Homeಅಂಕಣಗಳುಗಾಂಧೀಜಿ 'ತತ್ವರಹಿತ ರಾಜಕೀಯ' ಪಾತಕವೆಂದರು, ಆದರೆ....

ಗಾಂಧೀಜಿ ‘ತತ್ವರಹಿತ ರಾಜಕೀಯ’ ಪಾತಕವೆಂದರು, ಆದರೆ….

ಮುಖ್ಯಮಂತ್ರಿ ಕುಮಾರಸ್ವಾಮಿಯವರು ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಇತ್ತೀಚೆಗೆ ಭೇಟಿ ಮಾಡಿದಾಗ, "ನಿಮ್ಮದೂ ಕುಟುಂಬ ರಾಜಕೀಯ, ನಮ್ಮದೂ ಕುಟುಂಬ ರಾಜಕೀಯ.

- Advertisement -
- Advertisement -

| ಎಚ್. ಎಸ್. ದೊರೆಸ್ವಾಮಿ |

ದೇವೇಗೌಡರು ಇನ್ನು ಮುಂದಾದರೂ ಕುಟುಂಬ ರಾಜಕೀಯಕ್ಕೆ ವಿದಾಯ ಹಾಡಿ, ನಿಜವಾದ ಪ್ರಜಾಪ್ರಭುತ್ವ ಸ್ಥಾಪನೆಗೆ ತೊಡಗುವುದು ಅವರ ರಾಜಕೀಯ ಇಳಿ ಜೀವನವನ್ನು ಕೊಂಚ ಮುತ್ಸದ್ಧಿತನಕ್ಕೆ ತಂದು ನಿಲ್ಲಿಸಬಹುದು. ಹಾಗೆಂದೇ ನಾನು ವಿನಂತಿಸಿಕೊಳ್ಳುತ್ತೇನೆ.

ಮುಖ್ಯಮಂತ್ರಿ ಕುಮಾರಸ್ವಾಮಿಯವರು ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಇತ್ತೀಚೆಗೆ ಭೇಟಿ ಮಾಡಿದಾಗ, “ನಿಮ್ಮದೂ ಕುಟುಂಬ ರಾಜಕೀಯ, ನಮ್ಮದೂ ಕುಟುಂಬ ರಾಜಕೀಯ. ಅಷ್ಟೇಅಲ್ಲ ಆಂಧ್ರದಲ್ಲಿ, ತೆಲಂಗಾಣದಲ್ಲಿ, ಹರಿಯಾಣದಲ್ಲಿ, ಮದ್ರಾಸ್ ಪ್ರಾಂತ್ಯದಲ್ಲಿ ನಡೆಯುತ್ತಿರುವುದು ಕುಟುಂಬ ರಾಜಕೀಯ. ಅದಕ್ಯಾಕೆ ತಲೆ ಕೆಡಿಸಿಕೊಳ್ಳುತ್ತೀರಿ? ನೀವು ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರೆಯಿರಿ’ ಎಂದು ಹೇಳಿ ಬಂದಿದ್ದಾರೆಂದು ಪತ್ರಿಕೆಯಲ್ಲಿ ವರದಿಯಾಗಿದೆ.

ಕುಟುಂಬ ರಾಜಕೀಯ ನಮ್ಮ ದೇಶಕ್ಕೆ ಅಂಟಿರುವ ಮಹಾವ್ಯಾಧಿ. ಇದನ್ನು ಸಮರ್ಥಿಸಿಕೊಳ್ಳುವವರೂ ಇದ್ದಾರೆ ಎಂಬುದು ದೇಶದ ದುರ್ದೈವ.

