Homeಮುಖಪುಟಸಿಪಿಐ(ಎಂ) ನಾಯಕ, ಪ.ಬಂ. ಮಾಜಿ ಸಿಎಂ ಬುದ್ಧದೇಬ್‌‌ ಭಟ್ಟಾಚಾರ್ಯ ‘ಪದ್ಮಭೂಷಣ’ ನಿರಾಕರಣೆ

ಸಿಪಿಐ(ಎಂ) ನಾಯಕ, ಪ.ಬಂ. ಮಾಜಿ ಸಿಎಂ ಬುದ್ಧದೇಬ್‌‌ ಭಟ್ಟಾಚಾರ್ಯ ‘ಪದ್ಮಭೂಷಣ’ ನಿರಾಕರಣೆ

ಬುದ್ಧದೇಬ್‌ ಭಟ್ಟಾಚಾರ್ಯ ಅವರು ಪದ್ಮಭೂಷಣ ಪ್ರಶಸ್ತಿಯನ್ನು ತಿರಸ್ಕರಿಸಿದಂತೆಯೇ ಬಂಗಾಳದ ಗಾಯಕಿ ಸಂಧ್ಯಾ ಮುಖರ್ಜಿ ಅವರು ಪದ್ಮಶ್ರೀ ಪ್ರಶಸ್ತಿ ತಿರಸ್ಕರಿಸಿದ್ದಾರೆ.

- Advertisement -
- Advertisement -

ನವದೆಹಲಿ: ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದ) ಹಿರಿಯ ನಾಯಕ ಮತ್ತು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇಬ್‌ ಭಟ್ಟಾಚಾರ್ಯ ಅವರು ಪದ್ಮಭೂಷಣ ಪ್ರಶಸ್ತಿಯನ್ನು ತಿರಸ್ಕರಿಸಿದ್ದಾರೆ. ಇದರ ಜೊತೆಗೆ ಬಂಗಾಳದ ಗಾಯಕಿ ಸಂಧ್ಯಾ ಮುಖರ್ಜಿ ಅವರೂ ಪದ್ಮಶ್ರೀ ಪ್ರಶಸ್ತಿ ನಿರಾಕರಿಸಿದ್ದಾರೆ.

“ಈ ಪ್ರಶಸ್ತಿಯ ಬಗ್ಗೆ ನನಗೆ ಏನೂ ತಿಳಿದಿಲ್ಲ. ಅದರ ಬಗ್ಗೆ ಯಾರೂ ನನಗೆ ಏನೂ ಹೇಳಿಲ್ಲ. ಅವರು ನನಗೆ ಪದ್ಮಭೂಷಣ ನೀಡಲು ನಿರ್ಧರಿಸಿದ್ದರೆ, ನಾನು ಅದನ್ನು ಸ್ವೀಕರಿಸಲು ನಿರಾಕರಿಸುತ್ತೇನೆ” ಎಂದು ಭಟ್ಟಾಚಾರ್ಯ ಅವರು ಹೇಳಿಕೆ ನೀಡಿದ್ದಾರೆ.

ಅನಾರೋಗ್ಯದ ಕಾರಣ ಸಕ್ರಿಯ ರಾಜಕೀಯದಿಂದ ಹಿಂದೆ ಸರಿಯುವವರೆಗೂ ಮತ್ತು ನಂತರವೂ ಭಟ್ಟಾಚಾರ್ಯ ಅವರು ನರೇಂದ್ರ ಮೋದಿ ಸರ್ಕಾರದ ತೀವ್ರ ಟೀಕಾಕಾರರಾಗಿದ್ದರು.

