Homeಕರ್ನಾಟಕಮದ್ಯದ ಅಂಗಡಿ ತೆರವುಗೊಳಿಸುವಂತೆ ಪ್ರಧಾನಮಂತ್ರಿಗೆ ಪತ್ರ ಬರೆದ ಚಿಕ್ಕಮಗಳೂರು ಜಿಲ್ಲೆಯ ಕೆರೆಸಂತೆ ಗ್ರಾಮಸ್ಥರು

ಮದ್ಯದ ಅಂಗಡಿ ತೆರವುಗೊಳಿಸುವಂತೆ ಪ್ರಧಾನಮಂತ್ರಿಗೆ ಪತ್ರ ಬರೆದ ಚಿಕ್ಕಮಗಳೂರು ಜಿಲ್ಲೆಯ ಕೆರೆಸಂತೆ ಗ್ರಾಮಸ್ಥರು

ಮದ್ಯದ ಅಂಗಡಿಗೆ ಸ್ಥಳೀಯ ಗ್ರಾಮ ಪಂಚಾಯತ್‌ನಿಂದ ಪರವಾನಗಿ ಕೂಡಾ ಪಡೆದಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ

- Advertisement -
- Advertisement -

ಗ್ರಾಮದಲ್ಲಿ ಅನಧೀಕೃತವಾಗಿ ತೆರೆದಿರುವ ಮದ್ಯದ ಅಂಗಡಿಯನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕೆರೆಸಂತೆ ಗ್ರಾಮಪಂಚಾಯತ್‌ನ ಅಧ್ಯಕ್ಷರು, ಸದಸ್ಯರು ಮತ್ತು ನಾಗರೀಕರು ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಗ್ರಾಮದ ಅಂಚೆಚೋಮನಹಳ್ಳಿ ಗೇಟ್‌ ಬಳಿ ಕಳೆದ ವರ್ಷ ಅನಧೀಕೃತವಾಗಿ ‘ಚಂದನಾ ವೈನ್ಸ್‌ ಬಾರ್‌’ ತೆರೆಯಲಾಗಿದ್ದು, ಇದರಿಂದಾಗಿ ಪ್ರದೇಶದಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚಾಗಿದೆ ಪತ್ರದಲ್ಲಿ ಆರೋಪಿಸಲಾಗಿದೆ.

ಬಾರ್‌ ಇರುವ ಸ್ಥಳವು ಕೃಷಿಭೂಮಿಯಾಗಿದ್ದು, ಕಮರ್ಶಿಯಲ್‌ ಸ್ಥಳವಲ್ಲ ಎಂದು ಗ್ರಾಮ ಪಂಚಾಯತ್‌ ಅಧ್ಯಕ್ಷರು ಪತ್ರದಲ್ಲಿ ಉಲ್ಲೇಖಿಸಿದ್ದು, ಮದ್ಯದ ಅಂಗಡಿಗೆ ಸ್ಥಳೀಯ ಗ್ರಾಮ ಪಂಚಾಯತ್‌ನಿಂದ ಪರವಾನಗಿ ಕೂಡಾ ಪಡೆದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಮದ್ಯದ ಅಂಗಡಿಗಳನ್ನು ತೆರೆಯುವ ಅವಿವೇಕದ ಕೆಲಸವನ್ನು ಸರ್ಕಾರ ಮಾಡಬಾರದು.

ಕೆರೆಸಂತೆ ಗ್ರಾಮ ಪಂಚಾಯತ್‌‌ನ 12 ಹಳ್ಳಿಗಳಲ್ಲಿ ಹೆಚ್ಚಿನ ಜನರು ಪರಿಶಿಷ್ಟ್‌ ಜಾತಿ ಮತ್ತು ಪಂಗಡಕ್ಕೆ ಸೇರಿದವರಾಗಿದ್ದು, ಅದರಲ್ಲೂ ಅಂಚೆಚೋಮನಹಳ್ಳಿ ಪ್ರದೇಶದಲ್ಲಿ ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯದ ಜನರೇ ಹೆಚ್ಚು ವಾಸವಿದ್ದಾರೆ. ಈ ಬಾರ್‌‌ನಿಂದಾಗಿ ಅವರೆಲ್ಲರೂ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಪತ್ರದಲ್ಲಿ ಹೇಳಲಾಗಿದೆ.

