Homeಮುಖಪುಟಭಯೋತ್ಪಾದಕ ‘ಗೋಡ್ಸೆ’ ಕುರಿತ ಸಿನಿಮಾ ಬಿಡುಗಡೆ ತಡೆಗಾಗಿ ಸುಪ್ರೀಂಗೆ ಅರ್ಜಿ

ಭಯೋತ್ಪಾದಕ ‘ಗೋಡ್ಸೆ’ ಕುರಿತ ಸಿನಿಮಾ ಬಿಡುಗಡೆ ತಡೆಗಾಗಿ ಸುಪ್ರೀಂಗೆ ಅರ್ಜಿ

- Advertisement -
- Advertisement -

ಸ್ವಾತಂತ್ರ್ಯ ಭಾರತದ ಮೊದಲ ಭಯೋತ್ಪಾದಕ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹಂತಕ ‘ನಾಥೂರಾಮ್ ಗೋಡ್ಸೆ’ಯನ್ನು ವೈಭವೀಕರಿಸಲು ಉದ್ದೇಶಿಸಿರುವ ‘ವೈ ಐ ಕಿಲ್ಲಲ್ಡ್‌ ಗಾಂಧಿ’ (ನಾನೇಕೆ ಗಾಂಧಿಯನು ಕೊಂದೆ) ಸಿನಿಮಾ ಬಿಡುಗಡೆ ಮಾಡದಂತೆ ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ನಾಥೂರಾಮ್‌ ಗೋಡ್ಸೆ ಕುರಿತ ಸಿನಿಮಾವನ್ನು ಒಟಿಟಿಗಳಲ್ಲಿ ಬಿಡುಗಡೆ ಮಾಡಲು ಮುಂದಾಗಿದ್ದು, ಅದಕ್ಕೆ ತಡೆ ನೀಡಬೇಕೆಂದು ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ಅಶೋಕ್ ತ್ಯಾಗಿ ನಿರ್ದೇಶನದ, ಕಲ್ಯಾಣಿ ಸಿಂಗ್ ಅವರು 2017ರಲ್ಲಿ ನಿರ್ಮಿಸಿದ ಈ ಚಿತ್ರವನ್ನು ಸೆನ್ಸಾರ್ ಮಂಡಳಿಯು ತೆರವುಗೊಳಿಸದ ಕಾರಣ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿಲ್ಲ. ಈಗ ಅದನ್ನು OTT ವೇದಿಕೆಗಳಲ್ಲಿ ಬಿಡುಗಡೆ ಮಾಡಲು ಮುಂದಾಗಿದ್ದಾರೆ. ಜನವರಿ 30ರಂದು (ಗಾಂಧೀಜಿಯನ್ನು ಹತ್ಯೆ ಮಾಡಿದ ದಿನ) ಸಿನಿಮಾ ಬಿಡುಗಡೆ ಮಾಡಲು ಉದ್ದೇಶಿಸಲಾಗಿದೆ.

ಎನ್‌ಸಿಪಿ ನಾಯಕ ಮತ್ತು ಶಿರೂರು ಲೋಕಸಭಾ ಕ್ಷೇತ್ರದ ಸಂಸದ ಅಮೋಲ್ ಕೋಲ್ಹೆ ಚಿತ್ರದಲ್ಲಿ ಗೋಡ್ಸೆ ಪಾತ್ರವನ್ನು ಮಾಡಿದ್ದಾರೆ. ತಾವು ಗಾಂಧಿ ಚಿಂತನೆಗಳಲ್ಲಿ ದೃಢ ನಂಬಿಕೆ ಹೊಂದಿದ್ದು, ನಟನಾಗಿ ಸವಾಲು ಹಾಕುವ ಸಲುವಾಗಿಯೇ ವಿವಾದಾತ್ಮಕ ಪಾತ್ರವನ್ನು ಕೈಗೆತ್ತಿಕೊಂಡಿರುವುದಾಗಿ ಅವರು ಇತ್ತೀಚೆಗೆ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿರಿ: ‘ನಾನೇಕೆ ಗಾಂಧಿಯನ್ನು ಕೊಂದೆ’ ಸಿನಿಮಾ ಬಿಡುಗಡೆ ಬೇಡ: ಸೇವಾದಳ ಯಂಗ್ ಬ್ರಿಗೇಡ್ ಆಗ್ರಹ

