Homeಅಂಕಣಗಳುನೀಲಕುರಿಂಜಿ: ಹೊಸ ಅಸ್ಮಿತೆಗಳ ಆತ್ಮ ನಿವೇದನೆ

ನೀಲಕುರಿಂಜಿ: ಹೊಸ ಅಸ್ಮಿತೆಗಳ ಆತ್ಮ ನಿವೇದನೆ

- Advertisement -
- Advertisement -

ಕಥೆಯಾಗುವ ಮತ್ತು ಕಥೆಯಾಗಿಸುವ ಎರಡೂ ಪ್ರಕ್ರಿಯೆಗಳು ಬಹಳ ಸುಲಭದಂತೆ ಕಂಡರೂ ಅವು ಸಂಕೀರ್ಣವಾದವು ಮತ್ತು ಬೌದ್ಧಿಕವಾಗಿ ತೊಡಗಿಸಿಕೊಳ್ಳುವ ಕೆಲಸದಿಂದ ಕೂಡಿದ್ದಾಗಿರುತ್ತದೆ ಎಂಬುದು ಸಾಹಿತ್ಯದ ಅಭ್ಯಾಸಿಗಳಿಗೆ ಗೋಚರಿಸುವ ಸಂಗತಿಯಾಗಿವೆ. ಕಣ್ಣಾರೆ ಕಂಡದ್ದೋ, ಅಥವಾ ಕಿವಿಯಾರೆ ಕೇಳಿದ ವಿಷಯಗಳು ಕಥೆಗಾರನ ಕಲ್ಪನಾ ಮೂಸೆಯಲ್ಲಿ ರೂಪಾಂತರವಾಗುವುದು ಒಂದು ವಿಶೇಷ ಕ್ರಿಯೆ. ಅದರೊಂದಿಗೆ ಅನುಭವಕ್ಕೆ ದಕ್ಕಿದ ಮತ್ತು ದಕ್ಕದೇ ಉಳಿದ ಎಷ್ಟೋ ವಿಷಯ-ವಸ್ತುಗಳು ಕೂಡ ಕಥೆಯಾಗುವ ಪ್ರಕ್ರಿಯೆಯಲ್ಲಿ ಮುಖ್ಯವೆನಿಸುತ್ತವೆ. ಇಂಥ ಪ್ರಕ್ರಿಯೆಯಲ್ಲಿ ತೀವ್ರವಾಗಿ ತೊಡಗಿಸಿಕೊಂಡಿರುವ ಕಾರಣಗಳಿಂದಲೇ ’ನೀಲಕುರಿಂಜಿ’ ಬಹುಮುಖ್ಯವಾದ ಕಥಾಸಂಕಲನ ಎಂದೆನಿಸುತ್ತದೆ.

ಯುವ ಬರಹಗಾರ ದಾದಾಪೀರ್ ಜೈಮನ್ ಅವರಿಗಿರುವ ವಿಶಾಲ ದೃಷ್ಟಿಕೋನ, ನಿರೂಪಣಾ ಶೈಲಿ ಮತ್ತು ಕಥೆ ಹೆಣೆಯುವ ತಂತ್ರ ಹೊಸ ಕಥಾಮೀಮಾಂಸೆಯನ್ನು ಕಟ್ಟುವ ಪ್ರಯತ್ನ ಮಾಡಿದೆ ಎಂದರೂ ಅತಿಶಯೋಕ್ತಿಯಾಗಲಾರದು!

ದಾದಾಪೀರ್ ಜೈಮನ್ ಅವರ ಚೊಚ್ಚಲ ಕಥಾಸಂಕಲನ ’ನೀಲಕುರಿಂಜಿ’. ಇದರಲ್ಲಿನ ಕಥೆಗಳು ಹೊಸ ಅಸ್ಮಿತೆಗಳ ಆತ್ಮನಿವೇದನೆಯಂತೆಯೇ ಕಾಣುತ್ತವೆ. ಇಲ್ಲಿನ ಸಾಕಷ್ಟು ಕಥೆಗಳು ಎತ್ತುವ ಪ್ರಶ್ನೆಗಳಿಗೆ ಹೃದಯಶೂನ್ಯ ಸ್ಥಿತಿಯಲ್ಲಿರುವ ಸಮಾಜ ಉತ್ತರವಿಲ್ಲದೆ ತತ್ತರಿಸಿ ಹೋಗಬಹುದೇ ಎಂದೆನಿಸುತ್ತದೆ. ಒಂಟಿತನದ ಒದ್ದಾಟದಿಂದ ಹಿಡಿದು ಸಾವಿಗಾಗಿ ಕಾಯುವವರೆಗೂ ಇರಬಹುದಾದ ಬದುಕಿನ ಎಲ್ಲ ಸ್ತರಗಳ ಚಿತ್ರಗಳು ’ನೀಲಕುರಿಂಜಿ’ಯ ಕ್ಯಾನ್ವಾಸಿನ ಮೇಲೆ ಮೂಡಿವೆ.

