Homeಮುಖಪುಟಇಸ್ರೇಲ್‌ನಿಂದ ಪೆಗಾಸಸ್‌ ಖರೀದಿಸಿದ್ದ ವರದಿ ಬಹಿರಂಗ; ಮೋದಿ ಸರ್ಕಾರದ ವಿರುದ್ದ ವಿಪಕ್ಷಗಳ ಕಿಡಿ!

ಇಸ್ರೇಲ್‌ನಿಂದ ಪೆಗಾಸಸ್‌ ಖರೀದಿಸಿದ್ದ ವರದಿ ಬಹಿರಂಗ; ಮೋದಿ ಸರ್ಕಾರದ ವಿರುದ್ದ ವಿಪಕ್ಷಗಳ ಕಿಡಿ!

- Advertisement -
- Advertisement -

ಇಸ್ರೇಲ್‌ನೊಂದಿಗಿನ ರಕ್ಷಣಾ ಒಪ್ಪಂದದ ಭಾಗವಾಗಿ ಭಾರತ ಸರ್ಕಾರವು 2017 ರಲ್ಲಿ ಪೆಗಾಸಸ್ ಸ್ಪೈವೇರ್ ಅನ್ನು ಖರೀದಿಸಿದೆ ಎಂದು ನ್ಯೂಯಾರ್ಕ್ ಟೈಮ್ಸ್ (NYT) ವರದಿ ಮಾಡಿದೆ. ಈ ವರದಿ ಪ್ರಕಟವಾದ ನಂತರ ಮೋದಿ ಸರ್ಕಾರವು ವಿರುದ್ಧ ವಿಪಕ್ಷಗಳ ತ್ರೀವ್ರ ಟೀಕೆಗೆ ಗುರಿಯಾಗಿದೆ. ಆದರೆ, ಕೇಂದ್ರ ಸಚಿವ ವಿಕೆ ಸಿಂಗ್ ವರದಿಯನ್ನು ತಳ್ಳಿಹಾಕಿದ್ದಾರೆ.

NYT ವರದಿಯು, ಕ್ಷಿಪಣಿ ವ್ಯವಸ್ಥೆ ಸೇರಿದಂತೆ ಶಸ್ತ್ರಾಸ್ತ್ರಗಳನ್ನು ಖರೀದಿಸುವ 2 ಬಿಲಿಯನ್ ಡಾಲರ್‌ ಪ್ಯಾಕೇಜ್‌ನ ಒಪ್ಪಂದದ ಭಾಗವಾಗಿ ಸ್ಪೈವೇರ್ ಪೆಗಾಸಸ್‌ಅನ್ನು ಭಾರತವು ಇಸ್ರೇಲ್‌ನಿಂದ ಖರೀದಿಸಿದೆ. ಒಪ್ಪಂದವು 2017ರ ಜುಲೈನಲ್ಲಿ ಮೋದಿ ಅವರು ಇಸ್ರೇಲ್‌ಗೆ ಭೇಟಿ ನೀಡಿದ್ದಾಗ ನಡೆದಿದೆ ಎಂದು ಹೇಳಿದೆ.

ವರದಿ ಪ್ರಕಟವಾದ ಬಳಿಕ ಕೇಂದ್ರದ ವಿರುದ್ದ ಹರಿಹಾಯ್ದಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮೋದಿ ಸರ್ಕಾರವನ್ನು “ದೇಶದ್ರೋಹಿ” ಎಂದು ಕರೆದಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, “ನಮ್ಮ ಪ್ರಜಾಪ್ರಭುತ್ವದ ಪ್ರಾಥಮಿಕ ಸಂಸ್ಥೆಗಳು, ನಾಯಕರು ಮತ್ತು ಸಾರ್ವಜನಿಕರ ಮೇಲೆ ಕಣ್ಣಿಡಲು ಪೆಗಾಸಸ್ ಅನ್ನು ಮೋದಿ ಸರ್ಕಾರ ಖರೀದಿಸಿದೆ. ಇದು ದೇಶದ್ರೋಹ. ಮೋದಿ ಸರ್ಕಾರ ದೇಶದ್ರೋಹ ಮಾಡಿದೆ” ಎಂದು ಆರೋಪಿಸಿದ್ದಾರೆ.

