Homeಕರ್ನಾಟಕಮುಸ್ಲಿಂ ಮಹಿಳೆಯರ ಬಗ್ಗೆ ಸುಳ್ಳು ಹರಡಿ, ನಂತರ ಪೋಸ್ಟ್ ಡಿಲೀಟ್ ಮಾಡಿದ ಪೋಸ್ಟ್ ಕಾರ್ಡ್ ಕನ್ನಡ

ಮುಸ್ಲಿಂ ಮಹಿಳೆಯರ ಬಗ್ಗೆ ಸುಳ್ಳು ಹರಡಿ, ನಂತರ ಪೋಸ್ಟ್ ಡಿಲೀಟ್ ಮಾಡಿದ ಪೋಸ್ಟ್ ಕಾರ್ಡ್ ಕನ್ನಡ

- Advertisement -
- Advertisement -

ಪೋಸ್ಟ್ ಕಾರ್ಡ್ ಕನ್ನಡ ಸದಾ ಫೇಕ್ ನ್ಯೂಸ್‍ಗಳನ್ನೆ ಹಾಸೊದ್ದುಕೊಂಡಿರುವ, ಧರ್ಮಗಳ ನಡುವೆ ವಿಷ ಬೀಜ ಬಿತ್ತುವ ಒಂದು ಬಲಪಂಥೀಯ ಸಾಮಾಜಿಕ ಜಾಲತಾಣ. ಸುಳ್ಳು ಸುದ್ದಿಗಳಿಗೆ ಕುಖ್ಯಾತಿಯಾಗಿರುವ ಆ ಸಾಮಾಜಿಕ ಜಾಲತಾಣ ಈಗ ಮತ್ತೊಂದು ಅಂತಹದ್ದೆ ಸುಳ್ಳು ಸುದ್ದಿಯನ್ನು ಹೊಂದಿರುವ ಪೋಸ್ಟರ್‌ವೊಂದನ್ನು ಶೇರ್ ಮಾಡಿತ್ತು, ಆ ಪೋಸ್ಟರ್‌ನಲ್ಲಿ ಮುಸ್ಲಿಂ ಮಹಿಳೆಯರ ಕುರಿತು ಅವಹೇಳನಕಾರಿ ಬರಹವನ್ನು ಪ್ರಕಟಿಸಿತ್ತು, ಪೋಸ್ಟರ್‌ನಲ್ಲಿರುವುದು ಹಸಿ ಸುಳ್ಳು ಎಂದು ವಾರ್ತಾಭಾರತಿ ಆಧಾರ ಸಹಿತ ವರದಿ ಮಾಡಿತ್ತು. ಅಲ್ಲಿ ಸುದ್ದಿ ಪ್ರಕಟಣೆಯಾಗುತ್ತಿದಂತೆ ಇತ್ತ ಪೋಸ್ಟ್ ಕಾರ್ಡ್ ತನ್ನ ಪೇಜ್ ನಲ್ಲಿ ಪ್ರಕಟಗೊಂಡ ಸುಳ್ಳು ಸುದ್ದಿಯ ಪೋಸ್ಟರ್‌ ಅನ್ನು ಡಿಲೀಟ್ ಮಾಡುವ ಮೂಲಕ ಮತ್ತೆ ಜನರೆದುರು ಬೆತ್ತಲಾಗಿದೆ.

ಪೋಸ್ಟ್ ಕಾರ್ಡ್ ತಾನು ಪ್ರಕಟಿಸಿದ್ದ ಪೋಸ್ಟರ್‌ನಲ್ಲಿ “ ನಮ್ಮ ಇಸ್ಲಾಂನಲ್ಲಿ ಹೆಣ್ಣನ್ನ ಮಕ್ಕಳನ್ನು ಹೆರುವ ಕೃಷಿ ಎಂದು ಪರಿಗಣಿಸಲಾಗಿದೆ. ನಾವೆಲ್ಲರೂ ಮುಸ್ಲಿಂ ಧರ್ಮವನ್ನು ತೊರೆದು ಹಿಂದೂ ಆಗಲಿದ್ದೇವೆ ಮತ್ತು ಹಿಂದೂ ಹುಡುಗರನ್ನು ಮದುವೆಯಾಗುತ್ತೇವೆ, ಮತ್ತೆ ಯಾವುದೇ ತಲಾಕ್ ಇಲ್ಲ, ಹಲಾಲ್ ಕೂಡ ಇಲ್ಲ. ಸನಾತನ ಹಿಂದೂ ಧರ್ಮ ನಮ್ಮದಾಗಲಿ” ಎಂದು ಬರೆದಿದ್ದ ಪೋಸ್ಟರ್ ನಲ್ಲಿ ಫಾತಿಮಾ ಖುರೇಷಿ, ಮುಂಬೈ ಎಂದು ಹೆಸರು ಹಾಕಿ ಮುಸ್ಲಿಂ ಮಹಿಳೆಯೊಬ್ಬರ ಫೋಟೋ ಹಾಕಲಾಗಿತ್ತು. ಜೊತೆಗೆ “ಇಸ್ಲಾಂನಲ್ಲಿ ಹೆಣ್ಣನ್ನು ಭೋಗದ ವಸ್ತುವಂತೆ ಬಳಸುತ್ತಿದ್ದಾರೆ ಎಂದು ಮುಸ್ಲಿಂ ಹೆಣ್ಣು ಮಕ್ಕಳೇ ಒಪ್ಪಿಕೊಂಡು ಹಿಂದೂ ಧರ್ಮದತ್ತ ಮುಖ ಮಾಡಸುತ್ತಿದ್ದಾರೆ .” ಎಂದು ಬರೆದ ಪೋಸ್ಟರ್‌ಅನ್ನು ಪ್ರಕಟಿಸಿತ್ತು.

