Homeಮುಖಪುಟಗೋವಾ ಚುನಾವಣೆ: ಗಣಿಗಾರಿಕೆ ಪುನರಾರಂಭ, ಮಹಿಳೆಯರಿಗೆ ಮೀಸಲಾತಿ ಭರವಸೆ ನೀಡಿದ ಟಿಎಂಸಿ-ಎಂಜಿಪಿ ಮೈತ್ರಿ

ಗೋವಾ ಚುನಾವಣೆ: ಗಣಿಗಾರಿಕೆ ಪುನರಾರಂಭ, ಮಹಿಳೆಯರಿಗೆ ಮೀಸಲಾತಿ ಭರವಸೆ ನೀಡಿದ ಟಿಎಂಸಿ-ಎಂಜಿಪಿ ಮೈತ್ರಿ

- Advertisement -
- Advertisement -

ಮುಂಬರುವ ಗೋವಾ ವಿಧಾನಸಭಾ ಚುನಾವಣೆಗೆ ತೃಣಮೂಲ ಕಾಂಗ್ರೆಸ್ ಮತ್ತು ಮಹಾರಾಷ್ಟ್ರವಾದಿ ಗೋಮಾಂತಕ್ ಪಕ್ಷಗಳು ಮೈತ್ರಿ ಮಾಡಿಕೊಂಡು ಕಣಕ್ಕಿಳಿದಿವೆ. ಎರಡೂ ಪಕ್ಷಗಳು ಜಂಟಿಯಾಗಿ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ತಾವು ಅಧಿಕಾರಕ್ಕೆ ಬಂದರೆ ಉದ್ಯೋಗಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವುದಾಗಿ ಭರವಸೆ ನೀಡಿವೆ.

ಗೋವಾದಲ್ಲಿನ 88 ಗಣಿಗಾರಿಕೆ ಗುತ್ತಿಗೆಗಳನ್ನು ಸುಪ್ರೀಂ ಕೋರ್ಟ್ 2018ರ ಮಾರ್ಚ್‌ನಲ್ಲಿ ರದ್ದುಗೊಳಿಸಿತ್ತು. ನಂತರ ಗೋವಾದಲ್ಲಿ ಗಣಿಗಾರಿಗೆ ಸ್ಥಗಿತಗೊಂಡಿದೆ. ಗೋವಾಕ್ಕೆ ಆದಾಯದ ಮುಖ್ಯ ಮೂಲಗಳಲ್ಲಿ ಒಂದಾಗಿದ್ದ ಗಣಿಗಾರಿಕೆ ಕಾರ್ಯಾಚರಣೆಗಳನ್ನು ಕೂಡ ಪುನರಾರಂಭಿಸುವುದಾಗಿ ಈ ಪಕ್ಷಗಳು ಭರವಸೆ ನೀಡಿವೆ.

ಗೋವಾ ಮಿನರಲ್ ಕಾರ್ಪೊರೇಷನ್ ಮೂಲಕ ಉತ್ಪತ್ತಿಯಾಗುವ ಎಲ್ಲಾ ಆದಾಯವನ್ನು ರಾಜ್ಯದಲ್ಲಿ ಕಲ್ಯಾಣ ಯೋಜನೆಗಳಿಗೆ ಧನಸಹಾಯ ಮಾಡಲು ಬಳಸಿಕೊಳ್ಳಲಾಗುವುದು ಎಂದು ಶನಿವಾರ ಬಿಡುಗಡೆ ಮಾಡಿದ ಪ್ರಣಾಳಿಕೆಯಲ್ಲಿ ಮೈತ್ರಿ ಪಕ್ಷಗಳು ತಿಳಿಸಿವೆ.

ಖಾಸಗಿ ವಲಯ ಸೇರಿದಂತೆ ಎಲ್ಲ ಉದ್ಯೋಗಗಳಲ್ಲಿ ಗೋವಾದ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ಹಾಗೂ ಎಲ್ಲ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.50 ರಷ್ಟು ಮೀಸಲಾತಿ ನೀಡುವುದಾಗಿಯೂ ಭರವಸೆ ನೀಡಿವೆ.

ಇದನ್ನೂ ಓದಿ: ಸಿನಿಮಾದಲ್ಲಿ ಮಹಿಳೆಯರು, ಮಕ್ಕಳ ಕುರಿತ ಆಕ್ಷೇಪಾರ್ಹ ದೃಶ್ಯಗಳು: ನಿರ್ದೇಶಕ ಮಹೇಶ್ ಮಂಜ್ರೇಕರ್‌ ವಿರುದ್ಧ ದೂರು

ಟಿಎಂಸಿ-ಎಂಜಿಪಿ ಮೈತ್ರಿಕೂಟವು ಮಹಿಳೆಯರು ಮತ್ತು ಮಕ್ಕಳ ವಿರುದ್ಧದ ಅಪರಾಧಗಳನ್ನು ಪರಿಹರಿಸಲು ಎರಡು ತ್ವರಿತ ನ್ಯಾಯಾಲಯಗಳು ಮತ್ತು ಮಹಿಳೆಯರ ಸುರಕ್ಷತೆಗಾಗಿ ಮೊಬೈಲ್ ಅಪ್ಲಿಕೇಶನ್ ಅನ್ನು ಸ್ಥಾಪಿಸುವ ಭರವಸೆಯನ್ನು ನೀಡಿವೆ. ಪ್ರಣಾಳಿಕೆಯ ಪ್ರಕಾರ, TMC-MGP ಅಧಿಕಾರಕ್ಕೆ ಬಂದರೆ, ಸರ್ಕಾರವು ಗೋವಾದ ಒಟ್ಟು ಆಂತರಿಕ ಉತ್ಪನ್ನವನ್ನು 1.8 ಲಕ್ಷ ಕೋಟಿ ರೂ.ಗಳಿಗೆ ಹೆಚ್ಚಿಸುವುದಾಗಿ ಮತ್ತು 2 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸುವ ಭರವಸೆಯನ್ನೂ ನೀಡಿವೆ.

ಗೋವಾ ಚುನಾವಣೆಯಲ್ಲಿ ಮೊದಲ ಬಾರಿಗೆ ಸ್ಪರ್ಧಿಸುತ್ತಿರುವ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಕಳೆದ ತಿಂಗಳು ರಾಜ್ಯದ ಅತ್ಯಂತ ಹಳೆಯ ಪ್ರಾದೇಶಿಕ ಪಕ್ಷ ಎಂಜಿಪಿಯೊಂದಿಗೆ ಮೈತ್ರಿ ಮಾಡಿಕೊಂಡಿತ್ತು. 2017 ರ ಗೋವಾ ವಿಧಾನಸಭಾ ಚುನಾವಣೆಯಲ್ಲಿ, MGP ಮೂರು ಸ್ಥಾನಗಳನ್ನು ಗೆದ್ದಿತ್ತು. ಗೋವಾದಲ್ಲಿ ಫೆಬ್ರವರಿ 14 ರಂದು ಚುನಾವಣೆ ನಡೆಯಲಿದೆ.


ಇದನ್ನೂ ಓದಿ: ಬೆಂಗಳೂರು: ವಿಕಲಾಂಗ ಮಹಿಳೆಯ ಮೇಲೆ ಟ್ರಾಫಿಕ್‌ ಎಎಸ್‌ಐ ಹಲ್ಲೆ; ಮಹಿಳೆಯ ಮೇಲೆಯೇ ಪ್ರಕರಣ ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....