Homeಅಂಕಣಗಳುಗಾಂಧೀಜಿ 'ತತ್ವರಹಿತ ರಾಜಕೀಯ' ಪಾತಕವೆಂದರು, ಆದರೆ....

ಗಾಂಧೀಜಿ ‘ತತ್ವರಹಿತ ರಾಜಕೀಯ’ ಪಾತಕವೆಂದರು, ಆದರೆ….

ಮುಖ್ಯಮಂತ್ರಿ ಕುಮಾರಸ್ವಾಮಿಯವರು ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಇತ್ತೀಚೆಗೆ ಭೇಟಿ ಮಾಡಿದಾಗ, "ನಿಮ್ಮದೂ ಕುಟುಂಬ ರಾಜಕೀಯ, ನಮ್ಮದೂ ಕುಟುಂಬ ರಾಜಕೀಯ.

- Advertisement -
- Advertisement -

| ಎಚ್. ಎಸ್. ದೊರೆಸ್ವಾಮಿ |

ದೇವೇಗೌಡರು ಇನ್ನು ಮುಂದಾದರೂ ಕುಟುಂಬ ರಾಜಕೀಯಕ್ಕೆ ವಿದಾಯ ಹಾಡಿ, ನಿಜವಾದ ಪ್ರಜಾಪ್ರಭುತ್ವ ಸ್ಥಾಪನೆಗೆ ತೊಡಗುವುದು ಅವರ ರಾಜಕೀಯ ಇಳಿ ಜೀವನವನ್ನು ಕೊಂಚ ಮುತ್ಸದ್ಧಿತನಕ್ಕೆ ತಂದು ನಿಲ್ಲಿಸಬಹುದು. ಹಾಗೆಂದೇ ನಾನು ವಿನಂತಿಸಿಕೊಳ್ಳುತ್ತೇನೆ.

ಮುಖ್ಯಮಂತ್ರಿ ಕುಮಾರಸ್ವಾಮಿಯವರು ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಇತ್ತೀಚೆಗೆ ಭೇಟಿ ಮಾಡಿದಾಗ, “ನಿಮ್ಮದೂ ಕುಟುಂಬ ರಾಜಕೀಯ, ನಮ್ಮದೂ ಕುಟುಂಬ ರಾಜಕೀಯ. ಅಷ್ಟೇಅಲ್ಲ ಆಂಧ್ರದಲ್ಲಿ, ತೆಲಂಗಾಣದಲ್ಲಿ, ಹರಿಯಾಣದಲ್ಲಿ, ಮದ್ರಾಸ್ ಪ್ರಾಂತ್ಯದಲ್ಲಿ ನಡೆಯುತ್ತಿರುವುದು ಕುಟುಂಬ ರಾಜಕೀಯ. ಅದಕ್ಯಾಕೆ ತಲೆ ಕೆಡಿಸಿಕೊಳ್ಳುತ್ತೀರಿ? ನೀವು ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರೆಯಿರಿ’ ಎಂದು ಹೇಳಿ ಬಂದಿದ್ದಾರೆಂದು ಪತ್ರಿಕೆಯಲ್ಲಿ ವರದಿಯಾಗಿದೆ.

ಕುಟುಂಬ ರಾಜಕೀಯ ನಮ್ಮ ದೇಶಕ್ಕೆ ಅಂಟಿರುವ ಮಹಾವ್ಯಾಧಿ. ಇದನ್ನು ಸಮರ್ಥಿಸಿಕೊಳ್ಳುವವರೂ ಇದ್ದಾರೆ ಎಂಬುದು ದೇಶದ ದುರ್ದೈವ.

