Homeಅಂಕಣಗಳುದೇವೇಗೌಡ್ರು ಯಾವ ಜನಾಂಗನೂ ದ್ವೇಷ ಮಾಡಲ್ಲ

ದೇವೇಗೌಡ್ರು ಯಾವ ಜನಾಂಗನೂ ದ್ವೇಷ ಮಾಡಲ್ಲ

ಅದೊಂದು ಹಿರಿಯರು ಒಪ್ಪಿದ ಮದುವೆ. ಯಾಕೆಂದರೆ ಮನೆ ನಡೆದುಕೊಂಡು ಹೋಗಬೇಕು. ವಂಶಾಭಿವೃದ್ಧಿಯಾಗಬೇಕು. ಆ ವಂಶ ಊರಲ್ಲೆಲ್ಲಾ ಹರಡಬೇಕು.

- Advertisement -
- Advertisement -

ಅದೊಂದು ಹಿರಿಯರು ಒಪ್ಪಿದ ಮದುವೆ. ಯಾಕೆಂದರೆ ಮನೆ ನಡೆದುಕೊಂಡು ಹೋಗಬೇಕು. ವಂಶಾಭಿವೃದ್ಧಿಯಾಗಬೇಕು. ಆ ವಂಶ ಊರಲ್ಲೆಲ್ಲಾ ಹರಡಬೇಕು. ಕುಟುಂಬದ ವೈರಿಗಳು ನಿರ್ನಾಮವಾಗಬೇಕು. ಊರು ಅಭಿವೃದ್ಧಿಯಾಗಬೇಕು. ಇತ್ಯಾದಿ ಆಶಯಗಳೊಂದಿಗೆ ನಡೆದುಹೋದ ಬಲವಂತದ ಮದುವೆ. ಆದರೂ ಏಗಬೇಕಿದೆ. ಒಂದುವೇಳೆ ವಿಚ್ಛೇದನವಾದರೆ, ಅದನ್ನೆ ಕಾಯುತ್ತ ಕುಳಿತ ವೈರಿಪಡೆ, ಬೇಕಾದಷ್ಟು ಧನಕನಕ ವಸ್ತುಗಳನ್ನು ಕೊಟ್ಟು ಹುಡುಗಿ ಹೇಗಾದರೂ ಇರಲಿ ಆರಿಸಿಕೊಂಡು ಹೋಗಿ ಮದುವೆ ಮಾಡಿಕೊಳ್ಳಲು ತುದಿಗಾಲ ಮೇಲೆ ನಿಂತಿದೆ. ಇಂತಹ ಅಪಾಯದ ಸನ್ನಿವೇಶವರಿತ ವಧುವಿನ ತಂದೆಯ ಪಾಡು ಹೇಳತೀರದು. ಇಂತದೊಂದು ಕುಟುಂಬದ ಸ್ಥಿತಿ ಕರ್ನಾಟಕದ ರಾಜಕಾರಣವನ್ನೇ ಹೋಲುತ್ತಿದೆಯಂತಲ್ಲಾ. ಈ ನಡುವೆ ವಧುವಿನ ಕಡೆಯ ಕುರುಬರ ಪೈಕಿಯ ಯಜಮಾನನೊಬ್ಬ ತನ್ನ ಜವಾಬ್ದಾರಿಯಿಂದ ಹಿಂದೆ ಸರಿಯುತ್ತಿರುವ ತೀರ್ಮಾನ ಕೇಳಿ ಫೋನ್ ಮಾಡಬೇಕೆನಿಸಿತಲ್ಲಾ. ತಡ ಮಾಡದೆ ಫೋನ್ ಮಾಡಲಾಗಿ ರಿಂಗಾಯ್ತು.

ರಿಂಗ್‍ಟೋನ್: … ನಿನಗ್ಯಾರಿದ್ದರೇನು ಸುಖವಿಲ್ಲಾ ಪ್ರಭುವೆ. ದಾರಿ ಸುಖವಿಲ್ಲ… ಬಾಯಾರಿತು ಎಂದು ದಳದ ಬಾವಿಗೆ ಪೋದೆ.
“ಹಲೋ ಯಾರೂ”
“ನಾನೂ ಸರ್ ಯಾಹೂ”
“ಏನಪ್ಪ ಯಾಹೂ”
“ಚೆನ್ನಾಗಿದ್ದೀರಾ ಸರ್”
“ಏನೋ ಹಿಂಗಿದೀನಿ”
“ದಳದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ರಂತಲ್ಲ ಸಾರ್”
“ಜವಾಬ್ದಾರಿ ಸಾಕು ಅನ್ನುಸ್ತು ಕೊಟ್ಟೆ”
“ಜವಾಬ್ದಾರಿ ಏನಿತ್ತು ಸಾರ್ ಅಲ್ಲಿ”
“ಒಂದು ಪಾರ್ಟಿ ಅಧ್ಯಕ್ಷ ಅಂದಮೇಲೆ ಜವಾಬ್ದಾರಿ ಇರಲ್ವೆ”

