Homeಮುಖಪುಟಇಸ್ರೇಲ್‌ನಿಂದ ಪೆಗಾಸಸ್‌ ಖರೀದಿಸಿದ್ದ ವರದಿ ಬಹಿರಂಗ; ಮೋದಿ ಸರ್ಕಾರದ ವಿರುದ್ದ ವಿಪಕ್ಷಗಳ ಕಿಡಿ!

ಇಸ್ರೇಲ್‌ನಿಂದ ಪೆಗಾಸಸ್‌ ಖರೀದಿಸಿದ್ದ ವರದಿ ಬಹಿರಂಗ; ಮೋದಿ ಸರ್ಕಾರದ ವಿರುದ್ದ ವಿಪಕ್ಷಗಳ ಕಿಡಿ!

- Advertisement -
- Advertisement -

ಇಸ್ರೇಲ್‌ನೊಂದಿಗಿನ ರಕ್ಷಣಾ ಒಪ್ಪಂದದ ಭಾಗವಾಗಿ ಭಾರತ ಸರ್ಕಾರವು 2017 ರಲ್ಲಿ ಪೆಗಾಸಸ್ ಸ್ಪೈವೇರ್ ಅನ್ನು ಖರೀದಿಸಿದೆ ಎಂದು ನ್ಯೂಯಾರ್ಕ್ ಟೈಮ್ಸ್ (NYT) ವರದಿ ಮಾಡಿದೆ. ಈ ವರದಿ ಪ್ರಕಟವಾದ ನಂತರ ಮೋದಿ ಸರ್ಕಾರವು ವಿರುದ್ಧ ವಿಪಕ್ಷಗಳ ತ್ರೀವ್ರ ಟೀಕೆಗೆ ಗುರಿಯಾಗಿದೆ. ಆದರೆ, ಕೇಂದ್ರ ಸಚಿವ ವಿಕೆ ಸಿಂಗ್ ವರದಿಯನ್ನು ತಳ್ಳಿಹಾಕಿದ್ದಾರೆ.

NYT ವರದಿಯು, ಕ್ಷಿಪಣಿ ವ್ಯವಸ್ಥೆ ಸೇರಿದಂತೆ ಶಸ್ತ್ರಾಸ್ತ್ರಗಳನ್ನು ಖರೀದಿಸುವ 2 ಬಿಲಿಯನ್ ಡಾಲರ್‌ ಪ್ಯಾಕೇಜ್‌ನ ಒಪ್ಪಂದದ ಭಾಗವಾಗಿ ಸ್ಪೈವೇರ್ ಪೆಗಾಸಸ್‌ಅನ್ನು ಭಾರತವು ಇಸ್ರೇಲ್‌ನಿಂದ ಖರೀದಿಸಿದೆ. ಒಪ್ಪಂದವು 2017ರ ಜುಲೈನಲ್ಲಿ ಮೋದಿ ಅವರು ಇಸ್ರೇಲ್‌ಗೆ ಭೇಟಿ ನೀಡಿದ್ದಾಗ ನಡೆದಿದೆ ಎಂದು ಹೇಳಿದೆ.

ವರದಿ ಪ್ರಕಟವಾದ ಬಳಿಕ ಕೇಂದ್ರದ ವಿರುದ್ದ ಹರಿಹಾಯ್ದಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮೋದಿ ಸರ್ಕಾರವನ್ನು “ದೇಶದ್ರೋಹಿ” ಎಂದು ಕರೆದಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, “ನಮ್ಮ ಪ್ರಜಾಪ್ರಭುತ್ವದ ಪ್ರಾಥಮಿಕ ಸಂಸ್ಥೆಗಳು, ನಾಯಕರು ಮತ್ತು ಸಾರ್ವಜನಿಕರ ಮೇಲೆ ಕಣ್ಣಿಡಲು ಪೆಗಾಸಸ್ ಅನ್ನು ಮೋದಿ ಸರ್ಕಾರ ಖರೀದಿಸಿದೆ. ಇದು ದೇಶದ್ರೋಹ. ಮೋದಿ ಸರ್ಕಾರ ದೇಶದ್ರೋಹ ಮಾಡಿದೆ” ಎಂದು ಆರೋಪಿಸಿದ್ದಾರೆ.

