Homeದಲಿತ್ ಫೈಲ್ಸ್ರಾಜಸ್ಥಾನ: ದಲಿತ ಯುವಕನಿಗೆ ಥಳಿಸಿ ಮೂತ್ರ ಕುಡಿಸಿದ ಜಾತಿವಾದಿ ದುಷ್ಕರ್ಮಿಗಳು; ಪ್ರಕರಣ ದಾಖಲು

ರಾಜಸ್ಥಾನ: ದಲಿತ ಯುವಕನಿಗೆ ಥಳಿಸಿ ಮೂತ್ರ ಕುಡಿಸಿದ ಜಾತಿವಾದಿ ದುಷ್ಕರ್ಮಿಗಳು; ಪ್ರಕರಣ ದಾಖಲು

8 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಯಾರನ್ನೂ ಇನ್ನು ಬಂಧಿಸಿಲ್ಲ. ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

- Advertisement -
- Advertisement -

ರಾಜಸ್ಥಾನದ ಚುರು ಜಿಲ್ಲೆಯಲ್ಲಿ ಜಾಟ್ ಸಮುದಾಯದ ಎಂಟು ಜನರು 25 ವರ್ಷದ ದಲಿತ ಯುವಕನನ್ನು ಅಪಹರಿಸಿ, ಆತನ ಮೇಲೆ ಹಲ್ಲೆ ನಡೆಸಿ ತಮ್ಮ ಮೂತ್ರವನ್ನು ಕುಡಿಸಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ದಾಳಿಕೋರರ ವಿರುದ್ಧ ಐಪಿಸಿ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆದರೆ ಆರೋಪಿಗಳ ಬಂಧನವಾಗಿಲ್ಲ. ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

“ಜನವರಿ 26ರ ರಾತ್ರಿ ಚುರು ಜಿಲ್ಲೆಯ ರುಖಾಸರ್ ಗ್ರಾಮದ ನಿವಾಸಿ ರಾಕೇಶ್ ಮೇಘವಾಲ್ ಮೇಲೆ ದಾಳಿ ನಡೆಸಲಾಯಿತು. ಮರುದಿನ ದಾಖಲಾದ ಎಫ್‌ಐಆರ್‌ನಲ್ಲಿ, ಕಳೆದ ವರ್ಷ ಹೋಳಿಯಲ್ಲಿ ನಡೆದ ವಿವಾದದಿಂದಾಗಿ ಹಲ್ಲೆ ನಡೆದಿದೆ. ಆರೋಪಿಗಳು ಜಾತಿ ನಿಂದನೆ ಮಾಡಿದ್ದಾರೆ ಎಂದು ಸಂತ್ರಸ್ತ ಯುವಕ ಮೇಘವಾಲ್ ತಿಳಿಸಿದ್ದಾರೆ” ಎಂದು ಅಧಿಕಾರಿಗಳು ಮಾಹಿತಿ ನೀಡಿರುವುದಾಗಿ ದಿ ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

“ಅದೇ ಗ್ರಾಮದ ನಿವಾಸಿ ಉಮೇಶ್ ಜಾಟ್ ಮತ್ತು ಇತರ ಏಳು ಮಂದಿ ಸೇರಿ ಮೇಘವಾಲ್‌ ಅವರನ್ನು ಅಪಹರಿಸಿದ್ದರು. ಅವರನ್ನು ಬಲವಂತವಾಗಿ ಕಾರಿಗೆ ಹತ್ತಿಸಿಕೊಂಡು ಸಮೀಪದ ಹೊಲಕ್ಕೆ ಕರೆದೊಯ್ದಿದ್ದರು” ಎಂದು ವರದಿಯಾಗಿದೆ.

“ಮದ್ಯದ ಬಾಟಲಿಯನ್ನು ತೆಗೆದುಕೊಂಡು ಬಲವಂತವಾಗಿ ನನಗೆ ಕುಡಿಯುವಂತೆ ಹೇಳಿದರು. ಬಾಟಲಿಯು ಖಾಲಿಯಾದ ನಂತರ ರಾಕೇಶ್, ರಾಜೇಶ್, ಉಮೇಶ್, ತಾರಾಚಂದ್, ಅಕ್ಷಯ್, ದಿನೇಶ್, ಬಿಡದಿಚಂದ್ ಮತ್ತು ಬೀರಬಲ್ ಎಂಬವರು ಆ ಬಾಟಲಿಯಲ್ಲಿ ಮೂತ್ರ ವಿಸರ್ಜನೆ ಮಾಡಿ ನನಗೆ ಕುಡಿಸಿದರು” ಎಂದು ಮೇಘವಾಲ್‌ ಹೇಳಿದ್ದಾರೆ. ಚುರುವಿನ ರತನ್‌ಗಢ ಪೊಲೀಸ್ ಠಾಣೆಯಲ್ಲಿ ಮೇಘವಾಲ್ ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

