Homeಕರ್ನಾಟಕಮುಸ್ಲಿಂ ಮಹಿಳೆಯರ ಬಗ್ಗೆ ಸುಳ್ಳು ಹರಡಿ, ನಂತರ ಪೋಸ್ಟ್ ಡಿಲೀಟ್ ಮಾಡಿದ ಪೋಸ್ಟ್ ಕಾರ್ಡ್ ಕನ್ನಡ

ಮುಸ್ಲಿಂ ಮಹಿಳೆಯರ ಬಗ್ಗೆ ಸುಳ್ಳು ಹರಡಿ, ನಂತರ ಪೋಸ್ಟ್ ಡಿಲೀಟ್ ಮಾಡಿದ ಪೋಸ್ಟ್ ಕಾರ್ಡ್ ಕನ್ನಡ

- Advertisement -
- Advertisement -

ಪೋಸ್ಟ್ ಕಾರ್ಡ್ ಕನ್ನಡ ಸದಾ ಫೇಕ್ ನ್ಯೂಸ್‍ಗಳನ್ನೆ ಹಾಸೊದ್ದುಕೊಂಡಿರುವ, ಧರ್ಮಗಳ ನಡುವೆ ವಿಷ ಬೀಜ ಬಿತ್ತುವ ಒಂದು ಬಲಪಂಥೀಯ ಸಾಮಾಜಿಕ ಜಾಲತಾಣ. ಸುಳ್ಳು ಸುದ್ದಿಗಳಿಗೆ ಕುಖ್ಯಾತಿಯಾಗಿರುವ ಆ ಸಾಮಾಜಿಕ ಜಾಲತಾಣ ಈಗ ಮತ್ತೊಂದು ಅಂತಹದ್ದೆ ಸುಳ್ಳು ಸುದ್ದಿಯನ್ನು ಹೊಂದಿರುವ ಪೋಸ್ಟರ್‌ವೊಂದನ್ನು ಶೇರ್ ಮಾಡಿತ್ತು, ಆ ಪೋಸ್ಟರ್‌ನಲ್ಲಿ ಮುಸ್ಲಿಂ ಮಹಿಳೆಯರ ಕುರಿತು ಅವಹೇಳನಕಾರಿ ಬರಹವನ್ನು ಪ್ರಕಟಿಸಿತ್ತು, ಪೋಸ್ಟರ್‌ನಲ್ಲಿರುವುದು ಹಸಿ ಸುಳ್ಳು ಎಂದು ವಾರ್ತಾಭಾರತಿ ಆಧಾರ ಸಹಿತ ವರದಿ ಮಾಡಿತ್ತು. ಅಲ್ಲಿ ಸುದ್ದಿ ಪ್ರಕಟಣೆಯಾಗುತ್ತಿದಂತೆ ಇತ್ತ ಪೋಸ್ಟ್ ಕಾರ್ಡ್ ತನ್ನ ಪೇಜ್ ನಲ್ಲಿ ಪ್ರಕಟಗೊಂಡ ಸುಳ್ಳು ಸುದ್ದಿಯ ಪೋಸ್ಟರ್‌ ಅನ್ನು ಡಿಲೀಟ್ ಮಾಡುವ ಮೂಲಕ ಮತ್ತೆ ಜನರೆದುರು ಬೆತ್ತಲಾಗಿದೆ.

ಪೋಸ್ಟ್ ಕಾರ್ಡ್ ತಾನು ಪ್ರಕಟಿಸಿದ್ದ ಪೋಸ್ಟರ್‌ನಲ್ಲಿ “ ನಮ್ಮ ಇಸ್ಲಾಂನಲ್ಲಿ ಹೆಣ್ಣನ್ನ ಮಕ್ಕಳನ್ನು ಹೆರುವ ಕೃಷಿ ಎಂದು ಪರಿಗಣಿಸಲಾಗಿದೆ. ನಾವೆಲ್ಲರೂ ಮುಸ್ಲಿಂ ಧರ್ಮವನ್ನು ತೊರೆದು ಹಿಂದೂ ಆಗಲಿದ್ದೇವೆ ಮತ್ತು ಹಿಂದೂ ಹುಡುಗರನ್ನು ಮದುವೆಯಾಗುತ್ತೇವೆ, ಮತ್ತೆ ಯಾವುದೇ ತಲಾಕ್ ಇಲ್ಲ, ಹಲಾಲ್ ಕೂಡ ಇಲ್ಲ. ಸನಾತನ ಹಿಂದೂ ಧರ್ಮ ನಮ್ಮದಾಗಲಿ” ಎಂದು ಬರೆದಿದ್ದ ಪೋಸ್ಟರ್ ನಲ್ಲಿ ಫಾತಿಮಾ ಖುರೇಷಿ, ಮುಂಬೈ ಎಂದು ಹೆಸರು ಹಾಕಿ ಮುಸ್ಲಿಂ ಮಹಿಳೆಯೊಬ್ಬರ ಫೋಟೋ ಹಾಕಲಾಗಿತ್ತು. ಜೊತೆಗೆ “ಇಸ್ಲಾಂನಲ್ಲಿ ಹೆಣ್ಣನ್ನು ಭೋಗದ ವಸ್ತುವಂತೆ ಬಳಸುತ್ತಿದ್ದಾರೆ ಎಂದು ಮುಸ್ಲಿಂ ಹೆಣ್ಣು ಮಕ್ಕಳೇ ಒಪ್ಪಿಕೊಂಡು ಹಿಂದೂ ಧರ್ಮದತ್ತ ಮುಖ ಮಾಡಸುತ್ತಿದ್ದಾರೆ .” ಎಂದು ಬರೆದ ಪೋಸ್ಟರ್‌ಅನ್ನು ಪ್ರಕಟಿಸಿತ್ತು.

