Homeಕರ್ನಾಟಕಮುಸ್ಲಿಂ ಮಹಿಳೆಯರ ಬಗ್ಗೆ ಸುಳ್ಳು ಹರಡಿ, ನಂತರ ಪೋಸ್ಟ್ ಡಿಲೀಟ್ ಮಾಡಿದ ಪೋಸ್ಟ್ ಕಾರ್ಡ್ ಕನ್ನಡ

ಮುಸ್ಲಿಂ ಮಹಿಳೆಯರ ಬಗ್ಗೆ ಸುಳ್ಳು ಹರಡಿ, ನಂತರ ಪೋಸ್ಟ್ ಡಿಲೀಟ್ ಮಾಡಿದ ಪೋಸ್ಟ್ ಕಾರ್ಡ್ ಕನ್ನಡ

- Advertisement -
- Advertisement -

ಪೋಸ್ಟ್ ಕಾರ್ಡ್ ಕನ್ನಡ ಸದಾ ಫೇಕ್ ನ್ಯೂಸ್‍ಗಳನ್ನೆ ಹಾಸೊದ್ದುಕೊಂಡಿರುವ, ಧರ್ಮಗಳ ನಡುವೆ ವಿಷ ಬೀಜ ಬಿತ್ತುವ ಒಂದು ಬಲಪಂಥೀಯ ಸಾಮಾಜಿಕ ಜಾಲತಾಣ. ಸುಳ್ಳು ಸುದ್ದಿಗಳಿಗೆ ಕುಖ್ಯಾತಿಯಾಗಿರುವ ಆ ಸಾಮಾಜಿಕ ಜಾಲತಾಣ ಈಗ ಮತ್ತೊಂದು ಅಂತಹದ್ದೆ ಸುಳ್ಳು ಸುದ್ದಿಯನ್ನು ಹೊಂದಿರುವ ಪೋಸ್ಟರ್‌ವೊಂದನ್ನು ಶೇರ್ ಮಾಡಿತ್ತು, ಆ ಪೋಸ್ಟರ್‌ನಲ್ಲಿ ಮುಸ್ಲಿಂ ಮಹಿಳೆಯರ ಕುರಿತು ಅವಹೇಳನಕಾರಿ ಬರಹವನ್ನು ಪ್ರಕಟಿಸಿತ್ತು, ಪೋಸ್ಟರ್‌ನಲ್ಲಿರುವುದು ಹಸಿ ಸುಳ್ಳು ಎಂದು ವಾರ್ತಾಭಾರತಿ ಆಧಾರ ಸಹಿತ ವರದಿ ಮಾಡಿತ್ತು. ಅಲ್ಲಿ ಸುದ್ದಿ ಪ್ರಕಟಣೆಯಾಗುತ್ತಿದಂತೆ ಇತ್ತ ಪೋಸ್ಟ್ ಕಾರ್ಡ್ ತನ್ನ ಪೇಜ್ ನಲ್ಲಿ ಪ್ರಕಟಗೊಂಡ ಸುಳ್ಳು ಸುದ್ದಿಯ ಪೋಸ್ಟರ್‌ ಅನ್ನು ಡಿಲೀಟ್ ಮಾಡುವ ಮೂಲಕ ಮತ್ತೆ ಜನರೆದುರು ಬೆತ್ತಲಾಗಿದೆ.

ಪೋಸ್ಟ್ ಕಾರ್ಡ್ ತಾನು ಪ್ರಕಟಿಸಿದ್ದ ಪೋಸ್ಟರ್‌ನಲ್ಲಿ “ ನಮ್ಮ ಇಸ್ಲಾಂನಲ್ಲಿ ಹೆಣ್ಣನ್ನ ಮಕ್ಕಳನ್ನು ಹೆರುವ ಕೃಷಿ ಎಂದು ಪರಿಗಣಿಸಲಾಗಿದೆ. ನಾವೆಲ್ಲರೂ ಮುಸ್ಲಿಂ ಧರ್ಮವನ್ನು ತೊರೆದು ಹಿಂದೂ ಆಗಲಿದ್ದೇವೆ ಮತ್ತು ಹಿಂದೂ ಹುಡುಗರನ್ನು ಮದುವೆಯಾಗುತ್ತೇವೆ, ಮತ್ತೆ ಯಾವುದೇ ತಲಾಕ್ ಇಲ್ಲ, ಹಲಾಲ್ ಕೂಡ ಇಲ್ಲ. ಸನಾತನ ಹಿಂದೂ ಧರ್ಮ ನಮ್ಮದಾಗಲಿ” ಎಂದು ಬರೆದಿದ್ದ ಪೋಸ್ಟರ್ ನಲ್ಲಿ ಫಾತಿಮಾ ಖುರೇಷಿ, ಮುಂಬೈ ಎಂದು ಹೆಸರು ಹಾಕಿ ಮುಸ್ಲಿಂ ಮಹಿಳೆಯೊಬ್ಬರ ಫೋಟೋ ಹಾಕಲಾಗಿತ್ತು. ಜೊತೆಗೆ “ಇಸ್ಲಾಂನಲ್ಲಿ ಹೆಣ್ಣನ್ನು ಭೋಗದ ವಸ್ತುವಂತೆ ಬಳಸುತ್ತಿದ್ದಾರೆ ಎಂದು ಮುಸ್ಲಿಂ ಹೆಣ್ಣು ಮಕ್ಕಳೇ ಒಪ್ಪಿಕೊಂಡು ಹಿಂದೂ ಧರ್ಮದತ್ತ ಮುಖ ಮಾಡಸುತ್ತಿದ್ದಾರೆ .” ಎಂದು ಬರೆದ ಪೋಸ್ಟರ್‌ಅನ್ನು ಪ್ರಕಟಿಸಿತ್ತು.

