Homeಕರ್ನಾಟಕಅಂಬೇಡ್ಕರ್‌ ಫೋಟೋ ತೆರವು: ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಲು ದೇವನೂರು ನಿರ್ಧಾರ

ಅಂಬೇಡ್ಕರ್‌ ಫೋಟೋ ತೆರವು: ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಲು ದೇವನೂರು ನಿರ್ಧಾರ

- Advertisement -
- Advertisement -

ರಾಯಚೂರಿನ ಜಿಲ್ಲಾ ಸೆಷನ್ಸ್‌ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರು ಗಣರಾಜ್ಯೋತ್ಸವದಂದು  ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಫೋಟೋವನ್ನು ತೆರವು ಮಾಡಿಸಿದ ವಿವಾದ ಸಂಬಂಧ ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಲು ಹಿರಿಯ ಸಾಹಿತಿ ದೇವನೂರ ಮಹಾದೇವ ಮುಂದಾಗಿದ್ದಾರೆ.

“ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ ಗಣರಾಜ್ಯೋತ್ಸವದಂದು ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಭಾವಚಿತ್ರವನ್ನು ತೆಗೆಯುವಂತೆ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರು ಸೂಚಿಸಿದ ಪ್ರಕರಣ ಸಂಬಂಧ ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಲು ದೇವನೂರ ಮಹಾದೇವ ಅವರು ನಿರ್ಧಾರಿಸಿದ್ದಾರೆ” ಎಂದು ಮೈಸೂರಿನ ಪ್ರಾದೇಶಿಕ ಪತ್ರಿಕೆ ‘ಆಂದೋಲನ’ ವರದಿ ಮಾಡಿದೆ.

“ರಾಯಚೂರಿನಲ್ಲಿ ನಡೆದ ಘಟನೆ ಸಂಬಂಧ ಹೈಕೋರ್ಟ್‌ನಲ್ಲಿ ವಕಾಲತ್ತು ಹಾಕಲು ಮಾಜಿ ಅಡ್ವೋಕೇಟ್‌ ಜನರಲ್‌ ಪ್ರೊ.ರವಿವವರ್ಮ ಕುಮಾರ್‌ ಅವರ ಬಳಿ ಚರ್ಚೆ ನಡೆಸಿದ್ದೇನೆ. ಮತ್ತೆ ಯಾರಾದರೂ ವಕಾಲತ್ತು ಹಾಕುವವರಿದ್ದರೆ ಅವರನ್ನೂ ಸೇರಿಸಿಕೊಳ್ಳಿ ಎಂದು ಕೇಳಿಕೊಂಡಿದ್ದೇನೆ” ಎಂದು ದೇವನೂರರು ತಿಳಿಸಿರುವುದಾಗಿ ಪತ್ರಿಕೆ ವರದಿ ಮಾಡಿದೆ.

ಅಂಬೇಡ್ಕರ್‌ ಫೋಟೋ ತೆರವು ವಿವಾದ ಭಾರಿ ಆಕ್ರೋಶಕ್ಕೆ ಕಾರಣವಾದ ಬಳಿಕ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಪ್ರತಿಕ್ರಿಯೆ ನೀಡಿದ್ದರು. ’ಡಾ. ಬಿ.ಅರ್. ಅಂಬೇಡ್ಕರವರ ಫೋಟೋ ತೆಗೆದುಕೊಂಡು ಬಂದು ಇಟ್ಟಿದ್ದು, ವಾಪಸ್ ತೆಗೆದುಕೊಂಡು ಹೋಗಿರುವುದನ್ನು ನಾನು ನೋಡಿಲ್ಲ’ ಎಂದು ನ್ಯಾಯಾಧೀಶರು ಹೇಳಿದ್ದರು.

