Homeಮುಖಪುಟಪದ್ಮಶ್ರೀ ಪ್ರಶಸ್ತಿ ನಿರಾಕರಿಸಿದ ಬಂಗಾಳಿ ಹಿರಿಯ ಗಾಯಕಿ!

ಪದ್ಮಶ್ರೀ ಪ್ರಶಸ್ತಿ ನಿರಾಕರಿಸಿದ ಬಂಗಾಳಿ ಹಿರಿಯ ಗಾಯಕಿ!

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ, ಹಿರಿಯ ಕಮ್ಯುನಿಷ್ಟ್‌ ನಾಯಕ ಬುದ್ಧದೇವ್‌ ಭಟ್ಟಾಚಾರ್ಯ ಕೂಡಾ ಪ್ರಶಸ್ತಿ ನಿರಾಕರಿಸಿದ್ದಾರೆ

- Advertisement -
- Advertisement -

ಒಕ್ಕೂಟ ಸರ್ಕಾರ ಘೋಷಿಸಿರುವ ಪದ್ಮಶ್ರೀ ಪ್ರಶಸ್ತಿಯನ್ನು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ, ಹಿರಿಯ ಕಮ್ಯುನಿಷ್ಟ್‌ ನಾಯಕ ಬುದ್ಧದೇವ್‌ ಭಟ್ಟಾಚಾರ್ಯ ನಿರಾಕರಿಸಿದ ಬೆನ್ನಿಗೆ ಮತ್ತೊಬ್ಬ ಸಾಧಕಿ ಕೂಡಾ ಪ್ರಶಸ್ತಿಯನ್ನು ನಿರಾಕರಿಸಿದ್ದಾರೆ. ಸುಮಾರು 8 ದಶಕಗಳ ಕಾಲ ಗಾಯನ ವೃತ್ತಿಯನ್ನು ಹೊಂದಿರುವ 90 ವರ್ಷದ ಸಂಧ್ಯಾ ಮುಖರ್ಜಿ ಅವರು ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ನಿರಾಕರಿಸಿದ್ದಾರೆ.

ತಮಗೆ ಪದ್ಮಶ್ರೀಯ ಅಗತ್ಯವಿಲ್ಲ ಎಂದು ಹೇಳಿರುವ ಅವರು, “ಪ್ರಶಸ್ತಿಯು ತನಗಿಂತಲೂ ಕಿರಿಯ ಕಲಾವಿದರಿಗೆ ನೀಡುವುದು ಹೆಚ್ಚು ಸೂಕ್ತವಾಗಿದೆ” ಎಂದು ಸಂಧ್ಯಾ ಮುಖೋಪಾಧ್ಯಾಯ ಎಂದೂ ಕರೆಯಲ್ಪಡುವ ಬಂಗಾಳಿ ಗಾಯಕಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಸಿಪಿಐ(ಎಂ) ನಾಯಕ, ಪ.ಬಂ. ಮಾಜಿ ಸಿಎಂ ಬುದ್ಧದೇಬ್‌‌ ಭಟ್ಟಾಚಾರ್ಯ ‘ಪದ್ಮಭೂಷಣ’ ನಿರಾಕರಣೆ

ದೆಹಲಿಯಿಂದ ಕರೆ ಮಾಡಿದ ಹಿರಿಯ ಅಧಿಕಾರಿಗೆ, ತನ್ನ ತಾಯಿ ಪದ್ಮಶ್ರೀ ಪುರಸ್ಕೃತೆ ಎಂದು ಕರೆಯುವುದನ್ನು ಇಚ್ಛಿಸುವುದಿಲ್ಲ ಎಂದು ಹೇಳಿದ್ದಾಗಿ ಅವರ ಪುತ್ರಿ ಸೌಮಿ ಸೆಂಗುಪ್ತಾ ಹೇಳಿದ್ದಾರೆ. ಅವರಿಗೆ ಇಳಿ ವಯಸ್ಸಿನಲ್ಲಿ ಪ್ರಶಸ್ತಿ ನೀಡುವುದು ಅವಮಾನವಾಗಿದೆ ಎಂದು ಅವರು ತಿಳಿಸಿದ್ದಾರೆ. ಗಣರಾಜ್ಯೋತ್ಸವ ಪ್ರಶಸ್ತಿಗಳ ಪಟ್ಟಿಯಲ್ಲಿ ಪದ್ಮಶ್ರೀ ಎಂದು ಹೆಸರಿಸಲು ಒಪ್ಪಿಗೆ ಕೋರಿ ಅಧಿಕಾರಿಗಳು ಅವರನ್ನು ಸಂಪರ್ಕಿಸಿದ್ದರು.