ಪೋಸ್ಟ್ ಕಾರ್ಡ್ ಕನ್ನಡ ಪ್ರಕಟಿಸಿದ್ದ ಸುಳ್ಳು ಸುದ್ದಿ

ಈ ಪೋಸ್ಟರ್ ಎರಡು ವಾರಗಳ ಹಿಂದೆ ಹಿಂದಿ ಭಾಷೆಯಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಅದೇ ಮಹಿಳೆಯ ಫೋಟೋ ಬಳಸಿ, ಹಿಂದಿಯಲ್ಲಿ ಬರೆದಿದ್ದ ಬರಹವನ್ನು ಕನ್ನಡಕ್ಕೆ ಅನುವಾದಿಸಿ ಮತ್ತಷ್ಟು ದ್ವೇಷ ಹರಡುವ ಸಾಲುಗಳನ್ನು ಸೇರಿಸಿ ಪೋಸ್ಟರ್ ರೂಪಿಸಿರುವುದು ಫ್ಯಾಕ್ಟ್‌ ಚೆಕ್ ಮೂಲಕ ತಿಳಿದುಬಂದಿದೆ. ನಕಲು ಮಾಡಿರುವ ಸುದ್ದಿಯು 2019ರಲ್ಲಿ ನ್ಯೂಸ್ ಮೊಬೈಲ್.ಇನ್ ಪ್ರಕಟವಾಗಿರುವುದನ್ನು ಕಾಣಬಹುದು. ಹಾಗಾಗಿ ಇದೊಂದು ತಿರುಚಲ್ಪಟ್ಟ ಸುದ್ದಿ ಎಂದು ತಿಳಿದುಬಂದಿದೆ.

ಗೂಗಲ್ ಮೂಲಕ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ, ಪೋಸ್ಟರ್ ನಲ್ಲಿ ಇರುವ ಮಹಿಳೆಯ ಫೋಟೋ ಮರಿಯಮ್ ಖಾಲಿಕ್ ಎಂಬುವವರದು ಎಂದು ತಿಳಿದು ಬಂದಿದ್ದು, ಪೋಸ್ಟ್ ಕಾರ್ಡ್ ನಲ್ಲಿ ಅವರ ಹೆಸರನ್ನು ಫಾತಿಮಾ ಖುರೇಷಿ, ಮುಂಬೈ ಎಂಬ ಹೆಸರಿನಲ್ಲಿ ಕಪೋಲಕಲ್ಪಿತ ಹೇಳಿಕೆಯನ್ನು ಪ್ರಕಟಿಸಿದೆ. 2013ರ ಸೆಪ್ಟಂಬರ್ 20 ರಂದು ಗ್ಲೋಬಲ್ ಎಜುಕೇಶನ್ ಮಾನಿಟರಿಂಗ್ (GEM) ಸೈಟ್‍ನಲ್ಲಿ  ಪ್ರಕಟಿಸಿದ ವರದಿಯಲ್ಲಿ ಈ ಮಹಿಳೆಯು ನೊಬೆಲ್ ಪುರಸ್ಕೃತೆ ಮಲಾಲಾ ಯೂಸಫ್‍ಜಾಯ್ ಅವರ ಶಿಕ್ಷಕಿ ಮರಿಯಮ್ ಖಾಲಿಕ್ ಎಂದು ತಿಳಿದುಬಂದಿದೆ. ನ್ಯೂಯಾರ್ಕ್‍ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬಾಲಕಿಯರ ಶಿಕ್ಷಣದ ಮಹತ್ವ ಕುರಿತು ಮರಿಯಮ್ ಮಾತನಾಡುತ್ತಿದ್ದ ಸಂದರ್ಭದಲ್ಲಿ ತೆಗೆದ ಫೋಟೋ ಆಗಿದ್ದು, “ ನ್ಯೂಯಾರ್ಕ್‍ನಲ್ಲಿ ನಡೆದ ಇಎಫ್ಎ ವರದಿ ಸಮಾರಂಭದಲ್ಲಿ ಭಾಷಣ ನೀಡುತ್ತಿರುವ ಮರಿಯಲ್” ಎಂದು ಶೀರ್ಷಿಕೆ ನೀಡಲಾಗಿದೆ.

