Homeಕರ್ನಾಟಕ"ಎಎಸ್‌ಐ ವಿರುದ್ಧ ವಿಕಲಾಂಗ ಚೇತನರ ಆಯೋಗ ಸ್ವಯಂಪ್ರೇರಿತ ಕೇಸ್ ದಾಖಲಿಸಲಿ"

“ಎಎಸ್‌ಐ ವಿರುದ್ಧ ವಿಕಲಾಂಗ ಚೇತನರ ಆಯೋಗ ಸ್ವಯಂಪ್ರೇರಿತ ಕೇಸ್ ದಾಖಲಿಸಲಿ”

ವಿಕಲಾಂಗ ಮಹಿಳೆಯ ಮೇಲೆ ಹಲ್ಲೆ ನಡೆಸಿರುವ ಟ್ರಾಫಿಕ್‌ ಪೊಲೀಸ್ ಅಧಿಕಾರಿಯ ವಿರುದ್ಧ ಸುಮೊಟೊ ಪ್ರಕರಣ ದಾಖಲಾಗಬೇಕು ಎಂದು ವಿಕಲಾಂಗ ಚೇತನರ ಪರ ಹೋರಾಡುತ್ತಿರುವ ಸಂಘಟನೆಗಳ ಮುಖಂಡರು ಒತ್ತಾಯಿಸಿದ್ದಾರೆ.

- Advertisement -
- Advertisement -

ವಿಕಲಾಂಗ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಪೊಲೀಸ್ ಅಧಿಕಾರಿಯ ವಿರುದ್ಧ ಸುಮೊಟೊ (ಸ್ವಯಂಪ್ರೇರಿತ) ಪ್ರಕರಣ ದಾಖಲಿಸಿ ವಿಕಲಾಂಗ ಚೇತನರ ಮೇಲೆ ಆಗುತ್ತಿರುವ ಹಲ್ಲೆಗಳನ್ನು ತಡೆಯಬೇಕು ಎಂದು ವಿಕಲಾಂಗ ಚೇತನರ ಪರ ಹೋರಾಡುತ್ತಿರುವ ಸಂಘಟನೆಗಳ ಮುಖಂಡರು ಒತ್ತಾಯಿಸಿದ್ದಾರೆ.

ಟೋಯಿಂಗ್‌ ವಾಹನದಲ್ಲಿ ಕುಳಿತ್ತಿದ್ದ ಎಎಸ್‌ಐಗೆ ಕಲ್ಲಿನಿಂದ ಹೊಡೆದ ಆರೋಪದ ಮೇಲೆ ವಿಕಲಾಂಗ ಮಹಿಳೆ ಮಂಜುಳಾ ವಿರುದ್ದ ಪ್ರಕರಣವನ್ನೂ ದಾಖಲಿಸಲಾಗಿದೆ. ಅಲ್ಲದೆ ಹಲಸೂರು ಗೇಟ್‌ ಟ್ರಾಫಿಕ್‌ ಪೊಲೀಸ್ ಠಾಣೆಯ ಎಎಸ್‌ಐ ನಾರಾಯಣ್‌  ವಿಕಲಾಂಗ ಮಹಿಳೆಗೆ ಸಾರ್ವಜನಿಕವಾಗಿ ಬೂಟು ಕಾಲಿನಿಂದ ಒದ್ದು ಅವ್ಯಾಚ್ಯ ಪದಗಳಿಂದ ನಿಂದಿಸಿರುವ ವಿಡಿಯೊ ವೈರಲ್ ಆಗಿತ್ತು.

