Homeಮುಖಪುಟಯುಪಿ ಚುನಾವಣೆ: ಅಯೋಧ್ಯೆಯಿಂದ ಪವನ್ ಪಾಂಡೆ ಎಸ್‌ಪಿ ಅಭ್ಯರ್ಥಿ, ಬಿಜೆಪಿ ಅಭ್ಯರ್ಥಿ ಬಗ್ಗೆ ಕುತೂಹಲ

ಯುಪಿ ಚುನಾವಣೆ: ಅಯೋಧ್ಯೆಯಿಂದ ಪವನ್ ಪಾಂಡೆ ಎಸ್‌ಪಿ ಅಭ್ಯರ್ಥಿ, ಬಿಜೆಪಿ ಅಭ್ಯರ್ಥಿ ಬಗ್ಗೆ ಕುತೂಹಲ

- Advertisement -
- Advertisement -

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಗೋರಖ್‌ಪುರದ ನಂತರ ಅಯೋಧ್ಯೆ ಹೆಚ್ಚು ಕುತೂಹಲ ಮೂಡಿಸಿರುವ ಕ್ಷೇತ್ರವಾಗಿವೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅಯೋಧ್ಯೆಯಿಂದ ಹಿಂದೆ ಸರಿದಿದ್ದಾರೆ. ಇದೇ ವೇಳೆ ಸಮಾಜವಾದಿ ಪಾರ್ಟಿ 2012ರಲ್ಲಿ ಅಯೋಧ್ಯೆಯಿಂದ ಜಯಗಳಿಸಿದ್ದ ಪವನ್ ಪಾಂಡೆ ಅವರನ್ನು ಕಣಕ್ಕಿಳಿಸಿದೆ.

ಅಯೋಧ್ಯೆ ವಿಧಾನಸಭಾ ಕ್ಷೇತ್ರದಿಂದ ತೇಜ್ ನಾರಾಯಣ ಪಾಂಡೆ ಅಲಿಯಾಸ್ ಪವನ್ ಪಾಂಡೆ ಅವರನ್ನು ತನ್ನ ಅಭ್ಯರ್ಥಿ ಎಂದು ಸಮಾಜವಾದಿ ಪಕ್ಷ ಘೋಷಿಸಿದ್ದು, ಪವನ್ ಪಾಂಡೆ ವಿರುದ್ಧ ಬಿಜೆಪಿ ತನ್ನ ಯಾವ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ ಎಂಬ ಕುತೂಹಲ ಕೆರಳಿಸಿದೆ.

ರಾಮಮಂದಿರ ನಿರ್ಮಾಣ ಕಾರ್ಯ ಆರಂಭವಾದಗಿನಿಂದ ಅಯೋಧ್ಯೆಯಲ್ಲಿ ಬಿಜೆಪಿ ವಿರುದ್ಧ ಜನರಲ್ಲಿ ಆಕ್ರೋಶವಿದೆ. ಸರ್ಕಾರ ತಮ್ಮ ಮನೆ, ಅಂಗಡಿಗಳನ್ನು ಕಸಿದುಕೊಂಡಿದೆ ಎಂಬ ಟೀಕೆಗಳು ವ್ಯಕ್ತವಾಗಿದೆ. ಈ ಸಂದರ್ಭದಲ್ಲಿ ಬಿಜೆಪಿಯ ಅಭ್ಯರ್ಥಿ ಆಯ್ಕೆಗೆ ಒತ್ತಡ ಕೂಡ ಇದೆ.

ಇದನ್ನೂ ಓದಿ: ಯೋಗಿ ಆದಿತ್ಯನಾಥ್‌ಗೆ ಅಯೋಧ್ಯೆಯಲ್ಲಿ ಹೆಚ್ಚು ವಿರೋಧವಿದೆ: ರಾಮ ಮಂದಿರದ ಪ್ರಧಾನ ಅರ್ಚಕ

ಪಾಂಡೆ ಅವರು 2012 ರಲ್ಲಿ ಅಯೋಧ್ಯೆ ವಿಧಾನಸಭಾ ಕ್ಷೇತ್ರದಿಂದ ಗೆದ್ದಿದ್ದರು. 2017 ರವರೆಗೆ ಎಸ್‌ಪಿ ಸರ್ಕಾರದಲ್ಲಿ ಅಖಿಲೇಶ್ ಯಾದವ್ ನೇತೃತ್ವದ ಸಚಿವ ಸಂಪುಟದಲ್ಲಿ ಸಚಿವರಾಗಿದ್ದರು. ಆದರೆ, 2017ರ ವಿಧಾನಸಭಾ ಚುನಾವಣೆಯಲ್ಲಿ ಅದೇ ಕ್ಷೇತ್ರದಿಂದ ಬಿಜೆಪಿಯ ವೇದಪ್ರಕಾಶ್ ಗುಪ್ತಾ ವಿರುದ್ಧ ಸೋತಿದ್ದರು.

