HomeUncategorizedಗುಜರಾತಿನ ರಾಷ್ಟ್ರನಾಯಕರ ಪಟ್ಟಿಯಲ್ಲಿ ಹಿಂದೂ ಮಹಾಸಭಾದ ವ್ಯಕ್ತಿಗೆ ಸ್ಥಾನ; ಸಂವಿಧಾನ ಶಿಲ್ಪಿ ಅಂಬೇಡ್ಕರ್‌‌ಗೆ ಸ್ಥಾನವಿಲ್ಲ!

ಗುಜರಾತಿನ ರಾಷ್ಟ್ರನಾಯಕರ ಪಟ್ಟಿಯಲ್ಲಿ ಹಿಂದೂ ಮಹಾಸಭಾದ ವ್ಯಕ್ತಿಗೆ ಸ್ಥಾನ; ಸಂವಿಧಾನ ಶಿಲ್ಪಿ ಅಂಬೇಡ್ಕರ್‌‌ಗೆ ಸ್ಥಾನವಿಲ್ಲ!

ದೇಶದ ಸ್ವಾತಂತ್ರ್ಯಕ್ಕೆ ವಿರುದ್ಧವಾಗಿ ಬ್ರಿಟಿಷರ ಜೊತೆ ಕೈಗೂಡಿಸಿದ ಶಾಮ ಪ್ರಸಾದ ಮುಖರ್ಜಿ‌ಗೆ ಪಟ್ಟಿಯಲ್ಲಿ ಸ್ಥಾನ

- Advertisement -
- Advertisement -

ಅಂಬೇಡ್ಕರ್ ಬಗೆಗಿನ ಅಧಿಕಾರಶಾಹಿ ಅಸಹನೆಯ ಜೀವಂತ ನಿದರ್ಶನವಾದ ರಾಯಚೂರು ನ್ಯಾಯಾಧೀಶರು ಕೊಡುತ್ತಿರುವ ಸಮರ್ಥನೆಗಳು ಅಂಬೇಡ್ಕರ್ ಬಗೆಗಿನ ಅಸಹನೆ ಮತ್ತು ಜಾತಿ ಪೂರ್ವಗ್ರಹಗಳು ಕೇವಲ ಅವರಲ್ಲಿ ಮಾತ್ರವಲ್ಲದೆ ಹೈಕೋರ್ಟಿನಲ್ಲೂ ಸಾಂಸ್ಥಿಕವಾಗಿ ಬೇರುಬಿಟ್ಟಿದೆ ಎಂಬುದನ್ನು ಮಾತ್ರ ಸ್ಪಷ್ಟಪಡಿಸುತ್ತದೆ. ಈ ಜಾತಿ ಪೂರ್ವಗ್ರಹ ಹಾಗೂ ದಲಿತ ಅಸಹನೆಗಳು ದೇಶದಲ್ಲಿ ಬ್ರಾಹ್ಮಣವಾದಿ ಬಿಜೆಪಿ-ಆರೆಸ್ಸೆಸ್ ಆಳ್ವಿಕೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಹೆಚ್ಚುತ್ತಿದ್ದಂತೆ ಮತ್ತಷ್ಟು ಬೇರುಬಿಡುತ್ತಿದೆ. ಹಲವಾರು ಆಯಾಮಗಳನ್ನು ಪಡೆದುಕೊಳ್ಳುತ್ತಿದೆ. ರಾಯಚೂರು ಪ್ರಕರಣ ಅದರ ಒಂದು ಆಯಾಮ ಮಾತ್ರ.

ಬ್ರಾಹ್ಮಣ್ಯ ವಾದಿ ಆಳ್ವಿಕೆಯ ಅಂಬೇಡ್ಕರ್ ದ್ವೇಷಕ್ಕೆ ಹಾಗೂ ಜಾತಿ ದುರಭಿಮಾನಗಳಿಗೆ ಹಲವಾರು ಹೆಡೆಗಳಿವೆ.
ಈಗ ದೇಶಾದ್ಯಂತ ದಲಿತ ಬಂಧು ಎಂದು ಪೋಸು ಹೊಡೆಯುತ್ತಿರುವ ನರೇಂದ್ರ ಮೋದಿಯವರು ಗುಜರಾತಿನ ಮುಖ್ಯಮಂತ್ರಿಯಾಗಿ 14 ವರ್ಷ ಆಳ್ವಿಕೆ ಮಾಡಿದಾಗಲೂ ಅಂಬೇಡ್ಕರ್ ಅವರನ್ನು ಕೋರ್ಟು-ಕಚೇರಿಗಳಿಗಿರಲಿ ಶಾಸನಸಭೆ ಮತ್ತು ಶಾಲೆಗಳಲ್ಲೂ ಬಿಟ್ಟುಕೊಂಡಿರಲಿಲ್ಲ.

