Homeಮುಖಪುಟ‘ಅಕ್ಕಿ ಕದ್ದನೆಂದು ಆದಿವಾಸಿ ಯುವಕನನ್ನು ಕೊಂದು 4 ವರ್ಷವಾಯಿತು, ವಿಚಾರಣೆ ಮಾತ್ರ ಆರಂಭವಾಗಲಿಲ್ಲ’

‘ಅಕ್ಕಿ ಕದ್ದನೆಂದು ಆದಿವಾಸಿ ಯುವಕನನ್ನು ಕೊಂದು 4 ವರ್ಷವಾಯಿತು, ವಿಚಾರಣೆ ಮಾತ್ರ ಆರಂಭವಾಗಲಿಲ್ಲ’

ಕೇರಳದಲ್ಲಿ ನಡೆದ ಈ ಅಮಾನವೀಯ ಹತ್ಯೆಗೆ ಸಂಬಂಧಿಸಿದಂತೆ 16 ಜನರ ಮೇಲೆ ಚಾರ್ಜ್ ಸಲ್ಲಿಕೆಯಾಗಿದೆ. ಹೆಚ್ಚಿನ ಆರೋಪಿಗಳು ಆಡಳಿತಾರೂಢ ಸಿಪಿಐ(ಎಂ)ನ ಸ್ಥಳೀಯ ಮುಖಂಡರಾಗಿದ್ದಾರೆ!

- Advertisement -
- Advertisement -

“ನನ್ನ ಮಗ ಗುಂಪು ಹತ್ಯೆಗೀಡಾಗಿ ನಾಲ್ಕು ವರ್ಷಗಳಾಗಿವೆ. ಆದರೆ ವಿಚಾರಣೆ ಏಕೆ ಆರಂಭವಾಗಿಲ್ಲ ಎಂಬುದು ನಮಗೆ ತಿಳಿದಿಲ್ಲ. ನಮಗೆ ನ್ಯಾಯ ಬೇಕು” ಎಂದು ಪಾಲಕ್ಕಾಡ್ ಜಿಲ್ಲೆಯ ಅಟ್ಟಪ್ಪಾಡಿಯಲ್ಲಿ 2018ರ ಫೆಬ್ರವರಿ 22ರಂದು ಕಿರಾಣಿ ಅಂಗಡಿಯಿಂದ ಅಕ್ಕಿ ಕದ್ದ ಆರೋಪದಲ್ಲಿ ಹತ್ಯೆಗೀಡಾದ 30 ವರ್ಷದ ಆದಿವಾಸಿ ಯುವಕ ಎ.ಮಧು ಅವರ ತಾಯಿ ಮಲ್ಲಿ ಹತಾಶೆಯಿಂದ ಮಾತನಾಡುತ್ತಾರೆ.

ವಿಶೇಷ ತನಿಖಾ ತಂಡವು ಮೇ 2018ರಲ್ಲಿ 3,000 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿತ್ತು. 16 ವ್ಯಕ್ತಿಗಳನ್ನು ಆರೋಪಿಗಳೆಂದು ಗುರುತಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯಿದೆ, 1989ರ ಅಡಿಯಲ್ಲಿ ಕೊಲೆ ಆರೋಪವನ್ನು ಮಾಡಲಾಗಿದೆ. ಈ ವರ್ಷದ ಫೆಬ್ರವರಿ 22 ಬಂದರೆ ಮಧು ಅವರನ್ನು ಬರ್ಬರವಾಗಿ ಕೊಂದು ನಾಲ್ಕು ವರ್ಷವಾಗುತ್ತದೆ. ಆದರೆ ಇನ್ನೂ ಏಕೆ ವಿಚಾರಣೆ ಆರಂಭವಾಗಿಲ್ಲ ಎಂಬ ಬಗ್ಗೆ ಮಧು ಅವರ ತಾಯಿ ಗೊಂದಲಕ್ಕೊಳಗಾಗಿದ್ದಾರೆ.

