Homeಅಂಕಣಗಳುಅಸಹನೆ, ಅಶಾಂತಿಯತ್ತ ಸಾಗುತ್ತಿದೆ ಸೌಹಾರ್ದ ಭಾರತ

ಅಸಹನೆ, ಅಶಾಂತಿಯತ್ತ ಸಾಗುತ್ತಿದೆ ಸೌಹಾರ್ದ ಭಾರತ

ಸಾವನ್ನು ಸಂಭ್ರಮಿಸುವ, ದ್ವೇಷವೇ ರಾಜಕೀಯವಾಗಿರುವ ಸಾಮಾಜಿಕ ಬಿಕ್ಕಟ್ಟಿನಲ್ಲಿ ನಮ್ಮ ದೇಶ

- Advertisement -
- Advertisement -

| ಸೋಮಶೇಖರ್ ಚಲ್ಯ |

ಭಾರತದ ಸ್ವಾತಂತ್ರ್ಯ ಚಳುವಳಿಯ ಹಾದಿಯಲ್ಲಿ ಶಾಂತಿ ಮತ್ತು ಅಹಿಂಸೆಗಳೇ ಧ್ಯೇಯವಾಗಿ ಬೆಳೆದುಬಂದಿದ್ದವು. ಹಿಂಸೆಯಿಂದ ಯಾವುದನ್ನೂ ಗೆಲ್ಲಲಾಗುವುದಿಲ್ಲ, ಶಾಂತಿಯಿಂದ ಹೋರಾಡೋಣ ಸ್ವಾತಂತ್ರ್ಯ ಪಡೆಯೋಣ ಎಂಬುದು ಗಾಂಧಿಯವರ ಉದ್ದೇಶವಾಗಿತ್ತು. ಇದು ಇಡೀ ಜಗತ್ತಿಗೆ ಭಾರತವೊಂದು ಶಾಂತಿಪ್ರಿಯ ರಾಷ್ಟ್ರವೆಂಬುದನ್ನು ತೋರಿಸಿತ್ತು.

ಅಂತೆಯೇ ನಮ್ಮ ಸಂವಿಧಾನದ ಪ್ರಸ್ತಾವನೆಯಲ್ಲೂ ಎಲ್ಲರನ್ನು ಸಮಭಾವದಿಂದ ಕಾಣುವ, ಅಭಿವ್ಯಕ್ತಿ ಮತು ವ್ಯಕ್ತಿ ಗೌರವದೊಂದಿಗೆ ಭಾತೃಭಾವನೆಯನ್ನು ಬೆಳೆಸುವುದು ನಮ್ಮ ಆಧ್ಯತೆಯೆಂದು ¨ರೆದುಕೊಂಡಿದ್ದೇವೆ. ಆದರೆ ಗಾಂಧಿ ಹೇಳಿದ ಶಾಂತಿ ಮಂತ್ರವನ್ನು ಇತಿಹಾಸದ ಪುಟದಲ್ಲಿಯೂ, ಸಂವಿಧಾನದ ಆಶಯವನ್ನು ಅದರ ಪ್ರಸ್ತಾವನೆಯಲ್ಲೂ ಮಾತ್ರ ಓದಿಕೊಳ್ಳುವಂತಹ ಅಧೋಗತಿಗೆ ಭಾರತವನ್ನು ಕೊಂಡೊಯ್ಯಲಾಗುತ್ತಿದೆ.

ಜೂನ್ 12ರ ಬುಧವಾರ ಪ್ರಕಟಗೊಂಡ ಜಾಗತಿಕ ಶಾಂತಿ ಸೂಚ್ಯಂಕದ ಪಟ್ಟಿಯಲ್ಲಿ ಭಾರತ ಸ್ಥಾನ ಕುಸಿಯುತ್ತಾ ಸಾಗಿದೆ. 163 ರಾಷ್ಟ್ರಗಳ ಪೈಕಿ ಭಾರತ 141ನೇ ಸ್ಥಾನವನ್ನು ಪಡೆದುಕೊಂಡಿರುವುದು ಆಘಾತಕಾರಿ ಸಂದೇಶವನ್ನು ರವಾನಿಸಿದೆ. ಬಹಶಃ ಶಾಂತಿ ರಾಷ್ಟ್ರಗಳ ಪಟ್ಟಿಯೆಂದು ಕರೆಯುದಕ್ಕಿಂತ ಅಶಾಂತಿ ರಾಷ್ಟ್ರಗಳ ಪಟ್ಟಿ ಎಂದು ನೋಡಿದರೆ ಭಾರತ ಮೊದಲ 22ನೇ ಸ್ಥಾನದಲ್ಲಿದೆ. ಕಳೆದ ವರ್ಷ 136ನೇ ಸ್ಥಾನ ಪಡೆದುಕೊಂಡಿದ್ದ ಭಾರತ ಈ ಭಾರಿ 141ನೇ ಸ್ಥಾನ್ಕಕೆ ಕುಸಿದಿದೆ. ಇದು ದೇಶ ಎಂತಹ ಅಸಹನೆ, ಹಿಂಸಾಚಾರದೆಡೆಗೆ ಸಾಗಿದೆ ಎಂಬುದನ್ನು ತೋರಿಸುತ್ತಿದೆ. ಇದಕ್ಕೆ ಇತ್ತೀಚಿನ ಹಲವು ವಿದ್ಯಾಮಾನಗಳು ಸಾಕ್ಷಿಯಾಗಿವೆ.