ನಮ್ಮ ಸಂವಿಧಾನವನ್ನು ರಚಿಸಿದವರು ಭಾರತವು ಪ್ರಜಾತಂತ್ರವನ್ನು ಪಾಲಿಸುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ. ನಮ್ಮ ಸ್ವಾತಂತ್ರ್ಯ ಸಂಗ್ರಾಮ ನಡೆದಾಗ 562 ಸಂಸ್ಥಾನಿಕ ರಾಜರುಗಳಿದ್ದರು. ನಾವಷ್ಟೇ ಪೃಥ್ವೀಪತಿಗಳೆಂದು ಅವರು ಭಾವಿಸಿದ್ದರು. ಈ ಪೃಥ್ವೀಪತಿಗಳು ದೇವರ ಅಂಶ ಎಂದು ಅಂದಿನ ಸಮಾಜ ಒಪ್ಪಿಕೊಂಡಿತ್ತು. ಇಂಗ್ಲೆಂಡಿನಲ್ಲಿ ಒಂದು ಭಾವನೆಯಿತ್ತು. ಅದೆಂದರೆ The King does no wrong! ರಾಜನು ತಪ್ಪೇ ಮಾಡುವುದಿಲ್ಲ, ತಪ್ಪು ಮಾಡಿದರೂ ಅದನ್ನು ಪ್ರಶ್ನಿಸುವ ಹಕ್ಕು ಪ್ರಜೆಗಿಲ್ಲ ಎಂದೇ ಇದಕ್ಕೆ ಅರ್ಥ.

ಈ ರಾಜರುಗಳಿಗೆ, ತಾವು ಆಳ್ವಿಕೆ ಮಾಡುವ ಈ ರಾಜ್ಯವೆಲ್ಲ ತನ್ನ ಸ್ವತ್ತು, ಇದನ್ನು ಪ್ರಶ್ನಿಸುವ ಹಕ್ಕು ಯಾವ ಪ್ರಜೆಗೂ ಇಲ್ಲ ಎಂಬ ಭಾವನೆ ಇತ್ತು. ಸ್ವಾತಂತ್ರ್ಯ ಬಂದನಂತರ ಸರ್ದಾರ್ ಪಟೇಲರು ಈ 562 ರಾಜರಿಂದಲೂ ರಾಜತ್ವ ಅಧಿಕಾರ ಕಿತ್ತುಕೊಂಡು ಸಂಸ್ಥಾನಗಳಲ್ಲಿ ಪ್ರಜಾರಾಜ್ಯ ಸ್ಥಾಪಿಸಿದರು. ಸ್ವಾತಂತ್ರ್ಯ ಪ್ರಾಪ್ತವಾದ ಈ 72 ವರ್ಷಗಳಲ್ಲಿ ರಾಜಕೀಯ ಬದಲಾಗುತ್ತಾ ಬಂತು. ನೆಹರೂ ಸಂತತಿಯವರು ಕಾಂಗ್ರೆಸ್ಸಿನ ಚುಕ್ಕಾಣಿ ಹಿಡಿದರು. ಅವರನ್ನು ಅನುಸರಿಸಿ ಒಂದೊಂದು ರಾಜ್ಯದಲ್ಲೂ ಒಂದೊಂದು ಮನೆತನದವರೂ ತಾವು ರಚಿಸಿದ ರಾಜಕೀಯ ಪಕ್ಷವನ್ನು ತಮ್ಮ ಕುಟುಂಬ ರಾಜಕೀಯವಾಗಿ ಪರಿವರ್ತನೆ ಮಾಡಿದರು.

