Homeಕರ್ನಾಟಕರಸ್ತೆಗುಂಡಿ ಸಮಸ್ಯೆ: ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ರಸ್ತೆಗುಂಡಿ ಸಮಸ್ಯೆ: ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

- Advertisement -
- Advertisement -

ಬೆಂಗಳೂರಿನಲ್ಲಿ ಎಂದು ಮುಗಿಯದ ಸಮಸ್ಯೆ ರಸ್ತೆಗುಂಡಿಗಳದ್ದು. ಪ್ರತಿ ವರ್ಷವೂ ದುರಸ್ಥಿ ಕಾರ್ಯ ನಡೆಯುತ್ತಲೇ ಇದೆ ಎಙಂದು ಬಿಬಿಎಫಿ ಹೇಳಿಕೊಂಡರೂ, ಜನರಿಗೆ ಮಾತ್ರ ಕಷ್ಟ ತಪ್ಪಿದ್ದಲ್ಲ. ಈ ಬಗ್ಗೆ ಕರ್ನಾಟಕ ಹೈಕೋರ್ಟ್ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿರುದ್ಧ ಕಿಡಿ ಕಾರಿದೆ.

”ಬಿಬಿಎಂಪಿ ಸಲ್ಲಿಸಿರುವ ಸ್ಥಿತಿಗತಿ ವರದಿ ನಮಗೆ ತೃಪ್ತಿ ತಂದಿಲ್ಲ. ರಸ್ತೆಗಳ ದುರಸ್ತಿಗೆ ಅವರು ಯಾವ ತಂತ್ರಜ್ಞಾನವನ್ನು ಅಳವಡಿಸಿಕೊಂಡಿದ್ದಾರೆ..? ಅವರು ರಸ್ತೆಗಳ ನಿರ್ಮಾಣ ಮತ್ತು ದುರಸ್ತಿಯಲ್ಲಿ ಯಾವುದೇ ತಜ್ಞರು ಅಥವಾ ಹೊರಗಿನ ಏಜೆನ್ಸಿಗಳನ್ನು ತೊಡಗಿಸಿಕೊಂಡಿದ್ದಾರೆಯೇ ಎಂಬುದನ್ನು ಪಾಲಿಕೆಯು ತಿಳಿಸಬೇಕು’ ಎಂದು ಹೈಕೋರ್ಟ್ ವಿಭಾಗೀಯ ಪೀಠ ಹೇಳಿದೆ.

ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ಮತ್ತು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ವಿಭಾಗೀಯ ಪೀಠ, ಕೋರಮಂಗಲದ ವಿಜಯನ್ ಮೆನನ್ ಮತ್ತು ಇತರರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸುತ್ತಿದೆ.

ರಸ್ತೆ ಗುಂಡಿಗಳನ್ನು ಮುಚ್ಚಲು ವಿಫಲವಾಗಿರುವ ಪಾಲಿಕೆ ಎಂಜಿನಿಯರ್‌ಗಳನ್ನು ಜೈಲಿಗೆ ಕಳುಹಿಸಬೇಕು ಎಂದು ಕಿಡಿಕಾರಿರುವ ಹೈಕೋರ್ಟ್, ಮುಂದಿನ ವಿಚಾರಣೆಯ ದಿನಾಂಕವಾದ ಫೆಬ್ರವರಿ 7 ರಂದು ಮುಖ್ಯ ಇಂಜಿನಿಯರ್‌,  ನ್ಯಾಯಾಲಯದ ಮುಂದೆ ಹಾಜರಾಗಬೇಕು ಎಂದು ನಿರ್ದೇಶಿಸಿದೆ.

ಇದನ್ನೂ ಓದಿ: ತೇಜಸ್ವಿ ಸೂರ್ಯ ಓದಿದ ಮುಸ್ಲಿಮರ ಪಟ್ಟಿ: ಬಿಬಿಎಂಪಿ ಇಂತಹ ಲಿಸ್ಟ್ ತಯಾರಿಸಿಲ್ಲ! ಮತ್ತೆ ಯಾರು?

ಬಿಬಿಎಂಪಿ ವಕೀಲರು ನಗರದ ರಸ್ತೆಗಳ ಸ್ಥಿತಿಗತಿ ಬಗ್ಗೆ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು. ರಸ್ತೆಗಳು ಗುಂಡಿಗಳಿಂದ ತುಂಬಿದ್ದು, 30 ಕಿಮೀಗಿಂತ ಹೆಚ್ಚಿನ ಪ್ರಮುಖ ರಸ್ತೆಗಳು ಮತ್ತು 482 ಕಿಮೀ ಉಪ ರಸ್ತೆಗಳಲ್ಲಿ ಗುಂಡಿ ದುರಸ್ತಿ ಕಾರ್ಯ ನಡೆದಿಲ್ಲ. BWSSB, BESCOM ಮತ್ತು GAIL ನಂತಹ ಏಜೆನ್ಸಿಗಳು ರಸ್ತೆ ಅಗೆಯುವುದು, ಪೈಪ್‌ಲೈನ್‌ಗಳನ್ನು ಹಾಕುವುದರ ಪರಿಣಾಮವಾಗಿ ಹೊಂಡಗಳು ಮತ್ತು ರಸ್ತೆಯು ಹದಗೆಟ್ಟಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಏಜೆನ್ಸಿಗಳಿಂದಲೇ ದುರಸ್ತಿ ಕಾರ್ಯ ನಡೆಯಬೇಕಿದ್ದು, ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿಲ್ಲ ಎಂದು ಬಿಬಿಎಂಪಿ ವಕೀಲರು ತಿಳಿಸಿದರು. ಈ ಏಜೆನ್ಸಿಗಳು ಅನುಮತಿ ಪಡೆದು ರಸ್ತೆ ಅಗೆಯುವುದನ್ನು ಆರಂಭಿಸಿದರೂ ಸಕಾಲದಲ್ಲಿ ಕಾಮಗಾರಿ ಪೂರ್ಣಗೊಳಿಸುತ್ತಿಲ್ಲ ಎಂದು ದೂರಿದ್ದಾರೆ.