ಪ್ರಸ್ತುತ ಬಾರ್‌ ಇರುವ ನೂರಿನ್ನೂರು ಮೀಟರ್‌ ಅಂತರದಲ್ಲಿ ಮೊರಾರ್ಜಿ ವಸತಿ ಶಾಲೆ ಕೂಡಾ ಇದ್ದು, ಇದು ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಅವರ ಪೋಷಕರಿಗೂ ತೊಂದರೆ ನೀಡುತ್ತದೆ ಎಂದು ಪ್ರಧಾನಿಗೆ ಬರೆದ ಪತ್ರದಲ್ಲಿ ಹೇಳಿದ್ದು, “ಕೆಳೆದ ತಿಂಗಳು, ಮದ್ಯಪಾನ ಮಾಡಿ ರಸ್ತೆ ಬದಿಯಲ್ಲಿ ಮಲಗಿದ್ದ ಇಬ್ಬರು ಗ್ರಾಮಸ್ಥರು ಅಫಘಾತಕ್ಕೆ ಈಡಾಗಿ ಮೃತಪಟ್ಟಿದ್ದರು” ಎಂದು ಆರೋಪಿಸಲಾಗಿದೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಕೆರೆಸಂತೆ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಅಶ್ವಿನಿ ಅವರು, “ಕಳೆದ ಜುಲೈನಿಂದ ಮಹಿಳೆಯರು ಇಲ್ಲಿ ಮದ್ಯದ ಅಂಗಡಿ ಬೇಡ ಎಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಮದ್ಯದ ಅಂಗಡಿ ಮಾಲಿಕರು ಅಂಗಡಿಗೆ ಬೇಕಾಗಿರುವ ಪರವಾನಗಿಯನ್ನು ಕೂಡಾ ಗ್ರಾಮ ಪಂಚಾಯತ್‌‌ನಿಂದ ಪಡೆದಿಲ್ಲ. ಪಂಚಾಯತ್‌ನ ಮಹಿಳಾ ಸದಸ್ಯರು ಸೇರಿದಂತೆ ಹಲವಾರು ಸದಸ್ಯರು ಮದ್ಯದ ಅಂಗಡಿ ವಿರುದ್ದ ಇದ್ದಾರೆ. ಹೀಗಾಗಿ ನಾವು ಗ್ರಾಮದ ಮಹಿಳೆಯರ ಪರವಾಗಿ ಪ್ರಧಾನ ಮಂತ್ರಿಗೆ ಪತ್ರ ಬರೆದಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಮಹಿಳೆಯರ ದಿಟ್ಟ ಹೋರಾಟಕ್ಕೆ ಜಯ: ಮದ್ಯದಂಗಡಿ ಸ್ಥಳಾಂತರಕ್ಕೆ ಆದೇಶ

ನಾನುಗೌರಿ.ಕಾಂ ಜೊತೆಗೆ ಸಾಮಾಜಿಕ ಹೋರಾಟಗಾರ ಮಂಜುನಾಥ್ ಮಾತನಾಡಿ, “ಮದ್ಯದ ಅಂಗಡಿಯಿಂದಾಗಿ ಸ್ಥಳೀಯರಿಗೆ ಮತ್ತು ಪಕ್ಕವೆ ಇರುವ ಶಾಲೆಯ ವಿದ್ಯಾರ್ಥಿ ಹಾಗೂ ಶಿಕ್ಷಕರಿಗೆ ತೊಂದರೆಯಾಗಿದೆ. ಅಂಗಡಿಗೆ ಸ್ಥಳೀಯ ಗ್ರಾಮ ಪಂಚಾಯತ್‌ನಿಂದ ಪರವಾನಗಿ ಕೂಡಾ ಪಡೆದಿಲ್ಲ. ಬಾರ್‌ ಅನ್ನು ಪ್ರಶ್ನಿಸಿ ಬಗ್ಗೆ ನಾವು ಸಂವಿಧಾನದ ಆರ್ಟಿಕಲ್ 47 ಅಡಿಯಲ್ಲಿ ಹೈಕೋರ್ಟ್‌‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದೇವೆ” ಎಂದು ತಿಳಿಸಿದ್ದಾರೆ.

