Homeಮುಖಪುಟಸಿನಿಮಾದಲ್ಲಿ ಮಹಿಳೆಯರು, ಮಕ್ಕಳ ಕುರಿತ ಆಕ್ಷೇಪಾರ್ಹ ದೃಶ್ಯಗಳು: ನಿರ್ದೇಶಕ ಮಹೇಶ್ ಮಂಜ್ರೇಕರ್‌ ವಿರುದ್ಧ ದೂರು

ಸಿನಿಮಾದಲ್ಲಿ ಮಹಿಳೆಯರು, ಮಕ್ಕಳ ಕುರಿತ ಆಕ್ಷೇಪಾರ್ಹ ದೃಶ್ಯಗಳು: ನಿರ್ದೇಶಕ ಮಹೇಶ್ ಮಂಜ್ರೇಕರ್‌ ವಿರುದ್ಧ ದೂರು

- Advertisement -
- Advertisement -

ಮರಾಠಿ ಚಿತ್ರ ‘ನಾಯ್‌ ವರನ್ ಭಾತ್ ಲೋನ್‌ಚಾ ಕೋನ್ ನಾಯ್‌ ಕೋನ್‌ಚಾ’ದಲ್ಲಿ ಮಹಿಳೆಯರು ಮತ್ತು ಮಕ್ಕಳ ಕುರಿತ ಆಕ್ಷೇಪಾರ್ಹ ದೃಶ್ಯಗಳನ್ನು ಚಿತ್ರಿಸಲಾಗಿದೆ ಎಂದು ಖ್ಯಾತ ಚಲನಚಿತ್ರ ನಿರ್ದೇಶಕ, ನಿರ್ಮಾಪಕ ಮಹೇಶ್ ಮಂಜ್ರೇಕರ್‌ ವಿರುದ್ಧ ಮುಂಬೈನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಜತೆಗೆ ಎರಡು ಕಡೆ ಪ್ರತ್ಯೇಕ ದೂರುಗಳು ದಾಖಲಾಗಿವೆ.

2022ರ ಜನವರಿ 14ರಂದು ಚಲನಚಿತ್ರ ಬಿಡುಗಡೆಯಾಗಿದ್ದು, ಮಹೇಶ್ ಮಂಜ್ರೇಕರ್‌ ಮೇಲೆ ಆಕ್ರೋಶ ವ್ಯಕ್ತವಾಗಿದೆ.

ಸೆಕ್ಷನ್ 292 (ಅಶ್ಲೀಲ ವಿಷಯದ ಮಾರಾಟ ಇತ್ಯಾದಿ) , 295 (ಸಾರ್ವಜನಿಕವಾಗಿ ಅಶ್ಲೀಲ ಕೃತ್ಯಗಳು ಅಥವಾ ಪದಗಳಿಗೆ ಶಿಕ್ಷೆ), ಐಪಿಸಿಯ 34 (ಸಾಮಾನ್ಯ ಉದ್ದೇಶ) ಮತ್ತು ಮಹಿಳೆಯರನ್ನು ಅಸಭ್ಯವಾಗಿ ಪ್ರಾತಿನಿಧಿಸುವ ನಿಷೇಧ ಕಾಯ್ದೆಯಡಿ ಕ್ರಮ ತೆಗೆದುಕೊಳ್ಳುವಂತೆ ಮುಂಬೈನ ಕ್ಷತ್ರಿಯ ಮರಾಠಾ ಸೇವಾ ಸಂಸ್ಥಾ ಸಂಸ್ಥೆಯು ಬಾಂದ್ರಾ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದೆ.

ಇನ್ನೊಂದೆಡೆ ವಕೀಲ ಡಿ.ವಿ.ಸರೋಜ್, ಸಮಾಜದಲ್ಲಿ ಸಾಮರಸ್ಯ ಕದಡುವ ವಿಚಾರದ ಹಿನ್ನೆಲೆಯಲ್ಲಿ ಚಿತ್ರದ ವಿರುದ್ಧ ಮಹಾರಾಷ್ಟ್ರದಾದ್ಯಂತ ಪ್ರತಿಭಟನೆಗಳು ನಡೆದಿದ್ದು, ಮುಂಬೈ ಸೆಷನ್ಸ್ ನ್ಯಾಯಾಲಯದಲ್ಲಿ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆಯಡಿ, ನಿರ್ದೇಶಕರು ಮತ್ತು ಇತರ ತಯಾರಕರ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಕೋರಿದ್ದಾರೆ. ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಷನ್ (ಸಿಬಿಎಫ್ ಸಿ) ಅಧ್ಯಕ್ಷ ಪ್ರಸೂನ್ ಜೋಶಿ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಅರ್ಜಿಯಲ್ಲಿ ಕೋರಿದ್ದಾರೆ. ನ್ಯಾಯಾಲಯ ಜನವರಿ 31 ರಂದು ಇದರ ವಿಚಾರಣೆ ನಡೆಸಲಿದೆ.

ಭಾರತೀಯ ಸ್ತ್ರೀ ಶಕ್ತಿ ಎನ್‌ಜಿಒನ ಅಧ್ಯಕ್ಷೆ ಸೀಮಾ ದೇಶಪಾಂಡೆ, “ಚಿತ್ರದ ಟ್ರೇಲರ್‌ ಬಗ್ಗೆ ಈ ಹಿಂದೆಯೇ ಮುಂಬೈ ಪೊಲೀಸ್ ಡಿಸಿಪಿ ವಲಯ 5ಕ್ಕೆ ತೆರಳಿ ದೂರು ನೀಡಿದ್ದು, ಅವರು ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ನ್ಯಾಯಾಲಯದ ಮೊರೆ ಹೋಗಲಾಗಿದೆ” ಎಂದು ದೂರಿನಲ್ಲಿ ವಿವರಿಸಿದ್ದಾರೆ.