ಇದಕ್ಕೆ ಉತ್ತರಿಸಿರುವ ನ್ಯಾಯಾಲಯ, ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸದ ಏಜೆನ್ಸಿಗಳ ವಿರುದ್ಧ ಏನು ಕ್ರಮ ಕೈಗೊಳ್ಳಲಾಗಿದೆ. ರಸ್ತೆ ಗುಂಡಿ ದುರಸ್ತಿಗೆ ಅಳವಡಿಸಿದ ವಿಧಾನ ಮತ್ತು ತಂತ್ರಜ್ಞಾನಗಳಾವುವು. ರಸ್ತೆಗಳಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೊಂಡು ಜನರಿಗೆ ತೊಂದರೆ ಉಂಟುಮಾಡುವ ಬಿಬಿಎಂಪಿ ಮತ್ತು ಇತರ ಏಜೆನ್ಸಿಗಳ ನಡುವೆ ಯಾವುದೇ ನೀತಿ ಮತ್ತು ಸಮನ್ವಯವಿದೆಯೇ ಎಂಬುದನ್ನು ಬಿಬಿಎಂಪಿ ವಕೀಲರು ಸೂಚಿಸಿಲ್ಲ ಎಂದಿದೆ.

ಈ ಸಂಸ್ಥೆಗಳು ಮತ್ತು ಬಿಬಿಎಂಪಿ ನಡುವೆ ಒಂದಷ್ಟು ಸಮನ್ವಯತೆ ಇರಬೇಕು. ಇದಲ್ಲದೆ, ರಸ್ತೆಗಳು ಮತ್ತು ಹೊಂಡಗಳ ದುರಸ್ತಿಗೆ ಬಿಬಿಎಂಪಿ ಬಳಸುತ್ತಿರುವ ತಂತ್ರಜ್ಞಾನವು ಸರಿಯಾಗಿ ಕಾಣುತ್ತಿಲ್ಲ ಎಂದು ನ್ಯಾಯಾಲಯ ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡಿದೆ.


ಇದನ್ನೂ ಓದಿ: ಬೆಂಗಳೂರು: ಬಿಬಿಎಂಪಿ ನಿರ್ವಹಣೆಯ 204 ಕೆರೆಗಳಲ್ಲಿ 20 ಮಾತ್ರ ಒತ್ತುವರಿಯಿಂದ ಮುಕ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇದ್ದುದರಲ್ಲಿ ಬೆಂಗಳೂರು ದಾರಿಗಳು ಚೆನ್ನಾಗಿವೆ.
    ಹಳ್ಳಿಗಳು, ಹೊರ ಊರಿನ ದಾರಿಗಳು ತುಂಬಾ ಹದಗೆಟ್ಟಿವೆ. Bwssb,bescom,kptcl, ofc ಯವರೂ ದಾರಿ ಅಗೆಯುತ್ತಾರೆ essential service ಹೆಸರಲ್ಲಿ. ಯಾರನ್ನು ಬೊಟ್ಟು ಮಾಡುವುದು.
    ಎಶ್ಟೋ ಮಂದಿ ಅಲೆಮಾರಿಗಳಿಗೆ ಮನೆಇಲ್ಲ.

  2. ಇದಕ್ಕೆ ಸರ್ಕಾರವನ್ನು ಹೊಣೆ ಮಾಡಬೇಕೆ ಹೊರತು ಇಂಜಿನಿಯರುಗಳನಲ್ಲ.
    ಗುತ್ತಿಗೆದಾರರು ಡಾಂಬರು, ಜೆಲ್ಲಿ,ರೋಲರ್,ಕೆಲಸಗಾರರು ಅವರಿಗೆ ತಕ್ಕ ಹಣದ ಪೂರಯ್ಕೆಯನ್ನು ಸರ್ಕಾರ ಮಾಡಬೇಕಿರುತ್ತದೆ. ಇವುಗಳ ಪೂರಯ್ಕೆ ಇಲ್ಲದೆ ತಮ್ಮ ಜೊತೆಗಾರರಿಗಿಂತ ಓದಿನಲ್ಲಿ ಮುಂದೆ ಇದ್ದು ಇಂಜಿನಿಯರಿಂಗ್ ಓದಿದವರನ್ನು ಕೋರ್ಟ್ ಈಕೆಳ ಮಟ್ಟದಲ್ಲಿ ನೋಡುವುದು ತರವಲ್ಲ.
    ಇಂಜಿನಿಯರ್ ಎಂದರೆ, ಎಇ/,ಜೆಇ, aee,ee,se,ce,EIC ಮುಂತಾದ ಹಲವಾರು ಕೇಡರುಗಳಿವೆ.
    ಯಾರನ್ನು ಸೆರೆಮನೆಗೆ ದೂಡುವುದು?
    ತಾಳುಬುಡ ತಿಳಿಯದವರ ಪೇಚಾಟ ಇದಶ್ಟೆ.

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...