಗಿದೆ. ಮೊನ್ನೆ ಮೊನ್ನೆ ತಾನೆ ಪಾಕ್ ನ ಲಾಹೋರ್ ನಲ್ಲಿ ಪಾಕಿಸ್ತಾನಿಯ ದ್ವಿಚಕ್ರ ಸವಾರನೊಬ್ಬ ವಿರಾಟ್ ಕೋಹ್ಲಿಯ ಜರ್ಸಿ ಹಾಕಿಕೊಂಡಿದ್ದು ಫೋಟೋ ವೈರಲ್ ಆಗಿತ್ತು. ಆದರೆ ಇಂತಹ ಕ್ರಿಡಾ ಸ್ಪೂರ್ತಿಯನ್ನು ಮರೆತು, ಭಾರತದ ಸೈನಿಕರಿಗೂ ಅವಮಾನ ಮಾಡಿರುವ ಪಾಕಿಸ್ತಾನ ಜಾಗತಿಕ ಮಟ್ಟದಲ್ಲಿ ಕೆಟ್ಟ ಹೆಸರನ್ನು ಪಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...