“ಅವರು (ಪೊಲೀಸರು) ವಿಭಿನ್ನ ಕಾರಣಗಳನ್ನು ನೀಡುತ್ತಾರೆ. ಅದು ನನಗೆ ಅರ್ಥವಾಗುತ್ತಿಲ್ಲ. ನಮ್ಮಲ್ಲಿ ಹಣ ಮತ್ತು ಪ್ರಭಾವ ಇಲ್ಲ. ಎಲ್ಲಾ ಆರೋಪಿಗಳು ಇಷ್ಟು ವರ್ಷಗಳ ಕಾಲ ನೆಮ್ಮದಿಯಾಗಿ ಅಡ್ಡಾಡುತ್ತಿದ್ದಾರೆ” ಎಂದು ಮಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಹಂತದಲ್ಲಿ ನ್ಯಾಯಕ್ಕಾಗಿ ಯಾರನ್ನು ಭೇಟಿ ಮಾಡಬೇಕು ಎಂಬುದು ಸಂತ್ರಸ್ತ ಕುಟುಂಬಕ್ಕೆ ತಿಳಿಯದಾಗಿದೆ. ಮನ್ನಾರ್ಕ್ಕಾಡ್ ಎಸ್‌ಸಿ/ಎಸ್‌ಟಿ ವಿಶೇಷ ನ್ಯಾಯಾಲಯದಲ್ಲಿ ಮಂಗಳವಾರ (ಜನವರಿ 25, 2022) ಪ್ರಕರಣದ ವಿಚಾರಣೆ ಇತ್ತು. ಆದರೆ ಮಧು ಅವರನ್ನು ಪ್ರತಿನಿಧಿಸುವ ಯಾವುದೇ ವಕೀಲರಿರಲಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಒಂದು ವಾರದ ಹಿಂದೆಯೇ ಹುದ್ದೆಗೆ ರಾಜೀನಾಮೆ ನೀಡಿದ್ದರು.

ವಿಚಾರಣೆಯ ಹಾದಿಯು ಆರಂಭದಿಂದಲೂ ಹಿನ್ನಡೆಯನ್ನ ಅನುಭವಿಸಿದೆ. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕದಲ್ಲಿ ಸರ್ಕಾರದ ವಿಳಂಬ ಮಾಡಿತು. ವಕೀಲರು ಕೂಡ ನಿರ್ಲಿಪ್ತ ಧೋರಣೆ ತೋರಿದರು. ಪ್ರಕರಣವು ಇಂದು ರಾಜಕೀಯ ಪ್ರಭಾವದಿಂದ ತೆವಳುತ್ತಿದೆ. ಪ್ರಕರಣದ ಹೆಚ್ಚಿನ ಆರೋಪಿಗಳು ಆಡಳಿತಾರೂಢ ಸಿಪಿಐ(ಎಂ)ನ ಸ್ಥಳೀಯ ಮುಖಂಡರಾಗಿದ್ದಾರೆ.

ಆರೋಪಿಗಳಲ್ಲಿ ಒಬ್ಬರು ಸೆಪ್ಟೆಂಬರ್ 2021ರಲ್ಲಿ ಸಿಪಿಐ(ಎಂ) ಶಾಖೆಯ ಕಾರ್ಯದರ್ಶಿಯಾಗಿ ಆಯ್ಕೆಯಾದರು. ಆದರೆ ಹೆಚ್ಚಿನ ವಿರೋಧಗಳು ಬಂದಿದ್ದರಿಂದ ನಿರ್ಧಾರವನ್ನು ಹಿಂತೆಗೆದುಕೊಳ್ಳಲಾಯಿತು. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಇತರ ಸಿಪಿಐ(ಎಂ) ನಾಯಕರು ಘಟನೆಯನ್ನು ಖಂಡಿಸಿದರೂ, ಹತ್ಯೆಯಾದ ಆದಿವಾಸಿಗೆ ನ್ಯಾಯ ದೊರಕಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಹಲವರು ಟೀಕಿಸಿದ್ದಾರೆ.

