Homeಕರ್ನಾಟಕಮುಸ್ಲಿಂ ಮಹಿಳೆಯರ ಬಗ್ಗೆ ಸುಳ್ಳು ಹರಡಿ, ನಂತರ ಪೋಸ್ಟ್ ಡಿಲೀಟ್ ಮಾಡಿದ ಪೋಸ್ಟ್ ಕಾರ್ಡ್ ಕನ್ನಡ

ಮುಸ್ಲಿಂ ಮಹಿಳೆಯರ ಬಗ್ಗೆ ಸುಳ್ಳು ಹರಡಿ, ನಂತರ ಪೋಸ್ಟ್ ಡಿಲೀಟ್ ಮಾಡಿದ ಪೋಸ್ಟ್ ಕಾರ್ಡ್ ಕನ್ನಡ

- Advertisement -
- Advertisement -

ಪೋಸ್ಟ್ ಕಾರ್ಡ್ ಕನ್ನಡ ಸದಾ ಫೇಕ್ ನ್ಯೂಸ್‍ಗಳನ್ನೆ ಹಾಸೊದ್ದುಕೊಂಡಿರುವ, ಧರ್ಮಗಳ ನಡುವೆ ವಿಷ ಬೀಜ ಬಿತ್ತುವ ಒಂದು ಬಲಪಂಥೀಯ ಸಾಮಾಜಿಕ ಜಾಲತಾಣ. ಸುಳ್ಳು ಸುದ್ದಿಗಳಿಗೆ ಕುಖ್ಯಾತಿಯಾಗಿರುವ ಆ ಸಾಮಾಜಿಕ ಜಾಲತಾಣ ಈಗ ಮತ್ತೊಂದು ಅಂತಹದ್ದೆ ಸುಳ್ಳು ಸುದ್ದಿಯನ್ನು ಹೊಂದಿರುವ ಪೋಸ್ಟರ್‌ವೊಂದನ್ನು ಶೇರ್ ಮಾಡಿತ್ತು, ಆ ಪೋಸ್ಟರ್‌ನಲ್ಲಿ ಮುಸ್ಲಿಂ ಮಹಿಳೆಯರ ಕುರಿತು ಅವಹೇಳನಕಾರಿ ಬರಹವನ್ನು ಪ್ರಕಟಿಸಿತ್ತು, ಪೋಸ್ಟರ್‌ನಲ್ಲಿರುವುದು ಹಸಿ ಸುಳ್ಳು ಎಂದು ವಾರ್ತಾಭಾರತಿ ಆಧಾರ ಸಹಿತ ವರದಿ ಮಾಡಿತ್ತು. ಅಲ್ಲಿ ಸುದ್ದಿ ಪ್ರಕಟಣೆಯಾಗುತ್ತಿದಂತೆ ಇತ್ತ ಪೋಸ್ಟ್ ಕಾರ್ಡ್ ತನ್ನ ಪೇಜ್ ನಲ್ಲಿ ಪ್ರಕಟಗೊಂಡ ಸುಳ್ಳು ಸುದ್ದಿಯ ಪೋಸ್ಟರ್‌ ಅನ್ನು ಡಿಲೀಟ್ ಮಾಡುವ ಮೂಲಕ ಮತ್ತೆ ಜನರೆದುರು ಬೆತ್ತಲಾಗಿದೆ.

ಪೋಸ್ಟ್ ಕಾರ್ಡ್ ತಾನು ಪ್ರಕಟಿಸಿದ್ದ ಪೋಸ್ಟರ್‌ನಲ್ಲಿ “ ನಮ್ಮ ಇಸ್ಲಾಂನಲ್ಲಿ ಹೆಣ್ಣನ್ನ ಮಕ್ಕಳನ್ನು ಹೆರುವ ಕೃಷಿ ಎಂದು ಪರಿಗಣಿಸಲಾಗಿದೆ. ನಾವೆಲ್ಲರೂ ಮುಸ್ಲಿಂ ಧರ್ಮವನ್ನು ತೊರೆದು ಹಿಂದೂ ಆಗಲಿದ್ದೇವೆ ಮತ್ತು ಹಿಂದೂ ಹುಡುಗರನ್ನು ಮದುವೆಯಾಗುತ್ತೇವೆ, ಮತ್ತೆ ಯಾವುದೇ ತಲಾಕ್ ಇಲ್ಲ, ಹಲಾಲ್ ಕೂಡ ಇಲ್ಲ. ಸನಾತನ ಹಿಂದೂ ಧರ್ಮ ನಮ್ಮದಾಗಲಿ” ಎಂದು ಬರೆದಿದ್ದ ಪೋಸ್ಟರ್ ನಲ್ಲಿ ಫಾತಿಮಾ ಖುರೇಷಿ, ಮುಂಬೈ ಎಂದು ಹೆಸರು ಹಾಕಿ ಮುಸ್ಲಿಂ ಮಹಿಳೆಯೊಬ್ಬರ ಫೋಟೋ ಹಾಕಲಾಗಿತ್ತು. ಜೊತೆಗೆ “ಇಸ್ಲಾಂನಲ್ಲಿ ಹೆಣ್ಣನ್ನು ಭೋಗದ ವಸ್ತುವಂತೆ ಬಳಸುತ್ತಿದ್ದಾರೆ ಎಂದು ಮುಸ್ಲಿಂ ಹೆಣ್ಣು ಮಕ್ಕಳೇ ಒಪ್ಪಿಕೊಂಡು ಹಿಂದೂ ಧರ್ಮದತ್ತ ಮುಖ ಮಾಡಸುತ್ತಿದ್ದಾರೆ .” ಎಂದು ಬರೆದ ಪೋಸ್ಟರ್‌ಅನ್ನು ಪ್ರಕಟಿಸಿತ್ತು.

