Homeಮುಖಪುಟಮೌನಕ್ಕೆ ಶರಣಾದ ಯುಪಿ ಮತದಾರರು, ಆತಂಕದಲ್ಲಿ ಅಭ್ಯರ್ಥಿಗಳು

ಮೌನಕ್ಕೆ ಶರಣಾದ ಯುಪಿ ಮತದಾರರು, ಆತಂಕದಲ್ಲಿ ಅಭ್ಯರ್ಥಿಗಳು

- Advertisement -
- Advertisement -

2019ರವರೆಗೆ ಹೋಟೆಲ್‌ ಅಥವಾ ಗಲ್ಲಿ ಬದಿಯ ಚಾ ಮಾರುವ ಅಂಗಡಿಯಲ್ಲಿ ಮೌನವಾಗಿ ಕುಳಿತು ಸುತ್ತಮುತ್ತಲ ಜನರ ಸಂಭಾಷಣೆ ಆಲಿಸಿದರೆ ಚುನಾವಣೆ ಫಲಿತಾಂಶವನ್ನು ಅಂದಾಜಿಸಬಹುದಾಗಿತ್ತು. ಆದರೆ ಪ್ರಸಕ್ತ ಉತ್ತರಪ್ರದೇಶ ಚುನಾವಣೆಯ ಪರಿಸ್ಥಿತಿಯನ್ನು ಊಹಿಸುವುದು ಅಷ್ಟು ಸರಳವಲ್ಲ.

ಸಾಮಾನ್ಯವಾಗಿ ಜನರ ಮನಸ್ಥಿತಿ, ಅಭ್ಯರ್ಥಿಗಳ ವ್ಯಕ್ತಿತ್ವ, ಆಯಾ ಕ್ಷೇತ್ರದ ಜನರ ನಿರೀಕ್ಷೆಗಳು ಮತ್ತು ಜಾತಿ ಅಂಶ ಈ ಎಲ್ಲ ಆಯಾಮಗಳಲ್ಲಿ ಮೌಲ್ಯಮಾಪನ ಮಾಡಿದಲ್ಲಿ ಚುನಾವಣಾ ಫಲಿತಾಂಶದ ಚಿತ್ರಣ ಗ್ರಹಿಸಬಹುದಾಗಿತ್ತು. ಮನೆಗಳು ಮತ್ತು ಅಂಗಡಿಗಳ ಮೇಲೆ ಹಾರಾಡುವ ಬಾವುಟಗಳ ಸಂಖ್ಯೆ ನೋಡಿಯೇ ಆ ಪ್ರದೇಶದಲ್ಲಿ ಜನಪ್ರಿಯರಾದವರು ಯಾರು, ಯಾವ ಪಕ್ಷ ಪ್ರಾಬಲ್ಯ ಹೊಂದಿದೆ ಎಂಬ ಸ್ಪಷ್ಟ ಚಿತ್ರಣ ಲಭ್ಯವಾಗುತ್ತಿತ್ತು. ಯಾರು ಹೆಚ್ಚು ಪ್ರಚುರದಲ್ಲಿ ಇಲ್ಲವೆಂಬ ಮಾಹಿತಿಯನ್ನು ಅಂದಾಜಿಸಬಹುದಾಗಿತ್ತು. ಆದರೆ ಇಂದು ಕೋವಿಡ್ ಸನ್ನಿವೇಶದ ಬದಲಾದ ಕಾಲಘಟ್ಟದಲ್ಲಿ ಜನರು ಸಹ ಬದಲಾಗಿದ್ದಾರೆ.

