Homeಮುಖಪುಟಯುಪಿ ಚುನಾವಣೆ: BJP ಜೊತೆ ಮೈತ್ರಿ ವಿಫಲ; JDUನಲ್ಲಿ ಹೆಚ್ಚುತ್ತಿರುವ ಆಂತರಿಕ ಬಿರುಕು!

ಯುಪಿ ಚುನಾವಣೆ: BJP ಜೊತೆ ಮೈತ್ರಿ ವಿಫಲ; JDUನಲ್ಲಿ ಹೆಚ್ಚುತ್ತಿರುವ ಆಂತರಿಕ ಬಿರುಕು!

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ವಿಫಲವಾದ ನಂತರ, ಸಂಯುಕ್ತ ಜನತಾ ದಳ(ಜೆಡಿಯು)ನ ಉನ್ನತ ನಾಯಕತ್ವವು ಒಕ್ಕೂಟ ಸರ್ಕಾರದ ಸಚಿವ ಆರ್‌ಸಿಪಿ ಸಿಂಗ್‌ ಅವರನ್ನು ಗುರಿಯಾಗಿಸಲು ಪ್ರಾರಂಭಿಸಿದೆ. ಮೋದಿ ಸಂಪುಟದಲ್ಲಿ ಸಚಿವರಾಗಿರುವ ಆರ್‌ಸಿಪಿ ಸಿಂಗ್‌ ಅವರು ಜೆಡಿಯು ಕೋಟಾದ ಅಡಿಯಲ್ಲಿ ಒಕ್ಕೂಟ ಸರ್ಕಾರದಲ್ಲಿ ಸಚಿವರಾಗಿದ್ದರೂ ಬಿಜೆಪಿ ಉನ್ನತ ನಾಯಕತ್ವದೊಂದಿಗೆ ನಿಕಟ ಸಂಪರ್ಕ ಹೊಂದಿದ್ದಾರೆ ಎಂದು ಹೇಳಲಾಗುತ್ತದೆ.

ಯುಪಿ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ಪಕ್ಷವು ಅವರಿಗೆ ಜವಾಬ್ದಾರಿಯನ್ನು ನೀಡಿತ್ತು, ಆದರೆ ಅವರು ವಿಫಲರಾಗಿದ್ದಾರೆ. ಜೆಡಿಯು ರಾಷ್ಟ್ರೀಯ ಅಧ್ಯಕ್ಷ ರಾಜೀವ್ ರಂಜನ್ ಸಿಂಗ್ ಅಲಿಯಾಸ್ ಲಲನ್ ಸಿಂಗ್ ಉತ್ತರ ಪ್ರದೇಶ ಚುನಾವಣೆಗೆ ಪಕ್ಷದಿಂದ ಅಭ್ಯರ್ಥಿಗಳ ಘೋಷಣೆ ವಿಳಂಬವಾಗಲು ಆರ್‌ಸಿಪಿ ಸಿಂಗ್ ಕಾರಣ ಎಂದು ಈಗಾಗಲೇ ಹೇಳಿದ್ದಾರೆ.

ಇದನ್ನೂ ಓದಿ: ಯುಪಿ ಚುನಾವಣೆ: ಮೊದಲ ಹಂತದ ಸ್ಟಾರ್‌ ಪ್ರಚಾರಕ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಕಳೆದೆರಡು ದಿನಗಳಿಂದ ಜೆಡಿಯುನ ಕಿರಿಯ ನಾಯಕರು ಆರ್‌ಸಿಪಿ ಸಿಂಗ್‌ ಪರ ವಕಾಲತ್ತು ವಹಿಸುತ್ತಿದ್ದಾರೆ. ಅವರು ಉತ್ತರ ಪ್ರದೇಶದ ಚುನಾವಣಾ ಪ್ರಚಾರದಲ್ಲಿ ಪಕ್ಷವನ್ನು ಮುನ್ನಡೆಸಲಿದ್ದಾರೆ. ಮಾಜಿ ಐಎಎಸ್ ಅಧಿಕಾರಿಯಾಗಿದ್ದ ಆರ್‌ಸಿಪಿ ಸಿಂಗ್ ಅವರು ಉತ್ತರ ಪ್ರದೇಶದಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದು, ಅಲ್ಲಿನ ತಳ ಮಟ್ಟದ ಪರಿಸ್ಥಿತಿಯನ್ನು ಚೆನ್ನಾಗಿ ಅರ್ಥ ಮಾಡಿಕೊಂಡಿದ್ದಾಗಿ ಎಂದು ಅವರು ಹೇಳಿದ್ದಾರೆ.

