Homeಕರ್ನಾಟಕಅಂಬೇಡ್ಕರ್‌ ಫೋಟೋ ತೆರವು: ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಲು ದೇವನೂರು ನಿರ್ಧಾರ

ಅಂಬೇಡ್ಕರ್‌ ಫೋಟೋ ತೆರವು: ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಲು ದೇವನೂರು ನಿರ್ಧಾರ

- Advertisement -
- Advertisement -

ರಾಯಚೂರಿನ ಜಿಲ್ಲಾ ಸೆಷನ್ಸ್‌ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರು ಗಣರಾಜ್ಯೋತ್ಸವದಂದು  ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಫೋಟೋವನ್ನು ತೆರವು ಮಾಡಿಸಿದ ವಿವಾದ ಸಂಬಂಧ ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಲು ಹಿರಿಯ ಸಾಹಿತಿ ದೇವನೂರ ಮಹಾದೇವ ಮುಂದಾಗಿದ್ದಾರೆ.

“ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ ಗಣರಾಜ್ಯೋತ್ಸವದಂದು ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಭಾವಚಿತ್ರವನ್ನು ತೆಗೆಯುವಂತೆ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರು ಸೂಚಿಸಿದ ಪ್ರಕರಣ ಸಂಬಂಧ ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಲು ದೇವನೂರ ಮಹಾದೇವ ಅವರು ನಿರ್ಧಾರಿಸಿದ್ದಾರೆ” ಎಂದು ಮೈಸೂರಿನ ಪ್ರಾದೇಶಿಕ ಪತ್ರಿಕೆ ‘ಆಂದೋಲನ’ ವರದಿ ಮಾಡಿದೆ.

“ರಾಯಚೂರಿನಲ್ಲಿ ನಡೆದ ಘಟನೆ ಸಂಬಂಧ ಹೈಕೋರ್ಟ್‌ನಲ್ಲಿ ವಕಾಲತ್ತು ಹಾಕಲು ಮಾಜಿ ಅಡ್ವೋಕೇಟ್‌ ಜನರಲ್‌ ಪ್ರೊ.ರವಿವವರ್ಮ ಕುಮಾರ್‌ ಅವರ ಬಳಿ ಚರ್ಚೆ ನಡೆಸಿದ್ದೇನೆ. ಮತ್ತೆ ಯಾರಾದರೂ ವಕಾಲತ್ತು ಹಾಕುವವರಿದ್ದರೆ ಅವರನ್ನೂ ಸೇರಿಸಿಕೊಳ್ಳಿ ಎಂದು ಕೇಳಿಕೊಂಡಿದ್ದೇನೆ” ಎಂದು ದೇವನೂರರು ತಿಳಿಸಿರುವುದಾಗಿ ಪತ್ರಿಕೆ ವರದಿ ಮಾಡಿದೆ.

ಅಂಬೇಡ್ಕರ್‌ ಫೋಟೋ ತೆರವು ವಿವಾದ ಭಾರಿ ಆಕ್ರೋಶಕ್ಕೆ ಕಾರಣವಾದ ಬಳಿಕ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಪ್ರತಿಕ್ರಿಯೆ ನೀಡಿದ್ದರು. ’ಡಾ. ಬಿ.ಅರ್. ಅಂಬೇಡ್ಕರವರ ಫೋಟೋ ತೆಗೆದುಕೊಂಡು ಬಂದು ಇಟ್ಟಿದ್ದು, ವಾಪಸ್ ತೆಗೆದುಕೊಂಡು ಹೋಗಿರುವುದನ್ನು ನಾನು ನೋಡಿಲ್ಲ’ ಎಂದು ನ್ಯಾಯಾಧೀಶರು ಹೇಳಿದ್ದರು.