ಚಿತ್ರವು ನಾಥೂರಾಂ ಗೋಡ್ಸೆಯನ್ನು ವೈಭವೀಕರಿಸಿದೆ, ಮಹಾತ್ಮ ಗಾಂಧಿಯನ್ನು ಕೊಂದ ಕೃತ್ಯವನ್ನು ಸಂಭ್ರಮಿಸಲಾಗಿದೆ ಎಂದು ಅರ್ಜಿದಾರ ಸಿಕಂದರ್ ಬೆಹ್ಲ್ ಆರೋಪಿಸಿದ್ದಾರೆ. ಈ ಚಿತ್ರವು ರಾಷ್ಟ್ರಪಿತ ಗಾಂಧೀಜಿಯವರ ವ್ಯಕ್ತಿತ್ವಕ್ಕೆ ಕಳಂಕ ತರುವ ಉದ್ದೇಶವನ್ನು ಹೊಂದಿದೆ. ಕೋಮು ಸೌಹಾರ್ದತೆ, ದ್ವೇಷವನ್ನು ಹರಡುವುದು ಮತ್ತು ಶಾಂತಿ ಕದಡುವುದು ಈ ಸಿನಿಮಾದ ಗುರಿಯಾಗಿದೆ ಎಂದು ಅರ್ಜಿದಾರರು ಆತಂಕ ವ್ಯಕ್ತಪಡಿಸಿದ್ದಾರೆ.

ಸೆನ್ಸಾರ್ ಮಂಡಳಿಯ ಅಧಿಕಾರ ವ್ಯಾಪ್ತಿಯನ್ನು ಮೀರಿದ OTT ಪ್ಲಾಟ್‌ಫಾರ್ಮ್‌ಗಳ ನಿಯಂತ್ರಣಕ್ಕಾಗಿ ಉನ್ನತ ನ್ಯಾಯಾಲಯವು ನಿರ್ದೇಶನಗಳನ್ನು ನೀಡಬೇಕೆಂದು ಬೆಹ್ಲ್ ಆಶಿಸಿದ್ದಾರೆ. ಒಟಿಟಿಗಳಿಗೆ ಸರಿಯಾದ ನಿರ್ಬಂಧ ಇರದ ಕಾರಣ ಸೆನ್ಸಾರ್ ಮಾಡದ ವಿಷಯವನ್ನು ಪ್ರಸಾರ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ವಕೀಲ ಅನುಜ್ ಭಂಡಾರಿ ಅವರ ಮೂಲಕ ಸಿಕಂದರ್ ಬೆಹ್ಲ್ ಅವರು ಅರ್ಜಿ ಸಲ್ಲಿಸಿದ್ದು, ಎಲ್ಲಾ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಿಂದ ವಿವಾದಾತ್ಮಕ ಚಿತ್ರದ ಎಲ್ಲಾ ವಿಷಯಗಳನ್ನು ತೆಗೆದು ಹಾಕಬೇಕು ಎಂದು ಒತ್ತಾಯಿಸಿದ್ದಾರೆ.

ಚಿತ್ರದ ಎರಡು ನಿಮಿಷಗಳ ಇಪ್ಪತ್ತು ಸೆಕೆಂಡುಗಳ ಟ್ರೇಲರ್‌ನಲ್ಲಿ, ಭಾರತದ ವಿಭಜನೆ ಮತ್ತು ಪಾಕಿಸ್ತಾನದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯಕ್ಕೆ ಮಹಾತ್ಮ ಗಾಂಧಿಯನ್ನು ದೂರುವ ಪ್ರಯತ್ನವನ್ನು ಮಾಡಲಾಗಿದೆ. ಆ ಮೂಲಕ ಮಹಾತ್ಮ ಗಾಂಧೀಜಿಯವರ ಹತ್ಯೆಯನ್ನು ಸಮರ್ಥಿಸಲಾಗಿದೆ ಎಂದು ಆಕ್ಷೇಪ ಎತ್ತಿದ್ದಾರೆ.

ಈ ಚಿತ್ರ ಭಾರೀ ವಿವಾದಕ್ಕೆ ಎಡೆಮಾಡಿಕೊಟ್ಟಿರುವ ಹಿನ್ನೆಲೆಯಲ್ಲಿ ಅಖಿಲ ಭಾರತ ಸಿನಿ ಕಾರ್ಮಿಕರ ಸಂಘವು (AICWA) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಗಾಂಧೀಜಿ ಹಂತಕ ನಾಥೂರಾಂ ಗೋಡ್ಸೆಯನ್ನು ವೈಭವೀಕರಿಸಲು ಉದ್ದೇಶಿಸಿರುವ ಚಿತ್ರವನ್ನು ಸಂಪೂರ್ಣ ನಿಷೇಧಿಸಬೇಕು ಎಂದು ಆಗ್ರಹಿಸಿದೆ.

ಈ ಚಿತ್ರದಲ್ಲಿ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಸಂಸದ ಅಮೋಲ್ ಕೋಲ್ಹೆ ಗೋಡ್ಸೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಕಳೆದ ಕೆಲವು ದಿನಗಳಿಂದ ಆಡಳಿತಾರೂಢ ಮಹಾ ವಿಕಾಸ್ ಅಘಾಡಿ ಮಿತ್ರಪಕ್ಷಗಳಾದ ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್ ನಡುವೆ ಘರ್ಷಣೆಯನ್ನು ಹುಟ್ಟುಹಾಕಿದೆ.