ಚಹಾ ಮಳಿಗೆ ಮತ್ತು ತಿನಿಸು ಅಂಗಡಿಗಳ ಮುಂದೆ ಜನಸಂದಣಿ ಇದೆಯಾದರೂ, ಹವಾಮಾನ ಮತ್ತಿತರ ಸಂಭಾಷಣೆ ನಡೆಯುತ್ತಿದೆ. ಜನರು ರಾಜಕೀಯ ವಿಚಾರಗಳನ್ನು ತಮ್ಮ ಚರ್ಚೆಗಳಿಂದ ಹೊರಗಿಟ್ಟಿದ್ದಾರೆ. “ಪ್ರಸ್ತುತ ಜನರು ಬುದ್ಧಿವಂತರಾಗಿದ್ದಾರೆ. ತಮ್ಮ ರಾಜಕೀಯ ಆದ್ಯತೆಗಳನ್ನು ವ್ಯಕ್ತಪಡಿಸಿದರೆ ತಾವು ಒಂದು ಪಕ್ಷ/ಪಂಗಡದ ಉದ್ದೇಶಗಳಿಗೆ ಗುರಿಯಾಗುತ್ತೇವೆ ಎಂಬ ಅರಿವಾಗಿದೆ. ಹೀಗಾಗಿ ಅವರು ಅಪರಿಚಿತರೊಂದಿಗೆ ಮಾತನಾಡಲು ಬಯಸುವುದಿಲ್ಲ. ಟಿವಿ ಚಾನೆಲ್‌ಗಳ ಸಿಬ್ಬಂದಿಯನ್ನು ನೋಡಿದಾಗ ಜನರು, ಆಡಳಿತ ಪಕ್ಷದ ಪರವಾಗಿ ಜಾಣ್ಮೆಯಿಂದ ಮಾತನಾಡುತ್ತಾರೆ. ಏಕೆಂದರೆ ಅದು ಪ್ರಸಾರವಾಗುತ್ತದೆಂಬುದು ಅವರಿಗೆ ತಿಳಿದಿದೆ” ಎಂದು ರಾಜಕೀಯ ಕಾರ್ಯಕರ್ತರೊಬ್ಬರು ಹೊಸ ಪರಿಸ್ಥಿತಿಯನ್ನು ವಿಶ್ಲೇಷಿಸಿದ್ದಾರೆ.

ಇದನ್ನೂ ಓದಿರಿ: ವಿಶ್ಲೇಷಣೆ: ಆದಿತ್ಯನಾಥ್‌ ವಿರುದ್ಧ ರಾವಣ್ ಸ್ಪರ್ಧೆಯ ಲೆಕ್ಕಾಚಾರಗಳೇನು?

ಸ್ಮಾರ್ಟ್ ಮತದಾರರು

ಲಕ್ನೋದ ಹೊರವಲಯದ ಬಕ್ಷಿ ಕಾ ತಲಾಬ್‌ನ ‘ಸ್ಮಾರ್ಟ್’ ಮತದಾರರಲ್ಲಿ ಒಬ್ಬರಾದ ವೃತ್ತಿಯಲ್ಲಿ ಚಾಲಕರಾಗಿರುವ ಠಾಕೂರ್ ಸಿಂಗ್, ತಮ್ಮ ಠಾಕೂರ್ ಗುರುತನ್ನು ಬಹಳ ದೃಢವಾಗಿ ಪ್ರತಿಪಾದಿಸುತ್ತಾರೆ. ಇನ್ನೊಬ್ಬ ಚಾಲಕ, ಅಗತ್ಯ ವಸ್ತುಗಳ ಬೆಲೆ ಏರಿಕೆ ಬಗ್ಗೆ ಮಾತನಾಡುತ್ತಾ ವಿಷಾದ ವ್ಯಕ್ತಪಡಿಸುತ್ತಲೇ, “ಗೆಲ್ಲುವುದು ಯೋಗಿ ಆದಿತ್ಯನಾಥ್‌ರೇ. ಆದರೆ ಸರ್ಕಾರ ಬದಲಾದರೆ ಪರಿಸ್ಥಿತಿ ಬದಲಾಗುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಅಭಿಪ್ರಾಯಪಟ್ಟರು. ಆದರೆ ಟಿವಿ ವಾಹಿನಿಗಳ ಸಿಬ್ಬಂದಿ ಬಂದ ತಕ್ಷಣ ವಿಷಯ ಬದಲಿಸಿ, ಬೀಡಾಡಿ ದನಗಳ ಅಪಾಯದಿಂದ ಎರಡು ಬೆಳೆಗಳನ್ನು ಕಳೆದುಕೊಂಡ ವಿವರ ತಿಳಿಸಿದರು. ಇದಕ್ಕಿದ್ದಂತೆ ಅಭಿಪ್ರಾಯ ಬದಲಾವಣೆ ಮಾಡಿರುವುದೇಕೆ ಎಂದು ಪ್ರಶ್ನಿಸಿದರೆ, ಅವರು ಮುಗುಳ್ನಕ್ಕು “ಇದೇ ಅಲ್ಲವೇ ರಾಜಕೀಯ” ಎಂದು ಉತ್ತರಿಸಿದರು.

