Homeಕರ್ನಾಟಕಕೇಂದ್ರದಿಂದ ಐಎಎಸ್‌ಗಳು ದೂರ ಉಳಿಯಲು ಕೇಂದ್ರದ ಕಿರುಕುಳವೇ ಕಾರಣ: ಸಸಿಕಾಂತ್‌ ಸೆಂಥಿಲ್‌

ಕೇಂದ್ರದಿಂದ ಐಎಎಸ್‌ಗಳು ದೂರ ಉಳಿಯಲು ಕೇಂದ್ರದ ಕಿರುಕುಳವೇ ಕಾರಣ: ಸಸಿಕಾಂತ್‌ ಸೆಂಥಿಲ್‌

ಐಎಎಸ್‌ ಕೇಡರ್‌‌ ನಿಯಮಗಳು 1954ಕ್ಕೆ ತಿದ್ದುಪಡಿಗಳನ್ನು ತರಲು ಹೊರಟಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್‌ ವಿರೋಧಿಸಿದ್ದಾರೆ.

- Advertisement -
- Advertisement -

ಐಎಎಸ್‌ ಕೇಡರ್‌‌ ನಿಯಮಗಳು 1954ಕ್ಕೆ ತಿದ್ದುಪಡಿಗಳನ್ನು ತರಲು ಕೇಂದ್ರ ಸರ್ಕಾರ ಹೊರಟಿರುವುದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವಿನ ಜಟಾಪಟಿಗೆ ಕಾರಣವಾಗಿದೆ.

ಕೇಂದ್ರ ಸರ್ಕಾರದ ಸಚಿವಾಲಯಗಳಲ್ಲಿ ಜಂಟಿ ಕಾರ್ಯದರ್ಶಿ ದರ್ಜೆಯ ಅಧಿಕಾರಿಗಳ ಇಳಿಕೆಯಾಗುತ್ತಿದೆ.  2011ರಲ್ಲಿ 309 ಮಂದಿ ಇದ್ದ ಅಧಿಕಾರಿಗಳಿದ್ದರು. ಈಗ 223 ಮಂದಿ ಇದ್ದಾರೆ. ಕೇಂದ್ರೀಯ ನಿಯೋಜನೆ 2011ರಲ್ಲಿ ಶೇ. 25ರಷ್ಟಿತ್ತು. ಈಗ ಶೇ. 18ಕ್ಕೆ ಕುಸಿದಿದೆ.

ಮಂಜೂರಾದ ಹುದ್ದೆಗಳಲ್ಲಿ ಒಂದಿಷ್ಟು ಮಂದಿಯನ್ನು ‘ಕೇಂದ್ರೀಯ ನಿಯೋಜನೆ ಮೀಸಲು’ (ಸಿಡಿಆರ್‌) ಅನ್ವಯ ಕೇಂದ್ರ ಸೇವೆಗೆ ಕಳುಹಿಸಬೇಕಿದ್ದು, ಬಹುತೇಕ ರಾಜ್ಯಗಳು ಸಿ.ಡಿ.ಆರ್‌ ಪಾಲಿಸುತ್ತಿಲ್ಲ ಎಂಬುದು ಕೇಂದ್ರದ ಆರೋಪ. ಹೀಗಾಗಿ ಐಎಎಸ್‌ (ಕೇಡರ್‌) ನಿಯಮಗಳು- 1954ರ ನಿಯಮ 6 (1)ಕ್ಕೆ ಹೆಚ್ಚುವರಿ ಅಂಶಗಳನ್ನು ಸೇರಿಸಿ ತಿದ್ದುಪಡಿ ಮಾಡಲು ಮುಂದಾಗಿದೆ. ಕೇಂದ್ರ ನಿಗದಿಪಡಿಸಿದ ಕಾಲಮಿತಿಯಲ್ಲಿ ಕೇಂದ್ರದ ನಿಯಮವನ್ನು ರಾಜ್ಯ ಸರ್ಕಾರ ಜಾರಿಗೊಳಿಸುವಂತೆ ತಿದ್ದುಪಡಿ ತರುವಂತೆ ನಿಯಮ ರೂಪಿಸಲಾಗುತ್ತಿದೆ.

