Homeಕರ್ನಾಟಕಅಂಬೇಡ್ಕರ್‌ಗೆ ಅವಮಾನ ಘಟನೆ: ಶೋಷಿತರ ಬಗ್ಗೆ ಹೆಪ್ಪುಗೊಂಡಿರುವ ಅಸಹನೆಯ ಚಿಕ್ಕ ಪ್ರತಿನಿಧಿ ಈ ನ್ಯಾಯಾಧೀಶರು!

ಅಂಬೇಡ್ಕರ್‌ಗೆ ಅವಮಾನ ಘಟನೆ: ಶೋಷಿತರ ಬಗ್ಗೆ ಹೆಪ್ಪುಗೊಂಡಿರುವ ಅಸಹನೆಯ ಚಿಕ್ಕ ಪ್ರತಿನಿಧಿ ಈ ನ್ಯಾಯಾಧೀಶರು!

ಸಾಮಾಜಿಕ ಜಾಲತಾಣದಲ್ಲಿ ನ್ಯಾಯಧೀಶ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ

- Advertisement -
- Advertisement -

ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜಿನ ಗೌಡ ಅವರು ಸಂವಿಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್‌‌ ಫೋಟೋ ತೆಗೆಸಿ ಧ್ವಜಾರೋಹಣ ಮಾಡಿರುವ ಘಟನೆ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಘಟನೆಯು ಬುಧವಾರ ನಡೆದಿದ್ದು, ದೇಶದ 73ನೇ ಗಣರಾಜ್ಯೋತ್ಸವದ ವೇಳೆ ರಾಷ್ಟ್ರಪಿತ ಗಾಂಧೀಜಿ ಭಾವಚಿತ್ರದ ಜೊತೆಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಫೋಟೋವನ್ನು ಇರಿಸಲಾಗಿತ್ತು. ಆದರೆ ಕಾರ್ಯಕ್ರಮದ ವೇಳೆ ಪುಷ್ಪಾರ್ಚನೆ ಮಾಡಲು ಒಪ್ಪದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ  ಅಂಬೇಡ್ಕರ್‌ ಫೋಟೋ ತೆಗೆಯಲು ಪಟ್ಟು ಹಿಡಿದರು. ಹೀಗಾಗಿ ಕಾರ್ಯಕ್ರಮ ಆಯೋಜಕರು ಅಂಬೇಡ್ಕರ್‌‌ ಫೋಟೋ ತೆಗೆಯಬೇಕಾಯಿತು.

ಇದನ್ನೂ ಓದಿ: ಅಂಬೇಡ್ಕರ್ ಫೋಟೋ ಇದ್ದರೆ ಧ್ವಜಾರೋಹಣ ಮಾಡಲ್ಲ: ರಾಯಚೂರು ಜಿಲ್ಲಾ ನ್ಯಾಯಾಧೀಶರ ನಡೆಗೆ ತೀವ್ರ ಆಕ್ರೋಶ