“ನಾನು ತಿಳಕಂಡಂಗೆ ಸಾರ್, ಜನತಾದಳದ ಜವಾಬ್ದಾರಿ ಅಂದ್ರೆ, ಬೆಳಿಗ್ಗೆ ತಿಂಡಿ ತಿನ್ನುವಾಗ ದೇವೇಗೌಡ್ರು ಕುಮಾರಣ್ಣ ರೇವಣ್ಣ ಆಡಿದ ಮಾತುಗಳು ನಿಮಗೆ ತಲುಪ್ತವೆ, ಅವನ್ನ ಕೇಳಿಸಿಗಂಡು ಸುಮ್ಮನಾಗದು ಅಲವೆ ಸಾರ್”
“ಅದು ನಿಮ್ಮ ಊಹೆ”

“ಆಮೇಲೆ ಅಡುಗೆ ಮನೆಯಿಂದ ಚೆನ್ನಮ್ಮ ಅದೇನೇನೊ ಹೇಳ್ತಾರೆ. ಮತ್ತೆ ಭವಾನಿ ಹೇಳಿದ್ದ ರೇವಣ್ಣ ತಂದಿರತನೆ. ಈ ತರ ಮಾತು ಕತೆ ಪಾರ್ಟಿ ಅಧ್ಯಕ್ಷನಿಗೆ ತಲುಪಬಹುದು ಅಥವಾ ತಲುಪದೆಯೂ ಇರಬಹುದು. ಇಂತಹ ಪಾರ್ಟಿಯ ಅಧ್ಯಕ್ಷನಾದವನು ಅಸಾಮಾನ್ಯ ತಾಳ್ಮೆ, ಮುಜುಗರ ಸಹಿಸಿಕೊಳೊ ಶಕ್ತಿ ಪಡೆದಿರಬೇಕು ಅಲ್ವ ಸಾರ್”
“ನೀವು ಹೇಳ್ತಕಂತ ಯಾವುದೇ ಸನ್ನಿವೇಶನ ನಾನು ಎದುರಿಸಿಲ್ಲ”

“ಪಂಚಾಯ್ತಿ ಚುನಾವಣೇಲಿ ಸ್ವಜಾತಿಗೊಂದು ಟಿಕೆಟ್ ಕೊಡಲಿಕ್ಕಾಗದ ಪಾರ್ಟಿ ಅಧ್ಯಕ್ಷಗಿರಿ ಇನ್ನೆಂತದಿರಬೇಕು ಸಾರ್”
“ನನ್ನ ರಾಜೀನಾಮೆ ಅವನ್ನೆಲ್ಲಾ ಒಳಗೊಂಡಿದೆ”

“ಒಳ್ಳೆ ಕೆಲಸ ಮಾಡಿದ್ರಿ. ಸಾಮಾನ್ಯವಾಗಿ ದೇವೇಗೌಡ್ರು ಪಾರ್ಟಿ ಅಧ್ಯಕ್ಷನ್ನ ಅವನ ಅನುಪಸ್ಥಿತೀಲಿ ಬದ್ಲಾಯಿಸ್ತಾರೆ. ಆದ್ರೆ ನೀವೇ ರಾಜೀನಾಮೆ ಕೊಟ್ಟಿದ್ದು ಒಳ್ಳೆದು. ಸಾರ್”
“ನೋಡಿ ಯಾಹೂ, ಕಾಲಕ್ಕೆ ನಾವು ಅಂಟಿಕೊಂಡು ಕೂತ್ಗಬಾರ್ದು. ಕಾಲ ಬದಲಾವಣೆ ಬಯಸಿದಾಗ ನಾವು ಬದಲಾಗಬೇಕು”

“ನಿಜ ಸಾರ್, ಆ ಸಿದ್ದರಾಮಯ್ಯನ್ನ ಹಿಡಕಂಡೋಗಿ ಕಾಂಗೈ ಸೇರಿಸಿದ್ರಿ. ನೀವು ಬಂದು ದಳದ ಅಧ್ಯಕ್ಷರಾದ್ರಿ. ಏನಾಶ್ಚರ್ಯ ಅಲವಾ”
‘‘ಅದಕ್ಕೆ ರಾಜಕಾರಣ ಅನ್ನದು”