ಆದರೆ ಹಾಗೆಂದು ಅವರ್ಯಾರು ಇದನ್ನು ಜಗಜ್ಜಾಹೀರು ಮಾಡಲಿಲ್ಲ. ಚಾಣಾಕ್ಷತೆಯಿಂದ ಕುಟುಂಬ ರಾಜಕೀಯವನ್ನು ಬೆಳೆಸುತ್ತಾ ಬಂದರು. ಮೊದಮೊದಲು ನಮ್ಮದು ಕುಟುಂಬ ರಾಜಕೀಯ ಎಂಬುದನ್ನು ಸಮರ್ಥನೆ ಮಾಡುತ್ತಲೂ ಹಿಂಜರಿಯುತ್ತಿದ್ದರು. ಪ್ರಜಾಪ್ರಭುತ್ವ ತತ್ವಗಳನ್ನೇ ಆಚರಣೆಗೆ ತಂದಿದ್ದೇವೆ ಎಂಬ ಭ್ರಾಂತಿ ಹುಟ್ಟಿಸಿ ತಮ್ಮ ನಿಲುವನ್ನು ಸಮರ್ಥಿಸಿಕೊಳ್ಳಲೂ ಮುಂದಾದರು. ನಮ್ಮ ಮನೆಯವರಿಗೆ ಒಬ್ಬಿಬ್ಬರಿಗೆ ರಾಜಕೀಯ ಪ್ರವೇಶಿಸಲು ಅವಕಾಶ ಕೊಟ್ಟ ಮಾತ್ರಕ್ಕೆ ಇದನ್ನು ಕುಟುಂಬ ರಾಜಕೀಯ ಎಂದು ಏಕೆ ಬೊಬ್ಬೆ ಹೊಡೆಯುತ್ತೀರಿ ಎಂದರು. ಕಾಲಕ್ರಮೇಣ ಮನೆಮಂದಿಗೆಲ್ಲ ಚುನಾವಣೆಗೆ ಸೀಟು ನೀಡಲು ಆರಂಭಿಸಿದಾಗ ಜನಕ್ಕೆ ಇವರ ಹುನ್ನಾರ ಗೊತ್ತಾಯಿತು.

ಜಾತಿಯ ಹೆಸರಿನಲ್ಲಿ ರಾಜಕೀಯ ಮಾಡಿ, ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆಂದು ಜನ ತಿರುಗಿಬಿದ್ದರು. ಚುನಾವಣೆಯಲ್ಲಿ ಆ ಮನೆತನದ ಕೆಲವರನ್ನು ಪರಾಭವಗೊಳಿಸಲು ಉದ್ಯುಕ್ತರಾದರು. ಈಗ ಲೋಕಕ್ಕೆ ಗೊತ್ತಾಯಿತು, ಇವರೆಲ್ಲ ಕುಟುಂಬ ರಾಜಕೀಯಕ್ಕೆ ಪ್ರಜಾಪ್ರಭುತ್ವವನ್ನು ಬಲಿ ಕೊಡುತ್ತಿದ್ದಾರೆಂಬುದು. ಆದರೆ ಕುಟುಂಬ ರಾಜಕೀಯ ನಡೆಸಿದವರಿಗೆ ಈಗ ತಮ್ಮನ್ನು ಸಮರ್ಥಿಸಿಕೊಳ್ಳುವ ಧೈರ್ಯ ಬಂದಿದೆ. ರಾಹುಲ್ ಗಾಂಧಿಗೆ ಕುಮಾರಸ್ವಾಮಿಯವರು ಕುಟುಂಬ ರಾಜಕಾರಣದ ಧೈರ್ಯ ತುಂಬಿ ಬಂದಿದ್ದಾರೆ ಎನ್ನುವ ಸುದ್ದಿ ಇದನ್ನು ಸಾಬೀತು ಮಾಡುತ್ತದೆ.

ಇದು ನಿಜವೇ ಆಗಿದ್ದರೆ, ಭಾರತದ ಪ್ರಜಾಪ್ರಭುತ್ವಕ್ಕೆ ಇದೊಂದು ದೊಡ್ಡ ದುರಂತವಾಗಲಿದೆ. ಜನ ಅಜ್ಞಾನಿಗಳು, ಅಸಹಾಯಕರು, ಅವರನ್ನು ತುಳಿದಷ್ಟು ನಮ್ಮ ಬೇಳೆ ಬೇಯಿಸಿ ಕೊಳ್ಳಬಹುದು ಎಂದು ಈ ಕುಟುಂಬ ರಾಜಕಾರಣದ ಫಲಾನುಭವಿಗಳು ಭಾವಿಸಿರುವಂತಿದೆ.

