Homeಕರ್ನಾಟಕರಾಯಚೂರು: ಡಾ. ಅಂಬೇಡ್ಕರ್‌ರವರಿಗೆ ಅಗೌರವ ತೋರಿದ ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಆಗ್ರಹ

ರಾಯಚೂರು: ಡಾ. ಅಂಬೇಡ್ಕರ್‌ರವರಿಗೆ ಅಗೌರವ ತೋರಿದ ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಆಗ್ರಹ

’ಅಂಬೇಡ್ಕರ್‌, ಸಂವಿಧಾನದ ಬಗ್ಗೆ ಪೂರ್ವಾಗ್ರಹಗಳನ್ನಿಟ್ಟುಕೊಂಡ ಅನೇಕ ಮಂದಿ ಜಿಲ್ಲಾ ಮತ್ತು ಅಧೀನ ಕೋರ್ಟುಗಳಲ್ಲಿ ನ್ಯಾಯಾಧೀಶರ ವೇಶದಲ್ಲಿದ್ದಾರೆ’: ಸಿ.ಎಸ್.ದ್ವಾರಕನಾಥ್

- Advertisement -
- Advertisement -

ರಾಯಚೂರಿನ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ನಡೆದ ಗಣರಾಜ್ಯೋತ್ಸವ ವೇಳೆ ಇರಿಸಲಾಗಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಫೋಟೋ ತೆರವುಗೊಳಿಸಿ, ಧ್ವಜಾರೋಹಣ ನಡೆಸಿರುವ ಪ್ರಕರಣ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.

ನಾಡಿನ ಚಿಂತಕರು, ಸಾಹಿತಿಗಳು, ವಕೀಲರು ತಮ್ಮ ಸಾಮಾಜಿಕ ಮಾಧ್ಯಮಗಳಲ್ಲಿ ಘಟನೆಯನ್ನು ಖಂಡಿಸಿ, ನ್ಯಾಯಧೀಶರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ತಕ್ಷಣವೇ ಅವರನ್ನು ಸೇವೆಯಿಂದ ವಜಾಗೊಳಿಸುವಂತೆ ಒತ್ತಾಯಿಸಿದ್ದಾರೆ.

ಘಟನೆಗೆ ಪ್ರತಿಕ್ರಿಯಿಸಿರುವ ವಿಮರ್ಶಕ ಕೇಶವ ಮಳಗಿ “ಭಾರತ ದೇಶ ಅಥವ ಇಂಡಿಯನ್‌ ನೇಶನ್‌ ಎನ್ನುವುದು ಎಷ್ಟೇ ಅಮೂರ್ತ ಕಲ್ಪನೆಯಾದರೂ ಯಾವುದೇ ರಾಜಕೀಯ ಪಕ್ಷದ ಗುತ್ತಿಗೆಯಲ್ಲ. ಇಲ್ಲಿ, ಗ್ರಾಮ ಪಂಚಾಯಿತಿ ಸದಸ್ಯ, ಚುನಾಯಿತ ಪ್ರಧಾನಿ, ಪಕ್ಷಗಳ ಒಮ್ಮತದಿಂದ ಆಯ್ಕೆಯಾಗುವ ರಾಷ್ಟ್ರಪತಿ, ದೇಶದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶ ಮತ್ತು ಅತಿ ಸಾಮಾನ್ಯ ಹೀಗೆ ಎಲ್ಲರಿಗೂ ಒಂದೇ ಸಂವಿಧಾನ, ಕಾನೂನು, ನ್ಯಾಯವ್ಯವಸ್ಥೆ. ನಾವು ಯಾವುದೇ ಜಾತಿ, ಲಿಂಗ, ಕುಲಮತ, ಬುಡಕಟ್ಟು, ಲೈಂಗಿಕ ಆಯ್ಕೆ-ಅಪೇಕ್ಷೆಗಳಿಗೆ ಸೇರಿದವರಾದರು ಅಂತಿಮವಾಗಿ ಒಂದೇ ಸಂವಿಧಾನವನ್ನು ಒಪ್ಪಿಕೊಂಡು ಬದುಕಲು ಆಯ್ಕೆ ಮಾಡಿಕೊಂಡ ದೇಶಕ್ಕೆ ಸೇರಿದ್ದೇವೆ.

