Homeಕರ್ನಾಟಕಕೋಮುವಾದಿಗಳು ಆಕ್ಟೀವ್ ಆಗಿರುವುದರಿಂದ ಇಂತಹ ಘಟನೆಗಳಾಗುತ್ತಿವೆ: ಜಸ್ಟೀಸ್ ದಾಸ್‌

ಕೋಮುವಾದಿಗಳು ಆಕ್ಟೀವ್ ಆಗಿರುವುದರಿಂದ ಇಂತಹ ಘಟನೆಗಳಾಗುತ್ತಿವೆ: ಜಸ್ಟೀಸ್ ದಾಸ್‌

ಡಾ.ಬಿ.ಆರ್‌.ಅಂಬೇಡ್ಕರ್‌ ಫೋಟೋ ಇದ್ದ ಕಾರಣ ಧ್ವಜಾರೋಹಣ ಮಾಡಲು ನಿರಾಕರಿಸಿದ ರಾಯಚೂರು ಜಿಲ್ಲಾ ನ್ಯಾಯಾಧೀಶರ ವಿವಾದಕ್ಕೆ ಸಂಬಂಧಿಸಿದಂತೆ ಜಸ್ಟೀಸ್ ನಾಗಮೋಹನ್ ದಾಸ್, ಹಿರಿಯ ವಕೀಲರಾದ ಸಿ.ಎಸ್.ದ್ವಾರಕನಾಥ್‌ ನೀಡಿದ ಪ್ರತಿಕ್ರಿಯೆ ಇಲ್ಲಿದೆ...

- Advertisement -
- Advertisement -

“ಪ್ರಜಾಪ್ರಭುತ್ವ ವಿರೋಧಿಗಳು, ಕೋಮುವಾದಿಗಳು ಕ್ರಿಯಾಶೀಲವಾಗಿರುವುದರಿಂದ ಇಂತಹ ಘಟನೆಗಳಾಗುತ್ತಿವೆ” ಎಂದು ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್.ನಾಗಮೋಹನ ದಾಸ್‌ ಹೇಳಿದರು.

ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಫೋಟೋವನ್ನು ಇಟ್ಟರೆ ಧ್ವಜಾರೋಹಣ ಮಾಡುವುದಿಲ್ಲ ಎಂದು ರಾಯಚೂರಿನ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಅವರು ಹೇಳಿದ್ದು ವಿವಾದಕ್ಕೆ ಕಾರಣವಾದ ಬೆನ್ನಲ್ಲೇ, ಜಸ್ಟೀಸ್ ನಾಗಮೋಹನ ದಾಸ್‌ ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದರು.

“ಈ ಪ್ರಕರಣ ಸದರಿ ನ್ಯಾಯಾಧೀಶರ ಅಜ್ಞಾನ ಮತ್ತು ತಿಳಿವಳಿಕೆಯ ಕೊರತೆಯನ್ನು ಸೂಚಿಸುತ್ತದೆ. ನಾನು ಇದನ್ನು ಖಂಡಿಸುತ್ತೇನೆ” ಎಂದ ಅವರು, ಈ ರೀತಿಯ ಶಕ್ತಿಗಳು ನ್ಯಾಯಾಂಗದಲ್ಲಿ ಇವೆ. ಕೆಲವರು ನೇರವಾಗಿ ಕೆಲವರು ಕದ್ದು ಮುಚ್ಚಿ  ಇಂತಹ ಕೆಲಸಗಳನ್ನು ಮಾಡುತ್ತಾರೆ ಎಂದು ಎಚ್ಚರಿಸಿದರು.

ಈ ಸಮಾಜದಿಂದಲೇ ಜಡ್ಜ್‌ಗಳು ಬರುತ್ತಾರೆ. ಈ ಸಮಾಜದಲ್ಲಿ ಏನೆಲ್ಲ ಕೊಳಕು ಇರುತ್ತದೆಯೋ ಅದೆಲ್ಲವನ್ನೂ ಹೊತ್ತಿಕೊಂಡು ಬರುವ ಜನ ಇದ್ದಾರೆ. ಆದರೆ ಬಹುಪಾಲು ಜನ ಆ ರೀತಿಯವರಲ್ಲ. ಕೆಲವೊಂದು ಘಟನೆ ಅಲ್ಲೊಂದು ಇಲ್ಲೊಂದು ನಡೆಯುತ್ತಿವೆ ಎಂದು ತಿಳಿಸಿದರು.