ಇದೇ ಲೇಖನವನ್ನು ವಿಶ್ವಸಂಸ್ಥೆಯ ಬಾಲಕಿಯರ ಶಿಕ್ಷಣ ಉಪಕ್ರಮದ ವೆಬ್‍ಸೈಟ್‍ನಲ್ಲಿಯೂ ಪ್ರಕಟಿಸಿದೆ. ವಿಶ್ವ ಸಂಸ್ಥೆಯ ಅಧಿಕೃತ ಯೂಟ್ಯೂಬ್ ಚಾನೆಲ್‍ನಲ್ಲಿ ಕೂಡ ಈ ವಿಡಿಯೊ ಅಪ್ಲೋಡ್ ಮಾಡಲಾಗಿದೆ. ಇನ್ನು ಪೋಸ್ಟ್ ಕಾರ್ಡ್ ಪ್ರಕಟಿಸಿದ ಪೋಸ್ಟರ್‌ನಲ್ಲಿ ದಾಖಲಾಗಿರುವ ಹೇಳಿಕೆಗಳಿಗೆ ಯಾವುದೇ ದಾಖಲೆಗಳಿಲ್ಲ ಎಂಬುದು ಖಚಿತವಾಗಿದೆ.

ಈ ಸುದ್ದಿಯನ್ನು ಪ್ರಕಟಿಸುತ್ತಿದ್ದಂತೆ ಪೋಸ್ಟ್ ಕಾರ್ಡ್‍ನಲ್ಲಿ ಪೋಸ್ಟ್ ಮಾಡಿದ್ದ ಸುಳ್ಳು ಸುದ್ದಿಯ ಪೋಸ್ಟರ್ ಮಾಯವಾಗಿದೆ. ಅದನ್ನು ಪೋಸ್ಟ್ ಕಾರ್ಡ್ ಡಿಲೀಟ್ ಮಾಡಿದೆ. ಇದರಿಂದ ನಾವೆಲ್ಲ ತಿಳಿದುಕೊಳ್ಳಬೇಕಿರುವುದು ಏನೆಂದರೆ ಈ ಪೇಜ್‍ಅನ್ನು ಫಾಲೋ ಮಾಡುವ ಅನೇಕ ಮುಗ್ದ ಜನರು ಇವರು ಹೇಳುವ ಸುಳ್ಳನ್ನೆ ನಿಜವೆಂದು ನಂಬಿ ಮೋಸಹೋಗುವ ಮತ್ತು ಈಗಾಗಲೇ ಮೋಸ ಹೋಗಿರವ ಅಸಂಖ್ಯ ಜನರಿದ್ದಾರೆ. ಹಾಗಾಗಿ ಪೋಸ್ಟ್ ಕಾರ್ಡ್‍ನಲ್ಲಿ ಬರುವ ಸುದ್ದಿಗಳನ್ನು ನಂಬಿ ಮೋಸ ಹೋಗುವ ಮುನ್ನ ಅದರ ಸತ್ಯಾಸತ್ಯತೆಗಳನ್ನು ಪರಿಶೀಲಿಸಿ ಎಂಬುದು ನಾನು ಗೌರಿ ಪತ್ರಿಕೆಯ ಆಶಯ. ಪೋಸ್ಟ್ ಕಾರ್ಡ್ ಬಿತ್ತುವ ವಿಷ ಬೀಜಗಳಿಗೆ ಬಲಿಯಾಗುವ ಮುನ್ನ ಮುಗ್ದ ಜನರು ಎಚ್ಚೆತ್ತುಕೊಳ್ಳಬೆಕು.


ಇದನ್ನು ಓದಿರಿ: ಕೋಮುವಾದಿಗಳು ಆಕ್ಟೀವ್ ಆಗಿರುವುದರಿಂದ ಇಂತಹ ಘಟನೆಗಳಾಗುತ್ತಿವೆ: ಜಸ್ಟೀಸ್ ದಾಸ್‌


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...