Homeಅಂಕಣಗಳುದೇವೇಗೌಡ್ರು ಯಾವ ಜನಾಂಗನೂ ದ್ವೇಷ ಮಾಡಲ್ಲ

ದೇವೇಗೌಡ್ರು ಯಾವ ಜನಾಂಗನೂ ದ್ವೇಷ ಮಾಡಲ್ಲ

ಅದೊಂದು ಹಿರಿಯರು ಒಪ್ಪಿದ ಮದುವೆ. ಯಾಕೆಂದರೆ ಮನೆ ನಡೆದುಕೊಂಡು ಹೋಗಬೇಕು. ವಂಶಾಭಿವೃದ್ಧಿಯಾಗಬೇಕು. ಆ ವಂಶ ಊರಲ್ಲೆಲ್ಲಾ ಹರಡಬೇಕು.

- Advertisement -
- Advertisement -

ಅದೊಂದು ಹಿರಿಯರು ಒಪ್ಪಿದ ಮದುವೆ. ಯಾಕೆಂದರೆ ಮನೆ ನಡೆದುಕೊಂಡು ಹೋಗಬೇಕು. ವಂಶಾಭಿವೃದ್ಧಿಯಾಗಬೇಕು. ಆ ವಂಶ ಊರಲ್ಲೆಲ್ಲಾ ಹರಡಬೇಕು. ಕುಟುಂಬದ ವೈರಿಗಳು ನಿರ್ನಾಮವಾಗಬೇಕು. ಊರು ಅಭಿವೃದ್ಧಿಯಾಗಬೇಕು. ಇತ್ಯಾದಿ ಆಶಯಗಳೊಂದಿಗೆ ನಡೆದುಹೋದ ಬಲವಂತದ ಮದುವೆ. ಆದರೂ ಏಗಬೇಕಿದೆ. ಒಂದುವೇಳೆ ವಿಚ್ಛೇದನವಾದರೆ, ಅದನ್ನೆ ಕಾಯುತ್ತ ಕುಳಿತ ವೈರಿಪಡೆ, ಬೇಕಾದಷ್ಟು ಧನಕನಕ ವಸ್ತುಗಳನ್ನು ಕೊಟ್ಟು ಹುಡುಗಿ ಹೇಗಾದರೂ ಇರಲಿ ಆರಿಸಿಕೊಂಡು ಹೋಗಿ ಮದುವೆ ಮಾಡಿಕೊಳ್ಳಲು ತುದಿಗಾಲ ಮೇಲೆ ನಿಂತಿದೆ. ಇಂತಹ ಅಪಾಯದ ಸನ್ನಿವೇಶವರಿತ ವಧುವಿನ ತಂದೆಯ ಪಾಡು ಹೇಳತೀರದು. ಇಂತದೊಂದು ಕುಟುಂಬದ ಸ್ಥಿತಿ ಕರ್ನಾಟಕದ ರಾಜಕಾರಣವನ್ನೇ ಹೋಲುತ್ತಿದೆಯಂತಲ್ಲಾ. ಈ ನಡುವೆ ವಧುವಿನ ಕಡೆಯ ಕುರುಬರ ಪೈಕಿಯ ಯಜಮಾನನೊಬ್ಬ ತನ್ನ ಜವಾಬ್ದಾರಿಯಿಂದ ಹಿಂದೆ ಸರಿಯುತ್ತಿರುವ ತೀರ್ಮಾನ ಕೇಳಿ ಫೋನ್ ಮಾಡಬೇಕೆನಿಸಿತಲ್ಲಾ. ತಡ ಮಾಡದೆ ಫೋನ್ ಮಾಡಲಾಗಿ ರಿಂಗಾಯ್ತು.

ರಿಂಗ್‍ಟೋನ್: … ನಿನಗ್ಯಾರಿದ್ದರೇನು ಸುಖವಿಲ್ಲಾ ಪ್ರಭುವೆ. ದಾರಿ ಸುಖವಿಲ್ಲ… ಬಾಯಾರಿತು ಎಂದು ದಳದ ಬಾವಿಗೆ ಪೋದೆ.
“ಹಲೋ ಯಾರೂ”
“ನಾನೂ ಸರ್ ಯಾಹೂ”
“ಏನಪ್ಪ ಯಾಹೂ”
“ಚೆನ್ನಾಗಿದ್ದೀರಾ ಸರ್”
“ಏನೋ ಹಿಂಗಿದೀನಿ”
“ದಳದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ರಂತಲ್ಲ ಸಾರ್”
“ಜವಾಬ್ದಾರಿ ಸಾಕು ಅನ್ನುಸ್ತು ಕೊಟ್ಟೆ”
“ಜವಾಬ್ದಾರಿ ಏನಿತ್ತು ಸಾರ್ ಅಲ್ಲಿ”
“ಒಂದು ಪಾರ್ಟಿ ಅಧ್ಯಕ್ಷ ಅಂದಮೇಲೆ ಜವಾಬ್ದಾರಿ ಇರಲ್ವೆ”

