Homeಕರ್ನಾಟಕಭಾರತದ ಮಾತೃ ಭಾಷೆ ಸಂಸ್ಕೃತವೇ? ದ್ರಾವಿಡವೇ?

ಭಾರತದ ಮಾತೃ ಭಾಷೆ ಸಂಸ್ಕೃತವೇ? ದ್ರಾವಿಡವೇ?

- Advertisement -
- Advertisement -

ಯಾವುದೇ ಭಾಷೆಯ ಮೂಲ ಉದ್ದೇಶ ಸಂವಹನ. ಸಂವಹನದ ಉದ್ದೇಶದಿಂದ ಬಳಸಲಾಗುವ ಯಾವುದೇ ಭಾಷೆಗಳಲ್ಲಿ ಮೇಲು ಕೀಳು ಎಂಬ ಭಾವವೇ ನಿಕೃಷ್ಟವಾದದ್ದು. ಜಗತ್ತಿನ ಮೂಲೆ ಮೂಲೆಗಳಲ್ಲಿ ಮನುಷ್ಯರು ಬಳಸುವ ಎಲ್ಲಾ ಭಾಷೆಗಳಿಗೂ ತನ್ನದೇ ಆದ ಮಣ್ಣಿನ ಸೊಗಡು ಇದ್ದು, ಎಲ್ಲಾ ಭಾಷೆಗಳನ್ನು ಸಮಾನವಾಗಿ ಕಾಣಬೇಕಾದದ್ದು ನಾಗರೀಕತೆಯ ಕರ್ತವ್ಯ. ಆದರೆ, ದೇಶವನ್ನು ತಮ್ಮದೇ ಜಾತಿ- ಧರ್ಮ ಶ್ರೇಷ್ಠ ಎಂಬ ಶ್ರೇಷ್ಠತೆಯ ವ್ಯಸನ ಕಾಡುತ್ತಿರುವಂತೆಯೇ ಇದೀಗ ಭಾಷಾ ಶ್ರೇಷ್ಠತೆಯ ವ್ಯಸನವೂ ದೇಶಕ್ಕೆ ಮಾರಕವಾಗುವ ಎಲ್ಲಾ ಲಕ್ಷಣಗಳೂ ಕಾಣಿಸುತ್ತಿವೆ.

ಭಾರತದಲ್ಲಿ ನೂರೆಂಟು ಭಾಷೆಗಳಿವೆ. ಕನ್ನಡಕ್ಕೆ ಸಾವಿರಾರು ವರ್ಷಗಳ ಇತಿಹಾಸ ಇದೆ. ಆದರೆ, ಕನ್ನಡ ಅಭಿವೃದ್ಧಿಗೆ ಬಿಡಿಗಾಸು ನೀಡದ ಕೇಂದ್ರ ಸರ್ಕಾರ ತ್ರಿಭಾಷಾ ಸೂತ್ರದ ಮೂಲಕ ಹಿಂದಿಯನ್ನು ಹೇರಿದಂತೆ ಇದೀಗ ಸಂಸ್ಕೃತವನ್ನೂ ಹೇರಲು ಮುಂದಾಗಿದೆ. ಸಂಸ್ಕೃತ ವಿಶ್ವವಿದ್ಯಾನಿಲಯ ಸ್ಥಾಪನೆಗೆ ನೂರಾರು ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ಮಂಜೂರು ಮಾಡಲು ಹೊರಟಿದೆ. ಇದಕ್ಕೆ ವಿರೋಧಗಳು ವ್ಯಕ್ತವಾಗುತ್ತಿದ್ದಂತೆ, ಹಲವು ಬಲಪಂಥೀಯರು ಸಂಸ್ಕೃತ ಭಾರತದ ಆದಿಭಾಷೆ, ಮೂಲ ಭಾಷೆ, ಭಾರತದ ಮಾತೃಭಾಷೆ ಎಂದೆಲ್ಲಾ ಹೊಸ ಹೊಸ ವ್ಯಾಖ್ಯಾನಗಳನ್ನು ನೀಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಂತೂ ಸಂಸ್ಕೃತ ಭಾಷೆಯ ಅಬ್ಬರ ಜೋರಾಗಿಯೇ ಇದೆ.