ಅಧಿಕಾರಿಯೊಬ್ಬರು ಭಟ್ಟಾಚಾರ್ಯ ಅವರ ನಿವಾಸಕ್ಕೆ ಕರೆ ಮಾಡಿ ಸರ್ಕಾರದ ನಿರ್ಧಾರದ ಬಗ್ಗೆ ಅವರ ಪತ್ನಿಗೆ ತಿಳಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿಕೊಂಡಿದೆ. ಸಚಿವಾಲಯದೊಳಗಿನ ಹೆಸರು ಹೇಳಲಿಚ್ಛಿಸದ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆಗಳಾದ ಎಎನ್‌ಐ ಮತ್ತು ಪಿಟಿಐ ವರದಿ ಮಾಡಿದ್ದು, “ಭಟ್ಟಾಚಾರ್ಯ ಅವರ ಕುಟುಂಬವು ಪ್ರಶಸ್ತಿಗೆ ವಿರೋಧ ವ್ಯಕ್ತಪಡಿಸಿಲ್ಲ” ಎಂದಿವೆ.

ಪದ್ಮ ಪ್ರಶಸ್ತಿಗೆ ಹೆಸರನ್ನು ಘೋಷಿಸುವ ಮೊದಲು ಕೇಂದ್ರ ಸರ್ಕಾರವು ಪ್ರಶಸ್ತಿ ಪುರಸ್ಕೃತರ ಒಪ್ಪಿಗೆಯನ್ನು ಪಡೆಯುವುದು ರೂಢಿಯಾಗಿದೆ ಎಂದು ಪಿಟಿಐ ವರದಿ ಮಾಡಿದೆ.

77 ವರ್ಷದ ಕಮ್ಯುನಿಸ್ಟ್ ನಾಯಕ 2000-2011ರ ಅವಧಿಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿದ್ದರು. ಪದ್ಮಭೂಷಣ ಪ್ರಶಸ್ತಿಯನ್ನು ಅವರು ನಿರಾಕರಿಸಿರುವ ಕುರಿತು ಸಿಪಿಐ(ಎಂ) ಟ್ವಿಟರ್ ಹ್ಯಾಡಲ್‌ ತಿಳಿಸಿದೆ.

“ಪದ್ಮಭೂಷಣ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದ ಕಾಮ್ರೇಡ್ ಬುದ್ಧದೇಬ್ ಭಟ್ಟಾಚಾರ್ಯ ಅವರು ಅದನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ. ಪ್ರಭುತ್ವದ ಅಂತಹ ಪ್ರಶಸ್ತಿಗಳನ್ನು ನಿರಾಕರಿಸುವಲ್ಲಿ ಸಿಪಿಐ(ಎಂ) ನೀತಿಯು ಸ್ಥಿರವಾಗಿದೆ. ನಮ್ಮ ಕೆಲಸ ಪ್ರಶಸ್ತಿಗಾಗಿ ಅಲ್ಲ ಜನರಿಗಾಗಿ. ಈ ಹಿಂದೆ ಪ್ರಶಸ್ತಿಯನ್ನು ನೀಡಲಾಗಿದ್ದ ಕಾಮ್ರೇಡ್ ಇಎಂಎಸ್ (ನಂಬೂದರಿಪಾಡ್) ಅದನ್ನು ನಿರಾಕರಿಸಿದ್ದರು” ಎಂದು ಸಿಪಿಐ(ಎಂ) ಟ್ವೀಟ್ ಮಾಡಿದೆ.

“ಕಮ್ಯುನಿಸ್ಟರು ಪ್ರಭುತ್ವದ ಪ್ರಶಸ್ತಿಗಳಿಗೆ ಹಾತೊರೆಯುವುದಿಲ್ಲ. ಈ ಹಿಂದೆ ಜ್ಯೋತಿ ಬಸು ಅವರು 2008ರಲ್ಲಿ ಭಾರತ ರತ್ನ ಪ್ರಶಸ್ತಿಯನ್ನು ನಿರಾಕರಿಸಿದ್ದರು. ಹಾಗಾಗಿ ಇದನ್ನೂ ನಿರೀಕ್ಷಿಸಲಾಗಿತ್ತು” ಎಂದು ಸಿಪಿಐ(ಎಂ) ಕೇಂದ್ರ ಸಮಿತಿ ಸದಸ್ಯ ಸುಜನ್ ಚಕ್ರವರ್ತಿ ಹೇಳಿದ್ದಾರೆ.