“ಅಂದ್ರೆ ರಾಜಕಾರಣದಲ್ಲಿ ಏನಾದ್ರು ಆಗಬವುದ?”
“ನೀವೇ ನೋಡಿದ್ರಲ್ಲ, ನಿಮ್ಮಪ್ಪನಾಣೆ ಮುಖ್ಯಮಂತ್ರಿ ಆಗಲ್ಲ ಅಂತ ಬೆಳಿಗ್ಗೆ ಕುಮಾರಸ್ವಾಮಿಗೆ ಹೇಳಿದ ಸಿದ್ದರಾಮಯ್ಯ, ಮಧ್ಯಾಹ್ನ ಒಂದು ಗಂಟೆಗೆ ಬಂದು ನಿಮ್ಮಪ್ಪನಾಣೆ ನೀನೆ ಮುಖ್ಯಮಂತ್ರಿ ಆಗು ಬಾ ಅಂದಿರೋದು. ಇಂತದ್ದು ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ನಡೆದಿರಲಿಲ್ಲ”

“ಇದನ್ನ ಅವಮಾನಕರ ನಡವಳಿಕೆ ಅಂತೀರಾ”
“ಇಲ್ಲ ಹಾಗನ್ನಲ್ಲ. ಮತೀಯ ಶಕ್ತಿಗೆ ಅವಕಾಶ ಕೊಡಬಾರ್ದು ಅನ್ನೊ ತೀರ್ಮಾನಕ್ಕೆ ತಲೆಬಾಗಿದ್ದು ಅಂತ ಭಾವುಸ್ತೀನಿ. ಆದ್ರೆ ಅಹಂಕಾರದ ಮಾತು ಯಾರಿಗೂ ಒಳ್ಳೆದಲ್ಲ”

“ಸಿದ್ದರಾಮಯ್ಯನಿಗೆ ಅಹಂಕಾರ ಇದೆ ಅಂತೀರಾ?”
“ಅಹಂಕಾರದ ಮೂರ್ತಿರೂಪ ಆತ”

“ಅದು ಅಹಂಕಾರದ ತರದ ವ್ಯಕ್ತಿರೂಪವಂತಲ್ಲಾ”
“ಹಾಗೇನೂ ಇಲ್ಲ. ಉಪಕಾರ ಸ್ಮರಣೆ ಇಲ್ಲದ ಧಿಮಾಕಿನ ಮನ್ಸ ಆತ. ಮನುಷ್ಯನಿಗೆ ತಪ್ಪು ತಿದ್ದಿಕಳೊ ಒಳನೋಟ, ಅಹಂಕಾರಕ್ಕೆ ಅವಕಾಶ ಕೊಡದ ವ್ಯಕ್ತಿತ್ವ ಇರಬೇಕು”

“ನೀವು ಒಂದು ಕಾಲದ ಸಿದ್ದು ಅಭಿಮಾನಿ. ಅವರಿಗಾದ ಅವಮಾನಾನ ನೀವು ಸಹಿಸುತಿರಲಿಲ್ಲ. ಸಿದ್ದುನ ಯಾರಾದ್ರು ಟೀಕೆ ಮಾಡಿದ್ರೆ ನೀವು ಪ್ರತಿಕ್ರಿಯಿಸ್ತಿದ್ರಿ. ಇದು ನಿಮ್ಮ ತಪ್ಪೊ ಸಿದ್ದರಾಮಯ್ಯರ್ ತಪ್ಪೊ ಹೇಳಿ”
“ನನ್ನದೇ ತಪ್ಪು”

“ಈ ತಪ್ಪಿನಲ್ಲಿ ಮತೀಯ ಅಂಶ ಇದೆ ಅಲ್ವ”
“ಇರಬವುದು”

“ಇರಬವುದೇನು, ಇದೆ ಸಾರ್. ನಮ್ಮ ಜನಾಂಗದ ಲೀಡ್ರು, ಅವನನ್ನ ಯಾರೂ ಟೀಕೆ ಮಾಡಬಾರ್ದು ಬೈಯ್ಯಬಾರ್ದು ಅಂತ ಭಾವಿಸಿದ್ದ ಮನಸ್ಸಿನ ಕಣ್ಣು ತೆರಿಸಿದಾನಲ್ಲ ಸಿದ್ದರಾಮಯ್ಯ”
“ಇರಬವುದು”