ಪೋಸ್ಟ್ ಕಾರ್ಡ್ ಕನ್ನಡ ಪ್ರಕಟಿಸಿದ್ದ ಸುಳ್ಳು ಸುದ್ದಿ

ಈ ಪೋಸ್ಟರ್ ಎರಡು ವಾರಗಳ ಹಿಂದೆ ಹಿಂದಿ ಭಾಷೆಯಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಅದೇ ಮಹಿಳೆಯ ಫೋಟೋ ಬಳಸಿ, ಹಿಂದಿಯಲ್ಲಿ ಬರೆದಿದ್ದ ಬರಹವನ್ನು ಕನ್ನಡಕ್ಕೆ ಅನುವಾದಿಸಿ ಮತ್ತಷ್ಟು ದ್ವೇಷ ಹರಡುವ ಸಾಲುಗಳನ್ನು ಸೇರಿಸಿ ಪೋಸ್ಟರ್ ರೂಪಿಸಿರುವುದು ಫ್ಯಾಕ್ಟ್‌ ಚೆಕ್ ಮೂಲಕ ತಿಳಿದುಬಂದಿದೆ. ನಕಲು ಮಾಡಿರುವ ಸುದ್ದಿಯು 2019ರಲ್ಲಿ ನ್ಯೂಸ್ ಮೊಬೈಲ್.ಇನ್ ಪ್ರಕಟವಾಗಿರುವುದನ್ನು ಕಾಣಬಹುದು. ಹಾಗಾಗಿ ಇದೊಂದು ತಿರುಚಲ್ಪಟ್ಟ ಸುದ್ದಿ ಎಂದು ತಿಳಿದುಬಂದಿದೆ.

ಗೂಗಲ್ ಮೂಲಕ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ, ಪೋಸ್ಟರ್ ನಲ್ಲಿ ಇರುವ ಮಹಿಳೆಯ ಫೋಟೋ ಮರಿಯಮ್ ಖಾಲಿಕ್ ಎಂಬುವವರದು ಎಂದು ತಿಳಿದು ಬಂದಿದ್ದು, ಪೋಸ್ಟ್ ಕಾರ್ಡ್ ನಲ್ಲಿ ಅವರ ಹೆಸರನ್ನು ಫಾತಿಮಾ ಖುರೇಷಿ, ಮುಂಬೈ ಎಂಬ ಹೆಸರಿನಲ್ಲಿ ಕಪೋಲಕಲ್ಪಿತ ಹೇಳಿಕೆಯನ್ನು ಪ್ರಕಟಿಸಿದೆ. 2013ರ ಸೆಪ್ಟಂಬರ್ 20 ರಂದು ಗ್ಲೋಬಲ್ ಎಜುಕೇಶನ್ ಮಾನಿಟರಿಂಗ್ (GEM) ಸೈಟ್‍ನಲ್ಲಿ  ಪ್ರಕಟಿಸಿದ ವರದಿಯಲ್ಲಿ ಈ ಮಹಿಳೆಯು ನೊಬೆಲ್ ಪುರಸ್ಕೃತೆ ಮಲಾಲಾ ಯೂಸಫ್‍ಜಾಯ್ ಅವರ ಶಿಕ್ಷಕಿ ಮರಿಯಮ್ ಖಾಲಿಕ್ ಎಂದು ತಿಳಿದುಬಂದಿದೆ. ನ್ಯೂಯಾರ್ಕ್‍ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬಾಲಕಿಯರ ಶಿಕ್ಷಣದ ಮಹತ್ವ ಕುರಿತು ಮರಿಯಮ್ ಮಾತನಾಡುತ್ತಿದ್ದ ಸಂದರ್ಭದಲ್ಲಿ ತೆಗೆದ ಫೋಟೋ ಆಗಿದ್ದು, “ ನ್ಯೂಯಾರ್ಕ್‍ನಲ್ಲಿ ನಡೆದ ಇಎಫ್ಎ ವರದಿ ಸಮಾರಂಭದಲ್ಲಿ ಭಾಷಣ ನೀಡುತ್ತಿರುವ ಮರಿಯಲ್” ಎಂದು ಶೀರ್ಷಿಕೆ ನೀಡಲಾಗಿದೆ.