ಈ ಹಿನ್ನೆಲೆಯಲ್ಲಿ ಭಾರತದ ಮೂಲ ಭಾಷೆ ಯಾವುದು? ಸಂಸ್ಕೃತಕ್ಕೂ ಭಾರತಕ್ಕೂ ಇರುವ ಸಂಬಂಧವೇನು? ಸಂಸ್ಕೃತ ನಿಜಕ್ಕೂ ಭಾರತದ ಮೂಲ ಭಾಷೆಯ-ದೇವ ಭಾಷೆಯಾ? ಇಷ್ಟಕ್ಕೂ ಸಂಸ್ಕೃತ ಇದೀಗ ಸತ್ತ ಭಾಷೆಯಾಗಿರುವುದು ಏಕೆ? ಎಂಬ ಅಸಲಿ ವಿಚಾರಗಳ ಕಡೆಗೆ ಗಮನ ಹರಿಸಬೇಕಾದ ತುರ್ತು ಎದುರಾಗಿದೆ.

ಸಂಸ್ಕೃತದ ಮೂಲ ಯಾವುದು?

ಜಗತ್ತಿನಲ್ಲಿ ಅತಿದೊಡ್ಡ ನುಡಿ ಕುಟುಂಬ ಇಂಡೋ ಯುರೋಪಿಯನ್ ಕುಟುಂಬ. ಲಿತುವೇನಿಯಾದ ಪುರಾತತ್ವ ತಜ್ಞೆ ಮಾರಿಜಾ ಗಿಂಬುಟಾಸ್ ಎನ್ನುವವರು ಪ್ರತಿಪಾದಿಸಿದ್ದ ಕುರ್ಗಾನ್ ಹಯ್ಪಾತಿಸಿಸ್ (Kurgan hypothesis) ಪ್ರಕಾರ ಇಂಡೋ ಯೂರೋಪಿಯನ್ನರ ತಾಯ್ನೆಲ ಇರುವುದು ಪಾಂಟಿಕ್ ಸ್ಟೆಪ್ (Pontic Steppe) ಜಾಗದಲ್ಲಿ. ಇದು ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರಗಳ ನಡುವಿನ ಜಾಗ. ಈಗ್ಗೆ 5000 ವರ್ಷಗಳ ಹಿಂದೆ ಅಲ್ಲಿದ್ದ ಆದಿ ಇಂಡೊ ಯೂರೋಪಿಯನ್ ನುಡಿಗರು ಯೂರೋಪ್ ಮತ್ತು ದಕ್ಶಿಣ ಏಶಿಯಾ ಕಡೆಗೆ ಎರಡು ಕವಲುಗಳಾಗಿ ವಲಸೆ ಹೋದರು. ಈ ಮೂನಲಕ ಜಗತ್ತಿನ ಎಲ್ಲಾ ಕಡೆ ಇಂಡೋ ಯೂರೋಪಿಯನ್ ಕುಟುಂಬದ ನುಡಿಗಳನ್ನು ಹಬ್ಬಿಸಿದರು. ಈ ಕುರ್ಗPನ್ ಹಯ್ಪಾತಿಸೀಸ್ ನ್ನು ಇತ್ತೀಚಿನ DNA ಸಂಶೋದನೆಗಳು ಸಹ ಗಟ್ಟಿಗೊಳಿಸಿವೆ.

ಈ ಇಂಡೋ ಯೂರೋಪಿಯನ್ ನುಡಿ ಕುಟುಂಬದ ಎರಡು ಕವಲುಗಳು ಇಂಡೋ ಆರ್ಯನ್ ಕವಲು ಮತ್ತು ಇರಾನಿಯನ್ ಕವಲು. ಸಂಸ್ಕೃತ ನುಡಿಯು ಇಂಡೋ ಕುಟುಂಬ ಕವಲಿನ ನುಡಿಯಾದರೆ ಅವೆಸ್ತ ಮತ್ತು ಪರ್ಸಿಯನ್ ಇರಾನಿಯನ್ ಕವಲಿನ ನುಡಿಗಳು. ಬಹಳ ಹಳೆಯದಾದ ಋಗ್ವೇದ ಸಂಸ್ಕೃತದಲ್ಲಿ ಇದ್ದರೆ ಜೊರಾಸ್ಟ್ರಿಯನ್ನರ ಜಂಡ್ ಅವೆಸ್ತಾ ಗ್ರಂಥವು ಅವೆಸ್ತಾ ನುಡಿಯಲ್ಲಿದೆ. ಈ ಎರಡೂ ಪ್ರಾಚೀನ ಗ್ರಂಥಗಳ ನಡುವೆ ಬಹಳ ಸಾಮ್ಯತೆ ಇರುವುದು ಸಹ ಕಂಡುಬಂದಿದೆ.