ನಮ್ಮ ಸಂವಿಧಾನವನ್ನು ರಚಿಸಿದವರು ಭಾರತವು ಪ್ರಜಾತಂತ್ರವನ್ನು ಪಾಲಿಸುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ. ನಮ್ಮ ಸ್ವಾತಂತ್ರ್ಯ ಸಂಗ್ರಾಮ ನಡೆದಾಗ 562 ಸಂಸ್ಥಾನಿಕ ರಾಜರುಗಳಿದ್ದರು. ನಾವಷ್ಟೇ ಪೃಥ್ವೀಪತಿಗಳೆಂದು ಅವರು ಭಾವಿಸಿದ್ದರು. ಈ ಪೃಥ್ವೀಪತಿಗಳು ದೇವರ ಅಂಶ ಎಂದು ಅಂದಿನ ಸಮಾಜ ಒಪ್ಪಿಕೊಂಡಿತ್ತು. ಇಂಗ್ಲೆಂಡಿನಲ್ಲಿ ಒಂದು ಭಾವನೆಯಿತ್ತು. ಅದೆಂದರೆ The King does no wrong! ರಾಜನು ತಪ್ಪೇ ಮಾಡುವುದಿಲ್ಲ, ತಪ್ಪು ಮಾಡಿದರೂ ಅದನ್ನು ಪ್ರಶ್ನಿಸುವ ಹಕ್ಕು ಪ್ರಜೆಗಿಲ್ಲ ಎಂದೇ ಇದಕ್ಕೆ ಅರ್ಥ.

ಈ ರಾಜರುಗಳಿಗೆ, ತಾವು ಆಳ್ವಿಕೆ ಮಾಡುವ ಈ ರಾಜ್ಯವೆಲ್ಲ ತನ್ನ ಸ್ವತ್ತು, ಇದನ್ನು ಪ್ರಶ್ನಿಸುವ ಹಕ್ಕು ಯಾವ ಪ್ರಜೆಗೂ ಇಲ್ಲ ಎಂಬ ಭಾವನೆ ಇತ್ತು. ಸ್ವಾತಂತ್ರ್ಯ ಬಂದನಂತರ ಸರ್ದಾರ್ ಪಟೇಲರು ಈ 562 ರಾಜರಿಂದಲೂ ರಾಜತ್ವ ಅಧಿಕಾರ ಕಿತ್ತುಕೊಂಡು ಸಂಸ್ಥಾನಗಳಲ್ಲಿ ಪ್ರಜಾರಾಜ್ಯ ಸ್ಥಾಪಿಸಿದರು. ಸ್ವಾತಂತ್ರ್ಯ ಪ್ರಾಪ್ತವಾದ ಈ 72 ವರ್ಷಗಳಲ್ಲಿ ರಾಜಕೀಯ ಬದಲಾಗುತ್ತಾ ಬಂತು. ನೆಹರೂ ಸಂತತಿಯವರು ಕಾಂಗ್ರೆಸ್ಸಿನ ಚುಕ್ಕಾಣಿ ಹಿಡಿದರು. ಅವರನ್ನು ಅನುಸರಿಸಿ ಒಂದೊಂದು ರಾಜ್ಯದಲ್ಲೂ ಒಂದೊಂದು ಮನೆತನದವರೂ ತಾವು ರಚಿಸಿದ ರಾಜಕೀಯ ಪಕ್ಷವನ್ನು ತಮ್ಮ ಕುಟುಂಬ ರಾಜಕೀಯವಾಗಿ ಪರಿವರ್ತನೆ ಮಾಡಿದರು.

