Homeಮುಖಪುಟಅಂಬೇಡ್ಕರ್‌ಗೆ ಅಗೌರವ ತೋರಿದ ಜಡ್ಜ್‌ ವಿರುದ್ಧ ದೂರು ದಾಖಲು: ಶುಕ್ರವಾರ ಬೆಂಗಳೂರಿನ ವಿಧಾನಸೌಧ ಎದುರು ಪ್ರತಿಭಟನೆ

ಅಂಬೇಡ್ಕರ್‌ಗೆ ಅಗೌರವ ತೋರಿದ ಜಡ್ಜ್‌ ವಿರುದ್ಧ ದೂರು ದಾಖಲು: ಶುಕ್ರವಾರ ಬೆಂಗಳೂರಿನ ವಿಧಾನಸೌಧ ಎದುರು ಪ್ರತಿಭಟನೆ

ಎಲ್ಲಾ ಕೋರ್ಟುಗಳಲ್ಲಿ ಅಂಬೇಡ್ಕರ್ ಫೋಟೊ ಕಡ್ಡಾಯಗೊಳಿಸಬೇಕು ಮತ್ತು ನ್ಯಾಯಾಂಗದಲ್ಲಿ ಮೀಸಲಾತಿ ಬೇಕು ಎಂಬ ಎರಡು ಹಕ್ಕೊತ್ತಾಯಗಳ ಈಡೇರಿಕೆಗಾಗಿ ಧೀರ್ಘ ಹೋರಾಟಕ್ಕೆ ಸಭೆ ನಿರ್ಧರಿಸಿದೆ.

- Advertisement -
- Advertisement -

ರಾಯಚೂರಿನ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ನಡೆದ ಗಣರಾಜ್ಯೋತ್ಸವದ ವೇಳೆ ಇರಿಸಲಾಗಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಫೋಟೋ ತೆರವುಗೊಳಿಸಿ ಅಗೌರವ ತೋರಿದ ಸೆಶೆನ್ಸ್‌ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡರನ್ನು ಅವರನ್ನು ಸೇವೆಯಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ರಾಯಚೂರಿನ ಘಟನೆ ಖಂಡಿಸಿ ಇಂದು ಬೆಂಗಳೂರಿನ ಕಬ್ಬನ್‌ ಪಾರ್ಕ್‌ನಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ದಲಿತ ಮುಖಂಡರಾದ ಮಾವಳ್ಳಿ ಶಂಕರ್, ವಿ.ನಾಗರಾಜು, ಕರ್ನಾಟಕ ಜನಶಕ್ತಿಯ ಗೌರಿ, ಹಿರಿಯ ವಕೀಲರಾದ ಎಸ್ ಬಾಲನ್, ಹೋರಾಟಗಾರರಾದ ಸಿರಿಮನೆ ನಾಗರಾಜುರವರು ಭಾಗವಹಿಸಿದ್ದರು. “ರಾಯಚೂರಿನ ಜಡ್ಜ್‌ ಅಂಬೇಡ್ಕರ್ ಫೋಟೊ ತೆಗೆಸುವ ಮೂಲಕ ಸಂವಿಧಾನಕ್ಕೆ ಅಪಚಾರ ಮಾಡಿದ್ದಾರೆ. ಅಂಬೇಡ್ಕರ್‌ರವರಿಗೆ ಅಪಚಾರ ಮಾಡಿದ್ದಾರೆ, ಆ ಮೂಲಕ ಇಡೀ ದಲಿತ ಸಮುದಾಯಕ್ಕೆ ಮಾಡಿದ ಅವಮಾನವಾಗಿದೆ. ಇದು ದಲಿತರ ಮೇಲೆ ನಡೆದಿರುವ ದೌರ್ಜನ್ಯವಾಗಿದ್ದು, ಆ ನ್ಯಾಯಾಧೀಶರ ವಿರುದ್ಧ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ರಾಜ್ಯಾದ್ಯಂತ ದೂರು ದಾಖಲಿಸಲು ಕರೆ ನೀಡಲಾಗಿದೆ.