ಪೋಸ್ಟ್ ಕಾರ್ಡ್ ಕನ್ನಡ ಪ್ರಕಟಿಸಿದ್ದ ಸುಳ್ಳು ಸುದ್ದಿ

ಈ ಪೋಸ್ಟರ್ ಎರಡು ವಾರಗಳ ಹಿಂದೆ ಹಿಂದಿ ಭಾಷೆಯಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಅದೇ ಮಹಿಳೆಯ ಫೋಟೋ ಬಳಸಿ, ಹಿಂದಿಯಲ್ಲಿ ಬರೆದಿದ್ದ ಬರಹವನ್ನು ಕನ್ನಡಕ್ಕೆ ಅನುವಾದಿಸಿ ಮತ್ತಷ್ಟು ದ್ವೇಷ ಹರಡುವ ಸಾಲುಗಳನ್ನು ಸೇರಿಸಿ ಪೋಸ್ಟರ್ ರೂಪಿಸಿರುವುದು ಫ್ಯಾಕ್ಟ್‌ ಚೆಕ್ ಮೂಲಕ ತಿಳಿದುಬಂದಿದೆ. ನಕಲು ಮಾಡಿರುವ ಸುದ್ದಿಯು 2019ರಲ್ಲಿ ನ್ಯೂಸ್ ಮೊಬೈಲ್.ಇನ್ ಪ್ರಕಟವಾಗಿರುವುದನ್ನು ಕಾಣಬಹುದು. ಹಾಗಾಗಿ ಇದೊಂದು ತಿರುಚಲ್ಪಟ್ಟ ಸುದ್ದಿ ಎಂದು ತಿಳಿದುಬಂದಿದೆ.

ಗೂಗಲ್ ಮೂಲಕ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ, ಪೋಸ್ಟರ್ ನಲ್ಲಿ ಇರುವ ಮಹಿಳೆಯ ಫೋಟೋ ಮರಿಯಮ್ ಖಾಲಿಕ್ ಎಂಬುವವರದು ಎಂದು ತಿಳಿದು ಬಂದಿದ್ದು, ಪೋಸ್ಟ್ ಕಾರ್ಡ್ ನಲ್ಲಿ ಅವರ ಹೆಸರನ್ನು ಫಾತಿಮಾ ಖುರೇಷಿ, ಮುಂಬೈ ಎಂಬ ಹೆಸರಿನಲ್ಲಿ ಕಪೋಲಕಲ್ಪಿತ ಹೇಳಿಕೆಯನ್ನು ಪ್ರಕಟಿಸಿದೆ. 2013ರ ಸೆಪ್ಟಂಬರ್ 20 ರಂದು ಗ್ಲೋಬಲ್ ಎಜುಕೇಶನ್ ಮಾನಿಟರಿಂಗ್ (GEM) ಸೈಟ್‍ನಲ್ಲಿ  ಪ್ರಕಟಿಸಿದ ವರದಿಯಲ್ಲಿ ಈ ಮಹಿಳೆಯು ನೊಬೆಲ್ ಪುರಸ್ಕೃತೆ ಮಲಾಲಾ ಯೂಸಫ್‍ಜಾಯ್ ಅವರ ಶಿಕ್ಷಕಿ ಮರಿಯಮ್ ಖಾಲಿಕ್ ಎಂದು ತಿಳಿದುಬಂದಿದೆ. ನ್ಯೂಯಾರ್ಕ್‍ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬಾಲಕಿಯರ ಶಿಕ್ಷಣದ ಮಹತ್ವ ಕುರಿತು ಮರಿಯಮ್ ಮಾತನಾಡುತ್ತಿದ್ದ ಸಂದರ್ಭದಲ್ಲಿ ತೆಗೆದ ಫೋಟೋ ಆಗಿದ್ದು, “ ನ್ಯೂಯಾರ್ಕ್‍ನಲ್ಲಿ ನಡೆದ ಇಎಫ್ಎ ವರದಿ ಸಮಾರಂಭದಲ್ಲಿ ಭಾಷಣ ನೀಡುತ್ತಿರುವ ಮರಿಯಲ್” ಎಂದು ಶೀರ್ಷಿಕೆ ನೀಡಲಾಗಿದೆ.