ಗಾಂಧೀಜಿ ಹತ್ಯೆ ಮಾಡಲು ಗೋಡ್ಸೆ ಹೇಗೆ ಪ್ರೇರೇಪಿತನಾದ, ಆರ್‌ಎಸ್‌ಎಸ್‌ ಸಿದ್ಧಾಂತಗಳಿಂದ, ಆರ್‌ಎಸ್‌ಎಸ್‌ ನಾಯಕರಿಂದ ಗೋಡ್ಸೆ ಹೇಗೆ ಪ್ರಭಾವಿತನಾದ ಎಂಬುದನ್ನು ಇತ್ತೀಚೆಗೆ ಬಿಡುಗಡೆಯಾಗಿರುವ ‘ಗಾಂಧೀಸ್‌ ಅಸಾಸಿನ್‌’ (ಲೇಖಕರು: ಧೀರೇಂದ್ರ ಝಾ) ಅವರ ಕೃತಿ ಅತ್ಯಂತ ಪರಿಣಾಮಕಾರಿಯಾಗಿ ಚರ್ಚೆಸಿದೆ.

ಇನ್ನೊಂದೆಡೆ ಗಾಂಧೀಜಿಯವರನ್ನು ಅವ್ಯಾಚ ಪದಗಳಿಂದ ನಿಂದಿಸಿ ಗೋಡ್ಸೆಯನ್ನು ವೈಭವೀಕರಿಸಿದ ಹಿನ್ನೆಲೆಯಲ್ಲಿ ಕಾಳಿ ಚರಣ್ ಎಂಬ ಹಿಂದುತ್ವ ಸ್ವಾಮೀಜಿ ಹಾಗೂ ಮುಸ್ಲಿಮರ ನರಹತ್ಯೆಗೆ ಕರೆ ನೀಡಿದ ಯತಿ ನರಸಿಂಗಾನಂದ ಎಂಬವರ ಮೇಲೆ ಪ್ರಕರಣ ದಾಖಲಾಗಿದೆ. ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಕೋಮು ಕೇಂದ್ರಿತ ರಾಜಕಾರಣಕ್ಕೆ ಬಲಪಂಥೀಯ ರಾಜಕಾರಣಿಗಳು ಯತ್ನಿಸುತ್ತಿರುವ ಬೆಳವಣಿಗೆಗಳ ನಡುವೆ ಭಯೋತ್ಪಾದಕ ಗೋಡ್ಸೆ ಕುರಿತ ಸಿನಿಮಾ ಬಿಡುಗಡೆಯ ಚರ್ಚೆ ಮುನ್ನೆಲೆಗೆ ಬಂದಿದೆ.


ಇದನ್ನೂ ಓದಿರಿ: ಪ್ರಧಾನಿ, ಯೋಗಿ ಆದಿತ್ಯನಾಥ್ ಪರ ಘೋಷಣೆ ಕೂಗುವಂತೆ ಮಕ್ಕಳಿಗೆ ಸೂಚನೆ : ತನಿಖೆಗೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಗೋಡ್ಸೆ ಬಗ್ಗೆ ಸಂಪೂರ್ಣ ತಿಳಿಯದ ಅಯೋಗ್ಯ ಕಮ್ಯೂನಿಸ್ಟ್ ,ನಗರ ನಕ್ಸಲ್ ರು ಈ ದೇಶಕ್ಕೆ ಮಾರಕ

  2. ಗೋಡ್ಸೆ ಓರ್ವ ವಿಕೃತ ಮನಸ್ಸಿನ ಮತಾಂಧ ಭಯೋತ್ಪಾದಕ. ಪ್ರಪಂಚದ ಅತಿ ದೊಡ್ಡ ಭಯೋತ್ಪಾದಕ ಸಂಘಟನೆ ಆರೆಸ್ಸೆಸಿನ ಸದಸ್ಯ. ಆರೆಸ್ಸೆಸ್ ಈ ದೇಶಕ್ಕೆ ಅಪಾಯಕಾರಿ ಕ್ಯಾನ್ಸರ್. ಹಿಂಸೆ ಹೊರತುಪಡಿಸಿದರೆ ನಕ್ಸಲ್
    ಚಳವಳಿ ಜನಪರವಾದದ್ದೇ. ಹಿಟ್ಲರ್, ಮುಸೋಲಿನಿ ಆರಾಧಕರಾದ ಸಂಘಿಗಳು ಸ್ವಾತಂತ್ರ್ಯಕ್ಕಾಗಿ ನಯಾಪೈಸೆ ಹೋರಾಟ ಮಾಡಿಲ್ಲದ ಕಾರಣ ಈಗ ಧರ್ಮ ದ್ವೇಷ ಹಚ್ಚಿ ದೇಶ ವಿಭಜನೆಗೆ ಹೊರಟಿದ್ದಾರೆ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...