Homeಮುಖಪುಟಪಂಜಾಬ್ ಸಿಎಂ ಚರಣ್‌ಜಿತ್ ಸಿಂಗ್ ಚನ್ನಿಗೆ ಕಾಂಗ್ರೆಸ್ ಮತ್ತೊಂದು ಅವಕಾಶ ನೀಡಬೇಕು: ನಟ ಸೋನು ಸೂದ್

ಪಂಜಾಬ್ ಸಿಎಂ ಚರಣ್‌ಜಿತ್ ಸಿಂಗ್ ಚನ್ನಿಗೆ ಕಾಂಗ್ರೆಸ್ ಮತ್ತೊಂದು ಅವಕಾಶ ನೀಡಬೇಕು: ನಟ ಸೋನು ಸೂದ್

- Advertisement -
- Advertisement -

”ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಅವರಿಗೆ ರಾಜ್ಯದಲ್ಲಿ ಸಿಎಂ ಆಗಿ ಕೆಲಸ ನಿರ್ವಹಿಸಲು ಹೆಚ್ಚು ಸಮಯ ಸಿಗದ ಕಾರಣ ಕಾಂಗ್ರೆಸ್ ನಾಯಕತ್ವ ಅವರಿಗೆ ಮತ್ತೊಂದು ಅವಕಾಶ ನೀಡಬೇಕು’ ಎಂದು ನಟ, ಸಾಮಾಜಿಕ ಕಾರ್ಯಕರ್ತ ಸೋನು ಸೂದ್ ಎನ್‌ಡಿಟಿವಿಗೆ ತಿಳಿಸಿದ್ದಾರೆ.

ತಾವು ಯಾವುದೇ ರಾಜಕೀಯ ಪಕ್ಷದೊಂದಿಗೆ ಸಂಬಂಧ ಹೊಂದಿಲ್ಲ ಎಂದು ಹೇಳಿರುವ ಅವರು, ಪಂಜಾಬ್ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರು ಒಳ್ಳೆಯ ಮತ್ತು ಪ್ರಾಮಾಣಿಕ ವ್ಯಕ್ತಿ. ಅವರು ಯಾವಾಗಲೂ ಪೂರ್ಣ ಮನಸ್ಸಿನಿಂದ ಮಾತನಾಡುತ್ತಾರೆ ಎಂದು ಹೇಳಿದ್ದಾರೆ.

“ನಾನು ಚರಣ್‌ಜಿತ್ ಸಿಂಗ್ ಚನ್ನಿ ಅವರನ್ನು ಭೇಟಿ ಮಾಡಿದ್ದೇನೆ. ಕಳೆದ ಮೂರು ತಿಂಗಳಲ್ಲಿ ಅವರು ಮುಖ್ಯಮಂತ್ರಿಯಾಗಿ ಮಾಡಿದ ಕೆಲಸ ಶ್ಲಾಘನೀಯವಾಗಿದೆ. ಆದರೆ ಯಾರಿಗೆ ಆದರೂ ಇದು ಕೆಲಸ ಮಾಡಲು ತುಂಬಾ ಕಡಿಮೆ ಸಮಯ. ಅವರು ಬ್ಯಾಟಿಂಗ್‌ಗೆ ಹೋಗಿ ನಿಂತು ಚೆಂಡಿನ ಕಡೆ ಕಣ್ಣು ಇಟ್ಟಿದ್ದರು. ಆದರೆ, ಇದ್ದಕ್ಕಿದ್ದಂತೆ ಚಹಾ ವಿರಾಮ ಘೋಷಿಸಲಾಗಿದೆ. ಚಹಾ ವಿರಾಮದ ನಂತರ ಅವರು ಬ್ಯಾಟಿಂಗ್‌ಗೆ ಮತ್ತೆ ಬರಬೇಕು “ಎಂದು ಸೋನು ಸೂದ್ ಹೇಳಿದ್ದಾರೆ.

ಇದನ್ನೂ ಓದಿ: ಪಂಜಾಬ್ ಚುನಾವಣೆ: ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆಯ ಒತ್ತಡದಲ್ಲಿ ಕಾಂಗ್ರೆಸ್

“ಜನರು ತಮ್ಮ ನಾಯಕ ಯಾರು ಎಂದು ಗುರುತಿಸಲು ಸಹಾಯ ಮಾಡಲು ಕಾಂಗ್ರೆಸ್ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಬೇಕು. ಅದನ್ನು ತಿಳಿದುಕೊಳ್ಳುವುದು ಜನರ ಹಕ್ಕು. ನಾನು ಹೈಕಮಾಂಡ್ ಭೇಟಿಯಾದಾಗ, ನೀವು ಸಿಎಂ ಅಭ್ಯರ್ಥಿ ಘೋಷಣೆ ಮಾಡುವುದು ಬಹಳ ಮುಖ್ಯ ಎಂದು ನಾನು ಹೇಳಿದೆ” ಎಂದಿದ್ದಾರೆ.