ದಾದಾಪೀರ್ ಜೈಮನ್

ಮತಧರ್ಮಗಳಲ್ಲಿರುವ ಸಣ್ಣತನ ಮತ್ತು ಮನುಷ್ಯಪ್ರೀತಿಯ ಧರ್ಮದೊಳಗಿನ ದೊಡ್ಡತನಗಳ ನಡುವೆ ಇರುವ ಗೆರೆಯನ್ನು ಮುಗ್ಧ ಮಗುವಿನ ಹಾಗೆ ನೋಡುವಂತೆ ಮಾಡುವ ಇಮ್ರಾನ್ ಎಂಬ ಕೂಸು, ’ಪ್ರೀತಿಯಿಂದ ಗೆಲ್ಲಬಹುದು’ ಎಂಬುದನ್ನು ಕಲಿಸಿಕೊಡುವ ಗೆಳತಿಯ ಸ್ಟೇಟಸ್‌ನ ಪಾಠವು, ’ಬಾಯಾರಿಕೆ ಆದಾಗ ನೀರು ಕುಡಿಯೋದು ತಪ್ಪಾ?’ ಎಂದು ಮಹಿಳೆಯ ಲೈಂಗಿಕ ಸ್ವಾತಂತ್ರ್ಯದ ಹಕ್ಕಿನ ಪ್ರಶ್ನೆಗೆ ದನಿಯಾಗುವ ಅಜ್ಜಿಯೂ, ಸಂಬಂಧಗಳ ಸಂಕೋಲೆಯಲ್ಲಿ ಸತ್ತು ಬದುಕುವ ಮತ್ತು ಬದುಕಿಯೂ ಸಾಯುವ ’ಕೊನೆಯ ಮಳೆ’ಯ ಹನಿಯೂ, ಹೀಗೆ ಕಥೆಗಳ ಹೂರಣ ಮನುಷ್ಯನ ಒದ್ದಾಟಗಳ ಅನುಭವಗಳನ್ನು ಯಥಾವತ್ತಾಗಿ ಅನುವಾದ ಮಾಡಿದಹಾಗಿದೆ.

ಮೇಲ್‌ಸ್ತರದ ಅಂಶಗಳಷ್ಟೇ ಈ ಸಂಕಲನದ ಕಥೆಗಳಲ್ಲಿ ಅಭಿವ್ಯಕ್ತಗೊಂಡಿದ್ದರೆ ಇದು ಮತ್ತೊಂದು ಕಥಾಸಂಕಲವಾಗಿ ಉಳಿದುಹೋಗುತ್ತಿತ್ತು. ಆದರೆ ಈ ಸಂಕಲನದ ಕಥೆಗಳ ವಿಶೇಷವೆಂದರೆ ಹೊಸ ಅಸ್ಮಿತೆಗಳನ್ನು ಆಲಂಗಿಸುವ ಮನಸ್ಥಿತಿಗಳನ್ನು ರೂಪಿಸಿರುವುದಾಗಿದೆ. ಸಲಿಂಗ ಪ್ರೇಮದ ಸೆಳೆತಗಳು ಮತ್ತು ಅದರಿಂದಲೂ ಬಿಡಿಸಿಕೊಂಡು ಬದುಕಬೇಕು ಎನ್ನುವ ಹಪಾಹಪಿಯ ವಿಚಿತ್ರ ಬದುಕಿನ ರೀತಿಯನ್ನು ಕಥೆಗಾರ ಚಿತ್ರಿಸಿರುವುದು ಈ ಹೊಸ ಅಸ್ಮಿತೆಗಳ ಮಾತಿಗೆ ರುಜುವಾತಿನಂತಿದೆ. ಅನಂತು ಅನು ಆಗಿ ಬದಲಾವಣೆ ಆಗುವುದನ್ನು ಈ ಸಮಾಜ ನೋಡುವ ರೀತಿಯ ಮನೋವೈಶಿಷ್ಟತೆಯನ್ನು ’ಆವರಣ’ ಕಥೆಯಲ್ಲಿ ಕಾಣಬಹುದು. ಇನ್ನು ’ಆಳದಾಕಾಶದ ಪ್ರತಿಬಿಂಬ’ ಎನ್ನುವ ಇಡೀ ಕಥೆ ಒಂದು ರೂಪಕವಾಗಿ ಚಿತ್ರಿಸಿರುವುದು ನಿಜಕ್ಕೂ ಸೋಜಿಗವೆನ್ನಿಸುತ್ತದೆ.