ಆದರೆ ಹಾಗೆಂದು ಅವರ್ಯಾರು ಇದನ್ನು ಜಗಜ್ಜಾಹೀರು ಮಾಡಲಿಲ್ಲ. ಚಾಣಾಕ್ಷತೆಯಿಂದ ಕುಟುಂಬ ರಾಜಕೀಯವನ್ನು ಬೆಳೆಸುತ್ತಾ ಬಂದರು. ಮೊದಮೊದಲು ನಮ್ಮದು ಕುಟುಂಬ ರಾಜಕೀಯ ಎಂಬುದನ್ನು ಸಮರ್ಥನೆ ಮಾಡುತ್ತಲೂ ಹಿಂಜರಿಯುತ್ತಿದ್ದರು. ಪ್ರಜಾಪ್ರಭುತ್ವ ತತ್ವಗಳನ್ನೇ ಆಚರಣೆಗೆ ತಂದಿದ್ದೇವೆ ಎಂಬ ಭ್ರಾಂತಿ ಹುಟ್ಟಿಸಿ ತಮ್ಮ ನಿಲುವನ್ನು ಸಮರ್ಥಿಸಿಕೊಳ್ಳಲೂ ಮುಂದಾದರು. ನಮ್ಮ ಮನೆಯವರಿಗೆ ಒಬ್ಬಿಬ್ಬರಿಗೆ ರಾಜಕೀಯ ಪ್ರವೇಶಿಸಲು ಅವಕಾಶ ಕೊಟ್ಟ ಮಾತ್ರಕ್ಕೆ ಇದನ್ನು ಕುಟುಂಬ ರಾಜಕೀಯ ಎಂದು ಏಕೆ ಬೊಬ್ಬೆ ಹೊಡೆಯುತ್ತೀರಿ ಎಂದರು. ಕಾಲಕ್ರಮೇಣ ಮನೆಮಂದಿಗೆಲ್ಲ ಚುನಾವಣೆಗೆ ಸೀಟು ನೀಡಲು ಆರಂಭಿಸಿದಾಗ ಜನಕ್ಕೆ ಇವರ ಹುನ್ನಾರ ಗೊತ್ತಾಯಿತು.

ಜಾತಿಯ ಹೆಸರಿನಲ್ಲಿ ರಾಜಕೀಯ ಮಾಡಿ, ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆಂದು ಜನ ತಿರುಗಿಬಿದ್ದರು. ಚುನಾವಣೆಯಲ್ಲಿ ಆ ಮನೆತನದ ಕೆಲವರನ್ನು ಪರಾಭವಗೊಳಿಸಲು ಉದ್ಯುಕ್ತರಾದರು. ಈಗ ಲೋಕಕ್ಕೆ ಗೊತ್ತಾಯಿತು, ಇವರೆಲ್ಲ ಕುಟುಂಬ ರಾಜಕೀಯಕ್ಕೆ ಪ್ರಜಾಪ್ರಭುತ್ವವನ್ನು ಬಲಿ ಕೊಡುತ್ತಿದ್ದಾರೆಂಬುದು. ಆದರೆ ಕುಟುಂಬ ರಾಜಕೀಯ ನಡೆಸಿದವರಿಗೆ ಈಗ ತಮ್ಮನ್ನು ಸಮರ್ಥಿಸಿಕೊಳ್ಳುವ ಧೈರ್ಯ ಬಂದಿದೆ. ರಾಹುಲ್ ಗಾಂಧಿಗೆ ಕುಮಾರಸ್ವಾಮಿಯವರು ಕುಟುಂಬ ರಾಜಕಾರಣದ ಧೈರ್ಯ ತುಂಬಿ ಬಂದಿದ್ದಾರೆ ಎನ್ನುವ ಸುದ್ದಿ ಇದನ್ನು ಸಾಬೀತು ಮಾಡುತ್ತದೆ.

ಇದು ನಿಜವೇ ಆಗಿದ್ದರೆ, ಭಾರತದ ಪ್ರಜಾಪ್ರಭುತ್ವಕ್ಕೆ ಇದೊಂದು ದೊಡ್ಡ ದುರಂತವಾಗಲಿದೆ. ಜನ ಅಜ್ಞಾನಿಗಳು, ಅಸಹಾಯಕರು, ಅವರನ್ನು ತುಳಿದಷ್ಟು ನಮ್ಮ ಬೇಳೆ ಬೇಯಿಸಿ ಕೊಳ್ಳಬಹುದು ಎಂದು ಈ ಕುಟುಂಬ ರಾಜಕಾರಣದ ಫಲಾನುಭವಿಗಳು ಭಾವಿಸಿರುವಂತಿದೆ.