ಮೋದಿ ಸರ್ಕಾರವು ಇಸ್ರೇಲಿ ಕಣ್ಗಾವಲು ಸ್ಪೈವೇರ್ ಪೆಗಾಸಸ್ ಮೂಲಕ ಅಕ್ರಮ ಮತ್ತು ಅಸಾಂವಿಧಾನಿಕ ಬೇಹುಗಾರಿಕೆ ಮತ್ತು ಸ್ನೂಪಿಂಗ್ ದಂಧೆಯನ್ನು ನಡೆಸಿದೆ. ಈ ದಂಧೆಗೆ ನಿಯೋಜಕ ಮತ್ತು ನಿರ್ವಾಹಕ ಎರಡೂ ಬಿಜೆಪಿ ಸರ್ಕಾರವೇ ಆಗಿದೆ. ಪೆಗಾಸಸ್‌ ಆಘಾತಕಾರಿ ವಿಚಾರದ ಬಗ್ಗೆ ನಾವು ಸುದೀರ್ಘ ಕಾಲದಿಂದ ಪ್ರತಿಪಾದಿಸಿದ್ದನ್ನು ಅಂತಾರಾಷ್ಟ್ರೀಯ ಪ್ರಕಟಣೆಯು ದೃಢಪಡಿಸಿದೆ ಮತ್ತು ಬಹಿರಂಗ ಪಡಿಸಿದೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ.

ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಟ್ವಿಟರ್‌ನಲ್ಲಿ, “ಮೋದಿ ಸರ್ಕಾರ ಭಾರತದ ಶತ್ರುವಿನಂತೆ ವರ್ತಿಸಿತ್ತಿದೆ. ಭಾರತೀಯ ನಾಗರಿಕರ ವಿರುದ್ಧ ಕಣ್ಗಾವಲಿನ ಅಸ್ತ್ರವನ್ನು ಏಕೆ ಬಳಸುತ್ತಿದೆ?” ಎಂದು ಪ್ರಶ್ನಿಸಿದ್ದಾರೆ.

ಶಿವಸೇನಾ ಸಂಸದೆ ಪ್ರಿಯಾಂಕಾ ಚತುರ್ವೇದಿ ಅವರು, “ಸ್ಪೈವೇರ್ ಅನ್ನು ರಕ್ಷಣಾ ಉದ್ದೇಶಗಳಿಗಾಗಿ ಬಳಸಲಾಗಿಲ್ಲ. ಆದರೆ ಪ್ರತಿಪಕ್ಷಗಳು ಮತ್ತು ಪತ್ರಕರ್ತರ ಮೇಲೆ ಕಣ್ಣಿಡಲು ಬಳಸಲಾಗಿದೆ. ಬಿಜೆಪಿ ಸರ್ಕಾರದಲ್ಲಿ ಇಂತಹ ದುಷ್‌ಕೃತ್ಯಗಳು ಸಾಧ್ಯ. ಅವರು ದೇಶವನ್ನೇ ಬಿಗ್‌ಬಾಸ್‌ ಶೋ ಆಗಿ ಮಾಡಿದ್ದಾರೆ” ಎಂದು ಕಿಡಿಕಾರಿದ್ದಾರೆ.

