Homeಕರ್ನಾಟಕಮದ್ಯದ ಅಂಗಡಿ ತೆರವುಗೊಳಿಸುವಂತೆ ಪ್ರಧಾನಮಂತ್ರಿಗೆ ಪತ್ರ ಬರೆದ ಚಿಕ್ಕಮಗಳೂರು ಜಿಲ್ಲೆಯ ಕೆರೆಸಂತೆ ಗ್ರಾಮಸ್ಥರು

ಮದ್ಯದ ಅಂಗಡಿ ತೆರವುಗೊಳಿಸುವಂತೆ ಪ್ರಧಾನಮಂತ್ರಿಗೆ ಪತ್ರ ಬರೆದ ಚಿಕ್ಕಮಗಳೂರು ಜಿಲ್ಲೆಯ ಕೆರೆಸಂತೆ ಗ್ರಾಮಸ್ಥರು

ಮದ್ಯದ ಅಂಗಡಿಗೆ ಸ್ಥಳೀಯ ಗ್ರಾಮ ಪಂಚಾಯತ್‌ನಿಂದ ಪರವಾನಗಿ ಕೂಡಾ ಪಡೆದಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ

- Advertisement -
- Advertisement -

ಗ್ರಾಮದಲ್ಲಿ ಅನಧೀಕೃತವಾಗಿ ತೆರೆದಿರುವ ಮದ್ಯದ ಅಂಗಡಿಯನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕೆರೆಸಂತೆ ಗ್ರಾಮಪಂಚಾಯತ್‌ನ ಅಧ್ಯಕ್ಷರು, ಸದಸ್ಯರು ಮತ್ತು ನಾಗರೀಕರು ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಗ್ರಾಮದ ಅಂಚೆಚೋಮನಹಳ್ಳಿ ಗೇಟ್‌ ಬಳಿ ಕಳೆದ ವರ್ಷ ಅನಧೀಕೃತವಾಗಿ ‘ಚಂದನಾ ವೈನ್ಸ್‌ ಬಾರ್‌’ ತೆರೆಯಲಾಗಿದ್ದು, ಇದರಿಂದಾಗಿ ಪ್ರದೇಶದಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚಾಗಿದೆ ಪತ್ರದಲ್ಲಿ ಆರೋಪಿಸಲಾಗಿದೆ.

ಬಾರ್‌ ಇರುವ ಸ್ಥಳವು ಕೃಷಿಭೂಮಿಯಾಗಿದ್ದು, ಕಮರ್ಶಿಯಲ್‌ ಸ್ಥಳವಲ್ಲ ಎಂದು ಗ್ರಾಮ ಪಂಚಾಯತ್‌ ಅಧ್ಯಕ್ಷರು ಪತ್ರದಲ್ಲಿ ಉಲ್ಲೇಖಿಸಿದ್ದು, ಮದ್ಯದ ಅಂಗಡಿಗೆ ಸ್ಥಳೀಯ ಗ್ರಾಮ ಪಂಚಾಯತ್‌ನಿಂದ ಪರವಾನಗಿ ಕೂಡಾ ಪಡೆದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಮದ್ಯದ ಅಂಗಡಿಗಳನ್ನು ತೆರೆಯುವ ಅವಿವೇಕದ ಕೆಲಸವನ್ನು ಸರ್ಕಾರ ಮಾಡಬಾರದು.

ಕೆರೆಸಂತೆ ಗ್ರಾಮ ಪಂಚಾಯತ್‌‌ನ 12 ಹಳ್ಳಿಗಳಲ್ಲಿ ಹೆಚ್ಚಿನ ಜನರು ಪರಿಶಿಷ್ಟ್‌ ಜಾತಿ ಮತ್ತು ಪಂಗಡಕ್ಕೆ ಸೇರಿದವರಾಗಿದ್ದು, ಅದರಲ್ಲೂ ಅಂಚೆಚೋಮನಹಳ್ಳಿ ಪ್ರದೇಶದಲ್ಲಿ ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯದ ಜನರೇ ಹೆಚ್ಚು ವಾಸವಿದ್ದಾರೆ. ಈ ಬಾರ್‌‌ನಿಂದಾಗಿ ಅವರೆಲ್ಲರೂ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಪತ್ರದಲ್ಲಿ ಹೇಳಲಾಗಿದೆ.