‘ಅತ್ಯಂತ ಅವಮಾನಕರ’

ಸಂಧ್ಯಾ ಮುಖರ್ಜಿ

ಜನಪ್ರಿಯ ಹಿನ್ನೆಲೆ ಗಾಯಕಿ ಸಂಧ್ಯಾ ಮುಖರ್ಜಿ ಅವರು ಪ್ರಶಸ್ತಿ ನಿರಾಕರಣೆಯನ್ನು ಮಾಡಿರುವ ಕುರಿತು ಅವರ ಪುತ್ರಿ ಸೌಮಿ ಸೇನ್‌ಗುಪ್ತಾ ಪ್ರತಿಕ್ರಿಯೆ ನೀಡಿದ್ದಾರೆ. ಇಂಡಿಯಾ ಟುಡೇ ಜೊತೆ ಮಾತನಾಡಿರುವ ಅವರು, “90ನೇ ವಯಸ್ಸಿನಲ್ಲಿ ಸಂಗೀತ ದಂತಕಥೆಗೆ ಪದ್ಮಶ್ರೀ ಪ್ರಶಸ್ತಿಯನ್ನು ನೀಡುವುದು ಅತ್ಯಂತ ಅವಮಾನಕರ” ಎಂದು ಸೌಮಿ ಸೇನ್‌ಗುಪ್ತಾ ಹೇಳಿದ್ದಾರೆ.

“ಪದ್ಮಶ್ರೀ ಪ್ರಶಸ್ತಿಯನ್ನು ತಿರಸ್ಕರಿಸುವ ಮುಖರ್ಜಿ ಅವರ ನಿರ್ಧಾರವು ರಾಜಕೀಯ ಪ್ರೇರಿತವಲ್ಲ” ಎಂದು ಅವರು ಸ್ಪಷ್ಟವಾಗಿ ಹೇಳಿದ್ದಾರೆ.

”ಇದರಲ್ಲಿ ಯಾವುದೇ ರಾಜಕೀಯ ಇಲ್ಲ. ಅವರು ಯಾವುದೇ ರಾಜಕೀಯವನ್ನು ಮೀರಿದವರು. ದಯವಿಟ್ಟು ಅದರಲ್ಲಿ ಯಾವುದೇ ರಾಜಕೀಯ ಕಾರಣಗಳನ್ನು ಹುಡುಕಲು ಪ್ರಯತ್ನಿಸಬೇಡಿ. ಅವರು ಅವಮಾನಿತರಾಗಿದ್ದಾರೆ ಅಷ್ಟೇ” ಎಂದು ಸೌಮಿ ಅವರು ತಿಳಿಸಿದ್ದಾರೆ.

ಸಂಧ್ಯಾ ಮುಖರ್ಜಿ ಅವರು ಪಶ್ಚಿಮ ಬಂಗಾಳ ಸರ್ಕಾರವು ನೀಡುವ ಅತ್ಯುನ್ನತ ನಾಗರಿಕ ಗೌರವವಾದ ಬಂಗಾ ಬಿಭೂಷಣವನ್ನು 2011ರಲ್ಲಿ ಪಡೆದಿದ್ದಾರೆ. ಹಾಲಿವುಡ್ ಕ್ಲಾಸಿಕ್ ‘ಸೌಂಡ್ ಆಫ್ ಮ್ಯೂಸಿಕ್’ನ ಬಂಗಾಳಿ ರಿಮೇಕ್ ಆದ ‘ಜಯ್ ಜಯಂತಿ’ಗಾಗಿ ಅವರು 1970ರಲ್ಲಿ ಅತ್ಯುತ್ತಮ ಮಹಿಳಾ ಹಿನ್ನೆಲೆ ಗಾಯಕಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಪಡೆದ್ದಾರೆ.


ಇದನ್ನೂ ಓದಿರಿ: ‘ಅಕ್ಕಿ ಕದ್ದನೆಂದು ಆದಿವಾಸಿ ಯುವಕನನ್ನು ಕೊಂದು 4 ವರ್ಷವಾಯಿತು, ವಿಚಾರಣೆ ಮಾತ್ರ ಆರಂಭವಾಗಲಿಲ್ಲ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...