ಮೋದಿ ಸರ್ಕಾರವು ಇಸ್ರೇಲಿ ಕಣ್ಗಾವಲು ಸ್ಪೈವೇರ್ ಪೆಗಾಸಸ್ ಮೂಲಕ ಅಕ್ರಮ ಮತ್ತು ಅಸಾಂವಿಧಾನಿಕ ಬೇಹುಗಾರಿಕೆ ಮತ್ತು ಸ್ನೂಪಿಂಗ್ ದಂಧೆಯನ್ನು ನಡೆಸಿದೆ. ಈ ದಂಧೆಗೆ ನಿಯೋಜಕ ಮತ್ತು ನಿರ್ವಾಹಕ ಎರಡೂ ಬಿಜೆಪಿ ಸರ್ಕಾರವೇ ಆಗಿದೆ. ಪೆಗಾಸಸ್‌ ಆಘಾತಕಾರಿ ವಿಚಾರದ ಬಗ್ಗೆ ನಾವು ಸುದೀರ್ಘ ಕಾಲದಿಂದ ಪ್ರತಿಪಾದಿಸಿದ್ದನ್ನು ಅಂತಾರಾಷ್ಟ್ರೀಯ ಪ್ರಕಟಣೆಯು ದೃಢಪಡಿಸಿದೆ ಮತ್ತು ಬಹಿರಂಗ ಪಡಿಸಿದೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ.

ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಟ್ವಿಟರ್‌ನಲ್ಲಿ, “ಮೋದಿ ಸರ್ಕಾರ ಭಾರತದ ಶತ್ರುವಿನಂತೆ ವರ್ತಿಸಿತ್ತಿದೆ. ಭಾರತೀಯ ನಾಗರಿಕರ ವಿರುದ್ಧ ಕಣ್ಗಾವಲಿನ ಅಸ್ತ್ರವನ್ನು ಏಕೆ ಬಳಸುತ್ತಿದೆ?” ಎಂದು ಪ್ರಶ್ನಿಸಿದ್ದಾರೆ.

ಶಿವಸೇನಾ ಸಂಸದೆ ಪ್ರಿಯಾಂಕಾ ಚತುರ್ವೇದಿ ಅವರು, “ಸ್ಪೈವೇರ್ ಅನ್ನು ರಕ್ಷಣಾ ಉದ್ದೇಶಗಳಿಗಾಗಿ ಬಳಸಲಾಗಿಲ್ಲ. ಆದರೆ ಪ್ರತಿಪಕ್ಷಗಳು ಮತ್ತು ಪತ್ರಕರ್ತರ ಮೇಲೆ ಕಣ್ಣಿಡಲು ಬಳಸಲಾಗಿದೆ. ಬಿಜೆಪಿ ಸರ್ಕಾರದಲ್ಲಿ ಇಂತಹ ದುಷ್‌ಕೃತ್ಯಗಳು ಸಾಧ್ಯ. ಅವರು ದೇಶವನ್ನೇ ಬಿಗ್‌ಬಾಸ್‌ ಶೋ ಆಗಿ ಮಾಡಿದ್ದಾರೆ” ಎಂದು ಕಿಡಿಕಾರಿದ್ದಾರೆ.