ಭಾರತ ಸಂವಿಧಾನದ ಆರ್ಟಿಕಲ್‌ 47 ಪ್ರಕಾರ, ಸಾರ್ವಜನಿಕರ ಆರೋಗ್ಯ ಮತ್ತು ಜೀವನ ಮಟ್ಟ ಸುಧಾರಿಸುವುದು. ಆರೋಗ್ಯಕ್ಕೆ ಹಾನಿಯುಂಟುಮಾಡುವ ಮಾದಕ ಪಾನೀಯಗಳು ಮತ್ತು ಮಾದಕವಸ್ತುಗಳ ನಿಷೇಧ ಮಾಡಲು ಸರ್ಕಾರವು ಪ್ರಯತ್ನಿಸಬೇಕಾಗಿದೆ.

ಕರ್ನಾಟಕ ಅಬಕಾರಿ ಅಧಿನಿಯಮ, 1967 ರ ರೂಲ್‌ 5 ರ ಪ್ರಕಾರ ಶಾಲೆ, ಧಾರ್ಮಿಕ ಸ್ಥಳ, ಆಸ್ಪತ್ರೆ, ಎಸ್‌ಸಿ ಎಸ್‌ಎಸ್‌ಟಿ ಸಮುದಾಯದ ಜನವಸತಿಯಿಂದ 100 ಮಿ. ಅಂತರದಲ್ಲಿ ಮದ್ಯದಂಗಡಿಯನ್ನು ತೆರೆಯುವಂತಿಲ್ಲ. ಕರ್ನಾಟಕ ವೈನ್‌ ಮರ್ಚೆಂಟ್ಸ್‌ vs ಕರ್ನಾಟಕ ರಾಜ್ಯ ಪ್ರಕರಣದಲ್ಲಿ ಹೈಕೋರ್ಟ್ ಜನವಸತಿ, ಶಿಕ್ಷಣ ಸಂಸ್ಥೆಗಳು, ಆರೋಗ್ಯ ಸಂಸ್ಥೆ, ಧಾರ್ಮಿಕ ಸ್ಥಳದ ಸಮೀಪ ಮದ್ಯದಂಗಡಿಯನ್ನು ತೆರೆಯಬಾರದು ಎಂದು ಆದೇಶ ನೀಡಿದೆ.

ಅಲ್ಲದೆ, ಜನ ವಿರೋಧವಿದ್ದಾಗ 100 ಮೀ. ಎಂಬ ಸರ್ಕಾರಿ ಮಾನದಂಡಕ್ಕೆ ಕಟ್ಟು ಬಿದ್ದು ಮದ್ಯದಂಗಡಿ ತೆರೆಯುವುದು ಸೂಕ್ತವಲ್ಲ ಎಂದು ಕರ್ನಾಟಕ ಹೈಕೋರ್ಟ್‌ 1997 ರಲ್ಲಿ ಅಭಿಪ್ರಾಯ ಪಟ್ಟಿದೆ. ಜೊತೆಗೆ ಅಬಕಾರಿ ಪರವಾನಗಿ ನೀಡುವ ಮುನ್ನ 100 ಮೀ. ಅಂತರ ಎಂಬ ನಿಯಮ 5 ಕ್ಕೆ ಬದ್ಧರಾಗಿ ಜನಸಾಮಾನ್ಯರ ಸಾಮಾಜಿಕ ಸ್ಥಿತಿಗತಿಗಳನ್ನು ಕಡೆಗಣಿಸಬಾರದು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ:ಅಬಕಾರಿ ಇಲಾಖೆಯಿಂದ ಜನಾರೋಗ್ಯ ಕಡೆಗಣನೆ: ಮದ್ಯದಂಗಡಿ ತೆರವಿಗೆ ನೂರಾರು ಮಹಿಳೆಯರ ನಿರಂತರ ಧರಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....