“ಅಂದು ಮುಂಜಾನೆ 8.15 ರ ಸುಮಾರಿಗೆ ನಮ್ಮ ಸಿಬ್ಬಂದಿಯವರು ನನ್ನ ಕೊಠಡಿಗೆ ಬಂದು ಕೆಲವು ವಕೀಲರು ಮಹಾತ್ಮ ಗಾಂಧಿಯವರ ಫೋಟೋ ಜೊತೆ ಡಾ. ಬಿ.ಆರ್. ಅಂಬೇಡ್ಕರ್ ರವರ ಫೋಟೋವನ್ನು ಸಹ ಇಟ್ಟು ಗಣರಾಜ್ಯೋತ್ಸವ ಆಚರಿಸಬೇಕೆಂದು ಸರಕಾರದ ಸುತ್ತೋಲೆ ಇದೆ ಅಂತಾ ಹೇಳುತ್ತಿದ್ದಾರೆ ಅಂತಾ ತಿಳಿಸಿದರು. ಅನಂತರ ಕೆಲ ವಕೀಲರು ಬಂದು ನನಗೆ ಸರಕಾರದ ಸುತ್ತೋಲೆಯ ಪ್ರಕಾರ ಡಾ. ಬಿ.ಆರ್. ಅಂಬೇಡ್ಕರ್ ರವರ ಫೋಟೋವನ್ನು ಇಟ್ಟು ಗಣರಾಜ್ಯೋತ್ಸವ ಆಚರಿಸಬೇಕು ಅಂತಾ ಒತ್ತಾಯಿಸಿದರು. ಆಗ ನಾನು ಆ ಸುತ್ತೋಲೆಯನ್ನು ಘನ ಉಚ್ಚ ನ್ಯಾಯಾಲಯದ ಫು಼ಲ್ ಕೋರ್ಟ್ ಮುಂದೆ ಪರಿಗಣೆನೆಗೆ ಇರುವ ಕಾರಣ ನಾವು ಕಾಯಬೇಕು ‌ಎಂದು ಉಚ್ಚ ನ್ಯಾಯಾಲಯದ ವಿಲೇಖನಾಧಿಕಾರಿಗಳು ನಮ್ಮ ಲೀಡರ್ಸ್ ಗುಂಪಿನಲ್ಲಿ ತಿಳಿಸಿದ್ದಾರೆ. ಆದ ಕಾರಣ ಒತ್ತಾಯಿಸಬೇಡಿ ಎಂದು ವಿನಂತಿಸಿಕೊಂಡೆ” ಎಂದು ಹೇಳಿದ್ದರು.

ಗಾಂಧೀಜಿಯವರ ಫೋಟೋ ಜೊತೆಗೆ ಅಂಬೇಡ್ಕರ್‌ ಫೋಟೋ ಇಡಬಾರದೆಂದು ಎಲ್ಲಿಯೂ ಹೇಳಿಲ್ಲ ಎಂದು ನ್ಯಾಯಾಂಗ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. “ಗಣರಾಜ್ಯೋತ್ಸವ, ಸ್ವಾತಂತ್ರ್‍ಯ ದಿನಾಚರಣೆಯ ದಿನ ಯಾರ ಫೋಟೋವನ್ನು ಇಡಬಾರದು ಎಂಬ ಆದೇಶ ಎಲ್ಲಿಯೂ ಇಲ್ಲ. ಅಂತಹ ಸಂದರ್ಭದಲ್ಲಿ ಮಹಾತ್ಮ ಗಾಂಧೀಯವರ ಫೋಟೋ ಅವಕಾಶ ಇದ್ದರೆ, ಅಂಬೇಡ್ಕರ್‌ ಫೋಟೋ ಯಾಕೆ ಇಡಬಾರದು. ಬಿ.ಆರ್‌.ಅಂಬೇಡ್ಕರ್‌ ಅವರು ನಮ್ಮ ದೇಶದ ರಚನಾ ಸಭೆಯಲ್ಲಿ ಮಹತ್ತ್ರವಾದ ಪಾತ್ರವಹಿಸಿದ್ದಾರೆ” ಎಂದು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ನಾಗಮೋಹನ ದಾಸ್ ಅಭಿಪ್ರಾಯಪಡುತ್ತಾರೆ.


ಇದನ್ನೂ ಓದಿರಿ: ಅಂಬೇಡ್ಕರವರ ಬಗ್ಗೆ ಅಪಾರ ಗೌರವ, ಅಭಿಮಾನ ಇದೆ: ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...