Homeಕರ್ನಾಟಕರಸ್ತೆಗುಂಡಿ ಸಮಸ್ಯೆ: ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ರಸ್ತೆಗುಂಡಿ ಸಮಸ್ಯೆ: ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

- Advertisement -
- Advertisement -

ಬೆಂಗಳೂರಿನಲ್ಲಿ ಎಂದು ಮುಗಿಯದ ಸಮಸ್ಯೆ ರಸ್ತೆಗುಂಡಿಗಳದ್ದು. ಪ್ರತಿ ವರ್ಷವೂ ದುರಸ್ಥಿ ಕಾರ್ಯ ನಡೆಯುತ್ತಲೇ ಇದೆ ಎಙಂದು ಬಿಬಿಎಫಿ ಹೇಳಿಕೊಂಡರೂ, ಜನರಿಗೆ ಮಾತ್ರ ಕಷ್ಟ ತಪ್ಪಿದ್ದಲ್ಲ. ಈ ಬಗ್ಗೆ ಕರ್ನಾಟಕ ಹೈಕೋರ್ಟ್ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿರುದ್ಧ ಕಿಡಿ ಕಾರಿದೆ.

”ಬಿಬಿಎಂಪಿ ಸಲ್ಲಿಸಿರುವ ಸ್ಥಿತಿಗತಿ ವರದಿ ನಮಗೆ ತೃಪ್ತಿ ತಂದಿಲ್ಲ. ರಸ್ತೆಗಳ ದುರಸ್ತಿಗೆ ಅವರು ಯಾವ ತಂತ್ರಜ್ಞಾನವನ್ನು ಅಳವಡಿಸಿಕೊಂಡಿದ್ದಾರೆ..? ಅವರು ರಸ್ತೆಗಳ ನಿರ್ಮಾಣ ಮತ್ತು ದುರಸ್ತಿಯಲ್ಲಿ ಯಾವುದೇ ತಜ್ಞರು ಅಥವಾ ಹೊರಗಿನ ಏಜೆನ್ಸಿಗಳನ್ನು ತೊಡಗಿಸಿಕೊಂಡಿದ್ದಾರೆಯೇ ಎಂಬುದನ್ನು ಪಾಲಿಕೆಯು ತಿಳಿಸಬೇಕು’ ಎಂದು ಹೈಕೋರ್ಟ್ ವಿಭಾಗೀಯ ಪೀಠ ಹೇಳಿದೆ.

ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ಮತ್ತು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ವಿಭಾಗೀಯ ಪೀಠ, ಕೋರಮಂಗಲದ ವಿಜಯನ್ ಮೆನನ್ ಮತ್ತು ಇತರರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸುತ್ತಿದೆ.

ರಸ್ತೆ ಗುಂಡಿಗಳನ್ನು ಮುಚ್ಚಲು ವಿಫಲವಾಗಿರುವ ಪಾಲಿಕೆ ಎಂಜಿನಿಯರ್‌ಗಳನ್ನು ಜೈಲಿಗೆ ಕಳುಹಿಸಬೇಕು ಎಂದು ಕಿಡಿಕಾರಿರುವ ಹೈಕೋರ್ಟ್, ಮುಂದಿನ ವಿಚಾರಣೆಯ ದಿನಾಂಕವಾದ ಫೆಬ್ರವರಿ 7 ರಂದು ಮುಖ್ಯ ಇಂಜಿನಿಯರ್‌,  ನ್ಯಾಯಾಲಯದ ಮುಂದೆ ಹಾಜರಾಗಬೇಕು ಎಂದು ನಿರ್ದೇಶಿಸಿದೆ.

ಇದನ್ನೂ ಓದಿ: ತೇಜಸ್ವಿ ಸೂರ್ಯ ಓದಿದ ಮುಸ್ಲಿಮರ ಪಟ್ಟಿ: ಬಿಬಿಎಂಪಿ ಇಂತಹ ಲಿಸ್ಟ್ ತಯಾರಿಸಿಲ್ಲ! ಮತ್ತೆ ಯಾರು?

ಬಿಬಿಎಂಪಿ ವಕೀಲರು ನಗರದ ರಸ್ತೆಗಳ ಸ್ಥಿತಿಗತಿ ಬಗ್ಗೆ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು. ರಸ್ತೆಗಳು ಗುಂಡಿಗಳಿಂದ ತುಂಬಿದ್ದು, 30 ಕಿಮೀಗಿಂತ ಹೆಚ್ಚಿನ ಪ್ರಮುಖ ರಸ್ತೆಗಳು ಮತ್ತು 482 ಕಿಮೀ ಉಪ ರಸ್ತೆಗಳಲ್ಲಿ ಗುಂಡಿ ದುರಸ್ತಿ ಕಾರ್ಯ ನಡೆದಿಲ್ಲ. BWSSB, BESCOM ಮತ್ತು GAIL ನಂತಹ ಏಜೆನ್ಸಿಗಳು ರಸ್ತೆ ಅಗೆಯುವುದು, ಪೈಪ್‌ಲೈನ್‌ಗಳನ್ನು ಹಾಕುವುದರ ಪರಿಣಾಮವಾಗಿ ಹೊಂಡಗಳು ಮತ್ತು ರಸ್ತೆಯು ಹದಗೆಟ್ಟಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಏಜೆನ್ಸಿಗಳಿಂದಲೇ ದುರಸ್ತಿ ಕಾರ್ಯ ನಡೆಯಬೇಕಿದ್ದು, ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿಲ್ಲ ಎಂದು ಬಿಬಿಎಂಪಿ ವಕೀಲರು ತಿಳಿಸಿದರು. ಈ ಏಜೆನ್ಸಿಗಳು ಅನುಮತಿ ಪಡೆದು ರಸ್ತೆ ಅಗೆಯುವುದನ್ನು ಆರಂಭಿಸಿದರೂ ಸಕಾಲದಲ್ಲಿ ಕಾಮಗಾರಿ ಪೂರ್ಣಗೊಳಿಸುತ್ತಿಲ್ಲ ಎಂದು ದೂರಿದ್ದಾರೆ.