ಕಾನೂನು ವಿದ್ಯಾಭ್ಯಾಸ ಮಾಡಿ, ಅರ್ಹತೆಯ ಪರೀಕ್ಷೆ ಬರೆದು ಈ ಹುದ್ದೆಗೆ ಬಂದ ರಾಯಚೂರಿನ ನ್ಯಾಯಾಧೀಶರು ಈ ಸಂವೇದನೆ-ಸೂಕ್ಷ್ಮತೆ ಹೊಂದಿಲ್ಲವೆಂದರೆ ಅಂಥವರು ಆ ಹುದ್ದೆಯಲ್ಲಿ ಮುಂದುವರೆಯಲು ಅನರ್ಹರು. ಸರ್ಕಾರ ಅವರನ್ನು ಕೂಡಲೇ ಕೆಲಸದಿಂದ ಬಿಡುಗಡೆ ಮಾಡಬೇಕು. ಮಾತ್ರವಲ್ಲ, ಧ್ವಜಾರೋಹಣೆಯನ್ನು ನಿರ್ದಿಷ್ಟ ಕಾರಣಕ್ಕೆ ನಿರಾಕರಿಸಿದ್ದರೆ ಅವರ ಮೇಲೆ “ಸಂವಿಧಾನ ನಿಂದನೆ” ನಿಯಮಾವಳಿ ಪ್ರಕಾರ ಪ್ರಕರಣ ದಾಖಲಿಸಿ, ಬಂಧಿಸಬೇಕು. (ರಾಷ್ಟ್ರ ನಿಂದನೆ ಕಾನೂನು: 1971, ಆಕ್ಟ್‌ 69, 1971)” ಎಂದಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್ ಫೋಟೋ ಇದ್ದರೆ ಧ್ವಜಾರೋಹಣ ಮಾಡಲ್ಲ: ರಾಯಚೂರು ಜಿಲ್ಲಾ ನ್ಯಾಯಾಧೀಶರ ನಡೆಗೆ ತೀವ್ರ ಆಕ್ರೋಶ

ಹಿರಿಯ ವಕೀಲರಾದ ಸಿ.ಎಸ್.ದ್ವಾರಕನಾಥ್ ತಮ್ಮ ಫೇಸ್‌ಬುಕ್‌ನಲ್ಲಿ “ಸಂವಿಧಾನದ ಅವಧಿ ಮುಗಿಯುತ್ತಿದೆ’ ಎಂಬ ಚರ್ಚಾ ಸ್ವರ್ಧೆ ಏರ್ಪಡಿಸಿದ್ದ ಶಾಲೆ ಮತ್ತು ಅಂಬೇಡ್ಕರ್ ಫೋಟೋ ತೆಗಿಸಿದ ರಾಯಚೂರಿನ ಜಿಲ್ಲಾ ನ್ಯಾಯಾಧೀಶ ಈ ಎರಡು ಪ್ರಕರಣಗಳ ಕುರಿತು ಅಭಿಪ್ರಾಯ ಹಂಚಿಕೊಂಡಿದ್ದಾರೆ.

