Homeಮುಖಪುಟಗೂಡಾಚರ್ಯೆಯ ಪೆಗಾಸಸ್‌‌ ಸ್ಪೈವೇರ್‌‌ಅನ್ನು ಭಾರತ ಖರೀದಿಸಿದೆ: ನ್ಯೂಯಾರ್ಕ್ ಟೈಮ್ಸ್‌ ವರದಿ

ಗೂಡಾಚರ್ಯೆಯ ಪೆಗಾಸಸ್‌‌ ಸ್ಪೈವೇರ್‌‌ಅನ್ನು ಭಾರತ ಖರೀದಿಸಿದೆ: ನ್ಯೂಯಾರ್ಕ್ ಟೈಮ್ಸ್‌ ವರದಿ

- Advertisement -
- Advertisement -

ಕ್ಷಿಪಣಿ ವ್ಯವಸ್ಥೆ ಸೇರಿದಂತೆ ಶಸ್ತ್ರಾಸ್ತ್ರಗಳಿಗಾಗಿ ಮಾಡಿಕೊಂಡ 2-ಬಿಲಿಯನ್ ಡಾಲರ್‌‌ ಪ್ಯಾಕೇಜ್‌ನ ಭಾಗವಾಗಿ 2017ರಲ್ಲಿ ಭಾರತ ಸರ್ಕಾರ ಇಸ್ರೇಲಿ ಸ್ಪೈವೇರ್ ಪೆಗಾಸಸ್ ಅನ್ನೂ ಖರೀದಿಸಿತು ಎಂದು ನ್ಯೂಯಾರ್ಕ್ ಟೈಮ್ಸ್ ಶುಕ್ರವಾರ ವರದಿ ಮಾಡಿದೆ.

ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ ಕೂಡ ಸ್ಪೈವೇರ್ ಅನ್ನು ಖರೀದಿಸಿದೆ ಹಾಗೂ ಪರೀಕ್ಷಿಸಿದೆ ಎಂದು ವರ್ಷವಿಡೀ ನಡೆಸಿದ ತನಿಖೆಯಲ್ಲಿ ತಿಳಿದುಬಂದಿದೆ.

ಪತ್ರಕರ್ತರು, ಭಿನ್ನಮತೀಯರನ್ನು ಗುರಿಯಾಗಿಸಲು ಮೆಕ್ಸಿಕೋ ದೇಶ ಪೆಗಾಸಸ್ ಬಳಸಿದೆ. ಸೌದಿ ಅರೇಬಿಯಾ ದೇಶಯು ಮಹಿಳಾ ಹಕ್ಕುಗಳ ಕಾರ್ಯಕರ್ತರು ಮತ್ತು ಸೌದಿ ಕಾರ್ಯಕರ್ತರಿಂದ ಕೊಲ್ಲಲ್ಪಟ್ಟ ಅಂಕಣಕಾರ ಜಮಾಲ್ ಖಶೋಗಿಯ ಸಹಚರರ ವಿರುದ್ಧ ಸ್ಪೈವೇರ್ ಬಳಸಿದೆ ಎಂದು ವರದಿ ಹೇಳಿದೆ. ಇಸ್ರೇಲಿ ರಕ್ಷಣಾ ಸಚಿವಾಲಯದಿಂದ ಪರವಾನಗಿ ಪಡೆದ ಹೊಸ ಒಪ್ಪಂದಗಳ ಅಡಿಯಲ್ಲಿ, ಪೋಲೆಂಡ್, ಹಂಗೇರಿ, ಭಾರತ ಮತ್ತು ಇತರ ದೇಶಗಳಿಗೆ ಪೆಗಾಸಸ್ ಅನ್ನು ಒದಗಿಸಲಾಗಿದೆ ಎಂದು ತನಿಖಾ ವರದಿ ಮಾಡಿದೆ.

ಜುಲೈ 2017ರಲ್ಲಿ ಇಸ್ರೇಲ್‌ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದರು. ಆಗಿನ ಒಪ್ಪಂದಗಳತ್ತ ತನಿಖಾ ವರದಿ ಬೆರಳು ತೋರಿದೆ.

ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಭೇಟಿಯು ಐತಿಹಾಸಿಕವಾಗಿ ಗಮನ ಸೆಳೆಯಿತು. ಅಲ್ಲದೆ ಸೌಹಾರ್ದಯುತವಾಗಿತ್ತು. ಮೋದಿ ಹಾಗೂ ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಸ್ಥಳೀಯ ಕಡಲತೀರದಲ್ಲಿ ಬರಿಗಾಲಿನಲ್ಲಿ ತಿರುಗಾಡಿದ್ದರು. ಸುಮಾರು 2 ಬಿಲಿಯನ್ ಡಾಲರ್‌ ಮೌಲ್ಯದ ಅತ್ಯಾಧುನಿಕ ಶಸ್ತ್ರಾಸ್ತ್ರಗಳು ಮತ್ತು ಗುಪ್ತಚರ ಸಾಧನಗಳ ಪ್ಯಾಕೇಜ್ ಅನ್ನು ಮಾರಾಟ ಮಾಡಲು ಉಭಯ ದೇಶಗಳು ಒಪ್ಪಿಕೊಂಡವು ಎಂದು ವರದಿ ಹೇಳುತ್ತದೆ.