ಬಹುಶಃ ದೇವೇಗೌಡರಿಗೆ ತಮ್ಮ ಸೋಲಿಗೆ ಕಾರಣ ತಮ್ಮ ಕುಟುಂಬ ರಾಜಕಾರಣ ಎಂಬುದು ಈಗ ಮನವರಿಕೆಯಾಗಿರಬಹುದು. ಆದರೆ ಅದನ್ನು ಅವರೆಲ್ಲು ಬಹಿರಂಗವಾಗಿ ಒಪ್ಪಿಕೊಳ್ಳುತ್ತಿಲ್ಲವಷ್ಟೆ. ಅವರು ಇತ್ತೀಚಿನ ಸಭೆ ಸಮ್ಮೇಳನಗಳಲ್ಲಿ ಅಧಿಕಾರವನ್ನು ಎಲ್ಲ ಕೋಮಿನ ನಾಯಕರೊಡನೆ ಹಂಚಿಕೊಳ್ಳುವ ಮಾತನಾಡುತ್ತಿದ್ದಾರೆ. ಕುಟುಂಬ ರಾಜಕೀಯ ಮುಂದುವರೆಸುತ್ತಾ, ಈ ಸೋಗಲಾಡಿ ನೀತಿಯನ್ನು ಅನುಷ್ಠಾನಕ್ಕೆ ತರುವ ಉದ್ದೇಶ ಅವರದಾಗಿರಬಹುದು. ಜನರನ್ನು ಒಂದು ಸಾರಿಯೋ, ಎರಡು ಸಾರಿಯೋ ಯಾಮಾರಿಸಬಹುದು. ಅವರನ್ನು ಸದಾಕಾಲ ವಂಚಿಸಲು ಸಾಧ್ಯವಿಲ್ಲ ಎಂಬ ಗಾದೆ ಇದೆ.

ದೇವೇಗೌಡರು ಇನ್ನು ಮುಂದಾದರೂ ಕುಟುಂಬ ರಾಜಕೀಯಕ್ಕೆ ವಿದಾಯ ಹಾಡಿ, ನಿಜವಾದ ಪ್ರಜಾಪ್ರಭುತ್ವ ಸ್ಥಾಪನೆಗೆ ತೊಡಗುವುದು ಅವರ ರಾಜಕೀಯ ಇಳಿ ಜೀವನವನ್ನು ಕೊಂಚ ಮುತ್ಸದ್ಧಿತನಕ್ಕೆ ತಂದು ನಿಲ್ಲಿಸಬಹುದು. ಹಾಗೆಂದೇ ನಾನು ವಿನಂತಿಸಿಕೊಳ್ಳುತ್ತೇನೆ.

