Homeಮುಖಪುಟಆಸ್ಪತ್ರೆ ಸಿಬ್ಬಂದಿಗೆ ಲಂಚ ನೀಡಲು ಸಾಧ್ಯವಾಗದೆ ರಸ್ತೆಯಲ್ಲೆ 6 ತಿಂಗಳ ಶಿಶುವಿಗೆ ಜನ್ಮ ನೀಡಿದ ಮಹಿಳೆ

ಆಸ್ಪತ್ರೆ ಸಿಬ್ಬಂದಿಗೆ ಲಂಚ ನೀಡಲು ಸಾಧ್ಯವಾಗದೆ ರಸ್ತೆಯಲ್ಲೆ 6 ತಿಂಗಳ ಶಿಶುವಿಗೆ ಜನ್ಮ ನೀಡಿದ ಮಹಿಳೆ

- Advertisement -
- Advertisement -

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ನಿರಾಕರಿಸಿದ ಕಾರಣಕ್ಕೆ ಮಹಿಳೆಯೊಬ್ಬರು ರಸ್ತೆಯಲ್ಲೇ ಆರು ತಿಂಗಳ ಶಿಶುವಿಗೆ ಜನ್ಮ ನೀಡಿರುವ ಅಘಾತಕಾರಿ ಘಟನೆ ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.

ಆರು ತಿಂಗಳ ಗರ್ಭಿಣಿಯಾಗಿದ್ದ ಕಲ್ಲೋ ಬಾಯಿಯನ್ನು ತೀವ್ರ ಹೆರಿಗೆ ನೋವಿನ ಕಾರಣಕ್ಕೆ ಸಂಬಂಧಿಕರು ಭಿಂಡ್ ಜಿಲ್ಲೆಯ ರಾಜುಪುರ ಗ್ರಾಮದಿಂದ ಭಿಂಡ್ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದಿದ್ದರು. ಆಸ್ಪತ್ರೆಯ ಸಿಬ್ಬಂದಿ ಲಂಚ ಕೇಳಿ, ಅದನ್ನು ಪಾವತಿಸಲು ಸಾಧ್ಯವಿರದ ಬಡ ಮಹಿಳೆಯನ್ನು ಆಸ್ಪತ್ರೆಯಿಂದ ಬಲವಂತವಾಗಿ ಹೊರ ಹಾಕಿದ್ದರು. ಅಲ್ಲಿಂದ ಹೊರಗೆ ಬಂದ ಮೇಲೆ ಗರ್ಭಿಣಿ ರಸ್ತೆಯಲ್ಲೇ ಕುಸಿದು ಬಿದ್ದು, ಆರು ತಿಂಗಳ ಮಗುವಿಗೆ ಜನ್ಮ ನೀಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ವಿದ್ಯಾರ್ಥಿನಿ ಸಾವಿನ ಬಗ್ಗೆ ಸುಳ್ಳು ಬರೆದು ಕೋಮುದ್ವೇಷ ಹರಡುತ್ತಿರುವ ‘ಪೋಸ್ಟ್‌ ಕಾರ್ಡ್’!

“ನಾವು ಭಿಂಡ್ ಜಿಲ್ಲಾ ಆಸ್ಪತ್ರೆಗೆ ಬಂದಾಗ, ಕರ್ತವ್ಯದಲ್ಲಿರುವ ನರ್ಸಿಂಗ್ ಸಿಬ್ಬಂದಿ, ನನ್ನ ಸೊಸೆಗೆ ಚಿಕಿತ್ಸೆ ನೀಡುವ ಬದಲು, ಚಿಕಿತ್ಸೆ ಪ್ರಾರಂಭಿಸುವ ಮೊದಲು ನಮ್ಮಿಂದ 5000 ರೂಪಾಯಿ ಲಂಚ ಕೇಳಿದರು. ನಾವು ತೀರಾ ಬಡವರಾಗಿದ್ದರಿಂದ ಅದನ್ನು ಪಾವತಿಸಲು ಸಾಧ್ಯವಿಲ್ಲ ಎಂದು ಹೇಳಿದ್ದೇವೆ. ಹೀಗಾಗಿ ಶುಶ್ರೂಷಕ ಸಿಬ್ಬಂದಿ ನನ್ನ ಸೊಸೆ ಮತ್ತು ನಮ್ಮೆಲ್ಲರನ್ನೂ ಆಸ್ಪತ್ರೆಯಿಂದ ಹೊರದಬ್ಬಿ, ಆಸ್ಪತ್ರೆಯ ಹೊರಗೆ ಅಲ್ಟ್ರಾಸೌಂಡ್ ಪರೀಕ್ಷೆಯನ್ನು ಮಾಡುವಂತೆ ಹೇಳಿದ್ದಾರೆ” ಎಂದು ಮಹಿಳೆಯ ಅತ್ತೆ ಮಿಥಿಲೇಶ್ ಮಿರ್ಧಾ ಆರೋಪಿಸಿದ್ದಾರೆ.