ಇದನ್ನೂ ಓದಿ: ಅಂಬೇಡ್ಕರ್‌ಗೆ ಅವಮಾನ ಘಟನೆ: ಶೋಷಿತರ ಬಗ್ಗೆ ಹೆಪ್ಪುಗೊಂಡಿರುವ ಅಸಹನೆಯ ಚಿಕ್ಕ ಪ್ರತಿನಿಧಿ ಈ ನ್ಯಾಯಾಧೀಶರು!

ಈಗಲೂ ಅಂಬೇಡ್ಕರ್ ಅವರ ಫೋಟೋ ಅಲ್ಲಿನ ಕೋರ್ಟುಗಳಲ್ಲಿರಲಿ ಯಾವುದೇ ಸರ್ಕಾರೀ ಕಚೇರಿಗಳಲ್ಲೂ ಇಲ್ಲ!

ಕಾರಣವೇನು ಗೊತ್ತೇ?

ಬಿಜೆಪಿಯ ಗುಜರಾತಿನಲ್ಲಿ ಅಂಬೇಡ್ಕರ್ ರಾಷ್ಟ್ರೀಯ ನಾಯಕರೇ ಅಲ್ಲವಂತೆ!!

2012ರಲ್ಲಿ ಅಂದರೆ ಮೋದಿಯವರು ಮುಖ್ಯಮಂತ್ರಿಯಾಗಿ 11 ವರ್ಷಗಳ ಕಾಲ ಆಡಳಿತ ಮಾಡಿ ದೇಶದ ಪ್ರಧಾನಿಯಾಗಲು ತಯಾರಾಗುತ್ತಿದ್ದಾಗ, ಗುಜರಾತಿನ ಭಾವ್ ನಗರದ ದಲಿತ ಕಾರ್ಯಕರ್ತ ದಹ್ಯ ಭಾಯ್ ಚೌಹಾಣ್‌ ಎಂಬವರು ಗುಜರಾತಿನ ಸರ್ಕಾರಿ ಕಚೇರಿಗಳಲ್ಲಿ ಅಂಬೇಡ್ಕರ್ ಫೋಟೋ ಏಕಿಲ್ಲವೆಂದು ಒಂದು RTI ಅರ್ಜಿ ಹಾಕುತ್ತಾರೆ.

ಅದಕ್ಕೆ 2012ರ ಜನವರಿಯಲ್ಲಿ ಮೋದಿ ಸರ್ಕಾರ ಕೊಟ್ಟ ಉತ್ತರ ನೋಡಿದರೆ ಬಿಜೆಪಿಯ ಅಸಲೀ ಮುಖ ಸ್ಪಷ್ಟವಾಗುತ್ತದೆ: “ಮೋದಿ ಸರ್ಕಾರದ ಪ್ರಕಾರ ಗುಜರಾತಿನ ಸರ್ಕಾರೀ ಕಚೇರಿಗಳಲ್ಲಿ ಎಂಟು ಜನ ರಾಷ್ಟ್ರೀಯ ನಾಯಕರ ಫೋಟೋಗಳನ್ನು ಮಾತ್ರ ಹಾಕಬಹುದು”

ಇದನ್ನೂ ಓದಿ: ನ್ಯಾಯಾಂಗದ ನೇಮಕಾತಿಯನ್ನು ನೋಡಿ ಅಂಬೇಡ್ಕರ್‌ ಆತ್ಮ ಕೊರಗುತ್ತಿರಬಹುದು: ಸಿಪಿಐ(ಎಂ) ರಾಜ್ಯಸಭಾ ಸದಸ್ಯ ಜಾನ್ ಬ್ರಿಟ್ಟಾಸ್‌

ಯಾರು ಆ ಎಂಟು ಜನ?

  1. ಮಹಾತ್ಮ ಗಾಂಧಿ
  2. ಜವಾಹರ್‌ ಲಾಲ್‌ ನೆಹರೂ
  3. ಸರ್ದಾರ್ ಪಟೇಲ್
  4. ಹಾಲಿ ರಾಷ್ಟ್ರಪತಿ
  5. ಹಾಲೀ ಪ್ರಧಾನಿ
  6. ಭಾರತ್ ಮಾತಾ
  7. ಪಂಡಿತ್ ದೀನ್ ದಯಾಳ್ ಉಪಾಧ್ಯಾಯ
  8. ಶಾಮ ಪ್ರಸಾದ ಮುಖರ್ಜಿ

ಅಗ್ರಮಾನ್ಯ ರಾಷ್ಟ್ರ ನಾಯಕ ಅಂಬೇಡ್ಕರ್ ಬಿಜೆಪಿಯ ಪಟ್ಟಿಯಲ್ಲಿ ಇಲ್ಲವೇ ಇಲ್ಲ!!