ಇನ್ನು ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್ ಅವರನ್ನು ರಾಜಕೀಯವಾಗಿ ಹೆಚ್ಚು ಅನುಸರಿಸಿಲ್ಲ. ಹಲವು ವರ್ಷಗಳ ಹಿಂದೆ ಕಲಾವಿದನಾಗಿ ಅವರನ್ನು ಒಮ್ಮೆ ಭೇಟಿಯಾಗಿದ್ದೆ. ಅವರು ನಾಯಕರಾಗಿ ಹೇಗೆ ಗುರುತಿಸಿಕೊಳ್ಳುತ್ತಾರೆ ಎಂಬುದನ್ನು ನಾನು ಇನ್ನೂ ನೋಡಿಲ್ಲ. ಆದರೆ, ಅವರ ಪಕ್ಷವು ನಿರ್ಧರಿಸಿರುವುದರಿಂದ ಅವರು ಅದರ ಬಗ್ಗೆ ಯೋಚಿಸಿರಬೇಕು” ಎಂದು ಹೇಳಿದ್ದಾರೆ.

ನಟ ಸೋನು ಸೂದ್ ಅವರ ಸಹೋದರಿ ಮಾಳವಿಕಾ ಸೂದ್ ಸಾಚಾರ್ ಅವರು ತಮ್ಮ ಪೂರ್ವಜರ ಸ್ಥಳವಾದ ಮೊಗಾದಿಂದ ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಟಿಕೆಟ್‌ನಲ್ಲಿ ಸ್ಪರ್ಧಿಸುತ್ತಿದ್ದಾರೆ. ತಾವು ಯಾವುದೇ ಪಕ್ಷದೊಂದಿಗೆ ಸಂಬಂಧ ಹೊಂದಿಲ್ಲ. ತಮ್ಮ ಸಹೋದರಿಯನ್ನು ಮಾತ್ರ ಬೆಂಬಲಿಸುತ್ತಿರುವುದಾಗಿ ತಿಳಿಸಿದ್ದಾರೆ.

“ಮೊಗದಲ್ಲಿರುವ ಎಲ್ಲಾ ಶಾಲೆಗಳು, ಕಾಲೇಜುಗಳು ಮತ್ತು ಧರ್ಮಶಾಲೆಗಳನ್ನು (inn) ನನ್ನ ಕುಟುಂಬದವರು ನಿರ್ಮಿಸಿದ್ದಾರೆ. ನನ್ನ ತಾಯಿ ಬಹಳಷ್ಟು ಮಕ್ಕಳಿಗೆ ಉಚಿತವಾಗಿ ಶಿಕ್ಷಣ ನೀಡಿದ್ದಾರೆ. ಸಮಾಜ ಸೇವೆ ನಮ್ಮ ರಕ್ತದಲ್ಲಿದೆ. ನಾನು ನನ್ನ ಸಹೋದರಿ ಇಬ್ಬರೂ ಸಾಮಾಜಿಕ ಕೆಲಸಗಳಲ್ಲಿ ತಮ್ಮ ಪೋಷಕರ ಹಾದಿಯನ್ನು ಅನುಸರಿಸುತ್ತಿದ್ದೇವೆ. ನನ್ನ ಸಹೋದರಿ ನಗರದಲ್ಲಿ ಅರ್ಧದಷ್ಟು ಜನರಿಗೆ ಕೋವಿಡ್ ಲಸಿಕೆ ಹಾಕಿದ್ದಾರೆ” ಎಂದು ಸೋನು ಸೂದ್ ತಿಳಿಸಿದ್ದಾರೆ.

ಮಾಳವಿಕಾ ಸೂದ್ ಸಾಚಾರ್ ಮೊಗಾ ಪಟ್ಟಣದ ಪ್ರಮುಖ ಸಾಮಾಜಿಕ ಕಾರ್ಯಕರ್ತೆಯಾಗಿದ್ದು, ನಟ ಸೋನು ಸೂದ್ ಮತ್ತು ಮಾಳವಿಕಾ ಸೂದ್ ಸಾಚಾರ್ ಜೋಡಿಯು ಸೂದ್ ಚಾರಿಟಿ ಫೌಂಡೇಶನ್ ಅನ್ನು ನಡೆಸುತ್ತಿದೆ.


ಇದನ್ನೂ ಓದಿ: ರೈತ ಚಳವಳಿಯ ಕಣ ಪಂಜಾಬ್‌ನಲ್ಲಿ ಚುನಾವಣೆ: ಯಾರಿಗೆ ಲಾಭ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....