ಬಹುಶಃ ದೇವೇಗೌಡರಿಗೆ ತಮ್ಮ ಸೋಲಿಗೆ ಕಾರಣ ತಮ್ಮ ಕುಟುಂಬ ರಾಜಕಾರಣ ಎಂಬುದು ಈಗ ಮನವರಿಕೆಯಾಗಿರಬಹುದು. ಆದರೆ ಅದನ್ನು ಅವರೆಲ್ಲು ಬಹಿರಂಗವಾಗಿ ಒಪ್ಪಿಕೊಳ್ಳುತ್ತಿಲ್ಲವಷ್ಟೆ. ಅವರು ಇತ್ತೀಚಿನ ಸಭೆ ಸಮ್ಮೇಳನಗಳಲ್ಲಿ ಅಧಿಕಾರವನ್ನು ಎಲ್ಲ ಕೋಮಿನ ನಾಯಕರೊಡನೆ ಹಂಚಿಕೊಳ್ಳುವ ಮಾತನಾಡುತ್ತಿದ್ದಾರೆ. ಕುಟುಂಬ ರಾಜಕೀಯ ಮುಂದುವರೆಸುತ್ತಾ, ಈ ಸೋಗಲಾಡಿ ನೀತಿಯನ್ನು ಅನುಷ್ಠಾನಕ್ಕೆ ತರುವ ಉದ್ದೇಶ ಅವರದಾಗಿರಬಹುದು. ಜನರನ್ನು ಒಂದು ಸಾರಿಯೋ, ಎರಡು ಸಾರಿಯೋ ಯಾಮಾರಿಸಬಹುದು. ಅವರನ್ನು ಸದಾಕಾಲ ವಂಚಿಸಲು ಸಾಧ್ಯವಿಲ್ಲ ಎಂಬ ಗಾದೆ ಇದೆ.

ದೇವೇಗೌಡರು ಇನ್ನು ಮುಂದಾದರೂ ಕುಟುಂಬ ರಾಜಕೀಯಕ್ಕೆ ವಿದಾಯ ಹಾಡಿ, ನಿಜವಾದ ಪ್ರಜಾಪ್ರಭುತ್ವ ಸ್ಥಾಪನೆಗೆ ತೊಡಗುವುದು ಅವರ ರಾಜಕೀಯ ಇಳಿ ಜೀವನವನ್ನು ಕೊಂಚ ಮುತ್ಸದ್ಧಿತನಕ್ಕೆ ತಂದು ನಿಲ್ಲಿಸಬಹುದು. ಹಾಗೆಂದೇ ನಾನು ವಿನಂತಿಸಿಕೊಳ್ಳುತ್ತೇನೆ.

