Homeಕರ್ನಾಟಕಅಂಬೇಡ್ಕರ್‌ ಫೋಟೋ ತೆರವು: ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಲು ದೇವನೂರು ನಿರ್ಧಾರ

ಅಂಬೇಡ್ಕರ್‌ ಫೋಟೋ ತೆರವು: ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಲು ದೇವನೂರು ನಿರ್ಧಾರ

- Advertisement -
- Advertisement -

ರಾಯಚೂರಿನ ಜಿಲ್ಲಾ ಸೆಷನ್ಸ್‌ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರು ಗಣರಾಜ್ಯೋತ್ಸವದಂದು  ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಫೋಟೋವನ್ನು ತೆರವು ಮಾಡಿಸಿದ ವಿವಾದ ಸಂಬಂಧ ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಲು ಹಿರಿಯ ಸಾಹಿತಿ ದೇವನೂರ ಮಹಾದೇವ ಮುಂದಾಗಿದ್ದಾರೆ.

“ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ ಗಣರಾಜ್ಯೋತ್ಸವದಂದು ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಭಾವಚಿತ್ರವನ್ನು ತೆಗೆಯುವಂತೆ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರು ಸೂಚಿಸಿದ ಪ್ರಕರಣ ಸಂಬಂಧ ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಲು ದೇವನೂರ ಮಹಾದೇವ ಅವರು ನಿರ್ಧಾರಿಸಿದ್ದಾರೆ” ಎಂದು ಮೈಸೂರಿನ ಪ್ರಾದೇಶಿಕ ಪತ್ರಿಕೆ ‘ಆಂದೋಲನ’ ವರದಿ ಮಾಡಿದೆ.

“ರಾಯಚೂರಿನಲ್ಲಿ ನಡೆದ ಘಟನೆ ಸಂಬಂಧ ಹೈಕೋರ್ಟ್‌ನಲ್ಲಿ ವಕಾಲತ್ತು ಹಾಕಲು ಮಾಜಿ ಅಡ್ವೋಕೇಟ್‌ ಜನರಲ್‌ ಪ್ರೊ.ರವಿವವರ್ಮ ಕುಮಾರ್‌ ಅವರ ಬಳಿ ಚರ್ಚೆ ನಡೆಸಿದ್ದೇನೆ. ಮತ್ತೆ ಯಾರಾದರೂ ವಕಾಲತ್ತು ಹಾಕುವವರಿದ್ದರೆ ಅವರನ್ನೂ ಸೇರಿಸಿಕೊಳ್ಳಿ ಎಂದು ಕೇಳಿಕೊಂಡಿದ್ದೇನೆ” ಎಂದು ದೇವನೂರರು ತಿಳಿಸಿರುವುದಾಗಿ ಪತ್ರಿಕೆ ವರದಿ ಮಾಡಿದೆ.

ಅಂಬೇಡ್ಕರ್‌ ಫೋಟೋ ತೆರವು ವಿವಾದ ಭಾರಿ ಆಕ್ರೋಶಕ್ಕೆ ಕಾರಣವಾದ ಬಳಿಕ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಪ್ರತಿಕ್ರಿಯೆ ನೀಡಿದ್ದರು. ’ಡಾ. ಬಿ.ಅರ್. ಅಂಬೇಡ್ಕರವರ ಫೋಟೋ ತೆಗೆದುಕೊಂಡು ಬಂದು ಇಟ್ಟಿದ್ದು, ವಾಪಸ್ ತೆಗೆದುಕೊಂಡು ಹೋಗಿರುವುದನ್ನು ನಾನು ನೋಡಿಲ್ಲ’ ಎಂದು ನ್ಯಾಯಾಧೀಶರು ಹೇಳಿದ್ದರು.

