Homeಮುಖಪುಟಯುಪಿ ಚುನಾವಣೆ: ಮೊದಲ ಹಂತದ ಸ್ಟಾರ್‌ ಪ್ರಚಾರಕ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಯುಪಿ ಚುನಾವಣೆ: ಮೊದಲ ಹಂತದ ಸ್ಟಾರ್‌ ಪ್ರಚಾರಕ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಸೋನಿಯಾ ಗಾಂಧಿ, ಮನಮೋಹನ್ ಸಿಂಗ್‌, ಪ್ರಿಯಾಂಕ ಗಾಂಧಿ, ರಾಹುಲ್‌ ಗಾಂಧಿ ಹಾಗೂ ಕನ್ಹಯ್ಯ ಕುಮಾರ್‌ ಸೇರಿದಂತೆ 30 ಜನರನ್ನು ಹೆಸರಿಸಲಾಗಿದೆ

- Advertisement -
- Advertisement -

ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಮೊದಲ ಹಂತದ 30 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಕಾಂಗ್ರೆಸ್ ಸೋಮವಾರ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಪಕ್ಷದ ಸಂಸದ ರಾಹುಲ್ ಗಾಂಧಿ ಮತ್ತು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಸೇರಿದಂತೆ ಇತರ ನಾಯಕರು ಪಕ್ಷದ ಪರ ಚುನಾವಣಾ ಪ್ರಚಾರ ಮಾಡಲು ಸಿದ್ಧರಾಗಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ (ಜೆಎನ್‌ಯುಎಸ್‌ಯು) ಮಾಜಿ ಅಧ್ಯಕ್ಷ ಕನ್ಹಯ್ಯಾ ಕುಮಾರ್ ಅವರನ್ನು ಯುಪಿ ಚುನಾವಣೆಯ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಸೇರ್ಪಡೆ ಮಾಡಲಾಗಿದೆ. ಅವರು ಪಕ್ಷದ ಪರವಾಗಿ ವಿಧಾನಸಭಾ ಚುನಾವಣೆಗೆ ಪ್ರಚಾರ ನಡೆಸುತ್ತಿರುವುದು ಇದೇ ಮೊದಲು.

ಇದನ್ನೂ ಓದಿ: ಉತ್ತರ ಪ್ರದೇಶ: ಉಪ ಮುಖ್ಯಮಂತ್ರಿಗೆ ಘೇರಾವ್ ಹಾಕಿ, ಸ್ವ ಕ್ಷೇತ್ರದಿಂದ ವಾಪಸ್ ಕಳುಹಿಸಿದ ಮಹಿಳೆಯರು

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಉತ್ತರ ಪ್ರದೇಶದ ಮುಖ್ಯ ಚುನಾವಣಾಧಿಕಾರಿಗಳಿಗೆ ಕಳುಹಿಸಿದ್ದಾರೆ.

ಪತ್ರದಲ್ಲಿ, “ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಈ ಕೆಳಗಿನ ನಾಯಕರು, 1951 ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 77 (1) ರ ಪ್ರಕಾರ 10ನೇ ಫೆಬ್ರವರಿ 2022 ರಂದು ನಡೆಯಲಿರುವ ಉತ್ತರ ಪ್ರದೇಶದ ಮೊದಲ ಹಂತದ ಚುನಾವಣೆಗಾಗಿ ಪ್ರಚಾರ ನಡೆಸಲಿದ್ದಾರೆ” ಎಂದು ತಿಳಿಸಿದ್ದಾರೆ.