“ನಾನು ತಿಳಕಂಡಂಗೆ ಸಾರ್, ಜನತಾದಳದ ಜವಾಬ್ದಾರಿ ಅಂದ್ರೆ, ಬೆಳಿಗ್ಗೆ ತಿಂಡಿ ತಿನ್ನುವಾಗ ದೇವೇಗೌಡ್ರು ಕುಮಾರಣ್ಣ ರೇವಣ್ಣ ಆಡಿದ ಮಾತುಗಳು ನಿಮಗೆ ತಲುಪ್ತವೆ, ಅವನ್ನ ಕೇಳಿಸಿಗಂಡು ಸುಮ್ಮನಾಗದು ಅಲವೆ ಸಾರ್”
“ಅದು ನಿಮ್ಮ ಊಹೆ”

“ಆಮೇಲೆ ಅಡುಗೆ ಮನೆಯಿಂದ ಚೆನ್ನಮ್ಮ ಅದೇನೇನೊ ಹೇಳ್ತಾರೆ. ಮತ್ತೆ ಭವಾನಿ ಹೇಳಿದ್ದ ರೇವಣ್ಣ ತಂದಿರತನೆ. ಈ ತರ ಮಾತು ಕತೆ ಪಾರ್ಟಿ ಅಧ್ಯಕ್ಷನಿಗೆ ತಲುಪಬಹುದು ಅಥವಾ ತಲುಪದೆಯೂ ಇರಬಹುದು. ಇಂತಹ ಪಾರ್ಟಿಯ ಅಧ್ಯಕ್ಷನಾದವನು ಅಸಾಮಾನ್ಯ ತಾಳ್ಮೆ, ಮುಜುಗರ ಸಹಿಸಿಕೊಳೊ ಶಕ್ತಿ ಪಡೆದಿರಬೇಕು ಅಲ್ವ ಸಾರ್”
“ನೀವು ಹೇಳ್ತಕಂತ ಯಾವುದೇ ಸನ್ನಿವೇಶನ ನಾನು ಎದುರಿಸಿಲ್ಲ”

“ಪಂಚಾಯ್ತಿ ಚುನಾವಣೇಲಿ ಸ್ವಜಾತಿಗೊಂದು ಟಿಕೆಟ್ ಕೊಡಲಿಕ್ಕಾಗದ ಪಾರ್ಟಿ ಅಧ್ಯಕ್ಷಗಿರಿ ಇನ್ನೆಂತದಿರಬೇಕು ಸಾರ್”
“ನನ್ನ ರಾಜೀನಾಮೆ ಅವನ್ನೆಲ್ಲಾ ಒಳಗೊಂಡಿದೆ”

“ಒಳ್ಳೆ ಕೆಲಸ ಮಾಡಿದ್ರಿ. ಸಾಮಾನ್ಯವಾಗಿ ದೇವೇಗೌಡ್ರು ಪಾರ್ಟಿ ಅಧ್ಯಕ್ಷನ್ನ ಅವನ ಅನುಪಸ್ಥಿತೀಲಿ ಬದ್ಲಾಯಿಸ್ತಾರೆ. ಆದ್ರೆ ನೀವೇ ರಾಜೀನಾಮೆ ಕೊಟ್ಟಿದ್ದು ಒಳ್ಳೆದು. ಸಾರ್”
“ನೋಡಿ ಯಾಹೂ, ಕಾಲಕ್ಕೆ ನಾವು ಅಂಟಿಕೊಂಡು ಕೂತ್ಗಬಾರ್ದು. ಕಾಲ ಬದಲಾವಣೆ ಬಯಸಿದಾಗ ನಾವು ಬದಲಾಗಬೇಕು”

“ನಿಜ ಸಾರ್, ಆ ಸಿದ್ದರಾಮಯ್ಯನ್ನ ಹಿಡಕಂಡೋಗಿ ಕಾಂಗೈ ಸೇರಿಸಿದ್ರಿ. ನೀವು ಬಂದು ದಳದ ಅಧ್ಯಕ್ಷರಾದ್ರಿ. ಏನಾಶ್ಚರ್ಯ ಅಲವಾ”
‘‘ಅದಕ್ಕೆ ರಾಜಕಾರಣ ಅನ್ನದು”