“ಅಂದು ಮುಂಜಾನೆ 8.15 ರ ಸುಮಾರಿಗೆ ನಮ್ಮ ಸಿಬ್ಬಂದಿಯವರು ನನ್ನ ಕೊಠಡಿಗೆ ಬಂದು ಕೆಲವು ವಕೀಲರು ಮಹಾತ್ಮ ಗಾಂಧಿಯವರ ಫೋಟೋ ಜೊತೆ ಡಾ. ಬಿ.ಆರ್. ಅಂಬೇಡ್ಕರ್ ರವರ ಫೋಟೋವನ್ನು ಸಹ ಇಟ್ಟು ಗಣರಾಜ್ಯೋತ್ಸವ ಆಚರಿಸಬೇಕೆಂದು ಸರಕಾರದ ಸುತ್ತೋಲೆ ಇದೆ ಅಂತಾ ಹೇಳುತ್ತಿದ್ದಾರೆ ಅಂತಾ ತಿಳಿಸಿದರು. ಅನಂತರ ಕೆಲ ವಕೀಲರು ಬಂದು ನನಗೆ ಸರಕಾರದ ಸುತ್ತೋಲೆಯ ಪ್ರಕಾರ ಡಾ. ಬಿ.ಆರ್. ಅಂಬೇಡ್ಕರ್ ರವರ ಫೋಟೋವನ್ನು ಇಟ್ಟು ಗಣರಾಜ್ಯೋತ್ಸವ ಆಚರಿಸಬೇಕು ಅಂತಾ ಒತ್ತಾಯಿಸಿದರು. ಆಗ ನಾನು ಆ ಸುತ್ತೋಲೆಯನ್ನು ಘನ ಉಚ್ಚ ನ್ಯಾಯಾಲಯದ ಫು಼ಲ್ ಕೋರ್ಟ್ ಮುಂದೆ ಪರಿಗಣೆನೆಗೆ ಇರುವ ಕಾರಣ ನಾವು ಕಾಯಬೇಕು ‌ಎಂದು ಉಚ್ಚ ನ್ಯಾಯಾಲಯದ ವಿಲೇಖನಾಧಿಕಾರಿಗಳು ನಮ್ಮ ಲೀಡರ್ಸ್ ಗುಂಪಿನಲ್ಲಿ ತಿಳಿಸಿದ್ದಾರೆ. ಆದ ಕಾರಣ ಒತ್ತಾಯಿಸಬೇಡಿ ಎಂದು ವಿನಂತಿಸಿಕೊಂಡೆ” ಎಂದು ಹೇಳಿದ್ದರು.

ಗಾಂಧೀಜಿಯವರ ಫೋಟೋ ಜೊತೆಗೆ ಅಂಬೇಡ್ಕರ್‌ ಫೋಟೋ ಇಡಬಾರದೆಂದು ಎಲ್ಲಿಯೂ ಹೇಳಿಲ್ಲ ಎಂದು ನ್ಯಾಯಾಂಗ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. “ಗಣರಾಜ್ಯೋತ್ಸವ, ಸ್ವಾತಂತ್ರ್‍ಯ ದಿನಾಚರಣೆಯ ದಿನ ಯಾರ ಫೋಟೋವನ್ನು ಇಡಬಾರದು ಎಂಬ ಆದೇಶ ಎಲ್ಲಿಯೂ ಇಲ್ಲ. ಅಂತಹ ಸಂದರ್ಭದಲ್ಲಿ ಮಹಾತ್ಮ ಗಾಂಧೀಯವರ ಫೋಟೋ ಅವಕಾಶ ಇದ್ದರೆ, ಅಂಬೇಡ್ಕರ್‌ ಫೋಟೋ ಯಾಕೆ ಇಡಬಾರದು. ಬಿ.ಆರ್‌.ಅಂಬೇಡ್ಕರ್‌ ಅವರು ನಮ್ಮ ದೇಶದ ರಚನಾ ಸಭೆಯಲ್ಲಿ ಮಹತ್ತ್ರವಾದ ಪಾತ್ರವಹಿಸಿದ್ದಾರೆ” ಎಂದು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ನಾಗಮೋಹನ ದಾಸ್ ಅಭಿಪ್ರಾಯಪಡುತ್ತಾರೆ.


ಇದನ್ನೂ ಓದಿರಿ: ಅಂಬೇಡ್ಕರವರ ಬಗ್ಗೆ ಅಪಾರ ಗೌರವ, ಅಭಿಮಾನ ಇದೆ: ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...