ರಾಮಲಲ್ಲಾ ದೇವಸ್ಥಾನದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಕೂಡ ಅಯೋಧ್ಯೆಯಲ್ಲಿ ಪವನ್ ಪಾಂಡೆ ಪ್ರಬಲ ಅಭ್ಯರ್ಥಿ ಎಂದಿದ್ದಾರೆ. ಚುನಾವಣೆ ಹಿನ್ನೆಲೆ ಆಶೀರ್ವಾದ ಪಡೆಯಲು ಸ್ಥಳೀಯ ರಾಜಕಾರಣಿಗಳು ತಮ್ಮ ಬಳಿಗೆ ಬರಲು ಪ್ರಾರಂಭಿಸಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ್ದ ಅರ್ಚಕರು, “ಇದುವರೆಗೂ ಸಮಾಜವಾದಿ ಪಕ್ಷದ ನಾಯಕ ಪವನ್ ಪಾಂಡೆ ಅವರ ಪತ್ನಿ ನನ್ನ ಬಳಿಗೆ ಬಂದಿದ್ದಾರೆ, ಪವನ್ ಪಾಂಡೆ ಎಸ್‌ಪಿಯ ಪ್ರಬಲ ಅಭ್ಯರ್ಥಿ” ಎಂದು ಹೇಳಿದ್ದರು.

ಸದ್ಯ ಬಿಜೆಪಿಯ ಶಾಸಕ ವೇದಪ್ರಕಾಶ್ ಗುಪ್ತಾ ಮತ್ತೆ ಇಲ್ಲಿಂದ ಕಣಕ್ಕಿಳಿಯುವ ಸಾಧ್ಯತೆಯನ್ನು ಬೆಂಬಲಿಗರು ಹೇಳುತ್ತಾರೆ. ಆದರೆ, ಅವರ ಬಗ್ಗೆಯೂ ಅಯೋಧ್ಯೆಯಲ್ಲಿ ಉತ್ತಮ ಅಭಿಪ್ರಾಯವಿಲ್ಲ ಎನ್ನಲಾಗುತ್ತದೆ. ಎಲ್ಲದಕ್ಕೂ ಸರ್ಕಾರ ಭೂ ಹಗರಣ ಮತ್ತು ಜನರ ನೆಲೆಯನ್ನು ಕಸಿದುಕೊಂಡಿದ್ದು ಕಾರಣ ಎನ್ನಲಾಗಿದೆ.

ಅಯೋಧ್ಯೆಯಲ್ಲಿ ಬಹುಜನ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಕೂಡ ತಮ್ಮ ಅಭ್ಯರ್ಥಿಯನ್ನು ಘೋಷಿಸಿಲ್ಲ. ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳಾದ ಅಯೋಧ್ಯೆ, ಬಿಕಾಪುರ್, ರುದೌಲಿ, ಗೋಸೈಗಂಜ್ ಮತ್ತು ಮಿಲ್ಕಿಪುರ್ ಈಗ ಬಿಜೆಪಿ ವಶದಲ್ಲಿವೆ.

ಉತ್ತರ ಪ್ರದೇಶದಲ್ಲಿ ಫೆಬ್ರವರಿ 10 ರಿಂದ ಮಾರ್ಚ್ 7 ರ ನಡುವೆ ಏಳು ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಅಯೋಧ್ಯೆಯಲ್ಲಿ ಫೆಬ್ರವರಿ 27 ರಂದು ಐದನೇ ಹಂತದಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.


ಇದನ್ನೂ ಓದಿ: ಭೂ ಹಗರಣ, ಬ್ರಾಹ್ಮಣರ ಮತಗಳು ಕೈ ತಪ್ಪುವ ಭಯ: ಅಯೋಧ್ಯೆಯ ಟಿಕೆಟ್‌ ಯೋಗಿ ಕಳೆದುಕೊಳ್ಳಲು ಕಾರಣವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...