“ಅಂದ್ರೆ ರಾಜಕಾರಣದಲ್ಲಿ ಏನಾದ್ರು ಆಗಬವುದ?”
“ನೀವೇ ನೋಡಿದ್ರಲ್ಲ, ನಿಮ್ಮಪ್ಪನಾಣೆ ಮುಖ್ಯಮಂತ್ರಿ ಆಗಲ್ಲ ಅಂತ ಬೆಳಿಗ್ಗೆ ಕುಮಾರಸ್ವಾಮಿಗೆ ಹೇಳಿದ ಸಿದ್ದರಾಮಯ್ಯ, ಮಧ್ಯಾಹ್ನ ಒಂದು ಗಂಟೆಗೆ ಬಂದು ನಿಮ್ಮಪ್ಪನಾಣೆ ನೀನೆ ಮುಖ್ಯಮಂತ್ರಿ ಆಗು ಬಾ ಅಂದಿರೋದು. ಇಂತದ್ದು ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ನಡೆದಿರಲಿಲ್ಲ”

“ಇದನ್ನ ಅವಮಾನಕರ ನಡವಳಿಕೆ ಅಂತೀರಾ”
“ಇಲ್ಲ ಹಾಗನ್ನಲ್ಲ. ಮತೀಯ ಶಕ್ತಿಗೆ ಅವಕಾಶ ಕೊಡಬಾರ್ದು ಅನ್ನೊ ತೀರ್ಮಾನಕ್ಕೆ ತಲೆಬಾಗಿದ್ದು ಅಂತ ಭಾವುಸ್ತೀನಿ. ಆದ್ರೆ ಅಹಂಕಾರದ ಮಾತು ಯಾರಿಗೂ ಒಳ್ಳೆದಲ್ಲ”

“ಸಿದ್ದರಾಮಯ್ಯನಿಗೆ ಅಹಂಕಾರ ಇದೆ ಅಂತೀರಾ?”
“ಅಹಂಕಾರದ ಮೂರ್ತಿರೂಪ ಆತ”

“ಅದು ಅಹಂಕಾರದ ತರದ ವ್ಯಕ್ತಿರೂಪವಂತಲ್ಲಾ”
“ಹಾಗೇನೂ ಇಲ್ಲ. ಉಪಕಾರ ಸ್ಮರಣೆ ಇಲ್ಲದ ಧಿಮಾಕಿನ ಮನ್ಸ ಆತ. ಮನುಷ್ಯನಿಗೆ ತಪ್ಪು ತಿದ್ದಿಕಳೊ ಒಳನೋಟ, ಅಹಂಕಾರಕ್ಕೆ ಅವಕಾಶ ಕೊಡದ ವ್ಯಕ್ತಿತ್ವ ಇರಬೇಕು”

“ನೀವು ಒಂದು ಕಾಲದ ಸಿದ್ದು ಅಭಿಮಾನಿ. ಅವರಿಗಾದ ಅವಮಾನಾನ ನೀವು ಸಹಿಸುತಿರಲಿಲ್ಲ. ಸಿದ್ದುನ ಯಾರಾದ್ರು ಟೀಕೆ ಮಾಡಿದ್ರೆ ನೀವು ಪ್ರತಿಕ್ರಿಯಿಸ್ತಿದ್ರಿ. ಇದು ನಿಮ್ಮ ತಪ್ಪೊ ಸಿದ್ದರಾಮಯ್ಯರ್ ತಪ್ಪೊ ಹೇಳಿ”
“ನನ್ನದೇ ತಪ್ಪು”

“ಈ ತಪ್ಪಿನಲ್ಲಿ ಮತೀಯ ಅಂಶ ಇದೆ ಅಲ್ವ”
“ಇರಬವುದು”

“ಇರಬವುದೇನು, ಇದೆ ಸಾರ್. ನಮ್ಮ ಜನಾಂಗದ ಲೀಡ್ರು, ಅವನನ್ನ ಯಾರೂ ಟೀಕೆ ಮಾಡಬಾರ್ದು ಬೈಯ್ಯಬಾರ್ದು ಅಂತ ಭಾವಿಸಿದ್ದ ಮನಸ್ಸಿನ ಕಣ್ಣು ತೆರಿಸಿದಾನಲ್ಲ ಸಿದ್ದರಾಮಯ್ಯ”
“ಇರಬವುದು”