ಐಪಿಸಿ ಸೆಕ್ಷನ್ 292 (ಅಶ್ಲೀಲತೆ), 120-ಬಿ (ಕ್ರಿಮಿನಲ್ ಪಿತೂರಿ) ಮತ್ತು 34 (ಸಾಮಾನ್ಯ ಉದ್ದೇಶ) ಜೊತೆಗೆ ಮಹಿಳೆಯರನ್ನು ಅಸಭ್ಯವಾಗಿ ಪ್ರಾತಿನಿಧಿಸುವ ನಿಷೇಧ ಕಾಯ್ದೆ, 1986ರ ಸೆಕ್ಷನ್ 2 (ಸಿ) ಮತ್ತು ಸೆಕ್ಷನ್ 13 ಆರ್/ಡಬ್ಲ್ಯೂ ಎಸ್ 21 ಪೋಕ್ಸೊ ಕಾಯ್ದೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 67ರ ಅಡಿ ಕ್ರಮ ತೆಗೆದುಕೊಳ್ಳುವಂತೆ ಸೀಮಾ ದೇಶಪಾಂಡೆ  ಮನವಿ ಮಾಡಿದ್ದಾರೆ.

ನಾಗ್ಪುರದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ: ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠವು ಭಾರತೀಯ ಸ್ತ್ರೀ ಶಕ್ತಿಯ ಅರ್ಜಿದಾರ ನೀಲಂ ಪಾರ್ವಟೆರ ದೂರಿನ ವಿಚಾರಣೆಯನ್ನು ಮುಂದಿನ ವಾರ ಕೈಗೆತ್ತುಕೊಳ್ಳಲಿದೆ.

ನೀಲಂರ ಅರ್ಜಿಯ ಪ್ರಕಾರ, ಜನವರಿ 10ರಂದು ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಇದನ್ನು ಗಮನಿಸಿದ ನಂತರವಷ್ಟೇ ದೂರು ನೀಡಲಾಗಿದೆ. ಟ್ರೇಲರ್‌‌ ಅಪ್ರಾಪ್ತ ಮಕ್ಕಳೊಂದಿಗಿನ ಆಕ್ಷೇಪಾರ್ಹ ದೃಶ್ಯಗಳನ್ನು ತೋರಿಸಿರುವುದರಿಂದ ಚಿತ್ರ ಬಿಡುಗಡೆಯಾಗಬಾರದೆಂದು ಅರ್ಜಿ ಸಲ್ಲಿಸಲಾಗಿತ್ತು. ಆದಾಗ್ಯೂ, ಮಹೇಶ್ ಮಜ್ರೇಕರ್ ನಿರ್ದೇಶನದ ಸಿನಿಮಾ ಕಳೆದ ವಾರ ಬಿಡುಗಡೆಯಾಗಿದ್ದು, ಅರ್ಜಿದಾರರು ತಮ್ಮ ಅರ್ಜಿಯನ್ನು ತಿದ್ದುಪಡಿ ಮಾಡಿದ್ದಾರೆ. ಚಿತ್ರಕ್ಕೆ ನೀಡಲಾದ ಪ್ರಮಾಣಪತ್ರವನ್ನು ಪರಿಶೀಲಿಸಲು ನ್ಯಾಯಾಲಯವು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಅಥವಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಮೂಲಕ ನಿರ್ದೇಶನಗಳನ್ನು ನೀಡಬೇಕು ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.

ಚಿತ್ರದಲ್ಲಿನ ಅಪ್ರಾಪ್ತರ ಪಾತ್ರಗಳನ್ನು ನಿರ್ವಹಿಸಿರುವ ಮಕ್ಕಳು, ವಯಸ್ಸಾದ ಮಹಿಳೆಯರೊಂದಿಗೆ ಅನೈತಿಕ ಲೈಂಗಿಕ ಸಂಬಂಧ ಹೊಂದಿರುವಂಥ ದೃಶ್ಯಗಳಿವೆ. ಇವು ಕಾನೂನುಬಾಹಿರ ಮತ್ತು ಮಕ್ಕಳ ಅಶ್ಲೀಲತೆ ಕಾಯ್ದೆಯಡಿ ಬರುತ್ತವೆ. ಟ್ರೇಲರ್ ನಲ್ಲಿ ತೋರಿಸಲಾದ ಲೈಂಗಿಕ ದೃಶ್ಯಗಳು ಚಿತ್ರದಲ್ಲಿಲ್ಲ. ಆದರೂ, ಚಿತ್ರದಲ್ಲಿ ಅಪ್ರಾಪ್ತರನ್ನು ಬಳಸಿಕೊಂಡ ಅಸಂಬದ್ಧ ದೃಶ್ಯಗಳು ಸಹ ಕ್ರಿಮಿನಲ್ ಕೃತ್ಯವಾಗಿದೆ ಎಂದು ಆರೋಪಿಸಲಾಗಿದೆ.


ಇದನ್ನೂ ಓದಿರಿ: ಭಯೋತ್ಪಾದಕ ‘ಗೋಡ್ಸೆ’ ಕುರಿತ ಸಿನಿಮಾ ಬಿಡುಗಡೆ ತಡೆಗಾಗಿ ಸುಪ್ರೀಂಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...