Homeಕರ್ನಾಟಕಹಿಜಾಬ್ ವಿವಾದ: ಕಾಲೇಜುಗಳಲ್ಲಿ ವಸ್ತ್ರಸಂಹಿತೆ ಕಡ್ಡಾಯಗೊಳಿಸಿಲ್ಲ ಎಂದ ಶಿಕ್ಷಣ ಇಲಾಖೆ

ಹಿಜಾಬ್ ವಿವಾದ: ಕಾಲೇಜುಗಳಲ್ಲಿ ವಸ್ತ್ರಸಂಹಿತೆ ಕಡ್ಡಾಯಗೊಳಿಸಿಲ್ಲ ಎಂದ ಶಿಕ್ಷಣ ಇಲಾಖೆ

’ಹಿಜಾಬ್ ಹಾಕಿಕೊಂಡು ಬರಲು ಅನುಮತಿ ನೀಡುವುದಿಲ್ಲ. ಬೇಕಿದ್ದರೇ ಆನ್‌ಲೈನ್ ತರಗತಿಗಳನ್ನು ಮಾಡಿ, ಪರೀಕ್ಷೆಗೆ ಅವಕಾಶ ನೀಡುತ್ತೇವೆ’: ಶಾಸಕ ರಘುಪತಿ ಭಟ್

- Advertisement -
- Advertisement -

ಉಡುಪಿ ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿಯರ ಹಿಜಾಬ್ ವಿವಾದದ ಹಿನ್ನೆಲೆ ಉನ್ನತ ಮಟ್ಟದ ಸಮಿತಿ ರಚನೆ ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ. ಶಿಕ್ಷಣ ಇಲಾಖೆ ರಾಜ್ಯದ ಪದವಿ ಪೂರ್ವ ಕಾಲೇಜುಗಳಲ್ಲಿ ಸಮವಸ್ತ್ರ ನಿಗದಿಗೊಳಿಸಿ, ಕಡ್ಡಾಯಗೊಳಿಸಿಲ್ಲ ಎಂದು ಸರ್ಕಾರದ ಪ್ರಧಾನ ಕಾರ್ಯದರ್ಶಿ ತಿಳಿಸಿದ್ದಾರೆ.

ಶಿಕ್ಷಣ ಇಲಾಖೆ ಸಮವಸ್ತ್ರ, ವಸ್ತ್ರ ಸಂಹಿತಿ ಕಡ್ಡಾಯಗೊಳಿಸಿಲ್ಲ. ಆದರೆ,  ತಮ್ಮ ಆಯ್ಕೆಯ ವಸ್ತ್ರವನ್ನು ಧರಿಸಿ ಬರಲು ಅನುಮತಿ ನೀಡುವಂತೆ ಒತ್ತಾಯಿಸುತ್ತಿರುವ ಉಡುಪಿ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನ ವಿದ್ಯಾರ್ಥಿನಿಯರು, ಕಾಲೇಜಿಗೆ ಪ್ರವೇಶ ಪಡೆಯುವ ವೇಳೆಯಲ್ಲಿ  ಕಾಲೇಜಿನ ವಸ್ತ್ರಸಂಹಿತೆಯ ಮಾಹಿತಿ ಪಡೆದು, ಒಪ್ಪಿಕೊಂಡು ಸ್ವಇಚ್ಛೆಯಿಂದ ಕಾಲೇಜಿಗೆ ದಾಖಲಾತಿ ಪಡೆದಿದ್ದಾರೆ. ಆದರೆ, ಇಷ್ಟು ದಿನ ಇಲ್ಲದ ಗೊಂದಲಗಳನ್ನು ಈಗ ಸೃಷ್ಟಿಸುತ್ತಿರುವುದು ಶೈಕ್ಷಣಿಕ ಹಿತದೃಷ್ಟಿಯಿಂದ ಒಳಿತಲ್ಲ. ಈ ಹಿನ್ನೆಲೆಯಲ್ಲಿ ವಿವಿಧ ರಾಜ್ಯಗಳ ಪದವಿಪೂರ್ವ ಕಾಲೇಜುಗಳಲ್ಲಿ ಜಾರಿಯಿರುವ ಸಮವಸ್ತ್ರ ನೀತಿಸಂಹಿತೆಯನ್ನು ಪರಿಶೀಲಿಸಲು ಹಾಗೂ ಈ ಕುರಿತು ಸುಪ್ರೀಂ ಕೋರ್ಟ್‌, ರಾಜ್ಯಗಳ ಹೈಕೋರ್ಟ್‌ಗಳು ನೀಡಿರುವ ತೀರ್ಪುಗಳನ್ನು ಅವಲೋಕಿಸಿ ರಾಜ್ಯದ ಎಲ್ಲ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಸಮವಸ್ತ್ರ/ ವಸ್ತ್ರಸಂಹಿತೆ ನಿಗದಿಗೊಳಿಸಲು ಚಿಂತನ ಮಂಥನ ನಡೆಸಲು ಉನ್ನತ ಮಟ್ಟದ ಸಮಿತಿ ರಚಿಸಲು ನಿರ್ಧರಿಸಲಾಗಿದೆ. ಈ ಸಮಿತಿಯು ವಸ್ತ್ರಸಂಹಿತೆ ಅಥವಾ ಸಮವಸ್ತ್ರದ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಲಿದ್ದು, ವರದಿ  ಪರಿಶೀಲಿಸಿ ನಂತರ ಅಗತ್ಯ ಕ್ರಮ ಕೈಗೊಳ್ಳಲಾಗುತ್ತೆ. ಅಲ್ಲಿಯವರೆಗೆ ಕಾಲೇಜಿನಲ್ಲಿ ಯಥಾಸ್ಥಿತಿ ಮುಂದುವರೆಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಹಿಜಾಬ್‌ v/s ಕೇಸರಿ ಶಾಲು: ಮತೀಯ ದ್ವೇಷದ ಹಿಂದೆ ಎಬಿವಿಪಿ ಕೈವಾಡ- ಎಸ್‌ಎಫ್‌ಐ