ಕೇಂದ್ರ ಸರ್ಕಾರದ ನಿರ್ಧಾರವನ್ನು ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ, ರಾಜಸ್ಥಾನ ಸೇರಿದಂತೆ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ವಿರೋಧಿಸಿದ್ದಾರೆ. ಕೇಂದ್ರವು ಒಕ್ಕೂಟ ವ್ಯವಸ್ಥೆಯನ್ನು ನಿರ್ಲಕ್ಷಿಸುತ್ತಿದೆ ಎಂದಿದ್ದಾರೆ.

ಈ ವಿವಾದದ ಕುರಿತು ‘ನಾನುಗೌರಿ.ಕಾಂ’ ಜೊತೆ ಮಾತನಾಡಿರುವ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಅವರು, ಕೇಂದ್ರದ ನಿರ್ಧಾರವನ್ನು ವಿರೋಧಿಸಿದರು. “ಕೇಂದ್ರ ಸರ್ಕಾರ ಮಾಡಲು ಹೊರಟಿರುವ ತಿದ್ದುಪಡಿಗಳು ಒಕ್ಕೂಟ ಸಹಕಾರ ತತ್ವಕ್ಕೆ ವಿರುದ್ಧವಾಗಿದೆ” ಎಂದರು.

ಹೊಸ ತಿದ್ದುಪಡಿಗಳಿಂದಾಗುವ ಸಮಸ್ಯೆಗಳನ್ನು ಸೆಂಥಿಲ್ ವಿವರಿಸಿದರು.

“ರಾಜ್ಯದಲ್ಲಿ ಒಂದು ಮುಖ್ಯವಾದ ಕೆಲಸದಲ್ಲಿ ತೊಡಗಿಸಿಕೊಂಡಿರುವ ಐಎಎಸ್‌ ಅಧಿಕಾರಿಯನ್ನು ಯಾವುದೇ ಮುನ್ನೆಚ್ಚರಿಕೆ ನೀಡದೆ ಕೆಲಸದಿಂದ ತೆಗೆದು ಕೇಂದ್ರಕ್ಕೆ ಕರೆಸಿಕೊಳ್ಳುವ ಅವಕಾಶವನ್ನು ಈ ತಿದ್ದುಪಡಿಗಳು ಕೇಂದ್ರ ಸರ್ಕಾರಕ್ಕೆ ನೀಡುತ್ತವೆ” ಎಂದು ತಿಳಿಸಿದರು.

“ರಾಜ್ಯದಲ್ಲಿ ಕೇಂದ್ರಕ್ಕೆ ವಿರೋಧಿಯಾಗಿರುವ ಪಕ್ಷ ಅಧಿಕಾರದಲ್ಲಿದ್ದಾಗ ರಾಜ್ಯ ಸರ್ಕಾರಕ್ಕೆ ಕಿರುಕುಳ ನೀಡಲೆಂದೇ ಕೆಲವು ಮುಖ್ಯವಾದ ಅಧಿಕಾರಿಗಳನ್ನು ಕೇಂದ್ರ ಕರೆಸಿಕೊಳ್ಳುವ ಅವಕಾಶ ಈ ತಿದ್ದುಪಡಿ ನಿಯಮಗಳಲ್ಲಿದೆ” ಎಂದು ಹೇಳಿದರು.