ಪಶ್ಚಿಮ ಬಂಗಾಳದಿಂದ ಈ ಪ್ರಶಸ್ತಿಯನ್ನು ತಿರಸ್ಕರಿಸಿದವರಲ್ಲಿ ಮುಖರ್ಜಿ ಎರಡನೇ ವ್ಯಕ್ತಿಯಾಗಿದ್ದಾರೆ. ಅವರಿಗಿಂತ ಮೊದಲು ಬುದ್ಧದೇವ್ ಭಟ್ಟಾಚಾರ್ಯ ಪದ್ಮಶ್ರೀ ಪ್ರಶಸ್ತಿಯನ್ನು ನಿರಾಕರಿಸಿದ್ದರು. ಮುಖರ್ಜಿ ಅವರ ನಿರ್ಧಾರವು ರಾಜಕೀಯವಲ್ಲ ಎಂದು ಅವರು ಮಗಳು ಸೇನ್‌ಗುಪ್ತಾ ಹೇಳಿದ್ದಾರೆ.

ಇದನ್ನೂ ಓದಿ: ತಾಲಿಬಾನಿಗಳಿಂದ ಹತರಾದ ದಾನಿಶ್ ಸಿದ್ದೀಕಿಗೆ ಮರಣೋತ್ತರವಾಗಿ ’ವರ್ಷದ ಪತ್ರಕರ್ತ’ ಪ್ರಶಸ್ತಿ

“90 ನೇ ವಯಸ್ಸಿನಲ್ಲಿ, ಸುಮಾರು ಎಂಟು ದಶಕಗಳ ಕಾಲ ಗಾಯನ ವೃತ್ತಿಜೀವನ ಹೊಂದಿರುವ ಅವರು ಪದ್ಮಶ್ರೀಗೆ ಆಯ್ಕೆಯಾಗಿರುವುದು ಅವರ ಸ್ಥಾನಮಾನದ ಗಾಯಕರಿಗೆ ಮಾಡಿದ ಅವಮಾನವಾಗಿದೆ. ಪದ್ಮಶ್ರೀಗೆ ಕಿರಿಯ ಕಲಾವಿದೆಗೆ ಹೆಚ್ಚು ಅರ್ಹರೇ ಹೊರತು, ಸಂಧ್ಯಾ ಮುಖೋಪಾಧ್ಯಾಯ ಅಲ್ಲ” ಎಂದು ಅವರು ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಜಿ ಅವರು, ಪ್ರಶಸ್ತಿಗೆ ನಾನು ಆಯ್ಕೆಯಾಗಿದ್ದೇನೆ ಎಂದು ಸರ್ಕಾರದ ಕರೆ ಬಂದಿಲ್ಲ, ಒಂದು ವೇಳೆ ನಾನು ಆಯ್ಕೆಯಾಗಿದ್ದರೆ, ನಾನದನ್ನು ನಿರಾಕರಿಸುತ್ತೇನೆ ಎಂದು ಹೇಳಿದ್ದಾರೆ. ಆದರೆ ಕೇಂದ್ರ ಸಚಿವಾಲಯವು ಅವರ ಪರವಾಗಿ ಅವರ ಪತ್ನಿಯನ್ನು ಸಂಪರ್ಕಿಸಿದೆ ಎಂದು ಹೇಳಿದೆ.

ಇದನ್ನೂ ಓದಿ:ನೊಬೆಲ್‌ ಪ್ರಶಸ್ತಿ ಪುರಸ್ಕೃತ ಆಂಗ್‌ ಸಾನ್‌ ಸೂಕಿಗೆ ನಾಲ್ಕು ವರ್ಷ ಜೈಲು ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...