ಪ್ರಸ್ತುತ ಬಾರ್‌ ಇರುವ ನೂರಿನ್ನೂರು ಮೀಟರ್‌ ಅಂತರದಲ್ಲಿ ಮೊರಾರ್ಜಿ ವಸತಿ ಶಾಲೆ ಕೂಡಾ ಇದ್ದು, ಇದು ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಅವರ ಪೋಷಕರಿಗೂ ತೊಂದರೆ ನೀಡುತ್ತದೆ ಎಂದು ಪ್ರಧಾನಿಗೆ ಬರೆದ ಪತ್ರದಲ್ಲಿ ಹೇಳಿದ್ದು, “ಕೆಳೆದ ತಿಂಗಳು, ಮದ್ಯಪಾನ ಮಾಡಿ ರಸ್ತೆ ಬದಿಯಲ್ಲಿ ಮಲಗಿದ್ದ ಇಬ್ಬರು ಗ್ರಾಮಸ್ಥರು ಅಫಘಾತಕ್ಕೆ ಈಡಾಗಿ ಮೃತಪಟ್ಟಿದ್ದರು” ಎಂದು ಆರೋಪಿಸಲಾಗಿದೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಕೆರೆಸಂತೆ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಅಶ್ವಿನಿ ಅವರು, “ಕಳೆದ ಜುಲೈನಿಂದ ಮಹಿಳೆಯರು ಇಲ್ಲಿ ಮದ್ಯದ ಅಂಗಡಿ ಬೇಡ ಎಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಮದ್ಯದ ಅಂಗಡಿ ಮಾಲಿಕರು ಅಂಗಡಿಗೆ ಬೇಕಾಗಿರುವ ಪರವಾನಗಿಯನ್ನು ಕೂಡಾ ಗ್ರಾಮ ಪಂಚಾಯತ್‌‌ನಿಂದ ಪಡೆದಿಲ್ಲ. ಪಂಚಾಯತ್‌ನ ಮಹಿಳಾ ಸದಸ್ಯರು ಸೇರಿದಂತೆ ಹಲವಾರು ಸದಸ್ಯರು ಮದ್ಯದ ಅಂಗಡಿ ವಿರುದ್ದ ಇದ್ದಾರೆ. ಹೀಗಾಗಿ ನಾವು ಗ್ರಾಮದ ಮಹಿಳೆಯರ ಪರವಾಗಿ ಪ್ರಧಾನ ಮಂತ್ರಿಗೆ ಪತ್ರ ಬರೆದಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಮಹಿಳೆಯರ ದಿಟ್ಟ ಹೋರಾಟಕ್ಕೆ ಜಯ: ಮದ್ಯದಂಗಡಿ ಸ್ಥಳಾಂತರಕ್ಕೆ ಆದೇಶ

ನಾನುಗೌರಿ.ಕಾಂ ಜೊತೆಗೆ ಸಾಮಾಜಿಕ ಹೋರಾಟಗಾರ ಮಂಜುನಾಥ್ ಮಾತನಾಡಿ, “ಮದ್ಯದ ಅಂಗಡಿಯಿಂದಾಗಿ ಸ್ಥಳೀಯರಿಗೆ ಮತ್ತು ಪಕ್ಕವೆ ಇರುವ ಶಾಲೆಯ ವಿದ್ಯಾರ್ಥಿ ಹಾಗೂ ಶಿಕ್ಷಕರಿಗೆ ತೊಂದರೆಯಾಗಿದೆ. ಅಂಗಡಿಗೆ ಸ್ಥಳೀಯ ಗ್ರಾಮ ಪಂಚಾಯತ್‌ನಿಂದ ಪರವಾನಗಿ ಕೂಡಾ ಪಡೆದಿಲ್ಲ. ಬಾರ್‌ ಅನ್ನು ಪ್ರಶ್ನಿಸಿ ಬಗ್ಗೆ ನಾವು ಸಂವಿಧಾನದ ಆರ್ಟಿಕಲ್ 47 ಅಡಿಯಲ್ಲಿ ಹೈಕೋರ್ಟ್‌‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದೇವೆ” ಎಂದು ತಿಳಿಸಿದ್ದಾರೆ.