ಈ ಘಟನೆಯನ್ನು ಸ್ಥಳದಲ್ಲೇ ವಿರೋಧಿಸಿದ ಪರಿಶಿಷ್ಟ ಜಾತಿ ಮತ್ತು ಇತರ ವರ್ಗಗಳ ವಕೀಲರು ಪ್ರತಿಭಟನೆ ನಡೆಸಿದ್ದಾರೆ. ಜೊತೆಗೆ ಧ್ವಜಾರೋಹಣ ಕಾರ್ಯಕ್ರಮವನ್ನು ವಿರೋಧಿಸಿ ಹೊರನಡೆದಿದ್ದಾರೆ. ಘಟನೆ ಬಗ್ಗೆ ವರದಿಯಾಗುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಹಿರಿಯ ಚಿಂತಕ, ಸಾಹಿತಿ ರಹಮತ್‌ ತರಿಕೆರೆ, “ನ್ಯಾಯನೀಡುವ ಮತ್ತು ಅಧಿಕಾರ ನಡೆಸುವ ಜಾಗಗಳಲ್ಲಿ ದಲಿತರನ್ನು‌, ಮಹಿಳೆಯರನ್ನು, ಮುಸ್ಲಿಮರನ್ನು, ಬುಡಕಟ್ಟು ಜನರ ಕುರಿತು, ಆಳದಲ್ಲಿ ಹೆಪ್ಪುಗೊಂಡಿರುವ ಅಸಹನೆಯ ಒಂದು ಚಿಕ್ಕ ಪ್ರತಿನಿಧಿ ರಾಯಚೂರಿನ ಈ ಮಾನ್ಯ ನ್ಯಾಯಾಧೀಶರು. ನ್ಯಾಯಾಲಯ ಕ್ಷೇತ್ರದಲ್ಲಿ ಢಾಳಾಗಿ ನೆಲೆಗೊಂಡಿರುವ ಸಾಮಾಜಿಕ, ಧಾರ್ಮಿಕ ದ್ವೇಷದ ಬಗ್ಗೆ ನನ್ನ ವಕೀಲ ಮಿತ್ರರ ಅನುಭವ ಕೇಳಿರುವೆ. ಕೋಚೆಯವರೂ ಇಂತಹ ಅನುಭವ ಹೇಳುತ್ತಿದ್ದರು. ಭಯವಾಗುತ್ತದೆ. ದುಃಖವಾಗುತ್ತದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಈ ದೇಶದಲ್ಲಿ ಅಂಬೇಡ್ಕರ್‌ರವರ ಸಂವಿಧಾನ ಪ್ರತಿನಿತ್ಯ ಕೊಲೆಯಾಗುತ್ತಿದೆ: ಶಿವಸುಂದರ್

ಹಿರಿಯ ಪತ್ರಕರ್ತ ದಿನೇಶ್‌ ಅಮಿನ್ ಅವರು, “’ಬಾಬಾ ಸಾಹೇಬ್ ಅಂಬೇಡ್ಕರ್ ಪೋಟೊ ಬೇಡ ಎಂದವರು
ದೇಶದ್ರೋಹಿ ಎಂದು ಜನರು ತೀರ್ಪು ನೀಡಿದ್ದಾರೆ” ಎಂದು ಹೇಳಿದ್ದಾರೆ.

ಹಿರಿಯ ಪತ್ರಕರ್ತ ಸನತ್‌ ಕುಮಾರ್‌‌ ಬೆಳಗಲಿ, “ಪ್ರಜಾರಾಜ್ಯ ದಿನದಂದು ಸಂವಿಧಾನ ಶಿಲ್ಪಿ ಬಾಬಾಸಾಹೇಬ ಅಂಬೇಡ್ಕರ್ ಅವರ ಫೋಟೊ ಇದ್ದರೆ ಧ್ವಜಾರೋಹಣ ಮಾಡುವದಿಲ್ಲ ಎಂದು ಧಿಮಾಕು ತೋರಿಸಿದ ರಾಯಚೂರು ಜಿಲ್ಲಾ ಮನುವಾದಿ ನ್ಯಾಯಾಧೀಶನ ವರ್ತನೆ ಖಂಡನೀಯ. ಈ ಅವಿವೇಕಿಗೆ ದೇಶದ ಸಂವಿಧಾನದ ಮೇಲೆ ನಂಬಿಕೆ ಇಲ್ಲವೆಂದಾದರೆ ರಾಜೀನಾಮೆ ಕೊಟ್ಟು ತೊಲಗಲಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಇನ್ಸ್‌‌ಟಾಗ್ರಾಮ್‌‌‌ನಲ್ಲಿ ಅಂಬೇಡ್ಕರ್‌ ಮತ್ತು ಅವರ ಪತ್ನಿಗೆ ಅವಹೇಳನ: FIR ದಾಖಲು

 