ಬಾರಾಬಂಕಿಯಲ್ಲಿ, ಯೋಗಿ ಅವರ ಕಟ್ಟಾ ಅಭಿಮಾನಿಗಳೆನ್ನಿಸಿಕೊಂಡ ಹಲವರಿದ್ದು, ಅವರಾರೂ ವಾಸ್ತವದಲ್ಲಿ ಆನ್‌ಲೈನ್‌ನಲ್ಲಿ ನಡೆಯುತ್ತಿರುವ ಬಿಜೆಪಿ ಸಭೆಗಳನ್ನು ನೋಡಲು ಆಸಕ್ತಿ ತೋರಿಸುತ್ತಿಲ್ಲ. ಬದಲಾಗಿ ವೆಬ್‌ಸರಣಿಗಳನ್ನು ನೋಡುತ್ತಾರೆ. ಇತ್ತೀಚೆಗೆ ಸ್ಮಾರ್ಟ್‌ಫೋನ್ ಕೊಂಡಿರುವ ಅಂಗಡಿ ನಡೆಸುತ್ತಿರುವ ಅಕ್ಷಯ್ ರಾವತ್ ಎಂಬ ಯುವಕನಿಗಂತೂ ರಾಜಕೀಯ ರ್‍ಯಾಲಿಗಳ ಬಗ್ಗೆ ಗಮನವೇ ಇಲ್ಲ. ರಾಜಕೀಯ ಕುರಿತ ವಾಟ್ಸಪ್ ಗುಂಪಿನಲ್ಲಿ ಭಾಗಿಯಾಗುವುದಿಲ್ಲ ಹಾಗೂ ಚರ್ಚೆಯನ್ನೂ ನಡೆಸುವುದಿಲ್ಲ. ಮೊಬೈಲ್ ಫೋನ್‌ಗೆ ಹಾಕಿರುವ ದೈನಂದಿನ ಡೇಟಾ ರೀಚಾರ್ಜ್ನಲ್ಲಿ ವೆಬ್ ಸರಣಿ ನೋಡುತ್ತಿರುವುದಾಗಿ ಅವರು ಹೇಳುತ್ತಾರೆ.

ವಿವಿಧ ರಾಜಕಾರಣಿಗಳು ಎತ್ತಿರುವ ಸಮಸ್ಯೆಗಳು ಮತ್ತು ಅವುಗಳ ಪರಿಣಾಮದ ಹಿನ್ನೆಲೆಯಲ್ಲಿ ಆಯ್ಕೆ ಬಗ್ಗೆ ಕೇಳಿದರೆ, “ಯಾರಿಗೆ ಓಟು ಹಾಕುತ್ತೇವೋ ಎನ್ನುವುದು ನಮಗೆ ತಿಳಿದಿದೆ. ಭಾಷಣದಿಂದ ಏನಾಗಲಿದೆ?” ಎಂದು ಉತ್ತರಿಸುತ್ತಾರೆ.