ಪೋಸ್ಟ್ ಕಾರ್ಡ್ ಕನ್ನಡ ಪ್ರಕಟಿಸಿದ್ದ ಸುಳ್ಳು ಸುದ್ದಿ

ಈ ಪೋಸ್ಟರ್ ಎರಡು ವಾರಗಳ ಹಿಂದೆ ಹಿಂದಿ ಭಾಷೆಯಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಅದೇ ಮಹಿಳೆಯ ಫೋಟೋ ಬಳಸಿ, ಹಿಂದಿಯಲ್ಲಿ ಬರೆದಿದ್ದ ಬರಹವನ್ನು ಕನ್ನಡಕ್ಕೆ ಅನುವಾದಿಸಿ ಮತ್ತಷ್ಟು ದ್ವೇಷ ಹರಡುವ ಸಾಲುಗಳನ್ನು ಸೇರಿಸಿ ಪೋಸ್ಟರ್ ರೂಪಿಸಿರುವುದು ಫ್ಯಾಕ್ಟ್‌ ಚೆಕ್ ಮೂಲಕ ತಿಳಿದುಬಂದಿದೆ. ನಕಲು ಮಾಡಿರುವ ಸುದ್ದಿಯು 2019ರಲ್ಲಿ ನ್ಯೂಸ್ ಮೊಬೈಲ್.ಇನ್ ಪ್ರಕಟವಾಗಿರುವುದನ್ನು ಕಾಣಬಹುದು. ಹಾಗಾಗಿ ಇದೊಂದು ತಿರುಚಲ್ಪಟ್ಟ ಸುದ್ದಿ ಎಂದು ತಿಳಿದುಬಂದಿದೆ.

ಗೂಗಲ್ ಮೂಲಕ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ, ಪೋಸ್ಟರ್ ನಲ್ಲಿ ಇರುವ ಮಹಿಳೆಯ ಫೋಟೋ ಮರಿಯಮ್ ಖಾಲಿಕ್ ಎಂಬುವವರದು ಎಂದು ತಿಳಿದು ಬಂದಿದ್ದು, ಪೋಸ್ಟ್ ಕಾರ್ಡ್ ನಲ್ಲಿ ಅವರ ಹೆಸರನ್ನು ಫಾತಿಮಾ ಖುರೇಷಿ, ಮುಂಬೈ ಎಂಬ ಹೆಸರಿನಲ್ಲಿ ಕಪೋಲಕಲ್ಪಿತ ಹೇಳಿಕೆಯನ್ನು ಪ್ರಕಟಿಸಿದೆ. 2013ರ ಸೆಪ್ಟಂಬರ್ 20 ರಂದು ಗ್ಲೋಬಲ್ ಎಜುಕೇಶನ್ ಮಾನಿಟರಿಂಗ್ (GEM) ಸೈಟ್‍ನಲ್ಲಿ  ಪ್ರಕಟಿಸಿದ ವರದಿಯಲ್ಲಿ ಈ ಮಹಿಳೆಯು ನೊಬೆಲ್ ಪುರಸ್ಕೃತೆ ಮಲಾಲಾ ಯೂಸಫ್‍ಜಾಯ್ ಅವರ ಶಿಕ್ಷಕಿ ಮರಿಯಮ್ ಖಾಲಿಕ್ ಎಂದು ತಿಳಿದುಬಂದಿದೆ. ನ್ಯೂಯಾರ್ಕ್‍ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬಾಲಕಿಯರ ಶಿಕ್ಷಣದ ಮಹತ್ವ ಕುರಿತು ಮರಿಯಮ್ ಮಾತನಾಡುತ್ತಿದ್ದ ಸಂದರ್ಭದಲ್ಲಿ ತೆಗೆದ ಫೋಟೋ ಆಗಿದ್ದು, “ ನ್ಯೂಯಾರ್ಕ್‍ನಲ್ಲಿ ನಡೆದ ಇಎಫ್ಎ ವರದಿ ಸಮಾರಂಭದಲ್ಲಿ ಭಾಷಣ ನೀಡುತ್ತಿರುವ ಮರಿಯಲ್” ಎಂದು ಶೀರ್ಷಿಕೆ ನೀಡಲಾಗಿದೆ.