ಇದನ್ನೂ ಓದಿರಿ: ಅಂಬೇಡ್ಕರ್ ಫೋಟೋ ಇದ್ದರೆ ಧ್ವಜಾರೋಹಣ ಮಾಡಲ್ಲ: ರಾಯಚೂರು ಜಿಲ್ಲಾ ನ್ಯಾಯಾಧೀಶರ ನಡೆಗೆ ತೀವ್ರ ಆಕ್ರೋಶ

ಜನಾಭಿಪ್ರಾಯವೇ ಇದಕ್ಕೆ ಮದ್ದಾಗಿದೆ. ವಕೀಲರು ಇದರ ಬಗ್ಗೆ ಚರ್ಚೆ ಮಾಡಬೇಕು. ನ್ಯಾಯಾಂಗದಲ್ಲೂ ಇದು ಚರ್ಚೆಗೆ ಬರಬೇಕು. ಹಿರಿಯರಾದವರು ಇದಕ್ಕೆ ಸಂಬಂಧಿಸಿದಂತೆ ತಿಳಿವಳಿಕೆಯನ್ನು ನೀಡಬೇಕು. ಮಾರ್ಗಸೂಚಿಗಳನ್ನು ವಿಧಿಸಬೇಕು ಎಂದು ಅಭಿಪ್ರಾಯಪಟ್ಟರು.

ಅಂಬೇಡ್ಕರ್‌ ಒಬ್ಬರೇ  ಸಂವಿಧಾನ ಬರೆಯಲಿಲ್ಲ ಎನ್ನುವ ಒಂದು ವರ್ಗವೇ ಇದೆ. ಬೆಂಗಳೂರಿನ ಶಾಲೆಯೊಂದರಲ್ಲಿ ‘ಸಂವಿಧಾನದ ಅವಧಿ ಮುಗಿದು ಹೋಗಿದೆ’ ಎಂಬ ಚರ್ಚಾ ಸ್ಪರ್ಧೆಯನ್ನು ನಿನ್ನೆ ಏರ್ಪಡಿಸಿತ್ತು. ಕೆಲವರು ಸಂವಿಧಾನ ಬದಲಿಸುತ್ತೇವೆ ಎನ್ನುತ್ತಾರೆ. ಕೆಲವರು ಸಂವಿಧಾನವನ್ನು ಸುಟ್ಟರು. ಇನ್ನು ಕೆಲವರು ಸಂವಿಧಾನಕ್ಕೆ ಮುಂದೆ ನಮಸ್ಕಾರ ಮಾಡಿ, ಹಿಂದೆ ನಿಂತು ಚೂರಿ ಹಾಕುತ್ತಾರೆ. ಇದೆಲ್ಲ ಯಾಕೆ ಆಗುತ್ತಿದೆ ಎಂದರೆ- ಇಂದು ಅಪ್ರಜಾಪ್ರಭುತ್ವ ಶಕ್ತಿಗಳು ಕ್ರಿಯಾಶೀಲವಾಗಿವೆ. ಕೋಮುವಾದಿ ಶಕ್ತಿಗಳು, ಕಾರ್ಪೋರೇಟ್ ಹಿತಾಸಕ್ತಿಗಳು ಆಕ್ಟೀವ್ ಆಗಿವೆ. ಹೀಗಾಗಿ ಇಂತಹ ಬೆಳವಣಿಗೆಳಾಗುತ್ತಿವೆ ಎಂದರು.

ವಿವಾದಕ್ಕೆ ಕಾರಣವಾಗಿರುವ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ

ಇದರ ವಿರುದ್ಧ ಜನಾಭಿಪ್ರಾಯಗಳು ನಡೆಯಬೇಕು. ದೊಡ್ಡವರಾಗಲಿ, ಚಿಕ್ಕವರಾಗಲಿ ತಪ್ಪು ಮಾಡಿದಾಗ ಖಂಡಿಸಬೇಕು. ಈ ಮೂಲಕ ಜನಾಭಿಪ್ರಾಯವನ್ನು ರೂಪಿಸುವ ಮೂಲಕ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಸೂಚಿಸಿದರು.

ಇದೊಂದು ದುರಂತ, ಆಂತಕಕಾರಿ: ಸಿ.ಎಸ್.ದ್ವಾರಕನಾಥ್‌

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಹಿರಿಯ ವಕೀಲರು, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಸಿ.ಎಸ್.ದ್ವಾರಕನಾಥ್‌, “ಜಿಲ್ಲಾ ಮಟ್ಟದ ನ್ಯಾಯಾಧೀಶರಾದವರೂ ಸಂವಿಧಾನವನ್ನು ಓದಿರುವುದಿಲ್ಲವ ಎಂಬುದು ದುರಂತ ಅನ್ನಿಸುತ್ತಿದೆ” ಎಂದು ವಿಷಾದಿಸಿದರು.