“ಅಂದು ಮುಂಜಾನೆ 8.15 ರ ಸುಮಾರಿಗೆ ನಮ್ಮ ಸಿಬ್ಬಂದಿಯವರು ನನ್ನ ಕೊಠಡಿಗೆ ಬಂದು ಕೆಲವು ವಕೀಲರು ಮಹಾತ್ಮ ಗಾಂಧಿಯವರ ಫೋಟೋ ಜೊತೆ ಡಾ. ಬಿ.ಆರ್. ಅಂಬೇಡ್ಕರ್ ರವರ ಫೋಟೋವನ್ನು ಸಹ ಇಟ್ಟು ಗಣರಾಜ್ಯೋತ್ಸವ ಆಚರಿಸಬೇಕೆಂದು ಸರಕಾರದ ಸುತ್ತೋಲೆ ಇದೆ ಅಂತಾ ಹೇಳುತ್ತಿದ್ದಾರೆ ಅಂತಾ ತಿಳಿಸಿದರು. ಅನಂತರ ಕೆಲ ವಕೀಲರು ಬಂದು ನನಗೆ ಸರಕಾರದ ಸುತ್ತೋಲೆಯ ಪ್ರಕಾರ ಡಾ. ಬಿ.ಆರ್. ಅಂಬೇಡ್ಕರ್ ರವರ ಫೋಟೋವನ್ನು ಇಟ್ಟು ಗಣರಾಜ್ಯೋತ್ಸವ ಆಚರಿಸಬೇಕು ಅಂತಾ ಒತ್ತಾಯಿಸಿದರು. ಆಗ ನಾನು ಆ ಸುತ್ತೋಲೆಯನ್ನು ಘನ ಉಚ್ಚ ನ್ಯಾಯಾಲಯದ ಫು಼ಲ್ ಕೋರ್ಟ್ ಮುಂದೆ ಪರಿಗಣೆನೆಗೆ ಇರುವ ಕಾರಣ ನಾವು ಕಾಯಬೇಕು ‌ಎಂದು ಉಚ್ಚ ನ್ಯಾಯಾಲಯದ ವಿಲೇಖನಾಧಿಕಾರಿಗಳು ನಮ್ಮ ಲೀಡರ್ಸ್ ಗುಂಪಿನಲ್ಲಿ ತಿಳಿಸಿದ್ದಾರೆ. ಆದ ಕಾರಣ ಒತ್ತಾಯಿಸಬೇಡಿ ಎಂದು ವಿನಂತಿಸಿಕೊಂಡೆ” ಎಂದು ಹೇಳಿದ್ದರು.

ಗಾಂಧೀಜಿಯವರ ಫೋಟೋ ಜೊತೆಗೆ ಅಂಬೇಡ್ಕರ್‌ ಫೋಟೋ ಇಡಬಾರದೆಂದು ಎಲ್ಲಿಯೂ ಹೇಳಿಲ್ಲ ಎಂದು ನ್ಯಾಯಾಂಗ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. “ಗಣರಾಜ್ಯೋತ್ಸವ, ಸ್ವಾತಂತ್ರ್‍ಯ ದಿನಾಚರಣೆಯ ದಿನ ಯಾರ ಫೋಟೋವನ್ನು ಇಡಬಾರದು ಎಂಬ ಆದೇಶ ಎಲ್ಲಿಯೂ ಇಲ್ಲ. ಅಂತಹ ಸಂದರ್ಭದಲ್ಲಿ ಮಹಾತ್ಮ ಗಾಂಧೀಯವರ ಫೋಟೋ ಅವಕಾಶ ಇದ್ದರೆ, ಅಂಬೇಡ್ಕರ್‌ ಫೋಟೋ ಯಾಕೆ ಇಡಬಾರದು. ಬಿ.ಆರ್‌.ಅಂಬೇಡ್ಕರ್‌ ಅವರು ನಮ್ಮ ದೇಶದ ರಚನಾ ಸಭೆಯಲ್ಲಿ ಮಹತ್ತ್ರವಾದ ಪಾತ್ರವಹಿಸಿದ್ದಾರೆ” ಎಂದು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ನಾಗಮೋಹನ ದಾಸ್ ಅಭಿಪ್ರಾಯಪಡುತ್ತಾರೆ.


ಇದನ್ನೂ ಓದಿರಿ: ಅಂಬೇಡ್ಕರವರ ಬಗ್ಗೆ ಅಪಾರ ಗೌರವ, ಅಭಿಮಾನ ಇದೆ: ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....