ಇದೇ ಲೇಖನವನ್ನು ವಿಶ್ವಸಂಸ್ಥೆಯ ಬಾಲಕಿಯರ ಶಿಕ್ಷಣ ಉಪಕ್ರಮದ ವೆಬ್‍ಸೈಟ್‍ನಲ್ಲಿಯೂ ಪ್ರಕಟಿಸಿದೆ. ವಿಶ್ವ ಸಂಸ್ಥೆಯ ಅಧಿಕೃತ ಯೂಟ್ಯೂಬ್ ಚಾನೆಲ್‍ನಲ್ಲಿ ಕೂಡ ಈ ವಿಡಿಯೊ ಅಪ್ಲೋಡ್ ಮಾಡಲಾಗಿದೆ. ಇನ್ನು ಪೋಸ್ಟ್ ಕಾರ್ಡ್ ಪ್ರಕಟಿಸಿದ ಪೋಸ್ಟರ್‌ನಲ್ಲಿ ದಾಖಲಾಗಿರುವ ಹೇಳಿಕೆಗಳಿಗೆ ಯಾವುದೇ ದಾಖಲೆಗಳಿಲ್ಲ ಎಂಬುದು ಖಚಿತವಾಗಿದೆ.

ಈ ಸುದ್ದಿಯನ್ನು ಪ್ರಕಟಿಸುತ್ತಿದ್ದಂತೆ ಪೋಸ್ಟ್ ಕಾರ್ಡ್‍ನಲ್ಲಿ ಪೋಸ್ಟ್ ಮಾಡಿದ್ದ ಸುಳ್ಳು ಸುದ್ದಿಯ ಪೋಸ್ಟರ್ ಮಾಯವಾಗಿದೆ. ಅದನ್ನು ಪೋಸ್ಟ್ ಕಾರ್ಡ್ ಡಿಲೀಟ್ ಮಾಡಿದೆ. ಇದರಿಂದ ನಾವೆಲ್ಲ ತಿಳಿದುಕೊಳ್ಳಬೇಕಿರುವುದು ಏನೆಂದರೆ ಈ ಪೇಜ್‍ಅನ್ನು ಫಾಲೋ ಮಾಡುವ ಅನೇಕ ಮುಗ್ದ ಜನರು ಇವರು ಹೇಳುವ ಸುಳ್ಳನ್ನೆ ನಿಜವೆಂದು ನಂಬಿ ಮೋಸಹೋಗುವ ಮತ್ತು ಈಗಾಗಲೇ ಮೋಸ ಹೋಗಿರವ ಅಸಂಖ್ಯ ಜನರಿದ್ದಾರೆ. ಹಾಗಾಗಿ ಪೋಸ್ಟ್ ಕಾರ್ಡ್‍ನಲ್ಲಿ ಬರುವ ಸುದ್ದಿಗಳನ್ನು ನಂಬಿ ಮೋಸ ಹೋಗುವ ಮುನ್ನ ಅದರ ಸತ್ಯಾಸತ್ಯತೆಗಳನ್ನು ಪರಿಶೀಲಿಸಿ ಎಂಬುದು ನಾನು ಗೌರಿ ಪತ್ರಿಕೆಯ ಆಶಯ. ಪೋಸ್ಟ್ ಕಾರ್ಡ್ ಬಿತ್ತುವ ವಿಷ ಬೀಜಗಳಿಗೆ ಬಲಿಯಾಗುವ ಮುನ್ನ ಮುಗ್ದ ಜನರು ಎಚ್ಚೆತ್ತುಕೊಳ್ಳಬೆಕು.


ಇದನ್ನು ಓದಿರಿ: ಕೋಮುವಾದಿಗಳು ಆಕ್ಟೀವ್ ಆಗಿರುವುದರಿಂದ ಇಂತಹ ಘಟನೆಗಳಾಗುತ್ತಿವೆ: ಜಸ್ಟೀಸ್ ದಾಸ್‌


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...