ಎಎಸ್‌ಐ ನೀಡಿದ ದೂರಿನ ಆಧಾರದಲ್ಲಿ ಎಸ್.ಜೆ.ಪಾರ್ಕ್ ಪೊಲೀಸರು ವಿಕಲಾಂಗ ಮಹಿಳೆಯ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಎಎಸ್‌ಐ ನಾರಾಯಣ್‌ ಅವರು ಮಹಿಳೆಗೆ ಥಳಿಸಿರುವ ವಿಡಿಯೊ ವೈರಲ್‌ ಆದ ಬಳಿಕ ಸರ್ಕಾರ ಅವರನ್ನು ಅಮಾನತು ಮಾಡಲಾಗಿದೆ. ಆದರೆ ಅಮಾನತು ಆದ ಮಾತ್ರಕ್ಕೆ ಹೋರಾಟವನ್ನು ನಿಲ್ಲಿಸುವುದಿಲ್ಲ ಎಂದು ಮುಖಂಡರು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಕರ್ನಾಟಕ ರಾಜ್ಯ ವಿಕಲಚೇತನರ ರಕ್ಷಣಾ ಸಮಿತಿ ಕಾರ್ಯಾಧ್ಯಕ್ಷರಾದ  ಚಂದ್ರಶೇಖರ್ ಪುಟ್ಟಪ್ಪ, “ನಮ್ಮ ಅಂಗವಿಕಲರ ಆಯುಕ್ತಾಲಯದಲ್ಲಿ ದೂರು ದಾಖಲಿಸುತ್ತಿದ್ದೇನೆ. ಆ ಮಹಿಳೆ ಯಾರು ಎಂಬುದು ನನಗೆ ಪರಿಚಯವಿಲ್ಲ. ಆದರೆ ಮಾಧ್ಯಮಗಳಲ್ಲಿ ಬಂದ ವರದಿಯ ಪ್ರಕಾರ ಮಹಿಳೆ ಅಂಗವಿಕಲರಾಗಿದ್ದಾರೆ. ಇದರ ಪ್ರಕಾರ ಪ್ರಕರಣ ದಾಖಲಾಗಬೇಕು. ರಕ್ಷಕನ ವೇಶದಲ್ಲಿ ಮೃಗೀಯ ವರ್ತನೆ ತೋರಿದ ಅಧಿಕಾರಿಗೆ ಶಿಕ್ಷೆಯಾಗಬೇಕು” ಎಂದರು.

“ಬರೀ ಅಮಾನತು ಮಾಡಿದರೆ ಸಾಲದು, ಸೇವೆಯಿಂದ ವಜಾಗೊಳಿಸಬೇಕು. ಒಬ್ಬರಿಗೆ ಶಿಕ್ಷೆಯಾದರೆ ಹೀಗೆ ವರ್ತಿಸುವವರೆಲ್ಲಾ ಪಾಠ ಕಲಿಯುತ್ತಾರೆ. ಸಮಾಜಕ್ಕೆ ಒಂದು ಸಂದೇಶ ಹೋಗಬೇಕಾಗಿದೆ. ಆ ಮಹಿಳೆಗೆ ನ್ಯಾಯ ಸಿಗುವವರೆಗೂ ಹೋರಾಟ ಮಾಡುತ್ತೇವೆ. ಸೋಮವಾರ ವಿಕಲಾಂಗ ಚೇತನರ ಆಯುಕ್ತರನ್ನು ಭೇಟಿ ಮಾಡುತ್ತೇನೆ” ಎಂದು ಮಾಹಿತಿ ನೀಡಿದರು.

ಚಂದ್ರಶೇಖರ್ ಪುಟ್ಟಪ್ಪ

‘ಸ್ವಯಂ ಪ್ರೇರಿತ ದೂರು ದಾಖಲಿಸಲು ಒತ್ತಡ ಹಾಕುತ್ತೇವೆ’