1990ರಲ್ಲಿ ಅಂಬೇಡ್ಕರ್ ಅವರಿಗೆ ವಿಪಿ ಸಿಂಗ್ ಭಾರತ ರತ್ನ ಪ್ರಶಸ್ತಿ ಕೊಡಲೂ ಹಾಗೂ ಸಂಸತ್ ಭವನದಲ್ಲಿ 1990ರಲ್ಲಿ ಅಂಬೇಡ್ಕರ್ ಫೋಟೋ ಅನಾವರಣ ಮಾಡಲು ತಾನು ಕಾರಣ ಎಂದು ಹೇಳಿಕೊಳ್ಳುವ ಬಿಜೆಪಿ 2012ರಲ್ಲಿ ಕೊಟ್ಟ ಉತ್ತರವಿದು. ಈ ಬಗ್ಗ ಹೆಚ್ಚಿನ ವಿವರಗಳಿಗೆ The Indian Express ನಲ್ಲಿ 2012ರ ಜನವರಿ 7 ರಂದು ಪ್ರಕಟವಾಗಿರುವ ವರದಿಯನ್ನು ಗಮನಿಸಿ.

ಇನ್ನು ಬಿಜೆಪಿಯ ರಾಷ್ಟ್ರ ನಾಯಕರ ಪಟ್ಟಿಯಲ್ಲಿರುವ ಶಾಮ ಪ್ರಸಾದ ಮುಖರ್ಜಿ ದೇಶದ ಸ್ವಾತಂತ್ರ್ಯಕ್ಕೆ ವಿರುದ್ಧವಾಗಿ ಬ್ರಿಟಿಷರ ಜೊತೆ ಕೈಗೂಡಿಸಿದ ಸಾವರ್ಕರ್ ಅವರ ಹಿಂದೂ ಮಹಾ ಸಭಾದ ಅಧ್ಯಕ್ಷರಾಗಿದ್ದವರು. ದೇಶದ ಜನ ಬ್ರಿಟಿಷರ ವಿರುದ್ಧ ಕ್ವಿಟ್ ಇಂಡಿಯಾ ಹೋರಾಟ ನಡೆಸುತ್ತಿದ್ದಾಗ ಬಂಗಾಳದಲ್ಲಿ ಬ್ರಿಟಿಷರ ಮೇಲುಸ್ತುವಾರಿಯಲ್ಲಿ ಮುಸ್ಲಿಂ ಲೀಗ್ ಜೊತೆ ಸೇರಿ ಸರ್ಕಾರ ರಚಿಸಿದವರು. ಬಂಗಾಳದಲ್ಲಿ ಸ್ವಾತಂತ್ರ್ಯ ಹೋರಾಟವನ್ನು ಬ್ರಿಟಿಷರ ಪರವಾಗಿ ಹತ್ತಿಕ್ಕಲು ಯತ್ನಿಸಿದವರು.

ಇದನ್ನೂ ಓದಿ: ಅಂಬೇಡ್ಕರ್‌ ಅವರನ್ನು ಅರ್ಥಮಾಡಿಕೊಳ್ಳಲು ಮಾರ್ಕ್ಸ್ ವಾದದ ಹಿನ್ನೆಲೆ ನೆರವಾಗಿದೆ: ಜಸ್ಟಿಸ್ ಚಂದ್ರು 

ಸ್ವಾತಂತ್ಯಾನಂತರದಲ್ಲಿ ಹಿಂದೂ ಮಹಾ ಸಭಾ ಮತ್ತು ಆರೆಸ್ಸೆಸ್ ಗಳು ಗಾಂಧಿ ಹತ್ಯೆ ಪ್ರಕರಣದಲ್ಲಿ ಮೂಲೆ ಸೇರಿದಾಗ ಆರೆಸ್ಸೆಸ್ ತನ್ನ ರಾಜಕೀಯ ಅಸ್ಪೃಶ್ಯತೆಯನ್ನು ಕಳೆದುಕೊಳ್ಳಲು ಹುಟ್ಟುಹಾಕಿದ ರಾಜಕೀಯ ಪಕ್ಷವಾದ ಭಾರತೀಯ ಜನಸಂಘದ ಪ್ರಥಮ ಅಧ್ಯಕ್ಷರಾರಾದವರು. ಭಾರತೀಯ ಜನಸಂಘವೇ ಆ ನಂತರ 1980ರಲ್ಲಿ ಭಾರತೀಯ ಜನತಾ ಪಕ್ಷವಾಯಿತು.