“ಅವುರಂಗೆ ಮಾಡಿದ್ರಿಂದ ನೀವು ದಳಕ್ಕೆ ಬಂದು ಲೀಡರಾದ್ರಿ, ಶಾಸಕರಾದ್ರಿ, ಅಧ್ಯಕ್ಷರಾದ್ರಿ”
“ನಿಜ ನನ್ನ ರಾಜಕೀಯದ ಅಂತ್ಯ, ನಿರಾಶೆಗೊಳ್ಳೊತರ ಇಲ್ಲ. ಮಾಜೀ ಪ್ರಧಾನಿಯ ಪಾರ್ಟಿಗೆ ಅಧ್ಯಕ್ಷನಾದದ್ದು ಸಾಮಾನ್ಯ ಸಂಗತಿಯಲ್ಲ”

“ಈಗಲಾದ್ರು ದೇವೇಗೌಡ್ರಿಗೆ ಕುರುಬರನ್ನ ಕಂಡ್ರೆ ಅವ್ಯಕ್ತ ಅಕ್ಕರೆ ಇದೆ ಅನ್ನದನ್ನ ಒಪ್ಪಿಗತಿರಾ”
“ನೋಡಿ ಯಾಹು, ದೇವೇಗೌಡ್ರಿಗೆ ಯಾವ ಜನಾಂಗ ಕಂಡ್ರೂ ದ್ವೇಷ ಇಲ್ಲ. ರಾಜಕಾರಣದ ಕಾರಣಕ್ಕೆ ಅಂತ ಆಪಾದನೆಗಳಿಗೆ ಗುರಿಯಾಗ್ತಾರೆ”

“ಹೌದ ಸಾರ್”
“ನೋಡಿ, ಅವುರು ಬ್ರಾಹ್ಮಣ ವಿರೋಧಿ ಅಂತಾರೆ, ಅದೂ ಕೂಡ ಸುಳ್ಳು. ಲಿಂಗಾಯತರ ಬೊಮ್ಮಾಯಿ ಅಂದ್ರೆ ಅವರಿಗೆ ಪಂಚಪ್ರಾಣ. ದಲಿತರ ಡಾ.ತಿಪ್ಪೇಸ್ವಾಮಿನ ಪಾರ್ಟಿ ಪ್ರೆಸಿಡೆಂಟ್ ಮಾಡಿದ್ರು. ಲಿಂಗಾಯಿತರ ತಿಪ್ಪಣ್ಣನ್ನ ಅಧ್ಯಕ್ಷನ್ನ ಮಾಡಿದ್ರು. ಆ ನಂತರ ಕುರುಬರ ಸಿದ್ದರಾಮಯ್ಯನ್ನ ಅಧ್ಯಕ್ಷನನ್ನಾಗಿ ಮಾಡಿ ಫೈನಾನ್ಸ್ ಮಿನಿಷ್ಟ್ರು ಮಾಡಿದ್ರು. ಈಗ ನನ್ನ ಮಾಡಿದಾರೆ”

“ಅದೇ ಸಾರ್ ನಾನೇಳಿದ್ದೂ, ಕುರುಬರನ್ನ ಮುಂದೆ ತಂದಂಗೆ ಒಕ್ಕಲಿಗರನ್ನ ತರಲಿಲ್ಲ. ಒಕ್ಕಲಿಗರನ್ನೆಲ್ಲಾ ಮುಗಿಸಿ ಅಲ್ಲಿಗೆ ತಮ್ಮ ಕುಟುಂಬವನ್ನ ನಾಟಿ ಮಾಡ್ತಾ ಬಂದ್ರು. ಇದನ್ನ ಒಪ್ಪಿಗಳ್ತಿರಾ”
“ಒಕ್ಕಲಿಗ ನಾಯಕರನ್ನ ತುಳುದ್ರು ಪರ್ಯಾಯವಾಗಿ ಒಕ್ಕಲಿಗ ಲೀಡರನ್ನ ಬೆಳಸಿದಾರೆ”

“ಅದೆಲ್ಲಾ ಅಂಗಿರ್ಲಿ. ಲೋಕಸಭಾ ಚುನಾವಣೇಲಿ ಜನ ಸಮ್ಮಿಶ್ರ ಸರ್ಕಾರದ ವಿರುದ್ಧ ಓಟು ಕೊಟ್ಟಿರೋದನ್ನ ಒಪ್ಪಿಗಳ್ತೀರಾ”

“ಮೋದಿ ಅಲೆ”
“ಮೋದಿದೂ ಇಲ್ಲ ಯಂತದೂ ಇಲ್ಲ. ಒಂದೊರ್ಸದಿಂದ ದಳದೋರು ಕಾಂಗ್ರೆಸ್‍ನೋರು ಆಡ್ತಾಯಿರೊ ಜಗಳ ನಿಲ್ಸಕ್ಕೆ ಸೋಲ್ಸಿದ್ರು”

“ಥೂತ್ತೇರಿ”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...