“ಆಸ್ಪತ್ರೆಯಿಂದ ಬಲವಂತವಾಗಿ ಹೊರಗೆ ಹಾಕಿಸಿಕೊಂಡ ನಾವು ರಸ್ತೆಗೆ ಬಂದೆವು. ಈ ವೇಳೆ ನನ್ನ ಸೊಸೆ ರಸ್ತೆಯಲ್ಲಿ ಕುಸಿದು ಬಿದ್ದು, ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ್ದಾರೆ. ಹೆರಿಗೆಗೆ ನಮ್ಮ ಬಳಿ ಸ್ವಚ್ಛವಾದ ಬಟ್ಟೆ ಇರಲಿಲ್ಲ, ಇದರಿಂದಾಗಿ ನನ್ನ ಮಗನ ಟವೆಲ್ ಅನ್ನು ಮುಚ್ಚಲು ಬಳಸಿದ್ದೇವೆ. ನವಜಾತ ಶಿಶು, ಸರಿಯಾದ ವೈದ್ಯಕೀಯ ಆರೈಕೆಯ ಕೊರತೆಯಿಂದ ಸಾವನ್ನಪ್ಪಿದೆ” ಎಂದು ಮಿಥಿಲೇಶ್ ಹೇಳಿದ್ದಾರೆ.

ಸಂತ್ರಸ್ತರ ಆರೋಪವನ್ನು ಭಿಂಡ್ ಜಿಲ್ಲಾ ಆಸ್ಪತ್ರೆಯ ಕರ್ತವ್ಯ ನಿರತ ಶುಶ್ರೂಷಾ ಸಿಬ್ಬಂದಿ ನಿರಾಕರಿಸಿದ್ದಾರೆ. “ಮಿರ್ಧಾ ಕುಟುಂಬವು ತಾವಾಗಿಯೇ ಆಸ್ಪತ್ರೆಯನ್ನು ತೊರೆದಿದ್ದಾರೆ” ಎಂದು ನರ್ಸ್ ಹೇಳಿದ್ದಾರೆ. ಜೊತೆಗೆ ಆರು ತಿಂಗಳ ಅಕಾಲಿಕ ಹೆರಿಯಾದ ಶಿಶುಗಳು ಬದುಕುಳಿಯುವುದಿಲ್ಲ ಎಂದು ಅವರು ಸೂಚಿಸಿದ್ದಾರೆ.

ಇದನ್ನೂ ಓದಿ: ಪೊಲೀಸ್ ಇಲಾಖೆಯಿಂದ ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್‌ ವರ್ಗಾವಣೆ

ಭಿಂಡ್ ಜಿಲ್ಲಾ ಆಸ್ಪತ್ರೆಯ ಆಡಳಿತವು ಇಡೀ ಪ್ರಕರಣದ ವಿಚಾರಣೆ ನಡೆಸಲು ಮೂವರು ವೈದ್ಯರ ಸಮಿತಿಯನ್ನು ರಚಿಸಿದೆ.

“ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದೆ. ಭ್ರೂಣವು ಗರ್ಭಾಶಯದೊಳಗೆ ಸಾವನ್ನಪ್ಪಿದೆ. ರೋಗಿಯ ಸಂಬಂಧಿಕರಿಗೆ ಕರ್ತವ್ಯ ನಿರತ ಸಿಬ್ಬಂದಿ ಈ ಬಗ್ಗೆ ಮಾಹಿತಿ ನೀಡಿದರು, ಆದರೆ ರೋಗಿಯ ಸಂಬಂಧಿಕರು ನಿರಾಕರಿಸಿದರು. ಈ ಮಾಹಿತಿ ಪಡೆದು ಅವರು ಆಸ್ಪತ್ರೆಯಿಂದ ಹೊರನಡೆದರು. ಯಾರೂ ಅವರನ್ನು ಆಸ್ಪತ್ರೆಯಿಂದ ಹೊರಹಾಕಲಿಲ್ಲ” ಎಂದು ಭಿಂಡ್‌ ಜಿಲ್ಲಾ ಆಸ್ಪತ್ರೆಯ ಸಿವಿಲ್ ಸರ್ಜನ್ ಡಾ.ಅನಿಲ್ ಗೋಯಲ್ ಅವರು ಹೇಳಿದ್ದಾರೆ.

“ಇಡೀ ಘಟನೆಯ ವಿಚಾರಣೆ ನಡೆಸಲು ಮೂವರು ವೈದ್ಯರ ಸಮಿತಿಯನ್ನು ರಚಿಸಲಾಗಿದೆ. ತನಿಖಾ ಸಮಿತಿಯ ವರದಿಯ ಆಧಾರದ ಮೇಲೆ, ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಯುಪಿ ಚುನಾವಣೆ: ಬಿಜೆಪಿ ಮೈತ್ರಿ ಆಹ್ವಾನ ತಿರಸ್ಕರಿಸಿದ RLD ಮುಖ್ಯಸ್ಥ ಜಯಂತ್ ಚೌಧರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...