ಕೆಲ ಕ್ಷೇತ್ರಗಳಲ್ಲಿ ಮತದಾರರ ಮೌನದಿಂದಾಗಿ ಅಭ್ಯರ್ಥಿಗಳಲ್ಲಿ ನಡುಕ ಕಂಡುಬಂದಿದೆ. ಅಯೋಧ್ಯೆಯ ಮತದಾರರು, ಮುಂದಿನ ಸರ್ಕಾರ ರಚನೆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ರಾಮಮಂದಿರದ ಬಗ್ಗೆ ಮೆಚ್ಚುಗೆ ಅಥವಾ ವಿರೋಧವನ್ನೂ ಸೂಚಿಸುವುದಿಲ್ಲ. ಅಲ್ಲದೆ ನಗರದ ಸೌಂದರ್ಯೀಕರಣಕ್ಕಾಗಿ ನೂರಾರು ಮನೆ ಮತ್ತು ಅಂಗಡಿಗಳನ್ನು ನೆಲಸಮಗೊಳಿಸಿದ್ದರ ಬಗ್ಗೆಯೂ ಮಾತನಾಡುವುದಿಲ್ಲ.

ಅಂಗಡಿ ನೆಲಸಮಗೊಂಡವರ ಪಟ್ಟಿಯಲ್ಲಿರುವ ಜಗತ್ ನರೈನ್ ತಿವಾರಿ ಎಂಬುವವರು, ಚುನಾವಣೆ ಬಗ್ಗೆ ಮೌನವಹಿಸಿದ್ದಾರೆ. 25 ವರ್ಷಗಳಿಂದ ರಾಮ ಮಂದಿರಕ್ಕೆ ಪ್ರತಿ ದಿನ ಭೇಟಿ ನೀಡುವ ಅವರು, ಚುನಾವಣೆ ಬಗ್ಗೆ ಮಾತನಾಡಲು ನಿರಾಕರಿಸುತ್ತಾರೆ. ಏನಾಗುತ್ತೋ ನೋಡೋಣ” ಎಂದಷ್ಟೇ ಹೇಳಿದರು.

ಮತದಾರರ ಈ ಧೋರಣೆಯೇ ಅಭ್ಯರ್ಥಿಗಳ ಆತಂಕಕ್ಕೆ ಕಾರಣವಾಗಿದ್ದು, ಕಾನ್ಪುರದ ಬಿಜೆಪಿ ಅಭ್ಯರ್ಥಿಯೊಬ್ಬರು, “ಮತದಾರರ ಮನಸ್ಥಿತಿಯನ್ನು ಊಹಿಸುವುದು ನಮಗೆ ತುಂಬಾ ಕಷ್ಟವಾಗಿದೆ. ನಾನು ಮನೆ-ಮನೆ ಪ್ರಚಾರ ಮಾಡಲು ಹೋದಾಗ, ಮತದಾರರು ಸ್ವಾಗತಿಸಲೂ ಇಲ್ಲ ಅಥವಾ ಪ್ರತಿಕೂಲವಾಗಿಯೂ ಇರಲಿಲ್ಲ. ಹೀಗಾಗಿ ಅವರ ಮನಸ್ಥಿತಿಯನ್ನು ನಿರ್ಣಯಿಸಲು ಸಾಧ್ಯವಿಲ್ಲ. ಈ ಮೊದಲು, ಬಹಿರಂಗ ಪ್ರಚಾರ ಜನಸಂದಣಿಯ ಮನಸ್ಥಿತಿಯನ್ನು ಊಹಿಸಬಹುದಾಗಿತ್ತು. ಈಗ ಅದೂ ಸಾಧ್ಯವಿಲ್ಲ” ಎಂದರು.

ಕೃಪೆ: ಉಮೀದ್‌.ಕಾಮ್‌
ಅನುವಾದ: ಸೋಮಶೇಖರ್‌ ಚಲ್ಯ


ಇದನ್ನೂ ಓದಿರಿ: ವಿಶ್ಲೇಷಣೆ: 100 ವರ್ಷಗಳಷ್ಟು ಹಳೆಯದಾದ ‘ಚಿಂತಾಮಣಿ’ ನಾಟಕವನ್ನು ಆಂಧ್ರ ಸರ್ಕಾರ ನಿಷೇಧಿಸಿದ್ದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...