“ಸಂವಿಧಾನ ಮತ್ತು ಅಂಬೇಡ್ಕರ್ ರವರ ಕುರಿತು ಏನೆಲ್ಲಾ ಪೂರ್ವಾಗ್ರಹಗಳನ್ನು ಇಟ್ಟುಕೊಂಡ ಅನೇಕ ಮಂದಿ ಜಿಲ್ಲಾ ಮತ್ತು ಅಧೀನ ಕೋರ್ಟುಗಳಲ್ಲಿ ನ್ಯಾಯಾದೀಶರ ವೇಶದಲ್ಲಿದ್ದಾರೆ. ಇಂತವರು ನಮ್ಮ ಹೈಕೋರ್ಟು, ಸುಪ್ರೀಂ ಕೋರ್ಟುಗಳಲ್ಲೂ ಇದ್ದಾರೆ! ಇದರ ಬಗ್ಗೆ ಅನುಮಾನವೇ ಇಲ್ಲ! ನನಗೆ ಆತಂಕವಿರುವುದು ಇಂತಹ ಪೂರ್ವಾಗ್ರಹ ಇಟ್ಟುಕೊಂಡ ನ್ಯಾಯಾದೀಶರಿಂದ ಎಂತಹ ತೀರ್ಪುಗಳನ್ನು ಈ ನಾಡಿನ ಜನ ನಿರೀಕ್ಷಿಸಬಹುದು ಎನ್ನುವುದು..?  ಡಾ.ಅಂಬೇಡ್ಕರ್ ರವರು ಈ ದೇಶದ ಸಂವಿಧಾನ ಬರೆದವರು, ಗಣರಾಜ್ಯೋತ್ಸವದ ದಿನ ಎಂದರೆ ಸಂವಿಧಾನದ ಪ್ರಕಾರ ಈ ದೇಶವನ್ನು ಗಣರಾಜ್ಯವನ್ನಾಗಿ ಪರಿಗಣಿಸಿದ ದಿನ. ಇಂತಹ ದಿನದಂದು ಸಂವಿಧಾನ ರಚಿಸಿದ ಅಂಬೇಡ್ಕರ್ ರವರಲ್ಲದೆ ಇನ್ಯಾರ ಚಿತ್ರವನ್ನು ಇಟ್ಟು ಗಣರಾಜ್ಯೋತ್ಸವ ವನ್ನು ಆಚರಿಸಬೇಕು? ಎಂಬ ಕಾಮನ್ ಸೆನ್ಸ್ ಪ್ರಶ್ನೆಯನ್ನು ಹಾಕಿಕೊಂಡಿದ್ದರೂ ಈ ನ್ಯಾಯಾದೀಶನಿಗೆ ಉತ್ತರ ಸಿಗುತಿತ್ತು‌? ಅಂಬೇಡ್ಕರ್ ಅಸ್ಪೃಶ್ಯ ರಾಗಿದ್ದೇ ಕಾರಣ, ಈ so called ಶೂದ್ರ ಜಾತಿಗಳಿಗೂ ಜಾತಿ ಪ್ರಜ್ಞೆ ಜಾಗೃತವಾಗಿಬಿಡುತ್ತೆ. ಈ ಕ್ಯಾನ್ಸರ್ ಇವರ ತಲೆಯಲ್ಲಿರುವವರೆಗೂ ಇವರಿಗೆ ಉಳಿಗಾಲವಿಲ್ಲ!” ಎಂದಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್‌ಗೆ ಅವಮಾನ ಘಟನೆ: ಶೋಷಿತರ ಬಗ್ಗೆ ಹೆಪ್ಪುಗೊಂಡಿರುವ ಅಸಹನೆಯ ಚಿಕ್ಕ ಪ್ರತಿನಿಧಿ ಈ ನ್ಯಾಯಾಧೀಶರು!

ಹಿರಿಯ ಸಾಹಿತಿ, ಸಂಶೋಧಕ ಪ್ರೊ. ರಹಮತ್ ತರೀಕೆರೆ ಅವರು “ಬಾಬಾಸಾಹೇಬರು ರಚಿಸಿದ ಸಂವಿಧಾನದಡಿಯಲ್ಲಿ, ನ್ಯಾಯದಾನ ಮಾಡುವ ಮತ್ತು ಅಧಿಕಾರ ನಿರ್ವಹಿಸುವ ಸಾರ್ವಜನಿಕ ಜಾಗೆಗಳಲ್ಲಿ, ದಲಿತರನ್ನು‌ ಮಹಿಳೆಯರನ್ನು ಮುಸ್ಲಿಮರನ್ನು ಬುಡಕಟ್ಟುಗಳನ್ನು ಕುರಿತು ಹೆಪ್ಪುಗೊಂಡಿರುವ ಘೋರ ಅಸಹನೆಯ ಒಂದು ಚಿಕ್ಕ ಪ್ರತಿನಿಧಿ ರಾಯಚೂರಿನ ಸದರಿ ಮಾನ್ಯ ನ್ಯಾಯಾಧೀಶರು. ನ್ಯಾಯಾಲಯ ಕ್ಷೇತ್ರದಲ್ಲಿ ಢಾಳಾಗಿ ನೆಲೆಗೊಂಡಿರುವ ಸಾಮಾಜಿಕ-ಧಾರ್ಮಿಕ ದ್ವೇಷಭಾವದ ಬಗ್ಗೆ ನನ್ನ ವಕೀಲ ಮಿತ್ರರ ಅನುಭವಗಳನ್ನು ಕೇಳಿರುವೆ. ನ್ಯಾಯಾಧೀಶರಾಗಿದ್ದ ಕೋಚೆಯವರೂ ಇಂತಹ ಅನುಭವಗಳನ್ನು ಹಂಚಿಕೊಳ್ಳುತ್ತಿದ್ದರು. ಗಾಬರಿಯಾಗುತ್ತದೆ. ದುಗುಡವಾಗುತ್ತದೆ. ಅಂಬೇಡ್ಕರ್ ಅವರು “ಸಾಮಾಜಿಕ ಆರ್ಥಿಕ ಅಸಮಾನತೆ ಇರುವ ಸಮಾಜದಲ್ಲಿ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥ ಇರುವುದಿಲ್ಲ” ಎಂದಿದ್ದು ಇದಕ್ಕಾಗಿಯೇ” ಎಂದು ಆತಂಖ ಹಂಚಿಕೊಂಡಿದ್ದಾರೆ.