ಇದಕ್ಕೆ ಉತ್ತರಿಸಿರುವ ನ್ಯಾಯಾಲಯ, ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸದ ಏಜೆನ್ಸಿಗಳ ವಿರುದ್ಧ ಏನು ಕ್ರಮ ಕೈಗೊಳ್ಳಲಾಗಿದೆ. ರಸ್ತೆ ಗುಂಡಿ ದುರಸ್ತಿಗೆ ಅಳವಡಿಸಿದ ವಿಧಾನ ಮತ್ತು ತಂತ್ರಜ್ಞಾನಗಳಾವುವು. ರಸ್ತೆಗಳಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೊಂಡು ಜನರಿಗೆ ತೊಂದರೆ ಉಂಟುಮಾಡುವ ಬಿಬಿಎಂಪಿ ಮತ್ತು ಇತರ ಏಜೆನ್ಸಿಗಳ ನಡುವೆ ಯಾವುದೇ ನೀತಿ ಮತ್ತು ಸಮನ್ವಯವಿದೆಯೇ ಎಂಬುದನ್ನು ಬಿಬಿಎಂಪಿ ವಕೀಲರು ಸೂಚಿಸಿಲ್ಲ ಎಂದಿದೆ.

ಈ ಸಂಸ್ಥೆಗಳು ಮತ್ತು ಬಿಬಿಎಂಪಿ ನಡುವೆ ಒಂದಷ್ಟು ಸಮನ್ವಯತೆ ಇರಬೇಕು. ಇದಲ್ಲದೆ, ರಸ್ತೆಗಳು ಮತ್ತು ಹೊಂಡಗಳ ದುರಸ್ತಿಗೆ ಬಿಬಿಎಂಪಿ ಬಳಸುತ್ತಿರುವ ತಂತ್ರಜ್ಞಾನವು ಸರಿಯಾಗಿ ಕಾಣುತ್ತಿಲ್ಲ ಎಂದು ನ್ಯಾಯಾಲಯ ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡಿದೆ.


ಇದನ್ನೂ ಓದಿ: ಬೆಂಗಳೂರು: ಬಿಬಿಎಂಪಿ ನಿರ್ವಹಣೆಯ 204 ಕೆರೆಗಳಲ್ಲಿ 20 ಮಾತ್ರ ಒತ್ತುವರಿಯಿಂದ ಮುಕ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇದ್ದುದರಲ್ಲಿ ಬೆಂಗಳೂರು ದಾರಿಗಳು ಚೆನ್ನಾಗಿವೆ.
    ಹಳ್ಳಿಗಳು, ಹೊರ ಊರಿನ ದಾರಿಗಳು ತುಂಬಾ ಹದಗೆಟ್ಟಿವೆ. Bwssb,bescom,kptcl, ofc ಯವರೂ ದಾರಿ ಅಗೆಯುತ್ತಾರೆ essential service ಹೆಸರಲ್ಲಿ. ಯಾರನ್ನು ಬೊಟ್ಟು ಮಾಡುವುದು.
    ಎಶ್ಟೋ ಮಂದಿ ಅಲೆಮಾರಿಗಳಿಗೆ ಮನೆಇಲ್ಲ.

  2. ಇದಕ್ಕೆ ಸರ್ಕಾರವನ್ನು ಹೊಣೆ ಮಾಡಬೇಕೆ ಹೊರತು ಇಂಜಿನಿಯರುಗಳನಲ್ಲ.
    ಗುತ್ತಿಗೆದಾರರು ಡಾಂಬರು, ಜೆಲ್ಲಿ,ರೋಲರ್,ಕೆಲಸಗಾರರು ಅವರಿಗೆ ತಕ್ಕ ಹಣದ ಪೂರಯ್ಕೆಯನ್ನು ಸರ್ಕಾರ ಮಾಡಬೇಕಿರುತ್ತದೆ. ಇವುಗಳ ಪೂರಯ್ಕೆ ಇಲ್ಲದೆ ತಮ್ಮ ಜೊತೆಗಾರರಿಗಿಂತ ಓದಿನಲ್ಲಿ ಮುಂದೆ ಇದ್ದು ಇಂಜಿನಿಯರಿಂಗ್ ಓದಿದವರನ್ನು ಕೋರ್ಟ್ ಈಕೆಳ ಮಟ್ಟದಲ್ಲಿ ನೋಡುವುದು ತರವಲ್ಲ.
    ಇಂಜಿನಿಯರ್ ಎಂದರೆ, ಎಇ/,ಜೆಇ, aee,ee,se,ce,EIC ಮುಂತಾದ ಹಲವಾರು ಕೇಡರುಗಳಿವೆ.
    ಯಾರನ್ನು ಸೆರೆಮನೆಗೆ ದೂಡುವುದು?
    ತಾಳುಬುಡ ತಿಳಿಯದವರ ಪೇಚಾಟ ಇದಶ್ಟೆ.

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...