ದೀನ್ ದಯಾಳ್ ಉಪಾಧ್ಯಾಯ ಅವರು ಭಾರತೀಯ ಜನಸಂಘಕ್ಕೆ ಆರೆಸ್ಸೆಸ್ ಎರವಲು ಕೊಟ್ಟಿದ್ದ ಹಿಂದುತ್ವ ಕಾರ್ಯಕರ್ತರು. ಆ ನಂತರ ಅದರ ಅಧ್ಯಕ್ಷರಾದವರು. ಅಂದರೆ ಸಾರಾಂಶದಲ್ಲಿ ದಲಿತ ವಿರೋಧಿ ಹಿಂದುತ್ವಕ್ಕೆ ಹಾಗೂ ಬಿಜೆಪಿ ಪಕ್ಷಕ್ಕೆ ಸೇವೆ ಸಲ್ಲಿಸಿದ್ದನ್ನು ಬಿಟ್ಟರೆ ಈ ಇಬ್ಬರೂ ರಾಷ್ಟ್ರನಾಯಕರು ಹೇಗಾದಾರು?

ನಂತರ 2017ರಲ್ಲಿ ಅಂಬೇಡ್ಕರ್ ಅವರ 126ನೇ ಹುಟ್ಟುವರ್ಷವನ್ನು ದೇಶ ಆಚರಿಸುತ್ತಿದ್ದಾಗ ಆಗಿನ ಗುಜರಾತ್ ಶಾಸನ ಸಭೆಯ ಇಬ್ಬರು ಕಾಂಗ್ರೆಸ್ ಶಾಸಕರು ಈ ಕಾರಣಕ್ಕಾದರೂ ಅಂಬೇಡ್ಕರ್ ಫೋಟೋವನ್ನು ಗುಜರಾತಿನ ಶಾಲಾ-ಕಚೇರಿಗಳಲ್ಲಿ ಹಾಕಲು ಆದೇಶ ಮಾಡಬೇಕೆಂದು ಪತ್ರ ಬರೆದು ಬಿಜೆಪಿ ಮುಖ್ಯಮಂತ್ರಿ ವಿಜಯ್ ರುಪಾಣಿಯವರನ್ನು ಕೋರುತ್ತಾರೆ. ಆದರೆ ಆ ಬೇಡಿಕೆಯು ನೇರ ಕಸದ ಬುಟ್ಟಿಯನ್ನು ಸೇರುತ್ತವೆ. ಹೆಚ್ಚಿನ ವಿವರಗಳಿಗೆ ಆಸಕ್ತರು ವರದಿಯನ್ನು ಇಲ್ಲಿ ಗಮನಿಸಬಹುದು.

ಇದನ್ನೂ ಓದಿ: ಅಂಬೇಡ್ಕರ್‌ರವರಿಗೆ ಅಗೌರವ ತೋರಿದ ಜಡ್ಜ್ ವಜಾಕ್ಕೆ ಬಿಜೆಪಿ ಶಾಸಕ ಶಿವನಗೌಡ ನಾಯಕ ಆಗ್ರಹ