ಈ ಸಾರಿ ಲೋಕಸಭೆ ಚುನಾವಣೆಯ ಫಲಿತಾಂಶ ನೋಡಿ ಕರ್ನಾಟಕದ ಜನ (ಇದ್ದಕ್ಕಿದ್ದ ಹಾಗೆ) ಮತಾಂಧರಾಗಿ ಬಿಟ್ಟಿದ್ದಾರೆ ಎಂಬ ತೀರ್ಮಾನಕ್ಕೆ ಬರಬೇಡಿ. ಕನ್ನಡ ಸಂಸ್ಕೃತಿಯನ್ನು ಮೈಗೂಡಿಸಿಕೊಂಡ ಅನೇಕ ಶ್ರೇಷ್ಠ ಕವಿಗಳು, ಬರಹಗಾರರು, ವಿಚಾರವಂತರು, ಕಲಾವಿದರು, ಕರ್ನಾಟಕದಲ್ಲಿದ್ದಾರೆ. ಇವರ್ಯಾರು partian ಗಳಲ್ಲ. ಇಂದಿರಾಗಾಂಧಿ ತನ್ನ ಪ್ರಧಾನಿ ಸ್ಥಾನ ಅಭದ್ರವೆಂದೆನಿಸಿದಾಗ ತನ್ನ ಮಕ್ಕಳನ್ನೇ ಅಧಿಕಾರಕ್ಕೆ ತರುವ ವಿಚಾರ ಮಾಡಿದರು. ಅಲ್ಲಿಂದ ಆರಂಭವಾಯಿತು ಕುಟುಂಬ ರಾಜಕಾರಣ. ದೇವೇಗೌಡರು ತನ್ನ ಮಗನನ್ನು ರಾಜಕೀಯಕ್ಕೆ ತಂದಿದ್ದು ಅವರನ್ನು ಗದ್ದುಗೆಗೆ ಕೂಡಿಸುವ ದೃಷ್ಟಿಯಿಂದ. ಭಾಜಪ ಜೊತೆ ಮೈತ್ರಿ ಮಾಡಿಕೊಂಡಿದ್ದು ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಮಾಡುವ ಏಕೈಕ ಉದ್ದೇಶದಿಂದ. ಆಮೇಲೆ ತಮ್ಮ ಕುಟುಂಬದ ರೇವಣ್ಣ, ಅನಿತಾ, ಭವಾನಿ, ಪ್ರಜ್ವಲ್, ನಿಖಿಲ್ ಕುಮಾರಸ್ವಾಮಿ ಹೀಗೆ ಎಲ್ಲರನ್ನೂ ಒಬ್ಬೊಬ್ಬರನ್ನಾಗಿ ರಾಜಕೀಯಕ್ಕೆ ಎಳೆದರು. ರಾಜಕೀಯ ಸಮ್ಮೇಳನ ನಡೆಸಿ, ಅಲ್ಲಿ ‘ನನ್ನನ್ನೂ ಜನ ಕುಟುಂಬ ರಾಜಕೀಯ ಮಾಡುವವನು ಎಂದು ಜರಿಯುತ್ತಾರೆ’ ಎಂದು ಹೇಳಿ ‘ಗಳಗಳ’ ಅತ್ತುಬಿಟ್ಟರು. ಪತ್ರಿಕಾಗೋಷ್ಠಿಯ ಮುಂದೆಯೂ ದೃಶ್ಯ ಮಾಧ್ಯಮಗಳ ಮುಂದೆಯೂ ಅಳುತ್ತಾ ತಮ್ಮ ಅಳಲನ್ನು ತೋಡಿಕೊಂಡರು. ಮುಂದೆ ಪಾರ್ಲಿಮೆಂಟ್ ಚುನಾವಣೆ ಹತ್ತಿರ ಬರುತ್ತಿದ್ದಂತೆ, ಕಾಂಗ್ರೆಸ್ ಮತ್ತು ಜಾತ್ಯತೀತ ಜನತಾ ದಳದ ಮಧ್ಯೆ ಘರ್ಷಣೆ ಆರಂಭವಾಯಿತು. ಇದು ಸಾಲದೆಂಬಂತೆ, ಕಾಂಗ್ರೆಸ್ಸಿನ ಅತೃಪ್ತ ಶಾಸಕರು ಸರ್ಕಾರದ ಇರುವಿಗೆ ಭಂಗ ಬರುವಂತೆ ರೆಸಾರ್ಟ್ ರಾಜಕೀಯಕ್ಕೆ ಮುಂದಾದರು. ಇದೆಲ್ಲ ಕಾರಣದಿಂದ ಕಾಂಗ್ರೆಸ್ ಮತ್ತು ಜಾತ್ಯಾತೀತ ಜನತಾ ದಳ ಅಭ್ಯರ್ಥಿಗಳೆಲ್ಲರೂ ಚುನಾವಣೆಯಲ್ಲಿ ಸೋತರು.

ಈ ಯಾದವಿ ಕಲಹ ಕರ್ನಾಟಕದ ಘಟಾನುಘಟಿ ನಾಯಕರೆಲ್ಲರನ್ನು ಆಹುತಿ ತೆಗೆದುಕೊಂಡಿತು.

ತತ್ವ ರಹಿತ ರಾಜಕೀಯ ಮಾಡುವುದು ಸಪ್ತ ಸಾಮಾಜಿಕ ಪಾತಕಗಳಲ್ಲಿ ಒಂದು ಎಂದು ಗಾಂಧೀಜಿ ಹೇಳಿದ್ದಾರೆ. ಆದರೆ, ಈಗ ಭಾರತದಲ್ಲಿ ಆಚರಣೆಯಲ್ಲಿರುವುದು ಅದೇ ತತ್ವರಹಿತ, ಸ್ವಾರ್ಥಹಿತದ ರಾಜಕೀಯ ಎನ್ನುವ ದುರಂತವನ್ನು ನಾವೆಲ್ಲರೂ
ಒಪ್ಪಿಕೊಳ್ಳಲೇಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...