ಚಿಂತಕ, ಪ್ರಾಧ್ಯಾಪಕ ಕೆಎಲ್‌ ಚಂದ್ರಶೇಖರ್‌ ಐಜೂರು, ತಮ್ಮ ಫೇಸ್‌ಬುಕ್‌ನಲ್ಲಿ ಸರ್ಕಾರಿ ಆದೇಶದ ಪ್ರತಿ ಹಂಚಿಕೊಂಡಿದ್ದು, ನ್ಯಾಯಾಧೀಶರ ನಡೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

 

ಲೇಖಕ, ಪತ್ರಕರ್ತ ಬಿಎಂ ಬಶೀರ್‌ ಅವರು, ‘‘ಯಾವಾಗ ಈ ದೇಶದ ಹೈಕೋರ್ಟ್ ಮುಂದೆ ಮನುವಿನ ಪ್ರತಿಮೆ ಸ್ಥಾಪನೆಯಾಗಲು ಜನರು ಮೌನ ಸಮ್ಮತಿಯನ್ನು ಕೊಟ್ಟರೋ ಆಗಲೇ ಅಂಬೇಡ್ಕರ್ ಬದಿಗೆ ಸರಿದರು. ರಾಜಸ್ತಾನದ ಹೈಕೋರ್ಟ್ ಮುಂದೆ ಮನುವಿನ ಪ್ರತಿಮೆ ಬಟಾ ಬಯಲಲ್ಲಿ ನಿಂತು ಈ ದೇಶದ ಸಂವಿಧಾನಕ್ಕೆ ಪ್ರತಿ ದಿನ ಸವಾಲು ಹಾಕುತ್ತಿರುವಾಗ, ನಮಗೇನೂ ಅನ್ನಿಸುವುದಿಲ್ಲ. ನೆನಪಿಡಿ ಈ ಪ್ರತಿಮೆ ನಿಲ್ಲಿಸಲು ಅನುಮತಿ ನೀಡಿದವರು ನ್ಯಾಯಾಧೀಶರೇ. ಹೀಗಿರುವಾಗ ನ್ಯಾಯಾಧೀಶನೊಬ್ಬ ಅಂಬೇಡ್ಕರ್ ಫೋಟೋ ಇದ್ದರೆ ಧ್ವಜಾರೋಹಣ ಮಾಡುವುದಿಲ್ಲ ಎನ್ನುವುದರಲ್ಲಿ ಅಚ್ಚರಿ ಏನೂ ಇಲ್ಲ ಎಂದಿದ್ದಾರೆ.


ಇದನ್ನೂ ಓದಿ: ಕೋಮುವಾದಿಗಳು ಆಕ್ಟೀವ್ ಆಗಿರುವುದರಿಂದ ಇಂತಹ ಘಟನೆಗಳಾಗುತ್ತಿವೆ: ಜಸ್ಟೀಸ್ ದಾಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Some peoples trying to touch….. And then it gets embarrassed asking sorry……
    But we must think that once day comes next night should also be circulated…… Anyone can’t close the eyes of Almighty God.

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....