ಇದಕ್ಕಿಂತಲೂ ಆಘಾತಕಾರಿಯಾದ ಘಟನೆಯು 2020ರಲ್ಲಿ ನಡೆದಿದೆ. ಗುಜರಾತಿನ ಸರ್ಕಾರಿ ಕಚೇರಿಗಳಲ್ಲಿ ಅಂಬೇಡ್ಕರ್ ಫೋಟೋ ಏಕೆ ಹಾಕಲಾಗುತ್ತಿಲ್ಲವೆಂದು ಕೇಳಿ ಗುಜರಾತಿನ ದಲಿತ್ ಅಧಿಕಾರ್ ಮಂಚ್‌ನ ಕೀರ್ತಿ ರಾಥೋಡ್‌ ಅವರು ಸರ್ಕಾರಕ್ಕೆ ಅರ್ಜಿ ಹಾಕಿದ್ದಾರೆ. ಅದಕ್ಕೆ 2020ರ ಡಿಸಂಬರ್‌ನಲ್ಲಿ ಉತ್ತರಿಸಿರುವ ಆಗಿನ ಬಿಜೆಪಿ ಮುಖ್ಯಮಂತ್ರಿ ವಿಜಯ್ ರುಪಾಣಿ ಅವರು, “ಸರ್ಕಾರಿ ಕಚೇರಿಗಳಲ್ಲಿ ಯಾವ ರಾಷ್ಟ್ರ ನಾಯಕರ ಫೋಟೋಗಳನ್ನು ತೂಗುಹಾಕಬೇಕೆಂಬ ಬಗ್ಗೆ 1996ರ ಸುತ್ತೋಲೆಯೊಂದಿದೆ. (ಪ್ರಥಮ ಬಿಜೆಪಿ ಸರ್ಕಾರ ಹೊರಡಿಸಿದ್ದು) ಅದರಲ್ಲಿ ರಾಷ್ಟ್ರ ನಾಯಕರ ಪಟ್ಟಿಯಲ್ಲಿ ಅಂಬೇಡ್ಕರ್ ಹೆಸರನ್ನು ಸೇರಿಸಲಾಗಿಲ್ಲ. ನಮ್ಮ ಸರ್ಕಾರ ಅದೇ ಪಟ್ಟಿಯನ್ನು ಮುಂದುವರೆಸುವ ತೀರ್ಮಾನ ಮಾಡಿದೆ

ಅಂದರೆ ಬಿಜೆಪಿ ಸರ್ಕಾರ ಅಂಬೇಡ್ಕರ್ ಅವರನ್ನು ರಾಷ್ಟ್ರೀಯ ನಾಯಕರೂ ಎಂದು ಕೂಡ ಅಧಿಕೃತವಾಗಿ ಗುಜರಾತಿನಲ್ಲಿ ಪರಿಗಣಿಸುತ್ತಿಲ್ಲ. ಇದರ ಬಗ್ಗೆ ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗ 2020ರ ಡಿಸಂಬರ್‌ನಲ್ಲಿ ಗುಜರಾತ್ ಸರ್ಕಾರದ ಸ್ಪಷ್ಟೀಕರಣ ಕೇಳಿದೆ. ಆದರೆ ಅದು ಉತ್ತರ ಕೊಡುವ ಗೋಜಿಗೂ ಹೋಗಿಲ್ಲ. ಈ ಬಗ್ಗೆ ಹೆಚ್ಚಿನ ವಿವರಗಳಿಗೆ ವರದಿಯನ್ನು ಇಲ್ಲಿ ಓದಬಹುದು.

ಇದು ಸಂಘಪರಿವಾರ ಮತ್ತು ಮೋದಿ ಸರ್ಕಾರಕ್ಕೆ ಅಂಬೇಡ್ಕರ್ ಬಗ್ಗೆ ಇರುವ ಅಸಹನೆಯ ಅಸಲೀ ಚಿತ್ರಣ. ಅಂಬೇಡ್ಕರ್ ಅವರನ್ನು ಪ್ರಾತಃಸ್ಮರಣೀಯ ಎನ್ನುತ್ತಲೇ ಸಂಧ್ಯಾ ಕಾಲದಲ್ಲಿ ಗುಪ್ತವಾಗಿ ಒಳಗಿಂದಲೇ ಹತ್ಯೆ ಮಾಡುವ ಸಂಘಪರಿವಾರದ ಅಸಲೀ ಹುನ್ನಾರಗಳನ್ನು ಈ ದೇಶದ ದಲಿತ ದಮನಿತರು ಅರಿಯುವರೇ?

ಇದನ್ನೂ ಓದಿ: ಅಂಬೇಡ್ಕರ್‌ಗೆ ಅಗೌರವ ತೋರಿದ ಜಡ್ಜ್‌ ವಿರುದ್ಧ ದೂರು ದಾಖಲು: ಶುಕ್ರವಾರ ಬೆಂಗಳೂರಿನ ವಿಧಾನಸೌಧ ಎದುರು ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಮ್ಮ ಸಂವಿಧಾನ ಶಿಲ್ಪಿಯನ್ನು ರಾಷ್ಟ್ರನಾಯಕ ಎಂದು ಒಪ್ಪಿಕೊಳ್ಳದ ಬಿ.ಜೆ.ಪಿ.ಯನ್ನು ಬೆಂಬಲಿಸುತ್ತಿರುವ ಅಹಿಂದ ವರ್ಗದ ಜನರು ಈಗಲಾದರೂ ಎಚ್ಚೆತ್ತುಕೊಳ್ಳಬೇಕು.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...