2017 ರಲ್ಲಿ ಇಸ್ರೇಲ್ ಜೊತೆಗಿನ ದೊಡ್ಡ $2 ಬಿಲಿಯನ್ ಒಪ್ಪಂದದ ಭಾಗವಾಗಿ ಭಾರತವು ಪೆಗಾಸಸ್ ಅನ್ನು ಖರೀದಿಸಿದೆ ಎಂದು NYT ಹೇಳುತ್ತದೆ. ಪೆಗಾಸಸ್ (ವಿರೋಧಿಗಳು, ಸಾಮಾಜಿಕ ಕಾರ್ಯಕರ್ತರು ಮತ್ತು ಪತ್ರಕರ್ತರ ಮೇಲೆ ಕಣ್ಣಿಡಲು ಬಳಸಲಾಗುತ್ತದೆ) ಭಾರತ ಮತ್ತು ಇಸ್ರೇಲ್ ನಡುವಿನ ಒಪ್ಪಂದದ ‘ಕೇಂದ್ರಬಿಂದು’ ಎಂದು ಮಾಧ್ಯಮ ವರದಿಯು ಗಮನ ಸೆಳೆದಿದೆ. ಇದರಿಂದ, ಸಂಸತ್ತಿನಲ್ಲಿ ಮೋದಿ ಸರ್ಕಾರ ಸುಳ್ಳು ಹೇಳಿರುವುದು ಸ್ಪಷ್ಟವಾಗಿದೆ ಎಂದು ಹಿರಿಯ ನ್ಯಾಯವಾದಿ ಪ್ರಶಾಂತ್ ಭೂಷಣ್ ಆರೋಪಿಸಿದ್ದಾರೆ.

ಅದಾಗ್ಯೂ, ಕೇಂದ್ರ ಸಚಿವ ಜನರಲ್ ವಿ ಕೆ ಸಿಂಗ್ ಅವರು ನ್ಯೂಯಾರ್ಕ್ ಟೈನ್ಸ್‌ನ ವರದಿಯನ್ನು ನಿರಾಕರಿಸಿದ್ದಾರೆ ಮತ್ತು ಆ ವರದಿಯನ್ನು “ಸುಪಾರಿ ಮೀಡಿಯಾ” ಎಂದು ಕರೆದಿದ್ದಾರೆ. ನೀವು NYT ಅನ್ನು ನಂಬಬಹುದೇ? ಅವರು ಸುಪಾರಿ ಮೀಡಿಯಾ ಎಂದು ಟ್ವೀಟ್‌ ಮಾಡಿದೆ.

ಕಳೆದ ವರ್ಷ, ಇಸ್ರೇಲಿ ಸ್ಪೈವೇರ್ ಪೆಗಾಸಸ್ ಅನ್ನು ಭಾರತದಲ್ಲಿ ಉದ್ದೇಶಿತ ಕಣ್ಗಾವಲಿಗಾಗಿ ಕೇಂದ್ರ ಸರ್ಕಾರ ಬಳಸಲಾಗುತ್ತಿದೆ ಎಂದು ಆರೋಪಿಸಲಾಗಿತ್ತು. ಬಳಿಕ ಇದು ಭಾರೀ ಸುದ್ದಿಯಾಗಿತ್ತು.

ಎನ್‌ಎಸ್‌ಒ ಗ್ರೂಪ್‌ನ ಫೋನ್ ಹ್ಯಾಕಿಂಗ್ ಸಾಫ್ಟ್‌ವೇರ್‌ನಿಂದ ಭಾರತೀಯ ಮಂತ್ರಿಗಳು, ರಾಜಕಾರಣಿಗಳು, ಸಾಮಾಜಿಕ ಕಾರ್ಯಕರ್ತರು, ಉದ್ಯಮಿಗಳು ಮತ್ತು ಪತ್ರಕರ್ತರು ಸೇರಿದಂತೆ ಅನೇಕ ಜನರನ್ನು ಅನಧಿಕೃತ ಕಣ್ಗಾವಲಿಗೆ ಗುರಿ ಮಾಡಲಾಗಿದೆ ಎಂದು ಅಂತರರಾಷ್ಟ್ರೀಯ ತನಿಖಾ ಒಕ್ಕೂಟವು ಕಳೆದ ವರ್ಷ ಹೇಳಿತ್ತು.