ಭಾರತ ಸಂವಿಧಾನದ ಆರ್ಟಿಕಲ್‌ 47 ಪ್ರಕಾರ, ಸಾರ್ವಜನಿಕರ ಆರೋಗ್ಯ ಮತ್ತು ಜೀವನ ಮಟ್ಟ ಸುಧಾರಿಸುವುದು. ಆರೋಗ್ಯಕ್ಕೆ ಹಾನಿಯುಂಟುಮಾಡುವ ಮಾದಕ ಪಾನೀಯಗಳು ಮತ್ತು ಮಾದಕವಸ್ತುಗಳ ನಿಷೇಧ ಮಾಡಲು ಸರ್ಕಾರವು ಪ್ರಯತ್ನಿಸಬೇಕಾಗಿದೆ.

ಕರ್ನಾಟಕ ಅಬಕಾರಿ ಅಧಿನಿಯಮ, 1967 ರ ರೂಲ್‌ 5 ರ ಪ್ರಕಾರ ಶಾಲೆ, ಧಾರ್ಮಿಕ ಸ್ಥಳ, ಆಸ್ಪತ್ರೆ, ಎಸ್‌ಸಿ ಎಸ್‌ಎಸ್‌ಟಿ ಸಮುದಾಯದ ಜನವಸತಿಯಿಂದ 100 ಮಿ. ಅಂತರದಲ್ಲಿ ಮದ್ಯದಂಗಡಿಯನ್ನು ತೆರೆಯುವಂತಿಲ್ಲ. ಕರ್ನಾಟಕ ವೈನ್‌ ಮರ್ಚೆಂಟ್ಸ್‌ vs ಕರ್ನಾಟಕ ರಾಜ್ಯ ಪ್ರಕರಣದಲ್ಲಿ ಹೈಕೋರ್ಟ್ ಜನವಸತಿ, ಶಿಕ್ಷಣ ಸಂಸ್ಥೆಗಳು, ಆರೋಗ್ಯ ಸಂಸ್ಥೆ, ಧಾರ್ಮಿಕ ಸ್ಥಳದ ಸಮೀಪ ಮದ್ಯದಂಗಡಿಯನ್ನು ತೆರೆಯಬಾರದು ಎಂದು ಆದೇಶ ನೀಡಿದೆ.

ಅಲ್ಲದೆ, ಜನ ವಿರೋಧವಿದ್ದಾಗ 100 ಮೀ. ಎಂಬ ಸರ್ಕಾರಿ ಮಾನದಂಡಕ್ಕೆ ಕಟ್ಟು ಬಿದ್ದು ಮದ್ಯದಂಗಡಿ ತೆರೆಯುವುದು ಸೂಕ್ತವಲ್ಲ ಎಂದು ಕರ್ನಾಟಕ ಹೈಕೋರ್ಟ್‌ 1997 ರಲ್ಲಿ ಅಭಿಪ್ರಾಯ ಪಟ್ಟಿದೆ. ಜೊತೆಗೆ ಅಬಕಾರಿ ಪರವಾನಗಿ ನೀಡುವ ಮುನ್ನ 100 ಮೀ. ಅಂತರ ಎಂಬ ನಿಯಮ 5 ಕ್ಕೆ ಬದ್ಧರಾಗಿ ಜನಸಾಮಾನ್ಯರ ಸಾಮಾಜಿಕ ಸ್ಥಿತಿಗತಿಗಳನ್ನು ಕಡೆಗಣಿಸಬಾರದು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ:ಅಬಕಾರಿ ಇಲಾಖೆಯಿಂದ ಜನಾರೋಗ್ಯ ಕಡೆಗಣನೆ: ಮದ್ಯದಂಗಡಿ ತೆರವಿಗೆ ನೂರಾರು ಮಹಿಳೆಯರ ನಿರಂತರ ಧರಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...