“ಅವುರಂಗೆ ಮಾಡಿದ್ರಿಂದ ನೀವು ದಳಕ್ಕೆ ಬಂದು ಲೀಡರಾದ್ರಿ, ಶಾಸಕರಾದ್ರಿ, ಅಧ್ಯಕ್ಷರಾದ್ರಿ”
“ನಿಜ ನನ್ನ ರಾಜಕೀಯದ ಅಂತ್ಯ, ನಿರಾಶೆಗೊಳ್ಳೊತರ ಇಲ್ಲ. ಮಾಜೀ ಪ್ರಧಾನಿಯ ಪಾರ್ಟಿಗೆ ಅಧ್ಯಕ್ಷನಾದದ್ದು ಸಾಮಾನ್ಯ ಸಂಗತಿಯಲ್ಲ”

“ಈಗಲಾದ್ರು ದೇವೇಗೌಡ್ರಿಗೆ ಕುರುಬರನ್ನ ಕಂಡ್ರೆ ಅವ್ಯಕ್ತ ಅಕ್ಕರೆ ಇದೆ ಅನ್ನದನ್ನ ಒಪ್ಪಿಗತಿರಾ”
“ನೋಡಿ ಯಾಹು, ದೇವೇಗೌಡ್ರಿಗೆ ಯಾವ ಜನಾಂಗ ಕಂಡ್ರೂ ದ್ವೇಷ ಇಲ್ಲ. ರಾಜಕಾರಣದ ಕಾರಣಕ್ಕೆ ಅಂತ ಆಪಾದನೆಗಳಿಗೆ ಗುರಿಯಾಗ್ತಾರೆ”

“ಹೌದ ಸಾರ್”
“ನೋಡಿ, ಅವುರು ಬ್ರಾಹ್ಮಣ ವಿರೋಧಿ ಅಂತಾರೆ, ಅದೂ ಕೂಡ ಸುಳ್ಳು. ಲಿಂಗಾಯತರ ಬೊಮ್ಮಾಯಿ ಅಂದ್ರೆ ಅವರಿಗೆ ಪಂಚಪ್ರಾಣ. ದಲಿತರ ಡಾ.ತಿಪ್ಪೇಸ್ವಾಮಿನ ಪಾರ್ಟಿ ಪ್ರೆಸಿಡೆಂಟ್ ಮಾಡಿದ್ರು. ಲಿಂಗಾಯಿತರ ತಿಪ್ಪಣ್ಣನ್ನ ಅಧ್ಯಕ್ಷನ್ನ ಮಾಡಿದ್ರು. ಆ ನಂತರ ಕುರುಬರ ಸಿದ್ದರಾಮಯ್ಯನ್ನ ಅಧ್ಯಕ್ಷನನ್ನಾಗಿ ಮಾಡಿ ಫೈನಾನ್ಸ್ ಮಿನಿಷ್ಟ್ರು ಮಾಡಿದ್ರು. ಈಗ ನನ್ನ ಮಾಡಿದಾರೆ”

“ಅದೇ ಸಾರ್ ನಾನೇಳಿದ್ದೂ, ಕುರುಬರನ್ನ ಮುಂದೆ ತಂದಂಗೆ ಒಕ್ಕಲಿಗರನ್ನ ತರಲಿಲ್ಲ. ಒಕ್ಕಲಿಗರನ್ನೆಲ್ಲಾ ಮುಗಿಸಿ ಅಲ್ಲಿಗೆ ತಮ್ಮ ಕುಟುಂಬವನ್ನ ನಾಟಿ ಮಾಡ್ತಾ ಬಂದ್ರು. ಇದನ್ನ ಒಪ್ಪಿಗಳ್ತಿರಾ”
“ಒಕ್ಕಲಿಗ ನಾಯಕರನ್ನ ತುಳುದ್ರು ಪರ್ಯಾಯವಾಗಿ ಒಕ್ಕಲಿಗ ಲೀಡರನ್ನ ಬೆಳಸಿದಾರೆ”

“ಅದೆಲ್ಲಾ ಅಂಗಿರ್ಲಿ. ಲೋಕಸಭಾ ಚುನಾವಣೇಲಿ ಜನ ಸಮ್ಮಿಶ್ರ ಸರ್ಕಾರದ ವಿರುದ್ಧ ಓಟು ಕೊಟ್ಟಿರೋದನ್ನ ಒಪ್ಪಿಗಳ್ತೀರಾ”

“ಮೋದಿ ಅಲೆ”
“ಮೋದಿದೂ ಇಲ್ಲ ಯಂತದೂ ಇಲ್ಲ. ಒಂದೊರ್ಸದಿಂದ ದಳದೋರು ಕಾಂಗ್ರೆಸ್‍ನೋರು ಆಡ್ತಾಯಿರೊ ಜಗಳ ನಿಲ್ಸಕ್ಕೆ ಸೋಲ್ಸಿದ್ರು”

“ಥೂತ್ತೇರಿ”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...