“ರಾಯಚೂರಿನಲ್ಲಿ ನಡೆದಿರುವುದು ಬಿಡಿ ಪ್ರಕರಣವಲ್ಲ. ವ್ಯವಸ್ಥಿತವಾಗಿ ಅಂಬೇಡ್ಕರ್‌ರನ್ನು ಮರೆವು ಮಾಡುವ, ಮರೆಯಿಸುವ ಪ್ರಯತ್ನ ಸತತವಾಗಿ ನಡೆಯುತ್ತಿದೆ. ಪ್ರತಿ ವರ್ಷ ಡಿಸೆಂಬರ್ 06ರ ಅಂಬೇಡ್ಕರ್ ಪರಿನಿರ್ವಾಣದಂದು ಬೆಂಗಳೂರಿನ ವಿಧಾನಸೌಧ ಎದುರು ಇರುವ ಅಂಬೇಡ್ಕರ್ ಪ್ರತಿಮೆ ಎದುರು ಮಾಲಾರ್ಪಣೆ ಮಾಡಿ, ಅವರನ್ನು ಸ್ಮರಿಸಲಾಗುತ್ತಿತ್ತು. ಅದರೆ 2019ರಲ್ಲಿ ಯಡಿಯೂರಪ್ಪನವರು ಸಿಎಂ ಆದ ನಂತರ ಅದನ್ನು ಕಡೆಗಣಿಸಲಾಗುತ್ತಿದೆ. 2021ರ ಡಿಸೆಂಬರ್‌ 06 ರಂದು ಸಹ ಮಾಲಾರ್ಪಣೆ ಮಾಡದಿದ್ದಾಗ ದಲಿತ ಸಂಘಟನೆಗಳು ಪ್ರತಿಭಟನೆ ಮಾಡಬೇಕಾಗಿತ್ತು. ಜೊತೆಗೆ ಜನವರಿ 26 ರಂದು ಸಹ ಗಣರಾಜ್ಯೋತ್ಸವದ ದಿನ ವಿಧಾನಸೌಧದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿಲ್ಲ. ಅದಕ್ಕೂ ಪ್ರತಿಭಟನೆ ನಡೆದ ನಂತರವಷ್ಟೇ ಕಾಟಾಚಾರಕ್ಕೆ ಮಾಲಾರ್ಪಣೆ ಮಾಡಲಾಗಿದೆ. ರಾಯಚೂರಿನಲ್ಲಿ ಅಂಬೇಡ್ಕರ್ ಫೋಟೊ ತೆಗೆಸಿರುವುದು ಸಹ ಅದರ ಮುಂದುವರೆದ ಭಾಗವಾಗಿದ್ದು ಅಂಬೇಡ್ಕರ್‌ರವರನ್ನು ಮರೆ ಮಾಚುವ ಹುನ್ನಾರ ನಡೆಯುತ್ತಿದೆ. ಇದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ” ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

ಹೈಕೋರ್ಟ್‌ನಲ್ಲಿ ನ್ಯಾಯಾಧೀಶರೊಬ್ಬರು “ದೇಶದ ಎಲ್ಲಾ ಕೋರ್ಟುಗಳಲ್ಲಿ ಮಹಾತ್ಮ ಗಾಂಧಿಯವರ ಫೋಟೊ ಮಾತ್ರ ಇರಬೇಕು ಎಂಬ ಸುತ್ತೋಲೆ ಹೊರಡಿಸಿದ್ದಾರೆ. ಇದು ಸರಿಯಾದುದ್ದಲ್ಲ. ದೇಶದ ಎಲ್ಲಾ ಕೋರ್ಟುಗಳಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಫೋಟೊ ಇಡುವಂತೆ ಒತ್ತಾಯಿಸಬೇಕಿದೆ” ಎಂಬ ಆಗ್ರಹ ಕೇಳಿಬಂತು.

ಹಿರಿಯ ವಕೀಲರಾದ ಎಸ್ ಬಾಲನ್‌ರವರು ಮಾತನಾಡಿ “ಇಡಿ ನ್ಯಾಯಾಂಗದಲ್ಲಿಯೇ ದಲಿತ ಪ್ರಾತಿನಿಧ್ಯ ತೀರಾ ಕನಿಷ್ಠ ಮಟ್ಟದಲ್ಲಿದೆ. ‘ಕರ್ನಾಟಕದಲ್ಲಿನ 45 ನ್ಯಾಯಾಧೀಶರಲ್ಲಿ 25 ಜನರು ಬ್ರಾಹ್ಮಣ ಸಮುದಾಯಕ್ಕೆ ಸೇರಿದ್ದು, 20 ಜನರು ಇತರೆ ಪ್ರಬಲ ಜಾತಿಗಳಿಗೆ ಸೇರಿದ್ದಾರೆ. ಒಬ್ಬರು ಮಾತ್ರ ದಲಿತ ಸಮುದಾಯಕ್ಕೆ ಸೇರಿದ್ದಾರೆ. ಇನ್ನು ನ್ಯಾಯಾಂಗದ ಉನ್ನತ ಅಧಿಕಾರಿ ಹುದ್ದೆಗಳಲ್ಲಿಯೂ ಸಹ ದಲಿತರಿಲ್ಲ. ಪ್ರತಿಭಾವಂತ ದಲಿತರಿದ್ದರೂ ಸಹ ಅವರಿಗೆ ಉನ್ನತ ಹುದ್ದೆಗಳನ್ನು ನೀಡುತ್ತಿಲ್ಲ. ಹಾಗಾಗಿ ನ್ಯಾಯಾಂಗದಲ್ಲಿ ಮೀಸಲಾತಿ ಜಾರಿಯಾಗಬೇಕು” ಎಂದು ಆಗ್ರಹಿಸಿದರು.