ಗಿರೀಶ್ ಕಾರ್ನಾಡರು ನಿಧನರಾದ ಸಂದರ್ಭದಲ್ಲಿ ಅವರ ಸಾವನ್ನು ಸಂಭ್ರಮಿಸುವ ವಿಕೃತಿಯನ್ನು ಮೆರೆಯುವ ಮಟ್ಟಿಗೆ ಜನರ ಆಲೋಚನೆಗಳು ವಿಷಕಾರಿಯಾಗುತ್ತಿವೆ. ಗೌರಿ ಲಂಕೇಶ್ ಹತ್ಯೆಗೆ ಅಂತಾರಾಷ್ಟ್ರೀಯ ಮಟ್ಟಿದಲ್ಲಿ ಮನಸ್ಸುಗಳು ಮರುಗಿದ್ದವು. ಆದರೆ ನಮ್ಮದೇ ದೇಶದ/ರಾಜ್ಯದ ಕೆಲವು ಹೀನ ಮನಸ್ಸುಗಳು ಗೌರಿಯವರ ಸಾವನ್ನು ಪಟಾಕಿ ಸಿಡಿಸಿ ಸಂಭ್ರಮಿಸಿದ್ದವು.

ಭಾರತದ ಸಂಸ್ಕøತಿಯೆಂದರೆ ಸಾವಿಗೆ ಮರುಗುವ, ನೋವಿಗೆ ಸ್ಪಂದಿಸುವುದಾಗಿತ್ತು. ಸರ್ವಜನಾಂಗದ ಶಾಂತಿಯ ತೋಟವಾಗಬೇಕಿದ್ದ ನಮ್ಮ ರಾಷ್ಟ್ರ ಇಂದು ಕೋಮು ಭಾವನೆಯಿಂದ ಕ್ರೌರ್ಯವನ್ನು ತುಂಬಿಕೊಳ್ಳುತ್ತಿದೆ. ಬಿಜೆಪಿ ಮತ್ತು ಸಂಘಪರಿವಾರಗಳು ಯಾರೊಬ್ಬರೂ ಮೃತಪಟ್ಟರೂ, ಹಿಂದೂಗಳ ಹತ್ಯೆಯೆಂದು ಬೊಬ್ಬೆ ಹೊಡೆಯುತ್ತಾ ಮುಸ್ಲಿಮರನ್ನು ಭಯೋತ್ಪಾದಕರೆಂದು ಬಿಂಬಿಸಿ ಕೋಮು ವಿಷವನ್ನು ಭಿತ್ತುತ್ತುದ್ದಾರೆ. ಇದೇ ಸಂದರ್ಭದಲ್ಲಿ ಯಾವುದೇ ಮುಸ್ಲಿಮನಾಗಲೀ/ಪ್ರಗತಿಪರರಾಗಲಿ ಅಥವಾ ಕೋಮು ವಿರೋಧಿಯಾಗಲೀ ಸಂಘಪರಿವಾರದ ಅಥವಾ ಬಿಜೆಪಿಯ ಕಾರ್ಯಕರ್ತರು ಮರಣ ಹೊಂದಿದ ಸಂದರ್ಭದಲ್ಲಿ ಅಬ್ಬಾ ಸತ್ತನೆಂದು ಅವರ ಸಾವನ್ನು ಸಂಭ್ರಮಿಸಿದ ಉದಾಹಣೆಗಳಿಲ್ಲ. ಆದರೆ ತಮ್ಮ ವಿರೋಧಿಗಳ ಸಾವನ್ನು ಸಂಭ್ರಮಿಸುವ ಅನಾಗರಿಕ ಸಂಸ್ಕøತಿ ಸಂಘಪರಿವಾರದಲ್ಲಿ ಬೆಳೆದು ಇಂದು ರಾಷ್ಟ್ರವನ್ನೇ ವ್ಯಾಪಿಸಿದೆ.

ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ ನಡುವೆ ಶುರುವಾದ ರಾಜಕೀಯ ಹಿಂಸಾಚಾರ ಇಂದಿಗೂ ನಿಂತಿಲ್ಲ. ಚುನಾವಣಾ ಫಲಿತಾಂಶದ ನಂತರ ಒಟ್ಟು 13 ಜನ ಈ ಹಿಂಸಾಚಾರಕ್ಕೆ ಬಲಿಯಾಗಿದ್ದಾರೆ. ಈ ರಾಜಕೀಯ ಜಗಳವನ್ನು ಕೋಮುಗಲಭೆಯಾಗಿ ತಿರುಚುವ ಹುನ್ನಾರನ್ನು ಬಿಜೆಪಿ ನಾಯಕರು ಎಣೆಯುತ್ತಿದ್ದಾರೆ. ಸದಾ ಕೋಮುವಾದ, ಗಲಭೆ, ಹತ್ಯೆಗಳನ್ನೇ ರಾಜಕೀಯ ದಾಳವಾಗಿಸಿಕೊಂಡಿರುವ ಬಿಜೆಪಿ ಮತ್ತು ಸಂಘಪರಿವಾರ ಗಾಂಧಿ ಹತ್ಯೆ ಮಾಡಿದ ಗೂಡ್ಸೆಯನ್ನು ಪೂಜಿಸುವ, ಗೋದ್ರಾ ಹತ್ಯೆ, ಬಾಬರಿ ಮಸೀದಿ, ಬಾಬಾಬುಡನ್‍ಗಿರಿ, ಶಬರಿಮಲೆಗಳಂತ ಇಶ್ಯೂಗಳನ್ನು ಗಲಭೆ, ಹಿಂಸಾಚಾರಗಳಿಗೆ ತಿರುಗಿಸಿ ರಾಜಕೀಯ ಲಾಭ ಪಡೆಯುತ್ತಾ ದೇಶದಲ್ಲಿ ಅಶಾಂತಿ ಮತ್ತು ಅಪಾಯಕಾರಿ ವಾತಾವರಣವನ್ನು ಸೃಷ್ಟಿಮಾಡುತ್ತಿವೆ.

ಪ್ರಪಂಚಕ್ಕೇ ಪ್ರೀತಿ, ಶಾಂತಿಯಯ ಸಂದೇಶವನ್ನು ಸಾರಿದ ಬುದ್ದ ಮತ್ತು ಗಾಂಧಿ ಹುಟ್ಟಿದ ದೇಶವಿಂದು ದ್ವೇಷ, ಅಸಹಿಷ್ಣುತೆ, ಹಿಂಸಾಚಾರದ ದಳ್ಳುರಿಯಲ್ಲಿ ಸಿಕ್ಕು ನಲುಗುತ್ತಿದೆ. “ಬಿತ್ತಿದನ್ನೇ ಫಸಲಾಗಿ ಪಡೆಯುತ್ತೇವೆ. ಹಾಗಾಗಿ ಬಿತ್ತುವುದಾದರೆ ಮಾನವೀಯತೆ ಮತ್ತು ಸೌಹಾರ್ದತೆಯನ್ನು ಬಿತ್ತೋಣ.” ಎಂಬ ಮಾಜಿ ಸಿಎಂ ಸಿದ್ಧರಾಮಯ್ಯವನರ ಟ್ವೀಟ್ ಸಾವನ್ನು ಸಂಭ್ರನಿಸುವ, ದ್ವೇಷವನ್ನೇ ದಾಳ ಮಾಡಿಕೊಂಡಿರುವವರ ಮನಮುಟ್ಟುವಂತದ್ದು. ಆದರೆ ಅದಕ್ಕೆ ಅವರು ಸತ್ತಾಗ ದೀಪಾವಳಿ ಆಚರಿಸುತ್ತೇವೆ ಎಂದು ಪ್ರತ್ಯುತ್ತರ ಕೊಟ್ಟವರ ಮನಸ್ಥಿತಿಯನ್ನು ತಿದ್ದುವುದಾದರೂ ಹೇಗೆ?

ಮತ್ತೊಂದು ವಿಚಾರವೆಂದರೆ 2008ರಿಂದ ಇಲ್ಲಿಯವರೆಗೆ ಐಸ್‍ಲ್ಯಾಂಡ್ ಜಾಗತಿಕ ಶಾಂತಿ ಸೂಚ್ಯಂಕದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ. ಹಾಗೆಯೇ ಭಯೋತ್ಪಾದಕ ರಾಷ್ಟ್ರವೆಂದು ಬಿಂಬಿತವಾಗಿರುವ ಪಾಕಿಸ್ಥಾನ 153ನೇ ಸ್ಥಾನದಲ್ಲಿದೆ. ಭಾರತದ 141ನೇ ಸ್ಥಾನಕ್ಕೂ ಪಾಕಿಸ್ತಾನದ ಸ್ಥಾನಕ್ಕೂ ಅಂತಹ ಅಂತರವೇನು ಇಲ್ಲ. ಭಾರತವನ್ನು ಪಾಕಿಸ್ತಾನದೆಡೆಗೆ ಸಾಗಲು ಬಿಡದೆ, ಅದನ್ನು ಐಸ್‍ಲ್ಯಾಂಡಿನೆಡೆಗೆ ಸ್ನೇಹ, ಪ್ರೀತಿ, ಸಹಭಾಳ್ವೆ, ಸೌಹಾದರ್ತೆಯ ಮೂಲಕ ಕೊಂಡೊಯ್ಯುವ ಹೊಣೆ ಪ್ರತಿಯೊಬ್ಬ ಭಾರತೀಯರದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...