“ಈ ರೀತಿಯ ಅಧಿಕಾರವು ಕೇಂದ್ರ ಸರ್ಕಾರಕ್ಕೆ ಸಿಕ್ಕಿದಾಗ ಐಎಎಸ್ ಅಧಿಕಾರಿಗಳು ಹೆದರಿಕೊಂಡೇ ಇರಬೇಕಾಗುತ್ತದೆ. ನಮ್ಮನ್ನು ರಾಜ್ಯದಿಂದ ತೆಗೆದು ಕೇಂದ್ರಕ್ಕೆ ಕರೆಸಿಕೊಂಡು ಹಿಂಸೆ ಕೊಡುತ್ತಾರೆ ಎಂಬ ಭಯದಲ್ಲೇ ಐಎಎಸ್‌ಗಳು ಕೆಲಸ ಮಾಡಬೇಕಾಗುತ್ತದೆ” ಎಂದು ಆತಂಕ ವ್ಯಕ್ತಪಡಿಸಿದರು.

“ಕೇಂದ್ರದಲ್ಲಿ ಕೆಲಸ ಮಾಡುವ ಐಎಎಸ್ ಅಧಿಕಾರಿಗಳ ಪ್ರಮಾಣ ಕಡಿಮೆಯಾಗಿದೆ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಈ ಸಮಸ್ಯೆ ಏಕೆ ತಲೆದೋರಿದೆ ಎಂದರೆ, ಕೇಂದ್ರದಲ್ಲಿ ಇವರೊಂದಿಗೆ ಕೆಲಸ ಮಾಡಲು ಐಎಎಸ್‌ ಅಧಿಕಾರಿಗಳು ಸಿದ್ಧವಿಲ್ಲ. ಎಲ್ಲರೂ ಓಡಿ ಹೋಗುತ್ತಿದ್ದಾರೆ. ಕೇಂದ್ರ ಸರ್ಕಾರದ ವರ್ತನೆಯಿಂದ ಬೇಸತ್ತು ಅಧಿಕಾರಿಗಳು ರಾಜ್ಯದಲ್ಲೇ ಉಳಿಯಲು ಬಯಸುತ್ತಿದ್ದಾರೆ” ಎಂದರು.

“ಯಾವುದೇ ಸಚಿವಾಲಯದಲ್ಲೂ ತಮ್ಮ ಅಭಿಪ್ರಾಯವನ್ನು ಹೇಳಲು ಐಎಎಸ್‌ಗಳಿಗೆ ಸಾಧ್ಯವಾಗುತ್ತಿಲ್ಲ. ಯಾವುದೇ ಸಚಿವಾಲಯದ ಸಚಿವರ ಅಭಿಪ್ರಾಯಗಳನ್ನು ಪ್ರಧಾನಿಯವರು ಆಲಿಸುವುದಿಲ್ಲ. ಎಲ್ಲವೂ ಪ್ರಧಾನಿ ಕೇಂದ್ರಿತವಾಗಿ ನಡೆಯುತ್ತಿವೆ. ಪ್ರಧಾನಿ ಹೇಳಿದಂತೆ ಕಡತಗಳನ್ನು ಮಾಡಬೇಕಾಗಿದೆ. ಯಾರ ಬಗ್ಗೆಯೂ ಏನನ್ನೂ ಅಧಿಕಾರಿಗಳು ಹೇಳುವಂತಿಲ್ಲ. ಭಯದ ವಾತಾವರಣದಲ್ಲಿ ಕೆಲಸ ಮಾಡುತ್ತಿದ್ದಾರೆ. ಏನಾದರೂ ಒಂದು ಸಣ್ಣ ಅಪಾದನೆ ಬಂದರೆ ಅಧಿಕಾರಿಯ ವೃತ್ತಿಬದುಕನ್ನೇ ಮುಗಿಸಿಬಿಡುತ್ತಾರೆ. ಇಂತಹ ಕಷ್ಟವನ್ನು ಏಕೆ ಮೈಮೇಲೆ ಎಳೆದುಕೊಳ್ಳಬೇಕು ಎಂದು ಐಎಎಸ್ ಅಧಿಕಾರಿಗಳು ಭಾವಿಸುತ್ತಾರೆ” ಎನ್ನುತ್ತಾರೆ ಸಸಿಕಾಂತ್‌.