ಮಧು ಅವರು ಅತ್ತಪ್ಪಾಡಿ ಸಮೀಪದ ಅರಣ್ಯದ ಬಫರ್ ಝೋನ್ ಪ್ರದೇಶದಲ್ಲಿ ವಾಸವಿದ್ದರು. ಗುಂಪೊಂದು ಮಧು ಅವರನ್ನು ಸೆರೆ ಹಿಡಿದಿತ್ತು. ಕಿರಾಣಿ ಅಂಗಡಿಯಿಂದ ಅಕ್ಕಿ ಕದ್ದಿದ್ದಾನೆ ಎಂದು ಆರೋಪಿಸಿ ಮಧು ಅವರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿತು. ನಂತರ ಆ ಗುಂಪು ಮಧು ಅವರನ್ನು ಪಾಲಕ್ಕಾಡ್‌ನ ಅಗಲಿ ಪೊಲೀಸರಿಗೆ ಒಪ್ಪಿಸಿತ್ತು. ಆದರೆ, ಪೊಲೀಸ್ ಠಾಣೆಗೆ ತೆರಳುವ ಮಾರ್ಗಮಧ್ಯೆ ಮಧು ಅವರನ್ನು ಕೊಟ್ಟತ್ತರ ಸರಕಾರಿ ಗಿರಿಜನ ವಿಶೇಷ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಪೊಲೀಸ್ ಜೀಪಿನಲ್ಲೇ ಕುಸಿದು ಬಿದ್ದು ಮಧು ಮೃತಪಟ್ಟರು. ಕೇರಳ ಅಷ್ಟೇ ಅಲ್ಲದೇ ಇಡೀ ಭಾರತವು ಈ ಕ್ರೌರ್ಯವನ್ನು ಖಂಡಿಸಿತು. ಮಧು ಅವರ ಸಾವಿಗೆ ನ್ಯಾಯ ದೊರಕಿಸಬೇಕೆಂದು ಆಗ್ರಹಿಸಿತು.

ಸುದೀರ್ಘ ವಿಚಾರಣೆ

ಚಾರ್ಜ್ ಶೀಟ್ ಸಲ್ಲಿಕೆಯಾದ ನಂತರ ಮಧು ಪ್ರಕರಣದ ವಿಚಾರಣೆ ನಡೆಸುತ್ತಿರುವ ಪಾಲಕ್ಕಾಡ್‌ನ ಮನ್ನಾರ್ಕ್ಕಾಡ್  ಎಸ್‌ಸಿ/ಎಸ್‌‌ಟಿ ವಿಶೇಷ ನ್ಯಾಯಾಲಯದಲ್ಲಿ ಖಾಯಂ ನ್ಯಾಯಾಧೀಶರಿಲ್ಲದ ಕಾರಣ ವಿಚಾರಣೆ ನಡೆಯಲಿಲ್ಲ. ಅಲ್ಲದೆ ಸಿಪಿಐ(ಎಂ) ನೇತೃತ್ವದ ಕೇರಳ ಸರ್ಕಾರವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅನ್ನು ನೇಮಿಸಲು ಬಹಳ ಸಮಯ ತೆಗೆದುಕೊಂಡಿತು.

ಆದಿವಾಸಿ ವ್ಯಕ್ತಿಯ ಹತ್ಯೆಯ ನಂತರ ರಚಿಸಲಾದ ‘ಜಸ್ಟೀಸ್ ಫಾರ್ ಮಧು’ ಕ್ರಿಯಾ ಮಂಡಳಿಯು ಸರ್ಕಾರದಿಂದ ನೇಮಿಸಲ್ಪಟ್ಟ ಪಬ್ಲಿಕ್ ಪ್ರಾಸಿಕ್ಯೂಟರ್ ವಿರುದ್ಧ ವಾಗ್ದಾಳಿ ನಡೆಸಿತು. ಸರ್ಕಾರಿ ವಕೀಲರು ರಾಜಕೀಯ ಸಂಪರ್ಕಗಳನ್ನು ಹೊಂದಿದ್ದಾರೆಂದು ಕ್ರಿಯಾ ಸಮಿತಿ ಆರೋಪಿಸಿತು. ನಂತರ ಅವರು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕಕ್ಕೆ ಕೋರಿದರು.

ಕೇರಳ ಸರ್ಕಾರವು ವಕೀಲ ಪಿ.ಗೋಪಿನಾಥ್ ಅವರನ್ನು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ನೇಮಿಸಿತು. “ನವೆಂಬರ್ 2018ರಲ್ಲಿ, ಅತ್ತಪಾಡಿಯಲ್ಲಿ ತಾತ್ಕಾಲಿಕ ವಸತಿ ಮತ್ತು ಕಚೇರಿಗಾಗಿ ಗೋಪಿನಾಥ್ ಅವರು ಬೇಡಿಕೆ ಇಟ್ಟರು. ಇದನ್ನು ಒಪ್ಪದ ಸರ್ಕಾರ ನೇಮಕಾತಿ ಆದೇಶವನ್ನು ರದ್ದುಗೊಳಿಸಿತು” ಎಂದು ಕ್ರಿಯಾ ಮಂಡಳಿಯ ಪ್ರಸ್ತುತ ಅಧ್ಯಕ್ಷ ಸುರೇಶ್ ಹೇಳಿದ್ದಾರೆ.