ಎಲ್ಲಾ ಕೋರ್ಟುಗಳಲ್ಲಿ ಅಂಬೇಡ್ಕರ್ ಫೋಟೊ ಕಡ್ಡಾಯಗೊಳಿಸಬೇಕು ಮತ್ತು ನ್ಯಾಯಾಂಗದಲ್ಲಿ ಮೀಸಲಾತಿ ಬೇಕು ಎಂಬ ಎರಡು ಹಕ್ಕೊತ್ತಾಯಗಳ ಈಡೇರಿಕೆಗಾಗಿ ಧೀರ್ಘ ಹೋರಾಟಕ್ಕೆ ಸಜ್ಜಾಗಬೇಕು ಎಂದು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಯಾವುದೇ ದೇಶಕ್ಕೆ ಅದರ ಸಂವಿಧಾನವೇ ಮೂಲಾಧಾರವಾಗಿದೆ. ಸಂವಿಧಾನದ ಆಶಯದಂತೆ ಆ ದೇಶಗಳು ಕಾರ್ಯನಿರ್ವಹಿಸುತ್ತವೆ. ಭಾರತದ ಸಂವಿಧಾನದ ಶಿಲ್ಪಿ (Architect of Indian Constitution) ಎಂದು ಅಧಿಕೃತವಾಗಿ ಅಂಬೇಡ್ಕರ್‌ರನ್ನು ಹೆಸರಿಸಲಾಗಿದೆ. ಅಂತಹ ಸಂವಿಧಾನದ ಶಿಲ್ಪಿಯ ಫೋಟೊವನ್ನು ಕೋರ್ಟ್‌ಗಳಲ್ಲಿ ಇಡಬಾರದು ಎಂದರೆ ನಾಚಿಗೇಡಿನ ವಿಷಯ. ಹಾಗಾಗಿ ಎಲ್ಲಾ ಕೋರ್ಟುಗಳಲ್ಲಿ ಫೋಟೊ ಇಡುವಂತೆ ಎಂದು ಸಭೆಯಲ್ಲಿ ಒಕ್ಕೊರಲಿನಿಂದ ಆಗ್ರಹಿಸಲಾಯಿತು.

ತುರ್ತು ಹಕ್ಕೊತ್ತಾಯವಾಗಿ ‘ಗಣರಾಜ್ಯೋತ್ಸವದ ದಿನ ಅಂಬೇಡ್ಕರ್ ಫೋಟೊ ಇರಬೇಕು ಎಲ್ಲಾ ಇಲಾಖೆಗಳಿಗೆ ಸರ್ಕಾರ ಸುತ್ತೋಲೆ ಹೊರಡಿಸಿದೆ. ಅದನ್ನು ಉಲ್ಲಂಘಿಸಿ ರಾಯಚೂರು ಜಿಲ್ಲಾಧಿಕಾರಿ ತಾಂತ್ರಿಕ ಕಾರಣವೊಡ್ಡಿ ಅಂಬೇಡ್ಕರ್ ಫೋಟೊ ತೆಗೆಸಿದ್ದಾರೆ. ಇದು ಗಂಭೀರ ಲೋಪವಾಗಿದ್ದು, ಅವರ ಮೇಲೆ ಕಾನೂನು ರೀತ್ಯಾ ಕ್ರಮ ಕೈಗೊಳ್ಳಬೇಕು. ಕೂಡಲೇ ಹೈಕೋರ್ಟ್ ಎಲ್ಲಾ ನ್ಯಾಯಾಲಯಗಳಿಗೆ ಅಂಬೇಡ್ಕರ್ ಫೋಟೊ ಇರಬೇಕೆಂಬ ಸುತ್ತೋಲೆ ಹೊರಡಿಸಬೇಕು ಎಂದು ಆಗ್ರಹಿಸಿ ಜನವರಿ 28ರ ಶುಕ್ರವಾರ ಪ್ರತಿಭಟನೆಗೆ ಕರೆ ನೀಡಲಾಗಿದೆ.

ಶುಕ್ರವಾರದ ಪ್ರತಿಭಟನೆ ನಂತರ ವಿಸ್ತೃತ ಸಭೆ ನಡೆಸಿ, ಬೆಂಗಳೂರಿನಲ್ಲಿ ಬೃಹತ್ ಹೋರಾಟ ನಡೆಸಲಾಗುವುದು ಮತ್ತು ಪ್ರತಿ ಜಿಲ್ಲೆಗಳಲ್ಲಿ ಜಾಗೃತಿ ಸಮಾವೇಶಗಳನ್ನು ನಡೆಸಲು ಚಿಂತಿಸಲಾಯಿತು. ಸಭೆಯಲ್ಲಿ ಕಾರ್ಮಿಕ ಮುಖಂಡರಾದ ವರದರಾಜೇಂದ್ರ, ದಲಿತ ಮುಖಂಡರಾದ ಡಿ.ರಾಜಗೋಪಾಲ್ ಮತ್ತಿತರರು ಭಾಗವಹಿಸಿದ್ದರು.


ಇದನ್ನೂ ಓದಿ; ರಾಯಚೂರು: ಡಾ. ಅಂಬೇಡ್ಕರ್‌ರವರಿಗೆ ಅಗೌರವ ತೋರಿದ ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...