Homeಮುಖಪುಟ‘ವ್ಯಕ್ತಿ ಘನತೆ ಎತ್ತಿ ಹಿಡಿಯುತ್ತೇವೆ’: ತುಮಕೂರು ಮಹೀಂದ್ರಾ ಶೋರೂಂ ಘಟನೆ ಬಗ್ಗೆ ಆನಂದ್‌ ಮಹೀಂದ್ರ

‘ವ್ಯಕ್ತಿ ಘನತೆ ಎತ್ತಿ ಹಿಡಿಯುತ್ತೇವೆ’: ತುಮಕೂರು ಮಹೀಂದ್ರಾ ಶೋರೂಂ ಘಟನೆ ಬಗ್ಗೆ ಆನಂದ್‌ ಮಹೀಂದ್ರ

- Advertisement -
- Advertisement -

ರಾಜ್ಯದ ತುಮಕೂರಿನ ಮಹೀಂದ್ರಾ ಕಾರು ಶೋರೂಂನಲ್ಲಿ ಮಾರಾಟ ಸಿಬ್ಬಂದಿಯೊಬ್ಬ ರೈತರೊಬ್ಬರನ್ನು ಅವಮಾನಿಸಿದ ಘಟನೆಯ ಹಿನ್ನಲೆಯಲ್ಲಿ, ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಅವರು ಮಂಗಳವಾರ ತಮ್ಮ ಮೊದಲ ಸಾರ್ವಜನಿಕ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯಲ್ಲಿ ಅವರು ವ್ಯಕ್ತಿಯ ಘನತೆಯನ್ನು ಎತ್ತಿಹಿಡಿಯುವ ಮಹತ್ವವನ್ನು ಒತ್ತಿಹೇಳಿದ್ದಾರೆ.

“ಮಹೀಂದ್ರಾದ ಮುಖ್ಯ ಉದ್ದೇಶ, ನಮ್ಮ ಸಮುದಾಯಗಳು ಮತ್ತು ಎಲ್ಲಾ ಪಾಲುದಾರರ ಬೆಳವಣಿಗೆಗೆ ಅನುವು ಮಾಡಿಕೊಡುವುದಾಗಿದೆ. ವ್ಯಕ್ತಿಯ ಘನತೆಯನ್ನು ಎತ್ತಿಹಿಡಿಯುವುದು ಒಂದು ಪ್ರಮುಖ ಮೌಲ್ಯವಾಗಿದೆ. ಈ ತತ್ತ್ವದ ಅಸಂಗತತೆಯನ್ನು ಬಹಳ ತುರ್ತಾಗಿ ಪರಿಹರಿಸಲಾಗುವುದು” ಎಂದು ಮಹೀಂದ್ರಾ ಅವರು ತಮ್ಮ ಕಂಪೆನಿಯ ಸಿಇಒ ವೀಜಯ್ ನಕ್ರಾ ಅವರ ಟ್ವೀಟ್ ಅನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:ಲಾಕ್‌ಡೌನ್‌ ಘೋಷಿಸಬೇಡಿ, ಅದರಿಂದ ಬಡವರಿಗೆ ಸಂಕಷ್ಟ- ಆನಂದ್ ಮಹೀಂದ್ರಾ

ತುಮಕೂರಿನಲ್ಲಿ ನಡೆದ ಘಟನೆಯ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ಭರವಸೆ ನೀಡಿರುವ ವೀಜಯ್‌ ನಕ್ರಾ ಅವರು, ಮುಂಚೂಣಿ ಸಿಬ್ಬಂದಿಗೆ ಸಲಹೆ ಮತ್ತು ತರಬೇತಿ ಕೂಡಾ ನೀಡಲಿದ್ದೇವೆ ಎಂದು ಹೇಳಿದ್ದಾರೆ.

ವಾಹನ ಖರೀದಿಸಲು ಶೋರೂಮ್‌ಗೆ ತೆರಳಿದ್ದ ತುಮಕೂರಿನ ರೈತರೊಬ್ಬರ ವೇಷ ಭೂಷಣ ನೋಡಿ ಅಲ್ಲಿನ ಸಿಬ್ಬಂದಿ, ನಿನಗೆ ತನಗೆ ಕಾರು ಖರೀದಿಸಲು ಸಾಧ್ಯವಿಲ್ಲ ಎಂದು ವ್ಯಂಗ್ಯವಾಡಿದ್ದನು. ಸಿಬ್ಬಂದಿಯ ಸವಾಲನ್ನು ಸ್ವೀಕರಿಸಿದ್ದ ರೈತ ಕೆಲವೇ ಗಂಟೆಗಳಲ್ಲಿ ದುಡ್ಡಿನೊಂದಿಗೆ ಬಂದು ವಾಹನವನ್ನು ಕೊಡುವಂತೆ ಕೇಳಿಕೊಂಡಿದ್ದಾರೆ. ಘಟನೆಯು ದೇಶದಾದ್ಯಂತ ಸುದ್ದಿಯಾಗಿತ್ತು. ಘಟನೆಯ ವಿಡಿಯೊ ಕೂಡಾ ಟ್ವಿಟರ್‌ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದ್ದು, ಆನಂದ್‌ ಮಹೀಂದ್ರ ಅವರ ಗಮನಕ್ಕೆ ತರಲಾಗಿತ್ತು.