ತಿಂಗಳುಗಳ ನಂತರ ಆ ಸಮಯದಲ್ಲಿ ಇಸ್ರೇಲಿ ಪ್ರಧಾನಿ ನೆತನ್ಯಾಹು ಅವರು ಭಾರತಕ್ಕೆ ಅಪರೂಪದ ಭೇಟಿ ನೀಡಿದರು. ಜೂನ್ 2019ರಲ್ಲಿ ಭಾರತವು ಯುಎನ್‌ನ ಆರ್ಥಿಕ ಮತ್ತು ಸಾಮಾಜಿಕ ಮಂಡಳಿಯಲ್ಲಿ ವೀಕ್ಷಕ ಸ್ಥಾನಮಾನವನ್ನು ನಿರಾಕರಿಸಲು ಇಸ್ರೇಲ್‌ಗೆ ಬೆಂಬಲವಾಗಿ ಮತ ಹಾಕಿತು ಎಂದು ವರದಿ ಉಲ್ಲೇಖಿಸಿದೆ.

ಭಾರತ ಸರ್ಕಾರ ಅಥವಾ ಇಸ್ರೇಲ್ ಸರ್ಕಾರವು ಪೆಗಾಸಸ್ ಅನ್ನು ಭಾರತ ಖರೀದಿಸಿದೆ ಎಂದು ಇಲ್ಲಿಯವರೆಗೆ ಒಪ್ಪಿಕೊಂಡಿಲ್ಲ.

ತಮ್ಮ ವಿರೋಧಿಗಳು, ಪತ್ರಕರ್ತರು, ಉದ್ಯಮಿಗಳು ಇತ್ಯಾದಿಗಳ ಮೇಲೆ ಕಣ್ಣಿಡಲು ಸ್ಪೈವೇರ್ ಅನ್ನು ವಿಶ್ವದಾದ್ಯಂತ ಹಲವಾರು ಸರ್ಕಾರಗಳು ಬಳಸಿರುವ ಕುರಿತು ಮಾಧ್ಯಮ ಗುಂಪುಗಳ ಜಾಗತಿಕ ಒಕ್ಕೂಟವು ಎಚ್ಚರಿಸಿದೆ.

ಭಾರತ ಪ್ರಖ್ಯಾತ ಸುದ್ದಿ ಜಾಲತಾಣ ದಿ ವೈರ್ ನಡೆಸಿದ ತನಿಖೆಯಲ್ಲಿ ಪೆಗಾಸಸ್ ಗೂಡಾಚರ್ಯೆ ನಡೆಸಿರುವ ಸಂಭಾವ್ಯ ಪ್ರಖ್ಯಾತರ ಪಟ್ಟಿ ಹೊರಬಿದ್ದಿತ್ತು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್, ಆಗಿನ ಚುನಾವಣಾ ಆಯುಕ್ತ ಅಶೋಕ್ ಲಾವಾಸಾ, ಸೇರಿದಂತೆ ಹಲವಾರು ಇತರ ಪ್ರಮುಖರ ಹೆಸರುಗಳಿದ್ದವು.

ಪೆಗಾಸಸ್ ಬಗ್ಗೆ ಮೊದಲ ವರದಿಗಳು ಹೊರಬಂದ ನಂತರ, ಈ ವಿಷಯವನ್ನು ಸಂಸತ್ತಿನಲ್ಲಿ ಪ್ರತಿಪಕ್ಷಗಳು ಮಂಡಿಸಿದವು. ತೀವ್ರ ಪ್ರತಿಭಟನೆಯನ್ನು ಸರ್ಕಾರದ ವಿರುದ್ಧ ನಡೆಸಲಾಯಿತು. ಪ್ರಕರಣ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತು. ಸುಪ್ರೀಂ ಕೋರ್ಟ್ ಆರೋಪಗಳನ್ನು ಪರಿಶೀಲಿಸಲು ಸಮಿತಿಯನ್ನು ರಚಿಸಿತು. ಅದರ ವಿಚಾರಣೆ ನಡೆಯುತ್ತಿದೆ. ವಿಚಾರಣೆಯ ಸಂದರ್ಭದಲ್ಲಿ, ಸುಪ್ರೀಂ ಕೋರ್ಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿ‌ದೆ.

ಭಾರತ ಪೆಗಾಸಸ್ ಸ್ಪೈವೇರ್‌ ಖರೀದಿಸಿದೆ ಎಂಬ ತನಿಖಾ ವರದಿ ಹೊರಬಿದ್ದ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಟ್ವೀಟ್ ಮಾಡಿದ್ದಾರೆ.

“ನಮ್ಮ ಪ್ರಜಾಪ್ರಭುತ್ವದ ಪ್ರಾಥಮಿಕ ಸಂಸ್ಥೆಗಳು, ರಾಷ್ಟ್ರ ನಾಯಕರು ಮತ್ತು ಸಾರ್ವಜನಿಕರ ಮೇಲೆ ಕಣ್ಣಿಡಲು ಮೋದಿ ಸರ್ಕಾರ ಪೆಗಾಸಸ್ ಖರೀದಿಸಿತು. ಫೋನ್ ಕದ್ದಾಲಿಕೆ ಮಾಡುವ ಮೂಲಕ ಆಡಳಿತ ಪಕ್ಷ, ವಿರೋಧ ಪಕ್ಷ, ಸೇನೆ, ನ್ಯಾಯಾಂಗ ಎಲ್ಲರ ಮೇಲೂ ಕಣ್ಣು ಇಡಲಾಗಿದೆ. ಇದು ದೇಶದ್ರೋಹ” ಎಂದಿದ್ದಾರೆ.


ಇದನ್ನೂ ಓದಿರಿ: ಪೆಗಾಸಸ್ ಫೋನ್‌ ಹ್ಯಾಕ್‌ಗೆ ಒಳಗಾದವರು ಯಾರು ಯಾರು? ಪ್ರಮುಖ 30 ಜನರ ಪಟ್ಟಿ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....