2017 ರಲ್ಲಿ ಇಸ್ರೇಲ್ ಜೊತೆಗಿನ ದೊಡ್ಡ $2 ಬಿಲಿಯನ್ ಒಪ್ಪಂದದ ಭಾಗವಾಗಿ ಭಾರತವು ಪೆಗಾಸಸ್ ಅನ್ನು ಖರೀದಿಸಿದೆ ಎಂದು NYT ಹೇಳುತ್ತದೆ. ಪೆಗಾಸಸ್ (ವಿರೋಧಿಗಳು, ಸಾಮಾಜಿಕ ಕಾರ್ಯಕರ್ತರು ಮತ್ತು ಪತ್ರಕರ್ತರ ಮೇಲೆ ಕಣ್ಣಿಡಲು ಬಳಸಲಾಗುತ್ತದೆ) ಭಾರತ ಮತ್ತು ಇಸ್ರೇಲ್ ನಡುವಿನ ಒಪ್ಪಂದದ ‘ಕೇಂದ್ರಬಿಂದು’ ಎಂದು ಮಾಧ್ಯಮ ವರದಿಯು ಗಮನ ಸೆಳೆದಿದೆ. ಇದರಿಂದ, ಸಂಸತ್ತಿನಲ್ಲಿ ಮೋದಿ ಸರ್ಕಾರ ಸುಳ್ಳು ಹೇಳಿರುವುದು ಸ್ಪಷ್ಟವಾಗಿದೆ ಎಂದು ಹಿರಿಯ ನ್ಯಾಯವಾದಿ ಪ್ರಶಾಂತ್ ಭೂಷಣ್ ಆರೋಪಿಸಿದ್ದಾರೆ.

ಅದಾಗ್ಯೂ, ಕೇಂದ್ರ ಸಚಿವ ಜನರಲ್ ವಿ ಕೆ ಸಿಂಗ್ ಅವರು ನ್ಯೂಯಾರ್ಕ್ ಟೈನ್ಸ್‌ನ ವರದಿಯನ್ನು ನಿರಾಕರಿಸಿದ್ದಾರೆ ಮತ್ತು ಆ ವರದಿಯನ್ನು “ಸುಪಾರಿ ಮೀಡಿಯಾ” ಎಂದು ಕರೆದಿದ್ದಾರೆ. ನೀವು NYT ಅನ್ನು ನಂಬಬಹುದೇ? ಅವರು ಸುಪಾರಿ ಮೀಡಿಯಾ ಎಂದು ಟ್ವೀಟ್‌ ಮಾಡಿದೆ.

ಕಳೆದ ವರ್ಷ, ಇಸ್ರೇಲಿ ಸ್ಪೈವೇರ್ ಪೆಗಾಸಸ್ ಅನ್ನು ಭಾರತದಲ್ಲಿ ಉದ್ದೇಶಿತ ಕಣ್ಗಾವಲಿಗಾಗಿ ಕೇಂದ್ರ ಸರ್ಕಾರ ಬಳಸಲಾಗುತ್ತಿದೆ ಎಂದು ಆರೋಪಿಸಲಾಗಿತ್ತು. ಬಳಿಕ ಇದು ಭಾರೀ ಸುದ್ದಿಯಾಗಿತ್ತು.

ಎನ್‌ಎಸ್‌ಒ ಗ್ರೂಪ್‌ನ ಫೋನ್ ಹ್ಯಾಕಿಂಗ್ ಸಾಫ್ಟ್‌ವೇರ್‌ನಿಂದ ಭಾರತೀಯ ಮಂತ್ರಿಗಳು, ರಾಜಕಾರಣಿಗಳು, ಸಾಮಾಜಿಕ ಕಾರ್ಯಕರ್ತರು, ಉದ್ಯಮಿಗಳು ಮತ್ತು ಪತ್ರಕರ್ತರು ಸೇರಿದಂತೆ ಅನೇಕ ಜನರನ್ನು ಅನಧಿಕೃತ ಕಣ್ಗಾವಲಿಗೆ ಗುರಿ ಮಾಡಲಾಗಿದೆ ಎಂದು ಅಂತರರಾಷ್ಟ್ರೀಯ ತನಿಖಾ ಒಕ್ಕೂಟವು ಕಳೆದ ವರ್ಷ ಹೇಳಿತ್ತು.