ಇದೇ ಲೇಖನವನ್ನು ವಿಶ್ವಸಂಸ್ಥೆಯ ಬಾಲಕಿಯರ ಶಿಕ್ಷಣ ಉಪಕ್ರಮದ ವೆಬ್‍ಸೈಟ್‍ನಲ್ಲಿಯೂ ಪ್ರಕಟಿಸಿದೆ. ವಿಶ್ವ ಸಂಸ್ಥೆಯ ಅಧಿಕೃತ ಯೂಟ್ಯೂಬ್ ಚಾನೆಲ್‍ನಲ್ಲಿ ಕೂಡ ಈ ವಿಡಿಯೊ ಅಪ್ಲೋಡ್ ಮಾಡಲಾಗಿದೆ. ಇನ್ನು ಪೋಸ್ಟ್ ಕಾರ್ಡ್ ಪ್ರಕಟಿಸಿದ ಪೋಸ್ಟರ್‌ನಲ್ಲಿ ದಾಖಲಾಗಿರುವ ಹೇಳಿಕೆಗಳಿಗೆ ಯಾವುದೇ ದಾಖಲೆಗಳಿಲ್ಲ ಎಂಬುದು ಖಚಿತವಾಗಿದೆ.

ಈ ಸುದ್ದಿಯನ್ನು ಪ್ರಕಟಿಸುತ್ತಿದ್ದಂತೆ ಪೋಸ್ಟ್ ಕಾರ್ಡ್‍ನಲ್ಲಿ ಪೋಸ್ಟ್ ಮಾಡಿದ್ದ ಸುಳ್ಳು ಸುದ್ದಿಯ ಪೋಸ್ಟರ್ ಮಾಯವಾಗಿದೆ. ಅದನ್ನು ಪೋಸ್ಟ್ ಕಾರ್ಡ್ ಡಿಲೀಟ್ ಮಾಡಿದೆ. ಇದರಿಂದ ನಾವೆಲ್ಲ ತಿಳಿದುಕೊಳ್ಳಬೇಕಿರುವುದು ಏನೆಂದರೆ ಈ ಪೇಜ್‍ಅನ್ನು ಫಾಲೋ ಮಾಡುವ ಅನೇಕ ಮುಗ್ದ ಜನರು ಇವರು ಹೇಳುವ ಸುಳ್ಳನ್ನೆ ನಿಜವೆಂದು ನಂಬಿ ಮೋಸಹೋಗುವ ಮತ್ತು ಈಗಾಗಲೇ ಮೋಸ ಹೋಗಿರವ ಅಸಂಖ್ಯ ಜನರಿದ್ದಾರೆ. ಹಾಗಾಗಿ ಪೋಸ್ಟ್ ಕಾರ್ಡ್‍ನಲ್ಲಿ ಬರುವ ಸುದ್ದಿಗಳನ್ನು ನಂಬಿ ಮೋಸ ಹೋಗುವ ಮುನ್ನ ಅದರ ಸತ್ಯಾಸತ್ಯತೆಗಳನ್ನು ಪರಿಶೀಲಿಸಿ ಎಂಬುದು ನಾನು ಗೌರಿ ಪತ್ರಿಕೆಯ ಆಶಯ. ಪೋಸ್ಟ್ ಕಾರ್ಡ್ ಬಿತ್ತುವ ವಿಷ ಬೀಜಗಳಿಗೆ ಬಲಿಯಾಗುವ ಮುನ್ನ ಮುಗ್ದ ಜನರು ಎಚ್ಚೆತ್ತುಕೊಳ್ಳಬೆಕು.


ಇದನ್ನು ಓದಿರಿ: ಕೋಮುವಾದಿಗಳು ಆಕ್ಟೀವ್ ಆಗಿರುವುದರಿಂದ ಇಂತಹ ಘಟನೆಗಳಾಗುತ್ತಿವೆ: ಜಸ್ಟೀಸ್ ದಾಸ್‌


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...