ಈ ಸಾರಿ ಲೋಕಸಭೆ ಚುನಾವಣೆಯ ಫಲಿತಾಂಶ ನೋಡಿ ಕರ್ನಾಟಕದ ಜನ (ಇದ್ದಕ್ಕಿದ್ದ ಹಾಗೆ) ಮತಾಂಧರಾಗಿ ಬಿಟ್ಟಿದ್ದಾರೆ ಎಂಬ ತೀರ್ಮಾನಕ್ಕೆ ಬರಬೇಡಿ. ಕನ್ನಡ ಸಂಸ್ಕೃತಿಯನ್ನು ಮೈಗೂಡಿಸಿಕೊಂಡ ಅನೇಕ ಶ್ರೇಷ್ಠ ಕವಿಗಳು, ಬರಹಗಾರರು, ವಿಚಾರವಂತರು, ಕಲಾವಿದರು, ಕರ್ನಾಟಕದಲ್ಲಿದ್ದಾರೆ. ಇವರ್ಯಾರು partian ಗಳಲ್ಲ. ಇಂದಿರಾಗಾಂಧಿ ತನ್ನ ಪ್ರಧಾನಿ ಸ್ಥಾನ ಅಭದ್ರವೆಂದೆನಿಸಿದಾಗ ತನ್ನ ಮಕ್ಕಳನ್ನೇ ಅಧಿಕಾರಕ್ಕೆ ತರುವ ವಿಚಾರ ಮಾಡಿದರು. ಅಲ್ಲಿಂದ ಆರಂಭವಾಯಿತು ಕುಟುಂಬ ರಾಜಕಾರಣ. ದೇವೇಗೌಡರು ತನ್ನ ಮಗನನ್ನು ರಾಜಕೀಯಕ್ಕೆ ತಂದಿದ್ದು ಅವರನ್ನು ಗದ್ದುಗೆಗೆ ಕೂಡಿಸುವ ದೃಷ್ಟಿಯಿಂದ. ಭಾಜಪ ಜೊತೆ ಮೈತ್ರಿ ಮಾಡಿಕೊಂಡಿದ್ದು ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಮಾಡುವ ಏಕೈಕ ಉದ್ದೇಶದಿಂದ. ಆಮೇಲೆ ತಮ್ಮ ಕುಟುಂಬದ ರೇವಣ್ಣ, ಅನಿತಾ, ಭವಾನಿ, ಪ್ರಜ್ವಲ್, ನಿಖಿಲ್ ಕುಮಾರಸ್ವಾಮಿ ಹೀಗೆ ಎಲ್ಲರನ್ನೂ ಒಬ್ಬೊಬ್ಬರನ್ನಾಗಿ ರಾಜಕೀಯಕ್ಕೆ ಎಳೆದರು. ರಾಜಕೀಯ ಸಮ್ಮೇಳನ ನಡೆಸಿ, ಅಲ್ಲಿ ‘ನನ್ನನ್ನೂ ಜನ ಕುಟುಂಬ ರಾಜಕೀಯ ಮಾಡುವವನು ಎಂದು ಜರಿಯುತ್ತಾರೆ’ ಎಂದು ಹೇಳಿ ‘ಗಳಗಳ’ ಅತ್ತುಬಿಟ್ಟರು. ಪತ್ರಿಕಾಗೋಷ್ಠಿಯ ಮುಂದೆಯೂ ದೃಶ್ಯ ಮಾಧ್ಯಮಗಳ ಮುಂದೆಯೂ ಅಳುತ್ತಾ ತಮ್ಮ ಅಳಲನ್ನು ತೋಡಿಕೊಂಡರು. ಮುಂದೆ ಪಾರ್ಲಿಮೆಂಟ್ ಚುನಾವಣೆ ಹತ್ತಿರ ಬರುತ್ತಿದ್ದಂತೆ, ಕಾಂಗ್ರೆಸ್ ಮತ್ತು ಜಾತ್ಯತೀತ ಜನತಾ ದಳದ ಮಧ್ಯೆ ಘರ್ಷಣೆ ಆರಂಭವಾಯಿತು. ಇದು ಸಾಲದೆಂಬಂತೆ, ಕಾಂಗ್ರೆಸ್ಸಿನ ಅತೃಪ್ತ ಶಾಸಕರು ಸರ್ಕಾರದ ಇರುವಿಗೆ ಭಂಗ ಬರುವಂತೆ ರೆಸಾರ್ಟ್ ರಾಜಕೀಯಕ್ಕೆ ಮುಂದಾದರು. ಇದೆಲ್ಲ ಕಾರಣದಿಂದ ಕಾಂಗ್ರೆಸ್ ಮತ್ತು ಜಾತ್ಯಾತೀತ ಜನತಾ ದಳ ಅಭ್ಯರ್ಥಿಗಳೆಲ್ಲರೂ ಚುನಾವಣೆಯಲ್ಲಿ ಸೋತರು.

ಈ ಯಾದವಿ ಕಲಹ ಕರ್ನಾಟಕದ ಘಟಾನುಘಟಿ ನಾಯಕರೆಲ್ಲರನ್ನು ಆಹುತಿ ತೆಗೆದುಕೊಂಡಿತು.

ತತ್ವ ರಹಿತ ರಾಜಕೀಯ ಮಾಡುವುದು ಸಪ್ತ ಸಾಮಾಜಿಕ ಪಾತಕಗಳಲ್ಲಿ ಒಂದು ಎಂದು ಗಾಂಧೀಜಿ ಹೇಳಿದ್ದಾರೆ. ಆದರೆ, ಈಗ ಭಾರತದಲ್ಲಿ ಆಚರಣೆಯಲ್ಲಿರುವುದು ಅದೇ ತತ್ವರಹಿತ, ಸ್ವಾರ್ಥಹಿತದ ರಾಜಕೀಯ ಎನ್ನುವ ದುರಂತವನ್ನು ನಾವೆಲ್ಲರೂ
ಒಪ್ಪಿಕೊಳ್ಳಲೇಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...