ಭಾರತದಲ್ಲಿ ಕೇಂದ್ರ ಸರ್ಕಾರವು ಕಣ್ಗಾವಲಿಟ್ಟಿರುವ ಪಟ್ಟಿಯಲ್ಲಿ ಕಾಂಗ್ರೆಸ್‌ನ ನಾಯಕ ರಾಹುಲ್‌ ಗಾಂಧಿ, ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್, ಆಗಿನ ಚುನಾವಣಾ ಆಯುಕ್ತ ಅಶೋಕ್ ಲಾವಾಸಾ, ಇಂದಿನ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಮತ್ತು ಇತರ ಪ್ರಮುಖ ನಾಯಕರು ಹಾಗೂ ಇಂಡಿಯನ್ ಎಕ್ಸ್‌ಪ್ರೆಸ್‌ನ ಮೂವರು ಸಂಪಾದಕರು ಸೇರಿದಂತೆ ಸುಮಾರು 40 ಪತ್ರಕರ್ತರ ಹೆಸರುಗಳಿವೆ ಎಂದು ದಿ ವೈರ್ ನಡೆಸಿದ ತನಿಖೆಯಲ್ಲಿ ಬಹಿರಂಗಪಡಿಸಿತ್ತು.

ಈ ಎಲ್ಲಾ ಅರೋಪಗಳನ್ನು ಅಲ್ಲಗಳೆದಿದ್ದ ಕೇಂದ್ರ ಸರ್ಕಾರ, ನಿರ್ದಿಷ್ಟ ಜನರ ಮೇಲೆ ಯಾವುದೇ ರೀತಿಯ ಕಣ್ಗಾವಲನ್ನು ಇರಿಸಲಾಗಿಲ್ಲ ಎಂದು ಹೇಳಿದ್ದ ಸರ್ಕಾರ, ಆರೋಪಗಳನ್ನು ತಳ್ಳಿಹಾಕಿತ್ತು. “ಈ ಆರೋಪವು ಯಾವುದೇ ನಿರ್ದಿಷ್ಟ ಆಧಾರ ಅಥವಾ ಸತ್ಯವನ್ನು ಹೊಂದಿಲ್ಲ” ಎಂದು ಹೇಳಿತ್ತು.

ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದ ಸುಪ್ರೀಂ ಕೋರ್ಟ್‌, “ರಾಷ್ಟ್ರೀಯ ಭದ್ರತೆ” ಎಂಬ ಭೀತಿ ಹೆಚ್ಚಿದಾಗ ಸರ್ಕಾರವು ಆರಾಮದಾಯಕವಾಗಿ ನುಣುಚಿಕೊಳ್ಳಲು ಸಾಧ್ಯವಿಲ್ಲ. ನ್ಯಾಯಾಂಗವು ಮೂಕ ವೀಕ್ಷನಾಗಿ ಕುಳಿತಿಲ್ಲ ಎಂದು ಹೇಳಿತ್ತು.

ಪೆಗಾಸಸ್‌ ಮೂಲಕ ಸರ್ಕಾರವು ಹಲವರ ಮೇಲೆ ಅನಧಿಕೃತವಾಗಿ ಕಣ್ಣಿಟ್ಟಿದೆ ಎಂದು ಆರೋಪಿಸಿ ಸಲ್ಲಿಸಲಾದ ಸುಮಾರು ಹನ್ನೆರಡು ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ಸ್ವೀಕರಿಸಿತ್ತು. ನಂತರ, ಇದರ ತನಿಖೆಗಾಗಿ ಅಕ್ಟೋಬರ್ 27 ರಂದು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಆರ್.ವಿ.ರವೀಂದ್ರನ್ ಅವರ ನೇತೃತ್ವದಲ್ಲಿ ಇಬ್ಬರು ತಜ್ಞರೊಂದಿಗೆ ಸ್ವತಂತ್ರ ಸಮಿತಿಯನ್ನು ನೇಮಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...