ಭಾರತದಲ್ಲಿ ಕೇಂದ್ರ ಸರ್ಕಾರವು ಕಣ್ಗಾವಲಿಟ್ಟಿರುವ ಪಟ್ಟಿಯಲ್ಲಿ ಕಾಂಗ್ರೆಸ್‌ನ ನಾಯಕ ರಾಹುಲ್‌ ಗಾಂಧಿ, ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್, ಆಗಿನ ಚುನಾವಣಾ ಆಯುಕ್ತ ಅಶೋಕ್ ಲಾವಾಸಾ, ಇಂದಿನ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಮತ್ತು ಇತರ ಪ್ರಮುಖ ನಾಯಕರು ಹಾಗೂ ಇಂಡಿಯನ್ ಎಕ್ಸ್‌ಪ್ರೆಸ್‌ನ ಮೂವರು ಸಂಪಾದಕರು ಸೇರಿದಂತೆ ಸುಮಾರು 40 ಪತ್ರಕರ್ತರ ಹೆಸರುಗಳಿವೆ ಎಂದು ದಿ ವೈರ್ ನಡೆಸಿದ ತನಿಖೆಯಲ್ಲಿ ಬಹಿರಂಗಪಡಿಸಿತ್ತು.

ಈ ಎಲ್ಲಾ ಅರೋಪಗಳನ್ನು ಅಲ್ಲಗಳೆದಿದ್ದ ಕೇಂದ್ರ ಸರ್ಕಾರ, ನಿರ್ದಿಷ್ಟ ಜನರ ಮೇಲೆ ಯಾವುದೇ ರೀತಿಯ ಕಣ್ಗಾವಲನ್ನು ಇರಿಸಲಾಗಿಲ್ಲ ಎಂದು ಹೇಳಿದ್ದ ಸರ್ಕಾರ, ಆರೋಪಗಳನ್ನು ತಳ್ಳಿಹಾಕಿತ್ತು. “ಈ ಆರೋಪವು ಯಾವುದೇ ನಿರ್ದಿಷ್ಟ ಆಧಾರ ಅಥವಾ ಸತ್ಯವನ್ನು ಹೊಂದಿಲ್ಲ” ಎಂದು ಹೇಳಿತ್ತು.

ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದ ಸುಪ್ರೀಂ ಕೋರ್ಟ್‌, “ರಾಷ್ಟ್ರೀಯ ಭದ್ರತೆ” ಎಂಬ ಭೀತಿ ಹೆಚ್ಚಿದಾಗ ಸರ್ಕಾರವು ಆರಾಮದಾಯಕವಾಗಿ ನುಣುಚಿಕೊಳ್ಳಲು ಸಾಧ್ಯವಿಲ್ಲ. ನ್ಯಾಯಾಂಗವು ಮೂಕ ವೀಕ್ಷನಾಗಿ ಕುಳಿತಿಲ್ಲ ಎಂದು ಹೇಳಿತ್ತು.

ಪೆಗಾಸಸ್‌ ಮೂಲಕ ಸರ್ಕಾರವು ಹಲವರ ಮೇಲೆ ಅನಧಿಕೃತವಾಗಿ ಕಣ್ಣಿಟ್ಟಿದೆ ಎಂದು ಆರೋಪಿಸಿ ಸಲ್ಲಿಸಲಾದ ಸುಮಾರು ಹನ್ನೆರಡು ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ಸ್ವೀಕರಿಸಿತ್ತು. ನಂತರ, ಇದರ ತನಿಖೆಗಾಗಿ ಅಕ್ಟೋಬರ್ 27 ರಂದು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಆರ್.ವಿ.ರವೀಂದ್ರನ್ ಅವರ ನೇತೃತ್ವದಲ್ಲಿ ಇಬ್ಬರು ತಜ್ಞರೊಂದಿಗೆ ಸ್ವತಂತ್ರ ಸಮಿತಿಯನ್ನು ನೇಮಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...