“ಚುನಾವಣಾ ಪ್ರಚಾರದ ಸಮಯದಲ್ಲಿ ಆರ್‌ಸಿಪಿ ಸಿಂಗ್ ಅವರನ್ನು ಬಿಜೆಪಿಯ ಉನ್ನತ ನಾಯಕತ್ವದೊಂದಿಗೆ, ವಿಶೇಷವಾಗಿ ಪಿಎಂ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮುಖಾಮುಖಿ ಮಾಡುವ ಯೋಜನೆ ಇದೆ. ಇದು ಬಿಜೆಪಿ ನಾಯಕತ್ವದೊಂದಿಗೆ ಆರ್‌ಸಿಪಿ ಸಿಂಗ್ ಅವರ ಸಂಬಂಧವನ್ನು ಹದಗೆಡಿಸುತ್ತದೆ” ಎಂದು ಆರ್‌ಜೆಡಿ ನಾಯಕರೊಬ್ಬರು ಹೇಳಿದ್ದಾರೆ ಎಂದು TNIE ವರದಿ ಮಾಡಿದೆ.

ಇದನ್ನೂ ಓದಿ: ಕೊಲ್ಕತ್ತಾ: ಗಣರಾಜ್ಯೋತ್ಸವ ಪೂರ್ವಾಭ್ಯಾಸದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಸ್ತಬ್ಧಚಿತ್ರ ಪ್ರದರ್ಶನ

ಬಿಹಾರ ಸಿಎಂ ನಿತೀಶ್ ಕುಮಾರ್ ಆರ್‌ಸಿಪಿ ಸಿಂಗ್‌‌ ಅವರಿಗೆ ಜವಾಬ್ದಾರಿ ನೀಡಿದ್ದರು. ಕಳೆದ ವರ್ಷ ನರೇಂದ್ರ ಮೋದಿ ಸರ್ಕಾರದ ಎರಡನೇ ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ಆರ್‌ಸಿಪಿ ಸಿಂಗ್ ಬಿಜೆಪಿಯೊಂದಿಗೆ ಮಾತುಕತೆ ನಡೆಸಿದ್ದರು. ಈ ವೇಳೆ JDU ಪಕ್ಷದಿಂದ ಒಕ್ಕೂಟ ಸರ್ಕಾರದಲ್ಲಿ ಎರಡು ಸಂಪುಟ ದರ್ಜೆಯ ಮಂತ್ರಿಗಳು ಮತ್ತು ಇಬ್ಬರು ರಾಜ್ಯ ಖಾತೆ ಮಂತ್ರಿಗಳನ್ನು ಮಾಡುವಂತೆ ಬಯಸಿತ್ತು. ಆದರೆ JDU ಕೋಟಾದ ಅಡಿಯಲ್ಲಿ ಆರ್‌ಸಿಪಿ ಸಿಂಗ್ ಅವರಿಗೆ ಮಾತ್ರ ಸಂಪುಟ ಸಚಿವ ಸ್ಥಾನ ಪಡೆದು, ಲಾಲನ್ ಸಿಂಗ್, ಉಪೇಂದ್ರ ಕುಶ್ವಾಹಾ ಮತ್ತು ಇತರರ ಶ್ರೇಣಿಯ ನಾಯಕರಿಗೆ ಸಚಿವ ಸ್ಥಾನ ನಿರಾಕರಿಸಲಾಗಿತ್ತು.

ಜೆಡಿಯು ಉತ್ತರ ಪ್ರದೇಶ ಚುನಾವಣೆಗೆ 51 ಅಭ್ಯರ್ಥಿಗಳನ್ನು ಪಟ್ಟಿ ಮಾಡಿದೆ. ಇದರಲ್ಲಿ 26 ಅಭ್ಯರ್ಥಿಗಳನ್ನು ಇದುವರೆಗೆ ಘೋಷಿಸಲಾಗಿದೆ. ಈ 26 ಅಭ್ಯರ್ಥಿಗಳು ಬಿಜೆಪಿ ಪ್ರಬಲ ಹಿಡಿತ ಹೊಂದಿರುವ ಅಥವಾ ಹಾಲಿ ಶಾಸಕರನ್ನು ಹೊಂದಿರುವ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನ ಸುಪ್ರೀಂಕೋರ್ಟ್‌ನ ಮೊದಲ ಮಹಿಳಾ ನ್ಯಾಯಮೂರ್ತಿಯಾಗಿ ಆಯೆಷಾ ಮಲಿಕ್ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...