ಶುಲ್ಕವೂ ವಿವಾದದ ವಿಷಯವಾಯಿತು. ಎಲ್‌ಡಿಎಫ್ ಸರ್ಕಾರವು ಪಿ.ಗೋಪಿನಾಥ್ ಅವರ ನೇಮಕ ಮಾಡುವ ವೆಚ್ಚವನ್ನು ಭರಿಸಲು ಸಿದ್ಧವಿಲ್ಲ ಎಂದು ವರದಿಯಾಗಿದೆ. ಆದರೆ ಆನ್‌ಮನೋರಮಾ ವೆಬ್‌ಸೈಟ್‌ ಪ್ರಕಾರ, ಕೇರಳ ಹೈಕೋರ್ಟ್‌ನಲ್ಲಿ ಕನಿಷ್ಠ ಐದು ಪ್ರಕರಣಗಳಲ್ಲಿ ಹಿರಿಯ ವಕೀಲರ ಶುಲ್ಕಕ್ಕಾಗಿ ಸರ್ಕಾರವು 2.59 ಕೋಟಿ ರೂಪಾಯಿಗಿಂತ ಹೆಚ್ಚು ಖರ್ಚು ಮಾಡಿದೆ ಎಂದು ಆರ್‌ಟಿಐ ಬಹಿರಂಗಪಡಿಸಿದೆ.

ಕೇರಳದ ಎಸ್‌ಸಿ/ಎಸ್‌ಟಿ ಅಭಿವೃದ್ಧಿ ಸಚಿವರಾಗಿದ್ದ ಎ.ಕೆ.ಬಾಲನ್ ಅವರು, “ಒಂದೇ ಪ್ರಕರಣಕ್ಕೆ ಎಸ್‌ಪಿಪಿಯನ್ನು ನೇಮಿಸುವ ಅಗತ್ಯವಿಲ್ಲ ಎಂದು ಸರ್ಕಾರಕ್ಕೆ ಅನಿಸಿದ್ದರಿಂದ ನೇಮಕಾತಿ ವಿಳಂಬವಾಗಿದೆ” ಎಂದಿರುವುದು ವರದಿಯಾಗಿದೆ.

ಕ್ರಿಯಾ ಮಂಡಳಿ ಮತ್ತು ಕುಟುಂಬವು ಪ್ರಕರಣವನ್ನು ನ್ಯಾಯಾಲಯದ ಪಬ್ಲಿಕ್ ಪ್ರಾಸಿಕ್ಯೂಟರ್‌ಗೆ ಹಸ್ತಾಂತರಿಸಲು ಸಿದ್ಧವಾಗಿಲ್ಲ. ಏಕೆಂದರೆ ಈ ಹುದ್ದೆಯು ರಾಜಕೀಯ ಪ್ರಭಾವದಿಂದ ಕೂಡಿದೆ. ಹೆಚ್ಚಿನ ಆರೋಪಿಗಳು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಅಥವಾ ಸಿಪಿಐ(ಎಂ) ಭಾಗವಾಗಿದ್ದಾರೆ. ಹೀಗೆ ಒಂದಲ್ಲ ಒಂದು ಕಾರಣಕ್ಕೆ ಮಧು ಹತ್ಯೆ ಪ್ರಕರಣ ವಿಳಂಬವಾಗುತ್ತಲೇ ಸಾಗಿದೆ.

ವರದಿ ಕೃಪೆ: ನ್ಯೂಸ್‌ ಮಿನಿಟ್‌


ಇದನ್ನೂ ಓದಿರಿ: ಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆ: ತಾವರೆಕೆರೆ ವಿಇಎಸ್‌ ಶಾಲೆಯ ವಿರುದ್ಧ ಶಿಕ್ಷಣ ಆಯುಕ್ತರಿಗೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...