ಇದನ್ನೂ ಓದಿ:ಮತ್ತೇ ಏಷ್ಯಾದ ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ ರಿಲಯನ್ಸ್ ಅಧ್ಯಕ್ಷ ಮುಖೇಶ್‌ ಅಂಬಾನಿ

ತುಮಕೂರಿನ ರೈತ ಕೆಂಪೇಗೌಡ ಬೊಲೆರೋ ಪಿಕಪ್ ಖರೀದಿಸಲು ತೆರಳಿದ್ದ ವೇಳೆ, ಅವರೊಂದಿಗೆ ಸಿಬ್ಬಂದಿಯು ಅಸಭ್ಯವಾಗಿ ಮಾತನಾಡಿ ಅಲ್ಲಿಂದ ತೆರಳುವಂತೆ ಕೇಳಿಕೊಂಡಿದ್ದಾನೆ. “ಕಾರು 10 ಲಕ್ಷ ರೂ. ಮೌಲ್ಯದ್ದಾಗಿದ್ದು, ನಿಮ್ಮ ಜೇಬಿನಲ್ಲಿ 10 ರೂ. ಕೂಡ ಇರಲು ಸಾಧ್ಯವಿಲ್ಲ” ಎಂದು ಸಿಬ್ಬಂದಿಯು ಹೇಳಿದ್ದಾಗಿ ಕೆಂಪೇಗೌಡ ಆರೋಪಿಸಿದ್ದಾರೆ. ಇದರಿಂದ ಕೋಪಗೊಂಡ ಕೆಂಪೇಗೌಡ, ಅರ್ಧ ಗಂಟೆಯೊಳಗೆ ಹಣವನ್ನು ತಂದುಕೊಡುತ್ತೇನೆ, ಇಂದೇ ಕಾರು ನೀಡುವ ವ್ಯವಸ್ಥೆ ಮಾಡುವಂತೆ ಹೇಳಿಕೊಂಡಿದ್ದಾರೆ.

ಸ್ವಲ್ಪ ಸಮಯದ ನಂತರ ರೈತ, ತಾನು ಹೇಳಿದಂತೆ ಸರಿಯಾದ ಸಮಯಕ್ಕೆ ದುಡ್ಡಿನೊಂದಿಗೆ ಆಗಮಿಸಿದ್ದಾರೆ. ಆದರೆ ಸಿಬ್ಬಂದಿಯು ಹೇಳಿದಂತೆ ಕಾರಿನ ಮಾರಾಟವನ್ನು ತ್ವರಿತವಾಗಿ ಮಾಡಲು ಸಾಧ್ಯವಾಗಿಲ್ಲ. ಕಾರು ಶೋರೂಂನಿಂದ ಹೊರ ಬರಬೇಕೆಂದರೆ ಕನಿಷ್ಠ ನಾಲ್ಕು ದಿನಗಳು ಕಾಯಬೇಕಾಗುತ್ತದೆ ಎಂದು ರೈತನೊಂದಿಗೆ ಹೇಳಿದ್ದಾರೆ. ಇದರಿಂದ ಕೋಪಗೊಂಡ ರೈತ ಕೆಂಪೇಗೌಡ ಮತ್ತು ಅವರ ಸ್ನೇಹಿತರು ಸಿಬ್ಬಂದಿಯೊಂದಿಗೆ ಕ್ಷಮೆಯಾಚಿಸಲು ಒತ್ತಾಯಿಸಿದ್ದಾರೆ.

ನಂತರ ಪೊಲೀಸರು ಮಧ್ಯಪ್ರವೇಶಿಸಿ ವಾಗ್ವಾದವನ್ನು ಕೊನೆಗೊಳಿಸಿದ್ದಾರೆ. ಕೊನೆಗೆ ಸೇಲ್ಸ್ ಎಕ್ಸಿಕ್ಯೂಟಿವ್ ಕೆಂಪೇಗೌಡರ ಕ್ಷಮೆ ಯಾಚಿಸಿದ್ದಾರೆ. ಆದರೆ ರೈತನೂ ನಿಮ್ಮ ಶೋರೂಮ್‌ನಿಂದ ಕಾರು ಖರೀದಿಸಲು ನನಗೆ ಇಷ್ಟವಿಲ್ಲ ಎಂದು ತನ್ನ 10 ಲಕ್ಷ ರೂ ನೊಂದಿಗೆ ವಾಪಾಸು ತೆರಳಿದ್ದಾರೆ.

ಇದನ್ನೂ ಓದಿ:ಅಂಬಾನಿಗಾಗಿ NIA ತನಿಖೆ – ಪುಲ್ವಾಮಾ ದಾಳಿ ಹೇಗೆಂಬುದು ಪತ್ತೆಯಾಗಲಿಲ್ಲ?: ಶಿವಸೇನೆ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...