ಸಂಸ್ಕೃತ ನುಡಿಯ ಮೂಲಕ ಇಂಡೋ ಯೂರೋಪಿಯನ್ ಕುಟುಂಬದ ನುಡಿ ಬಾರತಕ್ಕೆ ಬಂದದ್ದು ಇಂದಿಗೆ 3,500 ವರ್ಷಗಳ ಹಿಂದೆ. ಈ ಹೊತ್ತಿಗೆ ಭಾರತದಲ್ಲಿ ದ್ರಾವಿಡ ನುಡಿ ಬಹಳ ಕುಟುಂಬ ದೊಡ್ಡ ನುಡಿ ಕುಟುಂಬವಾಗಿ ಬಾರತದ ಜನರಲ್ಲಿ ಚಾಲ್ತಿಯಲ್ಲಿತ್ತು. ಸಿಂದೂ ಬಯಲಿನ ನಾಗರೀಕತೆಯೂ ದ್ರಾವಿಡ ನುಡಿಗಳ ಮೂಲಕವೇ ಕಟ್ಟಲ್ಪಟ್ಟಿತ್ತು.

ಜೊತೆಗೇ ಮತ್ತೊಂದು ನುಡಿ ಕುಟುಂಬದ ಕೋಲಾ ಮುಂಡಾ ನುಡಿಯೂ ಭಾರತದಲ್ಲಿ ಬೇರು ಬಿಟ್ಟು ಬೆಳೆದಿತ್ತು. ಈ ಭಾಷೆಗಳಲ್ಲಿ ಭಾರತದ ಮಣ್ಣಿನ ಸೊಗಡಿತ್ತು. ಅಷ್ಟರಲ್ಲಾಗಲೇ ದ್ರಾವಿಡ ಬಾಷೆಗಳಲ್ಲಿ ಸಾಹಿತ್ಯಗಳನ್ನೇ ರಚಿಸಲಾಗಿತ್ತು. ಆದರೆ, ತದನಂತರದ ಕಾಲದಲ್ಲಿ ಭಾರತಕ್ಕೆ ವಲಸೆ ಬಂದ ಸಂಸ್ಕೃತ ಹೇಗೆ ಭಾರತದ ಮೂಲ ಮಾತೃ ಭಾಷೆಯಾಯಿತು? ಎಂದು ಪ್ರಶ್ನೆ ಮಾಡುತ್ತಾರೆ ಸಾಮಾಜಿಕ ಹೋರಾಟಗಾರ, ಎಲ್ಲರ ಕನ್ನಡ ಚಳವಳಿಯ ಪ್ರಮುಖರಲ್ಲೊಬ್ಬರಾದ ಹರ್ಷಕುಮಾರ ಕುಗ್ವೆ.

ಪ್ರಖ್ಯಾತ ಸಂಶೋಧಕರಾದ ಷಾ ಶೆಟ್ಟರ್, ಸಂಗಮೇಶ್ ಬದರಿಮಠ್ ರಂತಹ ಸಂಶೋಧಕರೂ ಸಹ ದ್ರಾವಿಡ ಭಾಷೆಯ ಭಾರತದ ಮೂಲ ಭಾಷೆ ಎಂಬುದನ್ನು ಈಗಾಗಲೇ ತಮ್ಮ ಸಂಶೋಧನೆಗಳ ಮೂಲಕ ಸ್ಪಷ್ಟಪಡಿಸಿದ್ದಾರೆ. ಹೀಗಿದ್ದು ಹಲವರು ಸಂಸ್ಕೃತವೇ ಭಾರತದ ಮಾತೃ ಭಾಷೆ ಎಂದು ಆಧಾರವಿಲ್ಲದೆ ವಾದಿಸುತ್ತಿರುವುದು ವಿಪರ್ಯಾಸ.

(ಮಾಹಿತಿ – ಹರ್ಷಕುಮಾರ್ ಕುಗ್ವೆ)


ಇದನ್ನೂ ಓದಿರಿ: ’ಸಂಸ್ಕೃತ’ ಪುನರುತ್ಥಾನ ಮತ್ತು ನೆಲದ ’ನುಡಿ’ಗಳ ಕೂಗು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...