30 ಜನರ ಪಟ್ಟಿ ಇಲ್ಲಿದೆ:

1. ಸೋನಿಯಾ ಗಾಂಧಿ

2. ಮನಮೋಹನ್ ಸಿಂಗ್

3. ರಾಹುಲ್ ಗಾಂಧಿ

4. ಪ್ರಿಯಾಂಕಾ ಗಾಂಧಿ ವಾದ್ರಾ

5. ಅಜಯ್ ಕುಮಾರ್ ಲಲ್ಲು

6. ಆರಾಧನಾ ಮಿಶ್ರಾ ‘ಮೋನಾ’

7. ಗುಲಾಂ ನಬಿ ಆಜಾದ್

8. ಅಶೋಕ್ ಗೆಹ್ಲೋಟ್

9. ಭೂಪಿಂದರ್ ಸಿಂಗ್ ಹೂಡಾ

10. ಭೂಪೇಶ್ ಬಘೇಲ್

11. ಸಲ್ಮಾನ್ ಖುರ್ಷಿದ್

12. ರಾಜ್ ಬಬ್ಬರ್

13. ಪ್ರಮೋದ್ ತಿವಾರಿ

14. ಪಿಎಲ್ ಪುನಿಯಾ

15. ಆರ್‌ಪಿಎನ್ ಸಿಂಗ್

ಇದನ್ನೂ ಓದಿ: ಉತ್ತರ ಪ್ರದೇಶ ಚುನಾವಣೆ: ಬಿಜೆಪಿ ಶಾಸಕರನ್ನು ಬೆನ್ನಟ್ಟಿ ಸ್ವಕ್ಷೇತ್ರದಿಂದ ಓಡಿಸಿದ ಜನತೆ

16. ಸಚಿನ್ ಪೈಲಟ್

17. ಪ್ರದೀಪ್ ಜೈನ್ ಆದಿತ್ಯ

18. ನಸೀಮುದ್ದೀನ್ ಸಿದ್ದಿಕಿ

19. ಆಚಾರ್ಯ ಪ್ರಮೋದ್ ಕೃಷ್ಣಂ

20. ದೀಪರ್ ಸಿಂಗ್ ಹೂಡಾ

21. ವರ್ಷಾ ಗಾಯಕ್ವಾಡ್

22. ಹಾರ್ದಿಕ್ ಪಟೇಲ್

23. ಫೂಲೋ ದೇವಿ ನೇತಮ್

24. ಸುಪ್ರಿಯಾ ಶ್ರಿನೇಟ್

25. ಇಮ್ರಾನ್ ಪ್ರತಾಪಗರ್ಹಿ

26. ಕನ್ಹಯ್ಯಾ ಕುಮಾರ್

27. ಪ್ರಣಿತಿ ಶಿಂಧೆ

28. ಧೀರಜ್ ಗುಜ್ಜರ್

29. ರೋಹಿತ್ ಚೌಧರಿ

30. ತೌಕೀರ್ ಆಲಂ

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯು ಏಳು ಹಂತಗಳಲ್ಲಿ ನಡೆಯಲಿದ್ದು, ಫೆಬ್ರವರಿ 10 ರಿಂದ ಪ್ರಾರಂಭವಾಗಿ 14, 20, 23, 27 ಮತ್ತು ಮಾರ್ಚ್ 3 ಮತ್ತು 7 ರಂದು ಕೊನೆಗೊಳ್ಳಲಿದೆ.

ಕಳೆದ ವಾರವಷ್ಟೇ, ಬಿಜೆಪಿಯು ಯುಪಿ ವಿಧಾನಸಭಾ ಚುನಾವಣೆಗೆ ತನ್ನ 30 ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಪ್ರಧಾನಿ ನರೇಂದ್ರ ಮೋದಿ ಮತ್ತು ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಅವರಂತಹ ಅನೇಕ ಸ್ಟಾರ್ ಪ್ರಚಾರಕರು ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದರೆ. ಪಕ್ಷದ ಸಂಸದರಾಗಿರುವ ಮೇನಕಾ ಗಾಂಧಿ ಮತ್ತು ವರುಣ್ ಗಾಂಧಿಯನ್ನು ಈ ಪಟ್ಟಿಯಿಂದ ಹೊರಗಿಡಲಾಗಿದೆ.

ಇದನ್ನೂ ಓದಿ: ಯುಪಿ ಚುನಾವಣೆ: ಪ್ರಚೋದನಾಕಾರಿ ಭಾಷಣ ಮಾಡಿದ ಬಿಜೆಪಿ ಅಭ್ಯರ್ಥಿ ವಿರುದ್ಧ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...