ಇದೇ ಲೇಖನವನ್ನು ವಿಶ್ವಸಂಸ್ಥೆಯ ಬಾಲಕಿಯರ ಶಿಕ್ಷಣ ಉಪಕ್ರಮದ ವೆಬ್‍ಸೈಟ್‍ನಲ್ಲಿಯೂ ಪ್ರಕಟಿಸಿದೆ. ವಿಶ್ವ ಸಂಸ್ಥೆಯ ಅಧಿಕೃತ ಯೂಟ್ಯೂಬ್ ಚಾನೆಲ್‍ನಲ್ಲಿ ಕೂಡ ಈ ವಿಡಿಯೊ ಅಪ್ಲೋಡ್ ಮಾಡಲಾಗಿದೆ. ಇನ್ನು ಪೋಸ್ಟ್ ಕಾರ್ಡ್ ಪ್ರಕಟಿಸಿದ ಪೋಸ್ಟರ್‌ನಲ್ಲಿ ದಾಖಲಾಗಿರುವ ಹೇಳಿಕೆಗಳಿಗೆ ಯಾವುದೇ ದಾಖಲೆಗಳಿಲ್ಲ ಎಂಬುದು ಖಚಿತವಾಗಿದೆ.

ಈ ಸುದ್ದಿಯನ್ನು ಪ್ರಕಟಿಸುತ್ತಿದ್ದಂತೆ ಪೋಸ್ಟ್ ಕಾರ್ಡ್‍ನಲ್ಲಿ ಪೋಸ್ಟ್ ಮಾಡಿದ್ದ ಸುಳ್ಳು ಸುದ್ದಿಯ ಪೋಸ್ಟರ್ ಮಾಯವಾಗಿದೆ. ಅದನ್ನು ಪೋಸ್ಟ್ ಕಾರ್ಡ್ ಡಿಲೀಟ್ ಮಾಡಿದೆ. ಇದರಿಂದ ನಾವೆಲ್ಲ ತಿಳಿದುಕೊಳ್ಳಬೇಕಿರುವುದು ಏನೆಂದರೆ ಈ ಪೇಜ್‍ಅನ್ನು ಫಾಲೋ ಮಾಡುವ ಅನೇಕ ಮುಗ್ದ ಜನರು ಇವರು ಹೇಳುವ ಸುಳ್ಳನ್ನೆ ನಿಜವೆಂದು ನಂಬಿ ಮೋಸಹೋಗುವ ಮತ್ತು ಈಗಾಗಲೇ ಮೋಸ ಹೋಗಿರವ ಅಸಂಖ್ಯ ಜನರಿದ್ದಾರೆ. ಹಾಗಾಗಿ ಪೋಸ್ಟ್ ಕಾರ್ಡ್‍ನಲ್ಲಿ ಬರುವ ಸುದ್ದಿಗಳನ್ನು ನಂಬಿ ಮೋಸ ಹೋಗುವ ಮುನ್ನ ಅದರ ಸತ್ಯಾಸತ್ಯತೆಗಳನ್ನು ಪರಿಶೀಲಿಸಿ ಎಂಬುದು ನಾನು ಗೌರಿ ಪತ್ರಿಕೆಯ ಆಶಯ. ಪೋಸ್ಟ್ ಕಾರ್ಡ್ ಬಿತ್ತುವ ವಿಷ ಬೀಜಗಳಿಗೆ ಬಲಿಯಾಗುವ ಮುನ್ನ ಮುಗ್ದ ಜನರು ಎಚ್ಚೆತ್ತುಕೊಳ್ಳಬೆಕು.


ಇದನ್ನು ಓದಿರಿ: ಕೋಮುವಾದಿಗಳು ಆಕ್ಟೀವ್ ಆಗಿರುವುದರಿಂದ ಇಂತಹ ಘಟನೆಗಳಾಗುತ್ತಿವೆ: ಜಸ್ಟೀಸ್ ದಾಸ್‌


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...