ಕರ್ನಾಟಕ ಸರ್ಕಾರಿ, ಅರೆ ಸರ್ಕಾರಿ ಅಂಗವಿಕಲ ನೌಕರರ ಸಂಘದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಶಿವಪ್ಪ ರಾಥೋಡ್‌‌ ಪ್ರತಿಕ್ರಿಯಿಸಿ, “ಅಂಗವಿಕಲರನ್ನು ಪೊಲೀಸ್ ವಾಹನದಲ್ಲಿ ಕರೆದೊಯ್ಯುವಾಗ ಕೆಲವೊಂದು ನಿಯಮಗಳನ್ನು ಪೊಲೀಸರು ಪಾಲಿಸಬೇಕು. ಈ ಪ್ರಕರಣದಲ್ಲಿ ಅದು ಸಂಪೂರ್ಣ ಉಲ್ಲಂಘನೆಯಾಗಿದೆ. ಸಸ್ಪೆಂಡಾದರೆ ಸಾಲದು. ಅಂಗವಿಕಲರ ನ್ಯಾಯಾಲಯದಲ್ಲಿ ಸುಮೊಟೊ ಕೇಸ್ ದಾಖಲಿಸಲು ವಿಕಲಾಂಗ ಚೇತನರ ಆಯುಕ್ತರ ಮೇಲೆ ಒತ್ತಡ ಹಾಕುತ್ತೇವೆ. ಪೊಲೀಸ್ ಪೇದೆಯಿಂದ ಹಿಡಿದು ಉನ್ನತ ಅಧಿಕಾರಗಳವರೆಗೆ ಅಂಗವಿಕಲರ ಜೊತೆ ಸೌಹಾರ್ದಯುತವಾಗಿ ವರ್ತಿಸಬೇಕು. ಈ ಸಂಬಂಧ ಮೇಲಧಿಕಾರಿಗಳ ಮೂಲಕ ಆದೇಶ ಹೊರಡಿಸುತ್ತೇವೆ” ಎಂದು ತಿಳಿಸಿದರು.

ಶಿವಪ್ಪ ರಾಥೋಡ್‌‌

“ಈಗಾಗಲೆ ಈ ಕುರಿತು ಆದೇಶ ಬಂದಿದೆ. ಪೊಲೀಸ್‌ ಠಾಣೆಗೆ ಬರುವ ಅಂಗವಿಕಲರ ಜೊತೆ ನಮ್ರತೆಯಿಂದ ವರ್ತಿಸಬೇಕು ಎಂದು ಆದೇಶ ಹೇಳುತ್ತದೆ. ಸದರಿ ಪ್ರಕರಣದಲ್ಲಿನ ವಿಕಲಾಂಗ ಮಹಿಳೆ ಏಕೆ ಕಲ್ಲು ತಗೆದುಕೊಂಡು ಹೊಡೆದರು ಎಂಬ ಮಾಹಿತಿ ಇಲ್ಲ. ಕಲ್ಲಿನಲ್ಲಿ ಹೊಡೆಯಬಾರದಿತ್ತು, ಆದರೆ ಹೊಡೆದಿದ್ದಾರೆ. ತಾಳ್ಮೆ ತೆಗೆದುಕೊಳ್ಳಲಾಗದೆ ಹೊಡೆದಿದ್ದಾರೋ, ಮತ್ಯಾವ ಕಾರಣಕ್ಕೆ ಹೊಡೆದಿದ್ದಾರೋ ಗೊತ್ತಿಲ್ಲ. ಹಾಗೇನಾದರೂ ಕಲ್ಲಿನಲ್ಲಿ ಹೊಡೆದಿದ್ದರೆ ಕಾನೂನು ಪ್ರಕಾರ ಕ್ರಮ ಜರುಗಿಸಬಹುದಲ್ಲ. ಇನ್ನೊಬ್ಬರಿಗೆ ಹೊಡೆಯುವ ಅಧಿಕಾರ ಕೊಟ್ಟವರು ಯಾರು? ಅಂಗವಿಕಲ ಮಹಿಳೆಗೆ ತಿಳಿವಳಿಕೆ ಇಲ್ಲದಿರಬಹುದು. ಆದರೆ ತಿಳಿವಳಿಕೆ ಇರುವ ಎಎಸ್‌ಐ ಹೀಗೆ ಮಾಡಬಹುದೇ?” ಎಂದು ಬೇಸರ ವ್ಯಕ್ತಪಡಿಸಿದರು.