ಹೊಸ ಅಸ್ಮಿತೆಯಯನ್ನು ಕಟ್ಟಿಕೊಂಡು, ತನ್ನದಾಗಿಸಿಕೊಂಡು ಬದುಕ ಹೊರಟವರ ಸಂವೇದನೆಗಳು ಮತ್ತು ಒಡಲಾಳದ ಸಂಕಟಗಳು ಈ ಕತೆಗಳ ನೀತಿಸಂಹಿತೆಯಂತೆ ಇವೆ. ಲಿಂಗ ಅಲ್ಪಸಂಖ್ಯಾತರನ್ನು ನೋಡುವ ಕ್ರಮವನ್ನು ಬದಲಿಸಿಕೊಳ್ಳುವ ಮತ್ತು ತಿದ್ದಿಕೊಳ್ಳುವ, ಬದುಕಿನ ವ್ಯಾಕರಣವನ್ನು ಹೊಸದಾಗಿ ವ್ಯಾಖ್ಯಾನಿಸುವ ರೀತಿಯನ್ನು ಈ ನೀತಿಸಂಹಿತೆ ಒಳಗೊಂಡಿದ್ದು ಅನುಕರಣೀಯವಾಗಿದೆ.

ಇವುಗಳ ಜೊತೆಗೆ ಭಾಷೆಯನ್ನು ಅಗತ್ಯವಿದ್ದಲ್ಲಿ ಸೂಕ್ಷ್ಮವಾಗಿ ಮತ್ತು ಬೇಕಿದ್ದಲ್ಲಿ ತೀಕ್ಷ್ಣವಾಗಿ ಬಳಸುವ ನಿರೂಪಣಾ ತಂತ್ರ ಕಥೆಗಾರನಿಗೆ ಒಲಿದಿದೆ. ಕೆಲವು ಕಡೆಗೆ ಅನಗತ್ಯವೆನಿಸದರೂ ತನಗೇ ಅರಿವಿಲ್ಲದಂತೆ ಕಥೆಯನ್ನು ವಿವರಿಸುವ ಆಸ್ಥೆಯನ್ನು ಕತೆಗಾರ ತೋರಿದರೂ, ನಾಲ್ಕಾರು ಸಾಲುಗಳಲ್ಲಿ ಹೇಳಬಹುದಾದ ವಿಚಾರವನ್ನು ಒಂದೇ ರೂಪಕದ ಮೂಲಕವೂ ಹೇಳುವುದು ಕಥಾ ಕೌಶಲ್ಯಕ್ಕೆ ಹಿಡಿದ ಕನ್ನಡಿಯಂತಿದೆ. ಒಟ್ಟಿನಲ್ಲಿ ’ನೀಲಕುರಿಂಜಿ’ ಕಥಾ ಸಂಕಲನ ವಿನೂತನ ಪ್ರಯೋಗಗಳ ವಿಶಿಷ್ಟವಾದ ಕೃತಿ ಎನ್ನುವುದರಲ್ಲಿ ಎರಡು ಮಾತಿಲ್ಲ.

ಚಾಂದ್ ಪಾಷ ಎನ್ ಎಸ್

ಚಾಂದ್ ಪಾಷ ಎನ್ ಎಸ್
ಸಂಶೋಧನಾ ವಿದ್ಯಾರ್ಥಿ, ಕನ್ನಡ ಅಧ್ಯಯನ ಕೇಂದ್ರ. ಬೆಂಗಳೂರು ವಿ ವಿ


ಇದನ್ನೂ ಓದಿ: ಪುಸ್ತಕ ವಿಮರ್ಶೆ; ಯಾರು ಭಾರತ ಮಾತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...