“ಕೇಂದ್ರ ಸರ್ಕಾರದಲ್ಲಿ ಕೆಲಸ ಮಾಡುವುದು ಪ್ರತಿಯೊಬ್ಬ ಐಎಎಸ್ ಅಧಿಕಾರಿಗೂ ಹೆಮ್ಮೆಯ ವಿಷಯವಾಗಿರುತ್ತದೆ. ಆದರೆ ಅವಕಾಶ ಇದ್ದರೂ ಕೇಂದ್ರಕ್ಕೆ ಹೋಗುತ್ತಿಲ್ಲ ಎಂಬುದಕ್ಕೆ ಏನು ಕಾರಣ? ಐಎಎಸ್‌ ಅಧಿಕಾರಿಗಳು ಈಗ ಕಡ್ಡಾಯವಾಗಿ ಕೇಂದ್ರಕ್ಕೆ ಬರಬೇಕು ಎಂದು ನಿಯಮ ರೂಪಿಸಲು ಹೊರಟಿರುವುದು ಎಷ್ಟು ಸರಿ?” ಎಂದು ಪ್ರಶ್ನಿಸಿದರು.

“ಜನರ ಜೊತೆಯಲ್ಲಿ ನೇರ ಸಂಪರ್ಕದಲ್ಲಿರುವುದು ರಾಜ್ಯ ಸರ್ಕಾರಗಳು ಮಾತ್ರ. ಕೇಂದ್ರಕ್ಕೆ ಜನ ಸಂಪರ್ಕ ಸಾಧ್ಯವಾಗದು. ರಾಜ್ಯದಲ್ಲಿ ಕೆಲಸ ಮಾಡಿದ ಐಎಎಸ್‌ ಅಧಿಕಾರಿಗಳು ಕೇಂದ್ರಕ್ಕೆ ಬರಬೇಕೆಂಬ ವ್ಯವಸ್ಥೆಯನ್ನು ನಮ್ಮ ಒಕ್ಕೂಟ ವ್ಯವಸ್ಥೆ ಮಾಡಿಕೊಂಡಿದೆ ಎಂದರೆ, ಜನರ ಜೊತೆಯಲ್ಲಿ ಕೆಲಸ ಮಾಡಿದವರು ಕೇಂದ್ರದಲ್ಲಿ ಇರಬೇಕೆಂಬ ಉದ್ದೇಶದಿಂದಷ್ಟೇ. ಎಲ್ಲವಾದರೆ ನೇರವಾಗಿ ನೇಮಕಾತಿಯನ್ನು ಅವರಾಗಿಯೇ ಮಾಡಿಕೊಳ್ಳಬಹುದಿತ್ತಲ್ಲ” ಎಂದರು.

“ಆಲ್‌ ಇಂಡಿಯಾ ಸರ್ವೀಸ್‌ ಬಂದಿರುವ ಕಾರಣವೇ ಜನರೊಂದಿಗೆ ಅಧಿಕಾರಿಗಳು ಇರಬೇಕೆಂದು. ಒಂದು ಪಾಲಿಸಿ ಜನರ ಮೇಲೆ ಹೇಗೆ ಪರಿಣಾಮ ಬೀರಿದ ಎಂಬುದು ಜನರ ಜೊತೆ ಕೆಲಸ ಮಾಡಿದವರಿಗೆ ತಿಳಿಯುತ್ತದೆ. ಮುಖ್ಯವಾಗಿ ಹೇಳಬೇಕೆಂದರೆ ಕೇಂದ್ರಕ್ಕಿಂತ ರಾಜ್ಯ ಸರ್ಕಾರಗಳಲ್ಲಿಯೇ ಐಎಎಸ್ ಅಧಿಕಾರಿಗಳ ಸೇವೆ ಮುಖ್ಯವಾಗಿರುತ್ತದೆ” ಎಂದು ಅಭಿಪ್ರಾಯಪಟ್ಟರು.


