Homeಕರ್ನಾಟಕಕಾಸರಗೋಡಿನಲ್ಲಿ ಕನ್ನಡಿಗರ ಹಿತಾಸಕ್ತಿ ಕಾಪಾಡುತ್ತಿದ್ದೇವೆ; ಕರ್ನಾಟಕಕ್ಕೆ ಪತ್ರ ಬರೆದ ಕೇರಳ ಸರ್ಕಾರ

ಕಾಸರಗೋಡಿನಲ್ಲಿ ಕನ್ನಡಿಗರ ಹಿತಾಸಕ್ತಿ ಕಾಪಾಡುತ್ತಿದ್ದೇವೆ; ಕರ್ನಾಟಕಕ್ಕೆ ಪತ್ರ ಬರೆದ ಕೇರಳ ಸರ್ಕಾರ

- Advertisement -
- Advertisement -

ಕೇರಳದ ಕಾಸರಗೋಡು ಜಿಲ್ಲೆಯಲ್ಲಿರುವ ಕನ್ನಡ ಭಾಷಾ ಅಲ್ಪಸಂಖ್ಯಾತರ ಹಿತಾಸಕ್ತಿ ಕಾಪಾಡಲು ಕೈಗೊಂಡಿರುವ ಕ್ರಮಗಳ ಕುರಿತು ಕೇರಳ ಸರ್ಕಾರ ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರಕ್ಕೆ ಪತ್ರ ಬರೆದಿದೆ.

ಕೇರಳದಲ್ಲಿರುವ ಕನ್ನಡಿಗರ ಹಿತಾಸಕ್ತಿ ಮತ್ತು ರಕ್ಷಣೆಗೆ ಕುರಿತಂತೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ ಸೋಮಶೇಖರ ಅವರು ಕೆಲವು ದಿನಗಳ ಹಿಂದೆ ಕೇರಳ ಸರ್ಕಾರಕ್ಕೆ ಬರೆದ ಪತ್ರ ಬರೆದಿದ್ದರು. ಅವರ ಪತ್ರಕ್ಕೆ ಪ್ರತಿಕ್ರಿಯಿಸಿ ಕೇರಳ ಸರ್ಕಾರವು ಮರುಪತ್ರ ಬರೆದಿದೆ.

“ಕೇರಳ ಸರ್ಕಾರವು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದೆ. ಈ ಬಗ್ಗೆ ಕೇರಳ ಸರ್ಕಾರಕ್ಕೆ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು ಉತ್ತರಿಸಿರುವ ಪ್ರತಿಯನ್ನೂ ನಮಗೆ ಕಳುಹಿಸಿದೆ. ಇದು ನಮ್ಮ ಪ್ರಯತ್ನಕ್ಕೆ ಸಂದ ಜಯ’ ಎಂದು ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕನ್ನಡ ಭಾಷೆಯನ್ನು ನಿಭಾಯಿಸಲು ಜಿಲ್ಲಾ ಪೊಲೀಸ್ ಮುಖ್ಯಸ್ಥರ ಕಚೇರಿಯಲ್ಲಿ ಕನ್ನಡ ಮತ್ತು ಮಲಯಾಳಂ ಬಲ್ಲ ಗುಮಾಸ್ತರನ್ನು ನೇಮಿಸಲಾಗಿದೆ. ಕಾಸರಗೋಡು ಜಿಲ್ಲೆಯ ಕನ್ನಡ ಭಾಷಾ ಅಲ್ಪಸಂಖ್ಯಾತರ ಕುಂದುಕೊರತೆಗಳನ್ನು ಹೆಚ್ಚುವರಿ ಎಸ್ಪಿ ಹರಿಶ್ಚಂದ್ರ ನಾಯ್ಕ್ ಮೂಲಕ ಪರಿಹರಿಸಲಾಗುವುದು ಎಂದು ಕೇರಳ ಸರ್ಕಾರ ಪತ್ರದಲ್ಲಿ ತಿಳಿಸಿದೆ.

ಕನ್ನಡ ಅಲ್ಪಸಂಖ್ಯಾತರು ವಾಸಿಸುವ ಪ್ರದೇಶಗಳಲ್ಲಿನ ಪೊಲೀಸ್ ಠಾಣೆಗಳಲ್ಲಿ ಕನ್ನಡ ಮಾತನಾಡುವ ಪೊಲೀಸ್ ಅಧಿಕಾರಿಯನ್ನು ನಿಯೋಜಿಸಲಾಗಿದೆ ಮತ್ತು ಕನ್ನಡ ಭಾಷೆಯಲ್ಲಿ ಬರುವ ದೂರುಗಳನ್ನು ಪರಿಹರಿಸಲಾಗುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಪೊಲೀಸ್ ಠಾಣೆಗಳ ಸೂಚನಾ ಫಲಕಗಳು, ಠಾಣೆಗಳ ಹೆಸರುಗಳನ್ನು ಕನ್ನಡದಲ್ಲಿ ಬರೆಯಲಾಗಿದೆ ಮತ್ತು ಕಾಸರಗೋಡು ಮತ್ತು ಮಂಜೇಶ್ವರಂ ತಾಲೂಕು ವ್ಯಾಪ್ತಿಯ ಎಲ್ಲಾ ಅಕ್ಷಯ ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ದರ ಪಟ್ಟಿಯನ್ನು ಕನ್ನಡದಲ್ಲಿ ಪ್ರದರ್ಶಿಸಲು ನಿರ್ದೇಶನಗಳನ್ನು ನೀಡಲಾಗಿದೆ. ಇ-ಡಿಸ್ಟ್ರಿಕ್ಟ್ ಪೋರ್ಟಲ್‌ನಲ್ಲಿ ಕನ್ನಡ ಭಾಷೆಯನ್ನು ಸೇರಿಸುವ ಬಗ್ಗೆ ರಾಜ್ಯ ಐಟಿ ಮಿಷನ್ ನಿರ್ದೇಶಕರಿಗೂ ತಿಳಿಸಲಾಗುವುದು ಎಂದು ಕೇರಳ ಸರ್ಕಾರ ಭರವಸೆ ನೀಡಿದೆ.

ಕರ್ನಾಟಕದ ಗಡಿ ಭಾಗದಲ್ಲಿರುವ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಕನ್ನಡ ಭಾಷಾ ಪ್ರವೀಣ ಶಿಕ್ಷಕರ ಕೊರತೆ ಇದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಅಂತಹ ಕಡೆಗಳಲ್ಲಿ ಕನ್ನಡ ಬಾರದ ಶಿಕ್ಷಕರ ನೇಮಕವನ್ನು ಕಟ್ಟುನಿಟ್ಟಾಗಿ ತಪ್ಪಿಸಲಾಗುವುದು ಎಂದು ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.


ಇದನ್ನೂ ಓದಿ: ಅಂಬೇಡ್ಕರ್‌ ಫೋಟೋ ತೆರವು: ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಲು ದೇವನೂರು ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...