ಲೇಖಕ, ಪತ್ರಕರ್ತ ಬಿಎಂ ಬಶೀರ್‌ ಅವರು, ‘‘ಯಾವಾಗ ಈ ದೇಶದ ಹೈಕೋರ್ಟ್ ಮುಂದೆ ಮನುವಿನ ಪ್ರತಿಮೆ ಸ್ಥಾಪನೆಯಾಗಲು ಜನರು ಮೌನ ಸಮ್ಮತಿಯನ್ನು ಕೊಟ್ಟರೋ ಆಗಲೇ ಅಂಬೇಡ್ಕರ್ ಬದಿಗೆ ಸರಿದರು. ರಾಜಸ್ತಾನದ ಹೈಕೋರ್ಟ್ ಮುಂದೆ ಮನುವಿನ ಪ್ರತಿಮೆ ಬಟಾ ಬಯಲಲ್ಲಿ ನಿಂತು ಈ ದೇಶದ ಸಂವಿಧಾನಕ್ಕೆ ಪ್ರತಿ ದಿನ ಸವಾಲು ಹಾಕುತ್ತಿರುವಾಗ, ನಮಗೇನೂ ಅನ್ನಿಸುವುದಿಲ್ಲ. ನೆನಪಿಡಿ ಈ ಪ್ರತಿಮೆ ನಿಲ್ಲಿಸಲು ಅನುಮತಿ ನೀಡಿದವರು ನ್ಯಾಯಾಧೀಶರೇ. ಹೀಗಿರುವಾಗ ನ್ಯಾಯಾಧೀಶನೊಬ್ಬ ಅಂಬೇಡ್ಕರ್ ಫೋಟೋ ಇದ್ದರೆ ಧ್ವಜಾರೋಹಣ ಮಾಡುವುದಿಲ್ಲ ಎನ್ನುವುದರಲ್ಲಿ ಅಚ್ಚರಿ ಏನೂ ಇಲ್ಲ.

ಅಂಬೇಡ್ಕರ್ ಸಂವಿಧಾನದ ಕೃಪೆಯಿಂದ ನ್ಯಾಯಾಧೀಶನಾದ ಶೂದ್ರನೊಬ್ಬ, ಅಂಬೇಡ್ಕರ್ ಫೋಟೋ ಇದ್ಧರೆ ಧ್ವಜಾರೋಹಣ ಮಾಡುವುದಿಲ್ಲ ಅಂತಾನಲ್ಲ… ತಿಂದ ಬಟ್ಟಲಿಗೆ ಹೇಲುವುದು ಎಂದರೆ ಇದೇ ಅಲ್ಲವೇ ? ಮುಂದೊಂದು ದಿನ ಬರಲಿದೆ, ಗಾಂಧಿಯ ಜೊತೆಗೆ ಮನು ಮಹರ್ಷಿಯ ಫೋಟೋ ಇಟ್ಟು ಗಣರಾಜ್ಯೋತ್ಸವ ಆಚರಿಸುವ ದಿನ. ಆ ಪುಣ್ಯ ದಿನಕ್ಕಾಗಿ ನಾವೆಲ್ಲರೂ ಕಾಯೋಣ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್‌ ಅವರನ್ನು ಅರ್ಥಮಾಡಿಕೊಳ್ಳಲು ಮಾರ್ಕ್ಸ್ ವಾದದ ಹಿನ್ನೆಲೆ ನೆರವಾಗಿದೆ: ಜಸ್ಟಿಸ್ ಚಂದ್ರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. This is utter stupidity by that idoit, though he took oath before swearing in the name of constitution of India. Then how he can do these insult act. Useless and hopeless .

  2. ನ್ಯಾಯಾದೀಶ ಮಲ್ಲಿಕಾರ್ಜುನ ಗೌಡ, ನಮ್ಮ ಸಂವಿಧಾನ ಶಿಲ್ಪಿಗೆ ಅವಮಾನ ಮಾಡಿರುವುದು ಕಂಡನಾರ್ಹ. ಈ ನ್ಯಾಯಾದೀಶರ ವಿರುದ್ಧ ಕರ್ನಾಟಕ ಹೈಕೋರ್ಟ್ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಇವತ್ತು ಫೋಟೋ ತೆಗೆದಿರುವುದನ್ನು ನಾವು ಒಕ್ಕೊರಲಿನಿಂದ ಪ್ರತಿಭಟನೆ ಮಾಡದಿದ್ದರೆ, ನಾಳೆ ನಮ್ಮ ಸಂವಿಧಾನವನ್ನು ಪಕ್ಕಕ್ಕೆ ಸರಿಸಿ, ಆ ಜಾಗದಲ್ಲಿ ಮನುಸ್ಮೃತಿಯನ್ನು ಪ್ರತಿಷ್ಟಾಪನೆ ಮಾಡುತ್ತಾರೆ.

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...