Homeಕರ್ನಾಟಕBJP ಸರ್ಕಾರದಿಂದ ನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಣೆ: ಸ್ವಾಭಿಮಾನದ ನಡಿಗೆಗೆ ಮಾಜಿ ಸಚಿವ ರಮಾನಾಥ ರೈ...

BJP ಸರ್ಕಾರದಿಂದ ನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಣೆ: ಸ್ವಾಭಿಮಾನದ ನಡಿಗೆಗೆ ಮಾಜಿ ಸಚಿವ ರಮಾನಾಥ ರೈ ಚಾಲನೆ

- Advertisement -
- Advertisement -

ನಾರಾಯಣ ಗುರುಗಳ ಟ್ಯಾಬ್ಲೊವನ್ನು ಗಣರಾಜ್ಯೋತ್ಸವದ ಪರೇಡ್‌‌ನಲ್ಲಿ ಪ್ರದರ್ಶಿಸಲು ನಿರಾಕರಿಸಿದ ಮೋದಿ ನೇತೃತ್ವದ ಒಕ್ಕೂಟ ಸರ್ಕಾರದ ನಡೆಯನ್ನು ವಿರೋಧಿಸಿ ಕರಾವಳಿಯ ಅವಳಿ ಜಿಲ್ಲೆಯಲ್ಲಿ ನಡೆಯುತ್ತಿರುವ ‘ಸ್ವಾಭಿಮಾನದ ನಡಿಗೆ’ಯ ರ್‍ಯಾಲಿ ಹಾಗೂ ಪಾದಯಾತ್ರೆಗೆ ಬಂಟ್ವಾಳ ತಾಲೂಕಿನಿಂದ ಮಾಜಿ ಸಚಿವ ಬಿ. ರಮಾನಾಥ ರೈ ಬುಧವಾರ ಚಾಲನೆ ನೀಡಿದ್ದಾರೆ.

ಮೋದಿ ಸರ್ಕಾರವು ದೆಹಲಿಯಲ್ಲಿ ನಡೆಯುತ್ತಿರುವ 73 ನೇ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ನಾರಾಯಣ ಗುರುಗಳ ಟ್ಯಾಬ್ಲೊವನ್ನು ಪ್ರದರ್ಶಿಸಲು ನಿರಾಕರಿಸಿದೆ. ಬಿಜೆಪಿ ಸರ್ಕಾರದ ಈ ನಿಲುವನ್ನು ಖಂಡಿಸಿ ಉಡುಪಿ ಮತ್ತು ದಕ್ಷಿಣ ಕನ್ನಡದ ಪ್ರತಿ ತಾಲೂಕಿನಲ್ಲಿ ಗುರುಗಳ ಟ್ಯಾಬ್ಲೊ ಮೆರವಣಿಗೆ ನಡೆಯಲಿದೆ.

ಈ ಹಿನ್ನಲೆಯಲ್ಲಿ ಬಂಟ್ವಾಳದ ಗಣದಪಡ್ಪುವಿನ ನಾರಾಯಣ ಗುರು ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಮಾಜಿ ಸಚಿವ ರಮಾನಾಥ ರೈ ಅವರು ಗುರುಗಳ ಟ್ಯಾಬ್ಲೊ ವಾಹನಕ್ಕೆ ಚಾಲನೆ ನೀಡಿದ್ದಾರೆ.

ಇದನ್ನೂ ಓದಿ: ಮೋದಿ ಸರ್ಕಾರದಿಂದ ನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಣೆ: ಗಣರಾಜ್ಯೋತ್ಸವದಂದು ಕರಾವಳಿಯ ಪ್ರತಿ ತಾಲೂಕಿನಲ್ಲಿ ಟ್ಯಾಬ್ಲೊ ಮೆರವಣಿಗೆ!

ಗುರುಗಳ ಟ್ಯಾಬ್ಲೊ ಮೆರವಣಿಯ ‘ಸ್ವಾಭಿಮಾನದ ನಡಿಗೆ’ಯ ರ್‍ಯಾಲಿ ಬಂಟ್ವಾಳದಿಂದ ಮದ್ಯಾಹ್ನ ಎರಡು ಗಂಟೆಗೆ ಹೊರಡಲಿದ್ದು, ಮೂರು ಗಂಟೆಗೆ ಕಂಕನಾಡಿಯ ಗರೋಡಿಗೆ ತಲುಪಲಿದೆ. ಅಲ್ಲಿ ಒಕ್ಕೂಟ ಸರ್ಕಾರದ ಮಾಜಿ ಸಚಿವ ಜನಾರ್ದನ ಪೂಜಾರಿ ಅವರ ನೇತೃತ್ವದಲ್ಲಿ ಪಾದಯಾತ್ರೆ ನಡೆಯಲಿದೆ. ಈ ಪಾದಯಾತ್ರೆಯು ಮಂಗಳೂರಿನ ಕಂಕನಾಡಿ ಗರೋಡಿಯಿಂದ ಹೊರಟು, ನಾರಾಯಣ ಗುರುಗಳು ಕಟ್ಟಿಸಿದ ಕುದ್ರೋಳಿ ದೇವಸ್ಥಾನದಲ್ಲಿ ಸಮಾರೋಪಗೊಳ್ಳಲಿದೆ.

ಈ ವೇಳೆ ದೇವಸ್ಥಾನದಲ್ಲಿ ಬೃಹತ್‌ ಸಮಾವೇಶ ಕೂಡಾ ನಡೆಯಲಿದೆ ಎಂದು ಜನಾರ್ದನ ಪೂಜಾರಿ ಕಳೆದ ವಾರವೆ ತಿಳಿಸಿದ್ದರು.

ಈ ಬಾರಿಯ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ಪ್ರಸ್ತುತಪಡಿಸಲು ಕೇರಳ ಸರ್ಕಾರ ಕಳುಹಿಸಿದ್ದ ಪ್ರಸ್ತಾಪವನ್ನು ಒಕ್ಕೂಟ ಸರ್ಕಾರ ನಿರಾಕರಿಸಿತ್ತು. ಈ ಮೂಲಕ ಸತತ ಮೂರನೇ ಬಾರಿಗೆ ಕೇರಳ ಗಣರಾಜ್ಯೋತ್ಸವ ಪರೇಡ್‌ನಿಂದ ಹೊರಗುಳಿಯಲಿದ್ದು, ದೇಶದಾದ್ಯಂತ ಈ ಬಗ್ಗೆ ಭಾರಿ ಆಕ್ರೋಶ ವ್ಯಕ್ತವಾಗಿದೆ. ಜೊತೆಗೆ ದೇಶದಾದ್ಯಂತ ಈ ಬಗ್ಗೆ ಬಿಜೆಪಿ ವಿರುದ್ದ ಆಕ್ರೋಶ ವ್ಯಕ್ತವಾಗಿದೆ.

ಆದರೆ ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್‌ ಕಾರ್ಕಾಳ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್‌ ಕಟೀಲ್ ಅವರು ಒಕ್ಕೂಟ ಸರ್ಕಾರದ ಕ್ರಮವನ್ನು ಸಮರ್ಥಿಸುತ್ತಿದ್ದಾರೆ.

ಇದನ್ನೂ ಓದಿ: ಸರ್ಕಾರ ನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಿಸಿದ ದಿನ ಇಡೀ ರಾತ್ರಿ ಕಣ್ಣೀರು ಸುರಿಸಿದ್ದೆ: ಹಿರಿಯ ನಾಯಕ ಬಿ. ಜನಾರ್ದನ ಪೂಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...