ಮೇಘವಾಲ್ ಅವರಿಗೆ ಜಾತಿ ನಿಂದನೆ ಮಾಡಲಾಗಿದೆ. ದಲಿತರಿಗೆ ಅವಹೇಳನಕಾರಿ ಪದಗಳನ್ನು ಬಳಸಿ ನಿಂದಿಸಲಾಗಿದೆ ಎಂದು ಎಫ್ಐಆರ್ ಹೇಳಿದೆ.

“ಅವರೆಲ್ಲರೂ ಸುಮಾರು ಅರ್ಧ ಗಂಟೆ ಕಾಲ ಕೋಲುಗಳು ಮತ್ತು ಹಗ್ಗಗಳಿಂದ ನನ್ನನ್ನು ಹೊಡೆದರು. ಹೀಗಾಗಿ ನನ್ನ ದೇಹದ ಮೇಲೆಲ್ಲ ಗಾಯಗಳಾಗಿವೆ” ಎಂದು ಮೇಘವಾಲ್‌ ಹೇಳಿರುವುದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಉಮೇಶ್, ರಾಜೇಶ್, ತಾರಾಚಂದ್, ರಾಕೇಶ್, ಬೀರ್ಬಲ್, ಅಕ್ಷಯ್, ದಿನೇಶ್ ಮತ್ತು ಬಿಡದಿ ಚಂದ್ ಅವರನ್ನು ಆರೋಪಿಗಳೆಂದು ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆ. ಐಪಿಸಿ ಸೆಕ್ಷನ್ 143 (ಕಾನೂನುಬಾಹಿರ ಸಭೆ), 323 (ಸ್ವಯಂಪ್ರೇರಿತವಾಗಿ ಗಾಯಗೊಳಿಸುವುದು), 365 (ಅಪಹರಣ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಜೊತೆಗೆ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯಿದೆ 1989ರ ಸಂಬಂಧಿತ ವಿಭಾಗಗಳನ್ನೂ ಪ್ರಕರಣದಲ್ಲಿ ಸೇರಿಸಲಾಗಿದೆ.

ಮೇಘವಾಲ್ ಅವರ ಹಲ್ಲೆ ಆರೋಪ ನಿಜವೆಂದು ತೋರುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. “ನಾವು ಆರೋಪಿಗಳನ್ನು ಬಂಧಿಸಲು ಪ್ರಯತ್ನಿಸುತ್ತಿದ್ದೇವೆ. ಮೇಲ್ನೋಟಕ್ಕೆ ಮೇಘವಾಲ್ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ನಿಜವೆಂದು ಕಂಡುಬಂದಿದೆ. ಎಲ್ಲಾ ಆರೋಪಿಗಳು ಮೇಘವಾಲ್‌ ರವರ ವಯಸ್ಸಿನವರಾಗಿದ್ದು, ಅವರ ನಡುವೆ ಜಗಳ ನಡೆದಿತ್ತು. ಒಂದು ವರ್ಷದ ಹಿಂದೆ ವಾದ್ಯ ನುಡಿಸುವುದನ್ನು ಮೇಘವಾಲ್‌ ಬಿಟ್ಟಿದ್ದರು. ಆರೋಪಿಗಳ ಕಡೆಯವರು ಕೆಲವು ಹೇಳಿಕೆಗಳನ್ನು ನೀಡಿದ್ದರು. ಇದು ದ್ವೇಷಕ್ಕೆ ಕಾರಣವಾಯಿತು ಎಂದು ದೂರುದಾರರು ಹೇಳಿದ್ದಾರೆ. ನಾವು ಈ ಅಂಶಗಳ ಕುರಿತು ತನಿಖೆ ಮಾಡುತ್ತಿದ್ದೇವೆ” ಎಂದು ಪೊಲೀಸರು ತಿಳಿಸಿದ್ದಾರೆ.


ಇದನ್ನೂ ಓದಿರಿ: ಬೆಂಗಳೂರು: ವಿಕಲಾಂಗ ಮಹಿಳೆಯ ಮೇಲೆ ಟ್ರಾಫಿಕ್‌ ಎಎಸ್‌ಐ ಹಲ್ಲೆ; ಮಹಿಳೆಯ ಮೇಲೆಯೇ ಪ್ರಕರಣ ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...