ಇದನ್ನೂ ಓದಿರಿ: ಐಎಎಸ್‌ ನಿಯಮಗಳ ಬದಲಾವಣೆ ಪ್ರಸ್ತಾಪ: ಕೇಂದ್ರದ ನಡೆಗೆ ಸಿಎಂಗಳ ಆಕ್ಷೇಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ರಾಜ್ಯ ಸರ್ಕಾರಗಳಿಗೆ ಇರುವ ಅಧಿಕಾರಗಳನ್ನು ಕಿತ್ತುಕೊಳ್ಳುವ ಒಕ್ಕೂಟ ಸರ್ಕಾರದ ಈ ಕ್ರಮ ಕಂಡನಾರ್ಹ.

  2. ಸಸಿಕಾಂತ್ ಸೆಂತಿಲ್ ವಾದ ಸರಿಯಾಗಿದೆ. ಅದರೊಂದಿಗೆ ಕೇಂದ್ರವು, ರಾಜ್ಯ ಸರ್ಕಾರವನ್ನು ಕಡೆಗಣಿಸಿ, ರಾಜ್ಯಗಳ ಅಭಿವೃದ್ಧಿ ಕೆಲಸಗಳ ಬಗ್ಗೆ ವಿವರಣೆ ಕೇಳಲು, ಕೇಂದ್ರದ ಯೋಜನೆಗಳನ್ನು ಕಾರ್ಯಗತ ಮಾಡಲು, ರಾಜ್ಯ ಸೇವೆಯಲ್ಲಿ ನಿಯೋಜಿತರಾದ ಐಎಎಸ್ ಅಧಿಕಾರಿಗಳಲ್ಲಿ ನೇರವಾಗಿ ಚರ್ಚಿಸುವುದು ಎಷ್ಟು ಸರಿ? ಇದು, ರಾಜ್ಯ ಸರ್ಕಾರವೊಂದನ್ನು ಮತ್ತು ಅದನ್ನು ಆಡಳಿತ ಮಾಡಲು ನಿಯೋಜಿಸಿದ ಜನರನ್ನು ಅವಮಾನಿಸಿದಂತಲ್ಲವೆ?

  3. ಒಕ್ಕೂಟ ಸರ್ಕಾರ ದಲ್ಲಿ , ಅಂದರೆ ನೇರವಾಗಿ ಆ ಸರ್ಕಾರದ ಅಡಿಯಲ್ಲಿ ಮಾತ್ರ, ಕೆಲಸ ಮಾಡಲೆಂದೇ ಆರಂಭದಲ್ಲಿಯೇ ಅಧಿಕಾರಿಗಳನ್ನು ಆಯ್ಕೆ ಮಾಡಿಕೊಳ್ಳ ಬಹುದು. ಐಎಎಸ್ ಪರೀಕ್ಷೆ ಬರೆಯುವಾಗಲೇ ಅಭ್ಯರ್ಥಿಗಳು ದೆಹಲಿ ಸರ್ಕಾರದ ಅಡಿಯಲ್ಲಿ ಕೆಲಸಮಾಡುವ ತಮ್ಮ ಇಚ್ಛೆಯನ್ನು ವ್ಯಕಪಡಿಸ ಬಹುದು. ವಿವಿಧ ರಾಜ್ಯಗಳ ಕ್ಯಾಡರ್ಬಗಳು ಇದ್ದಂತೆ ಒಕ್ಕೂಟ ಸರ್ಕಾರದ ಕ್ಯಾಡರ್ ಒಂದನ್ನು ಸೃಷ್ಟಿಸುವುದರ ಮೂಲಕ ಈ ಸಮಸ್ಯೆ ಗೆ ಪರಿಹಾರವನ್ನು ಕಂಡುಕೊಳ್ಳಲು ಸಾಧ್ಯವೇ?

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...