“ಅಂಬೇಡ್ಕರ್‌ ಒಬ್ಬರು ಸಂವಿಧಾನ ತಜ್ಞರು, ಅವರು ಭಾರತ ಸಂವಿಧಾನದ ರಚನಾಕಾರೆಂಬುದು ಇಡೀ ಜಗತ್ತಿಗೆ ಗೊತ್ತು. ನ್ಯಾಯಾಧೀಶರಿಗೆ ಗೊತ್ತಿಲ್ಲವಾ? ಅಲ್ಲದೆ ಗಣರಾಜ್ಯೋತ್ಸವದಂದು ಅಂಬೇಡ್ಕರ್‌ ಫೋಟೋ ಇಡಬೇಕೆಂದು ಸರ್ಕಾರ ಆದೇಶ ಹೊರಡಿಸಿದೆ. ಇದನ್ನಾದರೂ ನ್ಯಾಯಧೀಶರು ಗಮನಿಸಬಾರದಾ?” ಎಂದು ಪ್ರಶ್ನಿಸಿದರು.

“ಇಂತಹ ಮನಸ್ಥಿತಿ ಇರುವವರು ನ್ಯಾಯಾಧೀಶರಾಗುತ್ತಿರುವುದು ಆತಂಕಕ್ಕೆ ಎಡೆ ಮಾಡಿದೆ. ಅಂಬೇಡ್ಕರ್‌ ಪರವಾಗಿಯೇ ಇರಬೇಕೆಂದು ನಾನೇನು ಹೇಳುತ್ತಿಲ್ಲ. ಆದರೆ ಅಂಬೇಡ್ಕರ್‌ ಯಾರು ಎಂಬುದನ್ನು ಮೊದಲು ತಿಳಿದುಕೊಳ್ಳಬೇಕು. ಅಂಬೇಡ್ಕರ್‌ ಯಾರು? ಅವರ ಫೋಟೋನ್ನು ಯಾಕೆ ಇಟ್ಟಿದ್ದಾರೆ? ಎಂಬುದನ್ನು ತಿಳಿಯಬೇಕು. ಜಡ್ಜ್‌ಗಳು ಇಷ್ಟೊಂದು ಪೂರ್ವಗ್ರಹ ಪೀಡಿತರಾಗಬಾರದು. ಅಂಥವರು ಎಂತಹ ತೀರ್ಪುಗಳನ್ನು ಕೊಡಬಹುದು ಎಂದು ಆತಂಕವಾಗುತ್ತಿದೆ” ಎಂದರು.


ಇದನ್ನೂ ಓದಿರಿ: ಅಂಬೇಡ್ಕರ್‌ಗೆ ಅವಮಾನ ಘಟನೆ: ಶೋಷಿತರ ಬಗ್ಗೆ ಹೆಪ್ಪುಗೊಂಡಿರುವ ಅಸಹನೆಯ ಚಿಕ್ಕ ಪ್ರತಿನಿಧಿ ಈ ನ್ಯಾಯಾಧೀಶರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಈ ದುರ್ಘಟನೆ ನಡೆದಿರುವುದಕ್ಕೆ ಕೋಮುವಾದಿಗಳು ಸಕ್ರಿಯರಾಗಿರುವುದು ಮಾತ್ರ ಕಾರಣವಲ್ಲ; ಕೋಮುವಾದಿಗಳ ದುರಾಚಾರಗಳನ್ನು ಕಂಡೂ ಕಾಣದಂತೆ ಜಾಣಮೌನಕ್ಕೆ ಶರಣಾಗಿರುವ ಪ್ರಜಾಪ್ರಭುತ್ವವಾದಿಗಳು, ಮಾರ್ಕ್ಸ್ ವಾದಿಗಳು ಮತ್ತು ಅಂಬೇಡ್ಕರ್ ವಾದಿಗಳು ಸಹ ಕಾರಣ. ಈಗಲಾದರೂ ಈ ಮೂರು ವರ್ಗಗಳು ಎಚ್ಚೆತ್ತುಕೊಳ್ಳದಿದ್ದರೆ, ಈ ದೇಶಕ್ಕೆ ಕರಾಳ ಬವಿಶ್ಯ ಕಟ್ಟಿಟ್ಟ ಬುತ್ತಿಯಾಗಲಿದೆ.

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...