Image

ಇನ್ನು, ಪ್ರತಿಭಟನಾ ನಿರತ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ತರಗತಿಗಳಿಗೆ ಬರಲು ಅವಕಾಶ ನೀಡುವುದಿಲ್ಲ. ಕಾಲೇಜಿನ ಸಮವಸ್ತ್ರ ಧರಿಸಿ ಬರಬೇಕು ಎಂದು ಶಾಸಕ ರಘುಪತಿ ಭಟ್ ಹೇಳಿದ್ದಾರೆ.

“ಇನ್ನು ಒಂದು ತಿಂಗಳು ಮಾತ್ರ ತರಗತಿಗಳು ನಡೆಯಲಿವೆ. ಆಮೇಲೆ ಪರೀಕ್ಷೆ. ಅವರಿಗೆ ಮನವರಿಕೆ ಮಾಡಲು ಪ್ರಯತ್ನಿಸುತ್ತೇವೆ. ಅವರು ಒಪ್ಪದಿದ್ದರೇ…ಅವರಿಗೆ ಹಿಜಾಬ್ ಹಾಕಿಕೊಂಡು ಬರಲು ಅನುಮತಿ ನೀಡುವುದಿಲ್ಲ. ಬೇಕಿದ್ದರೇ ಅವರಿಗೆ ಆನ್‌ಲೈನ್ ತರಗತಿಗಳನ್ನು ಮಾಡಿ, ಪರೀಕ್ಷೆಗೆ ಅವಕಾಶ ನೀಡುತ್ತೇವೆ. ಅವರಿಗೆ ಇನ್ನೂ ಆಗುವುದಿಲ್ಲ ಎಂದರೆ, ಮುಂದಿನ ವರ್ಷದಿಂದ ಅವರು ಬೇರೆ ಕಾಲೇಜಿಗೆ ಹೋಗಬಹುದು” ಎಂದು ಶಾಸಕ ರಘುಪತಿ ಭಟ್ ಹೇಳಿದ್ದಾರೆ.

ಹಿಜಾಬ್ ಹಾಕಿಕೊಂಡು ಬರುತ್ತಾರೆಂದು ಕಳೆದ ಒಂದು ತಿಂಗಳಿನಿಂದ ತರಗತಿಯಿಂದ ಹೊರಹಾಕಲ್ಪಟ್ಟ ಉಡುಪಿ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜಿನ ಗೇಟಿನ ಬಳಿ ಭಿತ್ತಿಪತ್ರ ಪ್ರದರ್ಶಿಸಿ ತಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದ್ದಾರೆ. “ಹಿಜಾಬ್ ಹಾಕಿದ್ದಕ್ಕಾಗಿ ನಾವು ತರಗತಿಯಿಂದ ಹೊರಗೆ ಕುಳಿತು ಕೊಳ್ಳುವಂತಾಗಿದೆ. ಹಿಜಾಬ್ ನನ್ನ ಹಕ್ಕು, ಅದನ್ನು ಪಡೆದೆ ತೀರುತ್ತೇವೆ, ಇದು ನನ್ನ ಮೂಲಭೂತ ಹಕ್ಕು- ಎಂಬ ಭಿತ್ತಿಪತ್ರಗಳನ್ನು ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ.


ಇದನ್ನೂ ಓದಿ: ಹಿಜಾಬ್‌ ಧರಿಸುವುದು ಅಶಿಸ್ತು: ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ವಿವಾದಾತ್ಮಕ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಹಿಜಾಬ್ ನಂತಹ ಧಾರ್ಮಿಕ ದಿರಿಸುಗಳನ್ನು college ಗಳಲ್ಲಿಯೂ ಧರಿಸಬೇಕು ಎಂಬ ಹಠ ಏಕೆ ಎನ್ನುವುದೇ ಅರ್ಥ ಆಗೋಲ್ಲ.
    ಸುಮಾರು 50ಕ್ಕೂ ಹೆಚ್ಚು ಮುಸ್ಲಿಂ ಬಾಲಕಿಯರು ಧರಿಸುತ್ತಿರುವ ಸಮ ವಸ್ತ್ರವನ್ನು ಈ ಐದಾರು ಜನ ಏಕೆ ನಿರಾಕರಿಸುತ್ತಿದ್ದಾರೆ , ಇದರ ಹಿನ್ನೆಲೆಯೇನು.

    ಒಟ್ಟಾರೆಯಾಗಿ ಇದೊಂದು ಅನಪೇಕ್ಷಿತ ಮತ್ತು ಗೊಂದಲಮಯ ನಡವಳಿಕೆ ಎನುವುದಂತು ಸತ್ಯ.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...