“ನಾವು ಪೊಲೀಸರ ವಿರುದ್ಧ ನಿಂತಿಲ್ಲ. ಆದರೆ ಆ ಮಹಿಳೆ ಕಲ್ಲು ತಗೆದುಕೊಂಡು ಹೊಡೆಯಲು ಕಾರಣ ಏನೆಂದು ತಿಳಿಯುತ್ತಿಲ್ಲ. ಇರುವೆ ಕಚ್ಚುವುದು ನಾವು ತುಳಿದಾಗ ಮಾತ್ರ. ಇಲ್ಲದಿದ್ದರೆ ತನ್ನಪಾಡಿಗೆ ತಾನು ಹೋಗುತ್ತಿರುತ್ತಿರುತ್ತದೆ. ಹೀಗಾಗಿ ಅಂಗವಿಕಲ ಮಹಿಳೆಯ ಮಾಹಿತಿಯನ್ನು ನಾವು ಟ್ರೇಸ್ ಮಾಡುತ್ತಿದ್ದೇವೆ. ಮಾನವ ಹಕ್ಕುಗಳ ಆಯೋಗ, ಮಹಿಳಾ ಆಯೋಗ, ಅಂಗವಿಕಲ ಆಯೋಗದವರು ಸುಮೊಟೊ ಪ್ರಕರಣವನ್ನು ಈಗಾಗಲೇ ದಾಖಲಿಸಬೇಕಿತ್ತು. ಆದರೆ ಅದರ ಕುರಿತು ಮಾಹಿತಿಯೇ ಇಲ್ಲ” ಎಂದು ವಿಷಾದಿಸಿದರು.

ಜಯಕರ್ನಾಟಕ ವಿಕಲ ಚೇತನರ ರಕ್ಷಣಾ ವೇದಿಕೆ ಅಧ್ಯಕ್ಷ ರವಿಕುಮಾರ್ ಗದಗಿನ್‌ ಮಾತನಾಡಿ, “ಅಂಗವಿಕಲರ ಮೇಲೆ ದೌರ್ಜನ್ಯ ಹೆಚ್ಚಾಗುತ್ತಿವೆ. ಕಲ್ಬುರ್ಗಿಯಲ್ಲಿ ಒಂದು ಪ್ರಕರಣ ನಡೆದಿತ್ತು. ತನಗಾದ ಅನ್ಯಾಯವನ್ನು ಹೇಳಿಕೊಂಡ ವಿಕಲಚೇತನ ವ್ಯಕ್ತಿಯನ್ನು ಪೊಲೀಸರು ಶೋಷಿಸಿದ್ದರು. ಆತನಿಂದ ದುಡ್ಡು ಕಿತ್ತುಕೊಂಡಿದ್ದರು. ಲೋಕಾಯುಕ್ತದಲ್ಲಿ ಈ ಕುರಿತು ಪ್ರಕರಣ ದಾಖಲಿಸಿದ್ದೇನೆ” ಎಂದು ತಿಳಿಸಿದರು. ಜೊತೆಗೆ ತಾವು ನೀಡಿದ ದೂರುಗಳ ಮಾಹಿತಿಯನ್ನೂ ‘ನಾನುಗೌರಿ.ಕಾಂ’ ಜೊತೆ ಹಂಚಿಕೊಂಡರು.

ರವಿಕುಮಾರ್‌ ಗದುಗಿನ್‌

“ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತೇವೆ. ಆ ಮಹಿಳೆಗೆ ನ್ಯಾಯ ದೊರಕಿಸಬೇಕು. ಅಸಹಾಯಕರ ಮೇಲೆ ನೀವೇಕೆ ಶಕ್ತಿ ಪ್ರದರ್ಶನ ಮಾಡುತ್ತಿದ್ದೀರಿ? ಕೂಡಲೇ ಕ್ರಮ ಜರುಗಿಸಬೇಕು. ಸಸ್ಪೆಂಡ್‌ ಮಾಡಿದ ಮಾತ್ರಕ್ಕೆ ಪ್ರಕರಣ ಮುಗಿಯುವುದಿಲ್ಲ” ಎನ್ನುತ್ತಾರೆ ರವಿಕುಮಾರ್‌ ಗದುಗಿನ್‌.


ಇದನ್ನೂ ಓದಿರಿ: ಬೆಂಗಳೂರು: ವಿಕಲಾಂಗ ಮಹಿಳೆಯ ಮೇಲೆ ಟ್ರಾಫಿಕ್‌ ಎಎಸ್‌ಐ ಹಲ್ಲೆ; ಮಹಿಳೆಯ ಮೇಲೆಯೇ ಪ್ರಕರಣ ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...